Kadaba News

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.02): ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ. ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು.

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಿಎಂ ಗೆ ತಪ್ಪಿನ ಅರಿವಾದಂತಿದೆ-ಸಂಸದ ಚೌಟ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಸಿಎಂ ಸಿದ್ದರಾಮಯ್ಯ ಅವರು 14 ಸೈಟ್‌ ವಾಪಸ್‌ ಕೊಟ್ಟಿರುವುದು ಅವರಿಗೆ ಬುದ್ಧಿ ಬಂದ ಹಾಗೆ ಕಾಣುತ್ತದೆ. ತನ್ನ ತಪ್ಪಿನ ಅರಿವಾದಂತೆ ಇದೆ, ಇನ್ನಾದರೂ ರಾಜೀನಾಮೆ ಕೊಡಲಿ ಎಂದು ಸಂಸದ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಒತ್ತಾಯಿಸಿದ್ದಾರೆ.  ಸಿಎಂ ಅವರು ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸಂವಿಧಾನದ ಆಶಯಗಳಿಗೆ ಗೌರವ ಕೊಡಲಿ. ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯವನ್ನೇ ದಿವಾಳಿ ಹಂತಕ್ಕೆ ಸಿದ್ದರಾಮಯ್ಯ ತಂದಿಟ್ಟಿದ್ದಾರೆ. ಒಂದಿಂಚು ಅಭಿವೃದ್ಧಿ ಇಲ್ಲದೆ ಜನ ಕಂಗೆಟ್ಟಿದ್ದಾರೆ. ವಾಲ್ಮೀಕಿ ನಿಗಮದಿಂದಲೇ ನೇರವಾಗಿ

ಮಂಗಳೂರು: ಸಿಎಂ ಗೆ ತಪ್ಪಿನ ಅರಿವಾದಂತಿದೆ-ಸಂಸದ ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಸೈಂಟ್ ಜೋಕಿಮ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಶಾಸ್ತ್ರಿ ಜಯಂತಿಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಪ್ರಕಾಶ್ ಪಾವ್ಲ್ ಡಿ’ಸೋಜ  ಅವರು ರಾಷ್ಟ್ರೀಯತೆ ,ತ್ಯಾಗ, ಸತ್ಯ ಹಾಗೂ ಅಹಿಂಸೆಯ ಮಾರ್ಗ ಇಂದಿನ ಯುವ ಪೀಳಿಗೆಗೆ ಅತಿ ಅಗತ್ಯವಾದ ಮೌಲ್ಯಗಳಾಗಿದೆ; ಆದ್ದರಿಂದ ಇಂತಹ ಮಹಾತ್ಮರ ಜಯಂತಿಯ ಆಚರಣೆ ಉದ್ದೇಶವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಅರ್ಥೈಸಿಕೊಂಡು ಅನುಸರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.ಮಹಾತ್ಮ ಗಾಂಧೀಜಿ

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ Read More »

ಕರಾವಳಿ

ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಮಾದಕ ವಸ್ತು ಜಾಲ ವನ್ನು ದೆಹಲಿ ಪೊಲೀಸರು ಬೇಧಿಸಿದ್ದು, ಬರೋಬ್ಬರಿ 2,000 ಕೋಟಿ ರೂ. 500ಕೆ.ಜಿ ಕೊಕೇನ್‌ ಸೀಜ್‌ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ದಕ್ಷಿಣ ದೆಹಲಿಯಲ್ಲಿ ಪೊಲೀಸರು ರೈಡ್‌ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ. ಇನ್ನು ಈ ಬೃಹತ್‌ ಮಾದಕ ವಸ್ತು ಜಾಲದ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಸಿಂಡಿಕೇಟ್‌ ಇರುವಂತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಇನ್ನು ಪ್ರಕರಣದಲ್ಲಿ ಇಬ್ಬರು ಆಫ್ಘನ್‌ ಪ್ರಜೆಗಳನ್ನು ಅರೆಸ್ಟ್‌ ಮಾಡಲಾಗಿದೆ. ಇವರ ಬಳಿ 400 ಗ್ರಾಂ

ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್ Read More »

ಬ್ರೇಕಿಂಗ್ ನ್ಯೂಸ್

ನಿಮ್ಮ ಕನಸನ್ನು ರೆಕಾರ್ಡ್ ಮಾಡಬಹುದು ಇನ್ನೊಮ್ಮೆ ವೀಕ್ಷೀಸಲೂಬಹುದು..

(ನ್ಯೂಸ್ ಕಡಬ)newskadaba.com,ನವದೆಹಲಿ (ಅ.02)  ತಂತ್ರಜ್ಞಾನ ಎಷ್ಟು ವೇಗವಾಗಿ ಬೆಳೆಯುತ್ತಿದೆ ಎಂದರೆ, ಯಾರೂ ಕಲ್ಪನೆ ಮಾಡಿಕೊಳ್ಳದಂಥ ಸಾಧನೆಗಳನ್ನು ಸಂಶೋಧಕರು ಮಾಡುತ್ತಿದ್ದಾರೆ. ಇದಾಗಲೇ ಕೃತಕ ಬುದ್ಧಿಮತ್ತೆ ಎನ್ನುವುದು ನಂಬಲರ್ಹ ಕೆಲಸಗಳನ್ನು ಮಾಡುತ್ತಿದೆ. ಇದೇ ರೀತಿ ಮನುಷ್ಯರು ಮಾಡುವ ಕೆಲಸಗಳನ್ನೆಲ್ಲಾ ಯಂತ್ರಗಳೇ ಮಾಡಿ ಮನುಷ್ಯರಿಗೆ ಉದ್ಯೋಗವೇ ಇಲ್ಲದಂತೆ ಮಾಡುತ್ತದೆ ಎನ್ನುವ ಭಯವೂ ಹಲವರನ್ನು ಕಾಡುವುದು ಇದೆ. ಅಷ್ಟು ಮುಂದುವರೆದಿದೆ ತಂತ್ರಜ್ಞಾನ. ಆದರೆ ಇದೀಗ ಕುತೂಹಲವೆಂಬಂತೆ ಕನಸನ್ನು ಕೂಡ ರೆಕಾರ್ಡ್​ ಮಾಡಿಕೊಳ್ಳಬಲ್ಲ ಹಾಗೂ ಆ ಕನಸನ್ನು ಮತ್ತೊಮ್ಮೆ ಪ್ಲೇ ಮಾಡಿ ನೋಡಬಲ್ಲ ಯಂತ್ರವೊಂದನ್ನು

ನಿಮ್ಮ ಕನಸನ್ನು ರೆಕಾರ್ಡ್ ಮಾಡಬಹುದು ಇನ್ನೊಮ್ಮೆ ವೀಕ್ಷೀಸಲೂಬಹುದು.. Read More »

ತಂತ್ರಜ್ಞಾನ

ನಾಳೆ ವಿಶ್ವಪ್ರಖ್ಯಾತ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ

(ನ್ಯೂಸ್ ಕಡಬ)newskadaba.com,ಮೈಸೂರು (ಅ.02) : ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ

ನಾಳೆ ವಿಶ್ವಪ್ರಖ್ಯಾತ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಮಾರ ಪರ್ವತ ಚಾರಣಕ್ಕೆ ನಾಳೆಯಿಂದ ಆನ್ಲೈನ್ ಟಿಕೆಟ್ ಗೆ ಚಾಲನೆ

(ನ್ಯೂಸ್ ಕಡಬ)newskadaba.com, (ಅ.02) : ಕುಮಾರ ಪರ್ವತಕ್ಕೆ ನಿರ್ದಿಷ್ಟ ಸಂಖ್ಯೆಯ ಚಾರಣಿಗರಿಗೆ ಮಾತ್ರವೇ ಅವಕಾಶ ಕಲ್ಪಿಸಲು ಸ್ಥಗಿತಗೊಳಿಸಲಾಗಿದ್ದ ಚಾರಣ ನಾಳೆಯಿಂದ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ  ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರಕಟಿಸಿದ್ದಾರೆ. 70ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಂಗಳೂರು ಕಬ್ಬನ್ ಉದ್ಯಾನದಿಂದ ಲಾಲ್ ಬಾಗ್ ವರೆಗೆ ಅರಣ್ಯಇಲಾಖೆ ಆಯೋಜಿಸಿದ್ದ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆಯಲ್ಲಿ ಪಾಲ್ಗೊಂಡು ಲಾಲ್ ಬಾಗ್ ನಲ್ಲಿ ಮಾತನಾಡಿದ ಸಚಿವರು, ರಾಜ್ಯದ ಎಲ್ಲ ಚಾರಣ ಪಥಗಳಿಗೂ ಒಂದೇ ಅಂತರ್ಜಾಲ ತಾಣದಲ್ಲಿ ಟಿಕೆಟ್ ಖರೀದಿಸಲು

ಕುಮಾರ ಪರ್ವತ ಚಾರಣಕ್ಕೆ ನಾಳೆಯಿಂದ ಆನ್ಲೈನ್ ಟಿಕೆಟ್ ಗೆ ಚಾಲನೆ Read More »

ಬ್ರೇಕಿಂಗ್ ನ್ಯೂಸ್

ಯುರೋಪ್ ದೇಶಗಳಿಗೆ ಪೂರೈಕೆಯಾಗಲಿವೆ ಭಾರತದ 2000 ಮಷಿನ್ ಗನ್

(ನ್ಯೂಸ್ ಕಡಬ)newskadaba.com, ಕಾನ್ಪುರ(ಅ.02) : ಕಾನ್ಪುರದಲ್ಲಿರುವ ಸ್ಮಾಲ್ ಆರ್ಮ್ಸ್ ಫ್ಯಾಕ್ಟರಿಗೆ ಯುರೋಪಿಯನ್ ದೇಶಗಳಿಂದ ಮೆಷಿನ್ ಗನ್‌ಗಳಿಗಾಗಿ ದೊಡ್ಡ ಆರ್ಡರ್ ಬಂದಿದೆ. ಒಂದು ನಿಮಿಷದಲ್ಲಿ 1000 ಸುತ್ತು ಗುಂಡು ಹಾರಿಸಬಲ್ಲ ಅತ್ಯಾಧುನಿಕ ಮೀಡಿಯಂ ಮೆಷಿನ್ ಗನ್‌ಗಳ 2000 ಯುನಿಟ್‌ಗಳನ್ನು ಈ ಕಾರ್ಖಾನೆ ಪೂರೈಸಲಿದೆ. ಮುಂದಿನ ಮೂರು ವರ್ಷಗಳಲ್ಲಿ ಹಲವು ಹಂತಗಳಲ್ಲಿ ಈ ಆರ್ಡರ್ ಪೂರ್ಣಗೊಳ್ಳಲಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಸರ್ಕಾರಿ ಸ್ವಾಮ್ಯದ ಆರ್ಡಿನೆನ್ಸ್ ಕಂಪನಿ ಸ್ಮಾಲ್ ಆರ್ಮ್ಸ್ ಫ್ಯಾಕ್ಟರಿಯಲ್ಲಿ ಅತ್ಯಂತ ಶಕ್ತಿಶಾಲಿ ಮತ್ತು ಬೇಡಿಕೆಯ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತದೆ.

ಯುರೋಪ್ ದೇಶಗಳಿಗೆ ಪೂರೈಕೆಯಾಗಲಿವೆ ಭಾರತದ 2000 ಮಷಿನ್ ಗನ್ Read More »

ಬ್ರೇಕಿಂಗ್ ನ್ಯೂಸ್

ರಾಷ್ಟ್ರಪಿತನಿಗೆ ಪುಷ್ಪನಮನ ಸಲ್ಲಿಸಿದ ಮೋದಿ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02) : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಹಲವು ನಾಯಕರು ಮಹಾತ್ಮ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ರಾಷ್ಟ್ರಪಿತನಿಗೆ ಪುಷ್ಪನಮನ ಸಲ್ಲಿಸಿದ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಅನಧಿಕೃತ ಕಟ್ಟಡಗಳನ್ನು  ಕೆಡವಲು ತಾನು ರೂಪಿಸುವ ಮಾರ್ಗಸೂಚಿಗಳು ದೇಶಾದ್ಯಂತ ಮತ್ತು ಎಲ್ಲಾ ಧರ್ಮಗಳಿಗೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್  ಹೇಳಿದೆ. ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿಯ ಧ್ವಂಸಕ್ಕೆ ಆಧಾರವಾಗುವುದಿಲ್ಲ. ಹಾಗೆಂದು ಅತಿಕ್ರಮಣ ಮತ್ತು ಫುಟ್‍ಪಾತ್‍ಗಳನ್ನು ಅಸ್ತವ್ಯಸ್ತಗೊಳಿಸುವುದನ್ನು ಪ್ರೋತ್ಸಾಹಿಸುತ್ತಿಲ್ಲ. ಅನಧಿಕೃತ ನಿರ್ಮಾಣಕ್ಕೆ, ಒಂದು ಕಾನೂನು ಇರಬೇಕು, ಅದು ಧರ್ಮ ಅಥವಾ ನಂಬಿಕೆಗಳ ಮೇಲೆ ಅವಲಂಬಿತವಾಗಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಾರ್ವಜನಿಕ ಸುರಕ್ಷತೆಯು ಬಹಳ ಮುಖ್ಯವಾಗಿದೆ. ರಸ್ತೆ, ಜಲಮೂಲಗಳು ಅಥವಾ

ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top