Kadaba News

ಕೊಂಬಾರಿನ ಲೋಕೇಶ್ರಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ಕೆಂಜಾಳದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕೊಂಬಾರು,ಸಪ್ಟೆಂಬರ್.23. ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ ಎಂಬವರಿಗೆ ಸುಬ್ರಹ್ಮಣ್ಯ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಮಾನುಷವಾಗಿ ಮಾರಾಣಾಂತಿವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ನಾಗರಿಕರು ಕೆಂಜಾಲದಲ್ಲಿ ಅರಣ್ಯ ಇಲಾಖಾ ಕಛೇರಿಯ ಎದರು ಶನಿವಾರ ಪ್ರತಿಭಟನೆ ನಡೆಸಿದರು. ಕೆಂಜಾಳದ ನಾಗರಿಕರು ಹಾಗೂ ನೀತಿ ತಂಡದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಗ್ಗೆ 10.30ರಿಂದ ಪ್ರತಿಭಟನೆ ಪ್ರಾರಂಭವಾದರೂ ಮಧ್ಯಾಹ್ನದವರೆಗೆ ಅರಣ್ಯ ಇಲಾಖೆಯ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಯಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸುವ ಎಚ್ಚರಿಕೆ […]

ಕೊಂಬಾರಿನ ಲೋಕೇಶ್ರಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ಕೆಂಜಾಳದಲ್ಲಿ ಪ್ರತಿಭಟನೆ Read More »

ಕರಾವಳಿ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ➤ ಹಳೆನೇರೆಂಕಿ ಚಾಂಪಿಯನ್

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.23.ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಬಾಲಕರ ಖೋ ಖೋ ಪಂದ್ಯಾಟದಲ್ಲಿ ಕಡಬ ತಾಲೂಕು ಹಳೆನೇರೆಂಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ತಂಡ ಚಾಂಪಿಯನ್ ಪಡೆದಿದೆ. ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಪುತ್ತೂರು ತಾಲೂಕನ್ನು ತಂಡ ಪ್ರತಿನಿಧಿಸಿ ಬಂಟ್ವಾಳ ತಾಲೂಕನ್ನು ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ತಂಡದ ನಿಶಾಂತ್‍ಗೆ ಉತ್ತಮ ಆಕ್ರಮಣಕಾರ ಪ್ರಶಸ್ತಿ ಲಭಿಸಿದೆ. ಶಾಲಾ ಮುಖ್ಯಗುರು ವೈ ಸಾಂತಪ್ಪ ಗೌಡ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥ ಗೌಡ ಎಂ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ➤ ಹಳೆನೇರೆಂಕಿ ಚಾಂಪಿಯನ್ Read More »

ಕರಾವಳಿ

ಸೆಪ್ಟಂಬರ್ 24 – ರಾಷ್ಟ್ರೀಯ ಸೇವಾ ಯೋಜನಾ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುಧಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, ವಿದ್ಯಾರ್ಥಿ ಮತ್ತು ಸಮುದಾಯದ ನಡುವೆ ಸುಖಕರವಾದ ಮತ್ತು ರಚನಾತ್ಮಕವಾದ

ಸೆಪ್ಟಂಬರ್ 24 – ರಾಷ್ಟ್ರೀಯ ಸೇವಾ ಯೋಜನಾ ದಿನ Read More »

ಕರಾವಳಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ➤ ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.ಬಂಟ್ವಾಳ ತಾಲೂಕಿನ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ನೇಮಕ ಮಾಡಲು ಅವಕಾಶವಿದೆ. ಅವರಿಗೆ ಮಾಸಿಕ ರೂ.3000/- ಗೌರವಧನವನ್ನು ನೀಡಲಾಗುತ್ತದೆ. ಗೋಳ್ತಮಜಲು, ಕರಿಯಂಗಳ, ಕಳ್ಳಿಗೆ, ಅಮ್ಮುಂಜೆ, ನರಿಕೊಂಬು, ಇರ್ವತ್ತೂರು, ಸಜೀಪಮುನ್ನೂರು, ಬಡಗಬೆಳ್ಳೂರು, ಬಾಳ್ತಿಲ, ಕಾವಳಪಡೂರು, ನಾವೂರು, ಪಂಜಿಕಲ್ಲು, ಸಜೀಪಮೂಡ, ಸಂಗಬೆಟ್ಟು, ಉಳಿ, ಬಾಳೆಪುಣಿ, ಪುದು, ತುಂಬೆ, ಕುರ್ನಾಡು, ಫಜೀರು, ಸಜಿಪನಡು, ಸಜೀಪಪಡು, ಮೇರಮಜಲುಗ್ರಾಮ ಪಂಚಾಯತ್‍ಗಳಲ್ಲಿ ಹುದ್ದೆ ಖಾಲಿಯಿದೆ,

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ➤ ವಿಕಲಚೇತನರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಎಲ್ಲಾ ಸಹಕಾರ ಸಂಘಗಳು/ಸೌಹಾರ್ದ ಸಹಕಾರ ಸಂಘಗಳು ಕಾಯಿದೆ ಹಾಗೂ ನಿಯಮಗಳನ್ವಯ 2019-20ನೇ ಸಾಲಿನ ಲೆಕ್ಕ ಪರಿಶೋಧನೆಗೆ ಲೆಕ್ಕ ಪರಿಶೋಧಕರ ಆಯ್ಕೆ ಸಂಬಂಧ ವಾರ್ಷಿಕ ಮಹಾಸಭೆ ನಡೆಸಲಾಗಿತ್ತು. ಈ ನಡವಳಿಯ ಯಥಾ ಪ್ರತಿಯನ್ನು ಮಹಾಸಭೆ ನಡೆದ 7 ದಿವಸದೊಳಗೆ ಉಪನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ, ಕಿಲ್ಲೆಕೋರ್ಟ್ ಕಟ್ಟಡ, 3ನೇ ಅಂತಸ್ತು, ಪಿ.ಎಂ.ರಾವ್ ರಸ್ತೆ, ಹಂಪನಕಟ್ಟೆ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಕಚೇರಿಗೆ ಕಡ್ಡಾಯವಾಗಿ ಒಂದು ಪ್ರತಿಯನ್ನು ಸಲ್ಲಿಸಿ

ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ Read More »

ಕರಾವಳಿ

ಅಜ್ಜಾವರ ಗ್ರಾಮದಲ್ಲಿ ಲಾಭದಾಯಕ ಮೀನು ಕೃಷಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ಅಂಗ ಸಂಸ್ಥೆ ಮಂಗಳೂರಿನ ಕಂಕನಾಡಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ಲಾಭದಾಯಕ ಮೀನು ಕೃಷಿ ತರಬೇತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 20 ರಂದು ಹಮ್ಮಿಕೊಳ್ಳಲಾಗಿತ್ತು. ಕೃಷಿ ವಿಜ್ಞಾನ ಕೇಂದ್ರದ ಮೀನುಗಾರಿಕಾ ವಿಜ್ಞಾನಿ ಡಾ|| ಎನ್. ಚೇತನ್ ರೈತರೊಂದಿಗೆ ಸಮಾಲೋಚಿಸುತ್ತಾ ನೀರು ಸಂಗ್ರಹಣೆ ಮಾಡಲು ಸಿದ್ಧಗೊಳಿಸಿರುವ ಕೃಷಿಹೊಂಡಗಳು, ಕೆರೆ, ಕೊಳಗಳು ಹಾಗು ಮೀನುಗಾರಿಕೆಗಾಗಿ ರಚಿಸಲಾದ ಹೊಂಡಗಳಲ್ಲಿ ಕಡಿಮೆ ಬಂಡವಾಳದೊಂದಿಗೆ ಲಾಭದಾಯಕ ಮೀನು ಕೃಷಿ ಮಾಡುವ

ಅಜ್ಜಾವರ ಗ್ರಾಮದಲ್ಲಿ ಲಾಭದಾಯಕ ಮೀನು ಕೃಷಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಎನ್.ಟಿ.ಎಸ್.ಇ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.2019-20ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಹಾಗೂ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಎನ್.ಟಿ.ಎಸ್.ಇ ಪರೀಕ್ಷೆಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎನ್.ಎಂ.ಎಂ.ಎಸ್ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ, ಮೊರಾರ್ಜಿ, ವಸತಿಶಾಲೆಗಳ ಸಿ.ಬಿ.ಎಸ್.ಸಿ ಹಾಗೂ ಐ.ಸಿ.ಎಸ್.ಇ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಎನ್.ಟಿ.ಎಸ್.ಇ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 3 ರಂದು ಪರೀಕ್ಷೆ ನಡೆಯಲಿದ್ದು, ವೆಬ್‍ಸೈಟ್ ವಿಳಾಸ-

ಎನ್.ಟಿ.ಎಸ್.ಇ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

ವಿಟ್ಲ-ಅಂಗನವಾಡಿ ಸಹಾಯಕಿ ಹುದ್ದೆಗೆ-ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 2 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್‍ನಲ್ಲಿ ಆರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ ವಿಳಾಸ-www.anganwadirecruit.kar.nic.in . ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಕೊನೆಯ ದಿನ. ಖಾಲಿಯಿರುವ ಅಂಗನವಾಡಿ ಸಹಾಯಕಿ ಹುದ್ದೆ : ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರಿಂಜ ಅಂಗನವಾಡಿ ಕೇಂದ್ರ, ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುರಿಬೈಲು ಶಾಲೆ. ಅಭ್ಯರ್ಥಿಗಳನ್ನು ಸಾಮಾನ್ಯ ಮೀಸಲಾತಿಯಲ್ಲಿ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ

ವಿಟ್ಲ-ಅಂಗನವಾಡಿ ಸಹಾಯಕಿ ಹುದ್ದೆಗೆ-ಅರ್ಜಿ ಆಹ್ವಾನ Read More »

ಕರಾವಳಿ

ಕಡ್ಯಕೊಣಾಜೆ ➤ ಒಕ್ಕೂಟ ಸದಸ್ಯರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,ಸಪ್ಟೆಂಬರ್.21.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡ್ಯ-ಕೊಣಾಜೆ ಒಕ್ಕೂಟದ ವತಿಯಿಂದ ಶುಕ್ರವಾರ ಕೊಣಾಜೆ ಶಾಲೆಯಲ್ಲಿ ಶ್ರಮದಾನ ನಡೆಸಲಾಯಿತು. ಕಡ್ಯ-ಕೊಣಾಜೆ ಉ.ಹಿ.ಪ್ರಾ. ಶಾಲೆಯಲ್ಲಿ ನಡೆದ ಶ್ರಮದಾನದಲ್ಲಿ ಶಾಲಾ ವಠಾರ ಸ್ವಚ್ಚತೆ, ಕೃಷಿ ಕೆಲಸ, ತೆಂಗಿನ ಗಿಡಕ್ಕೆ ಸೊಪ್ಪು ಹಾಕುವುದು, ಕಳೆ ತೆಗೆಯುವುದು ಸೇರಿದಂತೆ ಅನೇಕ ಕೆಲಸಗಳನ್ನು ಸದಸ್ಯರು ನಿರ್ವಹಿಸಿದರು. ಬಿಳಿನೆಲೆ ವಲಯ ಮೇಲ್ವಿಚಾರಕರಾದ ಧರ್ಣಪ್ಪ ಗೌಡ, ತರಭೇತಿಯಲ್ಲಿರುವ ಮೇಲ್ವಿಚಾರಕರಾದ ಸುಬ್ರಹ್ಮಣ್ಯ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಶಿವಪ್ಪ ಗೌಡ, ಮುಖ್ಯ ಶಿಕ್ಷಕ ರಾಮಕೃಷ್ಣ ಕೆ., ಕಡ್ಯಕೊಣಾಜೆ

ಕಡ್ಯಕೊಣಾಜೆ ➤ ಒಕ್ಕೂಟ ಸದಸ್ಯರಿಂದ ಶ್ರಮದಾನ Read More »

ಕರಾವಳಿ

ಅಡೆಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ➤ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,ಸಪ್ಟೆಂಬರ್.21.ನೂಜಿಬಾಳ್ತಿಲ ಗ್ರಾಮದ ಅಡೆಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಉಪ್ಪಿನಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಾಥಮಿಕ ಶಾಲಾ ಕಿರಿಯ ವಿಭಾಗದ ರಸಪ್ರಶ್ನೆಯಲ್ಲಿ ಅಡೆಂಜ ಕಿ.ಪ್ರಾ. ಶಾಲೆಯ ಕೃಪಾಶ್ರೀ, ವರ್ಷಿತಾ, ಜಿತಿನ್, ರಕ್ಷಿತ್, ದುರ್ಗಾಶ್ರೀ, ಪವನ್ ಅವರ ತಂಡ ತೃತೀಯ ಸ್ಥಾನ ಪಡೆದಿರುತ್ತದೆ. ಇವರಿಗೆ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಮಾರ್ಗದರ್ಶನ ನೀಡಿರುತ್ತಾರೆ.

ಅಡೆಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ➤ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ Read More »

ಕರಾವಳಿ
Scroll to Top