Kadaba News

ಕಲ್ಲಡ್ಕ :ಕೈ ಕೊಟ್ಟ ಲಿಫ್ಟ್ ➤ 2 ಗಂಟೆ ಬಂಧಿಯಾದ ಬಾಲಕಿಯರು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಡಿ.26: ವಸತಿ ಸಮುಚ್ಚಯ ವೊಂದರಿಂದ ದಿನೋಪಯೋಗಿ ವಸ್ತು ಖರೀದಿ ಮಾಡಲೆಂದು ಲಿಫ್ಟ್ ಮೂಲಕ ಕೆಳಗೆ ಇಳಿಯಲು ಹೋದ ನಾಲ್ವರು ಬಾಲಕಿಯರು ತಾಂತ್ರಿಕ ಲೋಪದಿಂದ ಲಿಫ್ಟ್ ನಲ್ಲೇ ಸುಮಾರು 2 ಗಂಟೆ ಬಾಕಿಯಾದ ಘಟನೆ ಕಲ್ಲಡ್ಕದಲ್ಲಿ ಶುಕ್ರವಾರ ನಡೆದಿದೆ.ಸಂಜೆ ಸುಮಾರು 5.30ರ ವೇಳೆ ಕಲ್ಲಡ್ಕದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ನಾಲ್ವರು ಬಾಲಕಿಯರು ಲಿಫ್ಟ್ ನಲ್ಲಿರುವಾಗಲೇ ವಿದ್ಯುತ್ ಸಂಪರ್ಕ ಹೋಗಿದೆ. ಬಳಿಕ ವಿದ್ಯುತ್ ಬಂದರೂ ಲಿಫ್ಟ್ ಚಾಲೂ ಆಗಲಿಲ್ಲ. […]

ಕಲ್ಲಡ್ಕ :ಕೈ ಕೊಟ್ಟ ಲಿಫ್ಟ್ ➤ 2 ಗಂಟೆ ಬಂಧಿಯಾದ ಬಾಲಕಿಯರು Read More »

ಕರಾವಳಿ

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕರಿಸಿದರು.   ನಿಂಗಯ್ಯ ಅವರು ಈ ಹಿಂದೆ ಬೆಂಗಳೂರಿನ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುತಿದ್ದರು. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಈ ಹಿಂದಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್. ಅವರಿಂದ ಅಧಿಕಾರ ಸ್ವೀಕರಿಸಿದರು.ರವೀಂದ್ರ ಅವರು ಶ್ರೀ ಕಂಠೇಶ್ವರ ದೇವಸ್ಥಾನ ನಂಜನಗೂಡಿಗೆ ವರ್ಗಾವಣೆಗೊಂಡಿದ್ದಾರೆ. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗ

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕಾರ Read More »

ಕರಾವಳಿ

ಪುತ್ತೂರು: ಅಲ್ಯೂಮಿನಿಯಮ್ ಕೊಕ್ಕೆಯಲ್ಲಿ ಅಡಿಕೆ ತೆಗೆಯುವಾಗ ವಿದ್ಯುತ್ ಪ್ರವಹಿಸಿ ಉದ್ಯಮಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.25:ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ಕೊಕ್ಕೆಯ ಮೂಲಕ ವಿದ್ಯುತ್ ಪ್ರವಾಹಗೊಂಡು ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಡಿ.25  ರ ಇಂದು ಪುತ್ತೂರು ಅಜ್ಜಿಕಲ್ಲು ಎಂಬಲ್ಲಿ ನಡೆದ ಬಗ್ಗೆ ನಡೆದಿದೆ. ಅಜ್ಜಿಕಲ್ಲು ನಿವಾಸಿ ಬಾಬು‌ಪೂಜಾರಿ ಅವರ ಪುತ್ರ ಮಂಗಳೂರು ಬಿಜೈ ಯಲ್ಲಿ ಜೆ.ಡಿ.ಎ. ಇನ್ ಫೋಟೆಕ್ ಸಂಸ್ಥೆಯ ಮಾಲಕ ರವೀಂದ್ರ ಪೂಜಾರಿ(34ವ) ರವರು ಮೃತಪಟ್ಟವರು.ಅವರು ಕ್ರಿಸ್ ಮಸ್ ರಜಾ ಅವಧಿಯಲ್ಲಿ ಅಜ್ಜಿಕಲ್ಲು ಮನೆಗೆ ಬಂದವರು ಮನೆಯ ತೋಟದಲ್ಲಿ ಅಡಿಕೆಮರ ಏರಿ ಕೊಕ್ಕೆಯ ಮೂಲಕ

ಪುತ್ತೂರು: ಅಲ್ಯೂಮಿನಿಯಮ್ ಕೊಕ್ಕೆಯಲ್ಲಿ ಅಡಿಕೆ ತೆಗೆಯುವಾಗ ವಿದ್ಯುತ್ ಪ್ರವಹಿಸಿ ಉದ್ಯಮಿ ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ : ಪ್ರಾಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.25: ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ ಇಂದು ನಡೆಸಲಾಯಿತು.   ಇನ್ನು ಈ ಕೊವೀಡ್ ಪರೀಕ್ಷೆಯಲ್ಲಿ ಒಟ್ಟು 40 ಮಂದಿ ಭಾಘವಹಿಸಿ ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಕೋವಿಡ್ 19 ಮೊಬೈಲ್ ಟೀಮ್ ಸುಳ್ಯದ ಸಿಬ್ಬಂದಿ ಅಮಿತಾ, ಡಾಟಾ ಎಂಟ್ರಿ ಆಪರೇಟರ್ ನೀತಾ ಆಶಾ ಕಾರ್ಯಾಕರ್ತೆಯರಾದ ಹೇಮಲತಾ, ಸಾವಿತ್ರಿ ರತ್ನಾವತಿ ಸಹಕರಿಸಿದ್ದಾರೆ.

ಸುಬ್ರಹ್ಮಣ್ಯ : ಪ್ರಾಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ Read More »

ಕರಾವಳಿ

ಮಂಗಳೂರು: ಸಂಗೀತ ಸಾಧಕ ಮುರಳೀಧರ ಕಾಮತ್ ಗೆ ‘ ರಂಗ ಚಾವಡಿ’ ಪ್ರಶಸ್ತಿ ಗೌರವ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ತುಳು ಸಾಹಿತ್ಯ ಅಕಾಡೆಮಿ ಹಾಗೂ ರಂಗ ಚಾವಡಿ ಮಂಗಳೂರು ಆಶ್ರಯದಲ್ಲಿ ನಗರದ ಉರ್ವಸ್ಟೋರ್ ನಲ್ಲಿರುವ ತುಳುಭವನದ ಸಿರಿ ಚಾವಡಿ ವೇದಿಕೆಯಲ್ಲಿ “ರಂಗ ಚಾವಡಿ ಪ್ರಶಸ್ತಿ” ಪ್ರದಾನ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಕಾರ್ಯಕಾರಿಣಿ ಸದಸ್ಯ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ನೆರವೇರಿಸಿದರು. ಅಧ್ಯಕ್ಷತೆಯನ್ನು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಜಿ.ಕತ್ತಲ್ ಸಾರ್ ವಹಿಸಿದ್ದರು. ಈ ವೇಳೆ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಮುರಳೀಧರ ಕಾಮತ್ ಅವರಿಗೆ ‘ರಂಗಚಾವಡಿ ಗೌರವ’ ಪ್ರಶಸ್ತಿ

ಮಂಗಳೂರು: ಸಂಗೀತ ಸಾಧಕ ಮುರಳೀಧರ ಕಾಮತ್ ಗೆ ‘ ರಂಗ ಚಾವಡಿ’ ಪ್ರಶಸ್ತಿ ಗೌರವ Read More »

ಕರಾವಳಿ

ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.25: ಕೋವಿಡ್-19 ಈ ವರ್ಷ ಅಧಿಕ ಆದಾಯ ತರುವ ದೇವಸ್ಥಾನಗಳನ್ನು ಕೂಡ ಬಿಟ್ಟಿಲ್ಲ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಪದ್ಭರಿತ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯದಂತಹ ದೇವಸ್ಥಾನಗಳ ಆದಾಯ ಕೂಡ ಕುಸಿದಿದೆ. ಕರ್ನಾಟಕದಲ್ಲಿರುವ ಪ್ರಮುಖ 12 ದೇವಾಲಯಗಳು ಕಳೆದ ವರ್ಷ ಒಟ್ಟಾರೆ 317 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದ್ದರೆ ಈ ವರ್ಷ ಗಳಿಸಿದ ಆದಾಯ ಕೇವಲ 18.6 ಕೋಟಿ ಮಾತ್ರ. ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಕುಕ್ಕೆ ಸುಬ್ರಹ್ಮಣ್ಯ ಪ್ರತಿವರ್ಷ ಸರಾಸರಿ 90 ಕೋಟಿ

ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ

ಗೋಕರ್ಣ : ಬೀಚಿನಲ್ಲಿ ಕೇರಳ ಮೂಲದ ವ್ಯಕ್ತಿ ಮೃತದೇಹ ಪತ್ತೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಕುಡ್ಲೆ ಸಮುದ್ರ ತೀರದಲ್ಲಿ ಗುರುವಾರ ಕೇರಳ ಮೂಲದ ವ್ಯಕ್ತಿಯೋರ್ವದ ಶವ ಪತ್ತೆಯಾಗಿದೆ. ವಿಶ್ವನಾಥ್ ಮೋಹನದಾಸ್ (28) ಎಂದು ಗುರುತಿಸಲಾಗಿದೆ. ತಮ್ಮ ಮೂರು ಜನ ಸ್ನೇಹಿತರೊಂದಿಗೆ ನಾಲ್ಕು ದಿನದ ಹಿಂದೆ ಗೋಕರ್ಣಕ್ಕೆ ಬಂದಿದ್ದರು. ಖಾಸಗಿ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಮಾಡಿದ್ದರೆನ್ನೆಲಾಗಿದೆ. ವಿಶ್ವನಾಥ ಬುಧವಾರ ರಾತ್ರಿಯೇ ನೀರಿಗೆ ಇಳಿದಿದ್ದು ಗೆಳೆಯರ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ. ಗೋಕರ್ಣ ಪಿ.ಎಸ್.ಐ ನವೀನ್ ನಾಯ್ಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಿ

ಗೋಕರ್ಣ : ಬೀಚಿನಲ್ಲಿ ಕೇರಳ ಮೂಲದ ವ್ಯಕ್ತಿ ಮೃತದೇಹ ಪತ್ತೆ. Read More »

ಕರ್ನಾಟಕ

ಸಿನಿಮಾ‌ ನಿರ್ದೇಶಕ ಭರತ್ ಹಠಾತ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.25: ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.   45 ವರ್ಷದ ಭರತ್‌ ಆರೋಗ್ಯ ಸಮಸ್ಯೆಯಿಂದಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ

ಸಿನಿಮಾ‌ ನಿರ್ದೇಶಕ ಭರತ್ ಹಠಾತ್ ನಿಧನ Read More »

ಕರ್ನಾಟಕ

ಉಜಿರೆ ಬಾಲಕನ ಅಪಹರಣ ಪ್ರಕರಣ ➤ ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ , ಸುಳ್ಳು ಮಾಹಿತಿ ಹರಡದಂತೆ ಬಿಜಾಯ್ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25:ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ. ಹಾಗೆಯೇ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಹರಡದಂತೆ ಅಪಹರಣಕೊಳಗಾಗಿದ್ದ ಉಜಿರೆಯ ಬಾಲಕನ ತಂದೆ ಬಿಜಾಯ್ ಮಾಧ್ಯಮಕ್ಕೆ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜಾಯ್, ನಾನು ಕೋಟ್ಯಂತರ ರೂಪಾಯಿ ಸಾಲವನ್ನು ಪಾವತಿಸಬೇಕಾಗಿದೆ ಎಂದು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ಹರಡುತ್ತಿದೆ. ನಾನು ಯಾರಿಗಾದರೂ ಹಣ ನೀಡಲು ಬಾಕಿಯಿದೆ ಎಂದು ಅವರು ಸಾಕ್ಷಿ ಸಮೇತ ಪೊಲೀಸರಿಗೆ ಸಾಬೀತುಪಡಿಸಿದರೆ ನಾನು ಮೊತ್ತವನ್ನು ಅವರಿಗೆ ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿದರು. ಬಿಟ್ ಕಾಯಿನ್

ಉಜಿರೆ ಬಾಲಕನ ಅಪಹರಣ ಪ್ರಕರಣ ➤ ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ , ಸುಳ್ಳು ಮಾಹಿತಿ ಹರಡದಂತೆ ಬಿಜಾಯ್ ಮನವಿ Read More »

ಕರಾವಳಿ

ರಂಗತ್ತಮಲೆ :ನಿಯಂತ್ರಣ ತಪ್ಪಿ ತೋಟಕ್ಕೆ ಬಿದ್ದ ಜೀಪು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.25: ಸುಳ್ಯದಿಂದ ಆಲೆಟ್ಟಿ ರಸ್ತೆ ಮೂಲಕ ರಂಗತ್ತಮಲೆಗೆ ಸಂಚರಿಸುತ್ತಿದ್ದ ಜೀಪು ಚಾಲಕನ ನಿಯಂತ್ರಣ ತಪ್ಪಿ ಆಲೆಟ್ಟಿ ರಾಧಾಕೃಷ್ಣ ರೈ ಯವರ ತೋಟಕ್ಕೆ ಬಿದ್ದ ಘಟನೆ ನಡೆದಿದೆ.   ಜೀಪಿನ ಚಾಲಕ ರವಿ ಸೇರಿ ೩ ಮಂದಿ ಪ್ರಯಾಣಿಕರು ಜೀಪಿನಲ್ಲಿದ್ದರು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸದೆ ಪ್ರಯಾಣಿಕರು ಪಾರಾಗಿದ್ದಾರೆ.

ರಂಗತ್ತಮಲೆ :ನಿಯಂತ್ರಣ ತಪ್ಪಿ ತೋಟಕ್ಕೆ ಬಿದ್ದ ಜೀಪು Read More »

ಕರಾವಳಿ
Scroll to Top