Kadaba News

ಆಲಂಕಾರು: ಒಕ್ಕಲಿಗ ಗೌಡ ಸೇವಾ ಸಂಘದ “ಕ್ರೀಡಾ ಸಂಭ್ರಮ”

(ನ್ಯೂಸ್ ಕಡಬ) newskadaba.com, ಕಡಬ, ಡಿ.9   ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ “ಕ್ರೀಡಾ ಸಂಭ್ರಮ 2019” ಆಲಂಕಾರು ಶ್ರೀ ದುರ್ಗಾಂಬಾ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಹಿರಿಯರ ಸಮಿತಿ ಅಧ್ಯಕ್ಷ ನಾಗಪ್ಪ ಗೌಡ ಮರುವಂತಿಲ ಮಾತನಾಡಿ, ಮಾನಸಿಕ ಹಾಗೂ ದೇಹದ ಬೆಳವಣಿಗೆಗೆ ಕ್ರೀಡೆ ಸಹಕಾರಿ. ಇಂತಹ ಕ್ರೀಡಾಕೂಟಗಳ ಮೂಲಕ ಸಮಾಜದ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ಕೊಡುವ ಕೆಲಸ ಆಗಬೇಕು. ಕ್ರೀಡಾಪಟುಗಳು ಇದರ […]

ಆಲಂಕಾರು: ಒಕ್ಕಲಿಗ ಗೌಡ ಸೇವಾ ಸಂಘದ “ಕ್ರೀಡಾ ಸಂಭ್ರಮ” Read More »

ಕರಾವಳಿ

ಬೀದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿಗೆ ಚುಣಾವಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ) ನಿಯಮಗಳು 2019ರನ್ವಯ ಪಟ್ಟಣ ವ್ಯಾಪಾರ ಸಮಿತಿಗೆ ಬೀದಿ ಬದಿ ವ್ಯಾಪಾರಗಳಲ್ಲಿ ತೊಡಗಿರುವ 10 ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಡಿಸೆಂಬರ್ 21 ರಂದು ಚುನಾವಣೆ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಸಲು ನಿಗಧಿಪಡಿಸಿದ ಅವಧಿ ಡಿಸೆಂಬರ್ 9 ರಿಂದ 13 ರವರೆಗೆ ಬೆಳಿಗ್ಗೆ ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ, ನಾಮಪತ್ರಗಳನ್ನು ಪರಿಶೀಲಿಸುವ ದಿನ

ಬೀದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿಗೆ ಚುಣಾವಣೆ Read More »

ಕರಾವಳಿ

ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸತ್ವಾ ಬಾಯ್ಸ್ ದುಬಾಯಿ ಪ್ರಾಯೋಜಕತ್ವದಲ್ಲಿ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಅಳವಡಿಸಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶನಿವಾರ ನಡೆಯಿತು. ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಎಚ್.ಆರ್. ಅವರು ನೂತನ ಘಟಕ ಉದ್ಘಾಟಿಸಿ, ಅತ್ಯಂತ ಬಡವರು ಚಿಕಿತ್ಸೆಗೆ ಬರುವ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವ

ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ Read More »

ಕರಾವಳಿ

ಉಪ್ಪಿನಂಗಡಿ: ಬೃಹತ್ ಕಂಟೇನರ್ ನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ ➤ 800 ಕೆಜಿ ಮಾಂಸ ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.08. ಅಕ್ರಮವಾಗಿ ಗೋವನ್ನು ವಧಿಸಿ ಕಂಟೈನರ್ ನಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿ, ಕಂಟೈನರ್ ಸಹಿತ 800 ಕೆಜಿ ಗೋ ಮಾಂಸವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ಉಪ್ಪಿನಂಗಡಿ ಪೊಲೀಸರು ತಪಾಸಣೆ ನಿರತರಾಗಿದ್ದ ವೇಳೆ ಕಂಟೈನರ್ ಲಾರಿಯೊಂದರಲ್ಲಿ ಯಾರಿಗೂ ಅನುಮಾನ ಬಾರದಂತೆ ಭಾರೀ ಪ್ರಮಾಣದ ದನದ ಮಾಂಸ ಸಾಗಾಟ ಮಾಡಲಾಗುತ್ತಿರುವುದು ಕಂಡು ಬಂದಿದೆ. ಕಂಟೈನರ್

ಉಪ್ಪಿನಂಗಡಿ: ಬೃಹತ್ ಕಂಟೇನರ್ ನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ ➤ 800 ಕೆಜಿ ಮಾಂಸ ವಶಕ್ಕೆ, ಓರ್ವನ ಬಂಧನ Read More »

ಕರಾವಳಿ

ಕೆನರಾ ಹೈಸ್ಕೂಲ್‍ನಲ್ಲಿ ಫಿಲಾಟೆಲಿ ಕ್ಲಬ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.7   ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಹವ್ಯಾಸವನ್ನು ಬೆಳೆಸುವ ಆಶಯದೊಂದಿಗೆ ಡಿಸೆಂಬರ್ 6 ರಂದು ಕೆನರಾ ಹೈಸ್ಕೂಲ್, ಸಿ.ಬಿ.ಎಸ್.ಇ, ಡೊಂಗರ್ ಕೇರಿ ಶಾಲೆಯಲ್ಲಿ ಫಿಲಾಟೆಲಿ ಕ್ಲಬ್ ನ ಉದ್ಘಾಟನೆಯನ್ನು ಮಂಗಳೂರಿನ ಹಿರಿಯ ಅಂಚೆ ಅಧೀಕ್ಷಕ ಹರ್ಷ ಉದ್ಘಾಟಿಸಿದರು. ಫಿಲಾಟೆಲಿಸ್ಟ್ ಲಕ್ಷ್ಮಣ್ ಪ್ರಭು ಅವರು ಮಕ್ಕಳಿಗೆ ಸ್ಟಾಂಪ್ ಸಂಗ್ರಹಣೆಯ ಹವ್ಯಾಸದ ಕುರಿತು ಅರಿವು ಮೂಡಿಸಿದರು ಹಾಗೂ ತಮ್ಮ ಅಂಚೆ ಚೀಟಿ ಸಂಗ್ರಹಣೆಯ ಪ್ರದರ್ಶನವನ್ನು ಮಾಡಿದರು. ಶಾಲೆಯ ಪ್ರಿನ್ಸಿಪಾಲ್ ಜೋಯ್ ಜೆ ರೈ,

ಕೆನರಾ ಹೈಸ್ಕೂಲ್‍ನಲ್ಲಿ ಫಿಲಾಟೆಲಿ ಕ್ಲಬ್ ಉದ್ಘಾಟನೆ Read More »

ಕರಾವಳಿ

ಹಿಂದುಳಿದ ವರ್ಗಗಳ ಪ್ರೋತ್ಸಾಹಧನ – ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

  (ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.7  2019-20 ನೇ ಸಾಲಿಗೆ ಐಐಎಮ್, ಐಐಟಿ, ಐಐಎಸ್‍ಸಿ, ಐಐಐಟಿಎಸ್, ಎನ್‍ಐಟಿಎಸ್, ಐಐಎಸ್‍ಇಆರ್ ಎಸ್, ಎಐಐಎಮ್‍ಎಸ್, ಎನ್‍ಎಲ್‍ಯು, ಐಎಸ್‍ಎಮ್, ಐಎಸ್‍ಪಿ, ಐಎಸ್‍ಐ, ಜೆಐಪಿಎಮ್‍ಇಆರ್, ಎಸ್‍ಪಿಎ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ),  3(ಎ)  ಹಾಗೂ  3(ಬಿ) ಹಾಗೂ ಸಮಾನ್ಯ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿ

ಹಿಂದುಳಿದ ವರ್ಗಗಳ ಪ್ರೋತ್ಸಾಹಧನ – ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ Read More »

ಕರಾವಳಿ

ತೆಂಗಿನ ಮರ ಬಿದ್ದು ಎರಡು ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com, ಕಡಬ, ಡಿ.6   ನೂಜಿಬಾಳ್ತಿಲ ಗ್ರಾಮದ ನೀರಾರಿ ಎಂಬಲ್ಲಿ ಗುರುವಾರ ರಾತ್ರಿ ಬೀಸಿದ ಗಾಳಿಗೆ ತೆಂಗಿನ ಮರವೊಂದು ಬುಡ ಸಮೇತ ಉರುಳಿ ಬಿದ್ದ ಎರಡು ಮನೆಗಳಿಗೆ ಹಾನಿಯಾಗಿದೆ. ನೀರಾರಿ ಪೀರು ಸಾಹೇಬು ಅವರ ಮನೆಯ ಒಂದು ಭಾಗಕ್ಕೆ ಹಾನಿಯಾಗಿದೆ ಮತ್ತು ಪಕ್ಕದ ದಾವೂದ್ ಸಾಹೇಬ್ ಅವರ ಮನೆಗೂ ಹಾನಿಯಾಗಿ ನಷ್ಟವುಂಟಾಗಿದೆ ಎಂದು ಮನೆ ಮಾಲಿಕರು ತಿಳಿಸಿದ್ದಾರೆ.

ತೆಂಗಿನ ಮರ ಬಿದ್ದು ಎರಡು ಮನೆಗಳಿಗೆ ಹಾನಿ Read More »

ಕರಾವಳಿ

ಡಿ.7- ಆರೋಗ್ಯ ಸುರಕ್ಷಾ ಕಾರ್ಡ್, ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.6   ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ, ಅಕಾಡೆಮಿಕ್ ಆಫ್ ಹೈಯರ್ ಎಜುಕೇಷನ್ ಮಣಿಪಾಲ ಇವರ ಸಹಯೋಗದೊಂದಿಗೆ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್, ವಿದ್ಯಾರ್ಥಿವೇತನ ಹಾಗೂ ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣಾ ಸಮಾರಂಭ ಡಿಸೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ

ಡಿ.7- ಆರೋಗ್ಯ ಸುರಕ್ಷಾ ಕಾರ್ಡ್, ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣೆ Read More »

ಕರಾವಳಿ

ಉಚಿತ ಕಂಪ್ಯೂಟರ್ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4   ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದಿಂದ ಮುಖ್ಯಮಂತ್ರಿ ಕರ್ನಾಟಕ ಕೌಶಲ್ಯ ಯೋಜನೆಯಡಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ನಿರುದ್ಯೋಗಿ ಯುವಕ/ಯುವತಿಯರಿಗೆ ವಿಶೇಷವಾಗಿ ದೈಹಿಕ ವಿಕಲಚೇತನರಿಗೂ ಕೂಡಾ ಉಚಿತವಾಗಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಕಂಪ್ಯೂಟರ್ ಹಾರ್ಡ್‍ವೇರ್ ಆ್ಯಂಡ್ ನೆಟ್ವರ್ಕಿಂಗ್ ತರಬೇತಿಗಳನ್ನು ನೀಡಲಾಗುತ್ತದೆ. ಯಶಸ್ವಿಯಾಗಿ ತರಬೇತಿ ಮುಗಿಸಿದವರಿಗೆ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗವಕಾಶವನ್ನು ಕಲ್ಪಿಸಿ ಕೊಡಲಾಗುತ್ತದೆ. ಉಚಿತ ತರಬೇತಿಗಳು 90 ದಿವಸಗಳವರೆಗೆ ಇರುತ್ತದೆ. ಕನಿಷ್ಟ 18 ರಿಂದ 35 ವಯಸ್ಸಿನವರು ತರಬೇತಿಗೆ ಅರ್ಹರಾಗಿರುತ್ತಾರೆ.

ಉಚಿತ ಕಂಪ್ಯೂಟರ್ ತರಬೇತಿ Read More »

ಕರಾವಳಿ

ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4  ದ.ಕ ಜಿಲ್ಲಾಡಳಿತ ಹಾಗೂ ಲಯನ್ಸ್ ಕ್ಲಬ್ ವೆಲೆನ್ಸಿಯಾ ವತಿಯಿಂದ ಡಿಸೆಂಬರ್ 5 ರಂದು ಬೆಳಿಗ್ಗೆ 9 ಗಂಟೆಯಿಂದ 10 ಗಂಟೆಯವರೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳ ಸಹಕಾರದೊಂದಿಗೆ ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಾಂಕೇತಿಕವಾಗಿ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಆಯ್ದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಮ್ಮುಖದಲ್ಲಿ ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಲಿದ್ದಾರೆ. ಜಿಲ್ಲಾ ಗವರ್ನರ್

ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮ Read More »

ಕರಾವಳಿ
Scroll to Top