Kadaba News

ಅಮೇರಿಕಾದಲ್ಲಿ ನಡೆದ 24ನೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿಯಲ್ಲಿ ಪಾಲ್ಗೊಂಡ ಜ್ಞಾನೋದಯ ಬೆಥನಿ ವಿದ್ಯಾರ್ಥಿಗಳಿಗೆ ಸ್ವಾಗತ ‍‍‍‍

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸಪ್ಟೆಂಬರ್.9.ಬೆಥನಿ ವಿದ್ಯಾ ಸಂಸ್ಥೆಗಳ ಆತಿಥ್ಯದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್ ಮತ್ತು ದ.ಕ.ಜಿಲ್ಲಾ ಪಂಚಾಯತ್ ಇದರ ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದೊಂದಿಗೆ  ಸ್ಕೌಟ್ ಮತ್ತು ಗೈಡ್ಸ್‍ನ ಅಮೇರಿಕಾದಲ್ಲಿ ನಡೆದ 24ನೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿಯಲ್ಲಿ ಪಾಲ್ಗೊಂಡು ವಾಪಸ್ ಆಗಮಿಸಿದ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜು ನೆಲ್ಯಾಡಿಯ ಇಲ್ಲಿಯ ವಿದ್ಯಾರ್ಥಿಗಳಿಗೆ ಸ್ವಾಗತ ‍‍‍‍ಕಾರ್ಯಕ್ರಮ ನಡೆಸಲಾಯಿತು. ಅಬ್ದುಲ್ ನಾಸಿರ್ ಮತ್ತು ತಾಹಿರಾರವರ ಪುತ್ರಿ ಅನುಷ್ಕ ಖತೀಜ , ವಸಂತ ಬಡೇಕರ್ ಮತ್ತು ಮಮತಾರವರ ಪುತ್ರಿ […]

ಅಮೇರಿಕಾದಲ್ಲಿ ನಡೆದ 24ನೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿಯಲ್ಲಿ ಪಾಲ್ಗೊಂಡ ಜ್ಞಾನೋದಯ ಬೆಥನಿ ವಿದ್ಯಾರ್ಥಿಗಳಿಗೆ ಸ್ವಾಗತ ‍‍‍‍ Read More »

ಕರಾವಳಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ➤ ಸಪ್ಟೆಂಬರ್ 17 ರಂದು 2019-20ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2019-20ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸಪ್ಟೆಂಬರ್ 17 ರಂದು ಮಂಗಳೂರು ನಗರದ ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಹಾಗೂ ಮಹಾನಗರಪಾಲಿಕೆ, ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಂಘಟಿಸಲಾಗುತ್ತಿದೆ. ದ.ಕ. ಜಿಲ್ಲೆಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಥಮ, ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ➤ ಸಪ್ಟೆಂಬರ್ 17 ರಂದು 2019-20ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಬೀದಿಬದಿ ವ್ಯಾಪಾರಸ್ಥರ ಮತದಾನ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಕೇಂದ್ರ ಸರ್ಕಾರವು ಬೀದಿ ವ್ಯಾಪಾರಸ್ಥರ ಕುರಿತು ರಾಷ್ಟ್ರೀಯ ನೀತಿಯನ್ನು ಹೊರಡಿಸಿದ್ದು, ಸರ್ವೋಚ್ಛ ನ್ಯಾಯಾಲಯವು ಸಹ ಬೀದಿ ವ್ಯಾಪಾರಸ್ಥರ ನೀತಿಯನ್ನು ಅನುಷ್ಟಾನಗೊಳಿಸಲು ಆದೇಶವನ್ನು ಹೊರಡಿಸಿರುತ್ತದೆ. ಅದೇ ರೀತಿ ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯವು “ಬೀದಿ ವ್ಯಾಪಾರಸ್ಥರ ಸಂರಕ್ಷಣೆ, ಜೀವನೋಪಾಯ ಮತ್ತು ನಿಯಂತ್ರಣ ಕಾಯ್ದೆ 2014ನ್ನು ಹಾಗೂ ಕರ್ನಾಟಕ ಸರ್ಕಾರವು “ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರದ ನಿಯಂತ್ರಣ) ನಿಯಮ ಜಾರಿಗೆ ತಂದಿದೆ.ಈಗಾಗಲೇ ಮಂಗಳೂರು ಮಹಾನಗರಪಾಲಿಕೆಯಲ್ಲಿ “ಪಟ್ಟಣ ವ್ಯಾಪಾರ

ಬೀದಿಬದಿ ವ್ಯಾಪಾರಸ್ಥರ ಮತದಾನ ಪಟ್ಟಿ ಪ್ರಕಟ Read More »

ಕರಾವಳಿ

ಸಮಾಜ ಕಲ್ಯಾಣ ಇಲಾಖಾವತಿಯಿಂದ ನರ್ಸಿಂಗ್ ಕೋರ್ಸ್- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿನಲ್ಲಿ ಜಿ.ಎನ್.ಎಂ., ಬಿ.ಎಸ್.ಸಿ, ಪಿ.ಬಿ.ಬಿಎಸ್ಸಿ, ಎಂ.ಎಸ್ಸಿ ನರ್ಸಿಂಗ್ ಮತ್ತು ಅರೆವೈದ್ಯಕೀಯ ಕೋರ್ಸ್‍ಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಿ ತರಬೇತಿಗೆ ನಿಯೋಜಿಸಲಾಗುವುದಿಲ್ಲ. ಆದ್ದರಿಂದ ಜಿ.ಎನ್.ಎಂ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ, ಬೆಂಗಳ್ರರು ಅವರ ವೆಬ್‍ಸೈಟ್: http://www.ksdneb.org  ಹಾಗೂ ಅರೆ ವೈದ್ಯಕೀಯ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ಯಾರಾ ಮೆಡಿಕಲ್ ಬೋರ್ಡ್, ಬೆಂಗಳೂರು ರವರ

ಸಮಾಜ ಕಲ್ಯಾಣ ಇಲಾಖಾವತಿಯಿಂದ ನರ್ಸಿಂಗ್ ಕೋರ್ಸ್- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಸೂಚನೆ Read More »

ಕರಾವಳಿ

ಭ್ರೂಣ ಹತ್ಯೆ ತಡೆಗೆ ಸರ್ವರ ಸಹಕಾರ ಅಗತ್ಯ ➤ ಜಿಲ್ಲಾ ಆರೋಗ್ಯಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಭ್ರೂಣಹತ್ಯೆ ಮನುಕುಲಕ್ಕೆ ಮಾರಕ ಅಷ್ಟೇ ಅಲ್ಲ ಅಮಾನವೀಯವಾಗಿದ್ದು ಇದು ಮುಂದುವರಿದ ನಾಗರಿಕ ಸಮಾಜದಲ್ಲಿ ನಡೆಯುತ್ತಿರುವುದು ಅತ್ಯಂತ ಭೀಕರ ಸಂಗತಿಯಾಗಿದೆ, ಇದನ್ನು ತಡೆಯಲು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ಬದುಕು ಕಟ್ಟಿಕೊಳ್ಳಲು ಮಹಿಳೆ ಅತ್ಯವಶ್ಯಕ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಕೃಷ್ಣ ರಾವ್ ಹೇಳಿದರು. ಶನಿವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಯೋಜನೆಯಡಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಸಿಯುತ್ತಿರುವ ಮಕ್ಕಳ ಲಿಂಗಾನುಪಾತ ತಜ್ಞರೊಂದಿಗೆ ಸಮಾಲೋಚನೆಯ ಅಧ್ಯಕ್ಷತೆ

ಭ್ರೂಣ ಹತ್ಯೆ ತಡೆಗೆ ಸರ್ವರ ಸಹಕಾರ ಅಗತ್ಯ ➤ ಜಿಲ್ಲಾ ಆರೋಗ್ಯಾಧಿಕಾರಿ Read More »

ಕರಾವಳಿ

2019-20ನೇ ಸಾಲಿಗೆ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಡಿ ಕೌಶಲ್ಯ ಅಭಿವೃದ್ಧಿ ತರಬೇತಿ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.2019-20ನೇ ಸಾಲಿಗೆ ಎಸ್‍ಸಿಪಿ ಮತ್ತು ಟಿಎಸ್‍ಪಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ 800 ಹಾಸಿಗೆಯುಳ್ಳ ಎನ್.ಎ.ಬಿ.ಹೆಚ್ ಮಾನ್ಯತೆ ಪಡೆದಿರುವ ಆಸ್ಪತ್ರೆಗಳಲ್ಲಿ ಕನಿಷ್ಠ 75 ಶೇಕಡಾ ಹುದ್ದೆಗಳನ್ನು ಮೀಸಲಿರಿಸುವ ಭರವಸೆಯ ಮೇರೆಗೆ ಕೌಶಲ್ಯ ಅಬಿವೃದ್ದಿ ತರಬೇತಿ ಮೇಳವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10.30 ಗಂಟೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣ, ಪಿಡಬ್ಲ್ಯೂಡಿ ಕಟ್ಟಡ, ಮಂಗಳೂರು ಇಲ್ಲಿ ಏರ್ಪಡಿಸಲಾಗಿದೆ. ಆಸಕ್ತ

2019-20ನೇ ಸಾಲಿಗೆ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಡಿ ಕೌಶಲ್ಯ ಅಭಿವೃದ್ಧಿ ತರಬೇತಿ ಮೇಳ Read More »

ಕರಾವಳಿ

ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಇಲಾಖಾ ಅನುದಾನದಲ್ಲಿ ಕೃಷಿ ನೀರಿನ ತೊಟ್ಟಿ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಯೋಜನೆಯಡಿ ಸುಳ್ಯ ತಾಲೂಕಿನ ಬಳ್ಪ ನಿವಾಸಿ ಪಿ. ಕೃಷ್ಣ ಭಟ್ ಇವರು ನೀರಾವರಿ ಬಗ್ಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಇಲಾಖಾ ಅಧಿಕಾರಿಗಳು ಇಲಾಖೆಯ ಸಹಾಯಧನದ ಮೂಲಕ ನೀರು ಸಂಗ್ರಹಣಾ ತೊಟ್ಟಿ ರಚನೆ ಮಾಡಿ ಬೇಸಿಗೆ ಕಾಲದಲ್ಲಿ ಕೃಷಿ ಭೂಮಿಯನ್ನು ಸುಸ್ಥಿತಿಯಲ್ಲಿ ಇಡಬಹುದೆಂಬ ಮಾಹಿತಿಯನ್ನು ನೀಡಿದರು. ಅವರು ಇಲಾಖಾ ಮಾರ್ಗಸೂಚಿ ಅನ್ವಯ ಸುಮಾರು 20 * 20 * 3 ಮೀಟರ್ ಅಳತೆಯಲ್ಲಿ

ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಇಲಾಖಾ ಅನುದಾನದಲ್ಲಿ ಕೃಷಿ ನೀರಿನ ತೊಟ್ಟಿ ರಚನೆ Read More »

ಕರಾವಳಿ

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿದೆ. ಸೆಪ್ಟಂಬರ್ 29 ರಿಂದ ಅಕ್ಟೋಬರ್ 7 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2019”ನ್ನು ಕಾಡಾ ಮೈದಾನ, ಮೈಸೂರು ಇಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ 2,000/-ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ Read More »

ಕರಾವಳಿ

ಮಹಿಳೆ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಉಪ್ಪಿನಂಗಡಿಯ ಸಿಟಿ ಲ್ಯಾಂಡ್ ಹೋಟೆಲ್‍ನಲ್ಲಿ ಕೆಲಸ ಮಾಡಿಕೊಂಡಿದ್ದ ರಜನಿ( 45) ಎಂಬವರು ಆಗಸ್ಟ್ 17 ರಂದು ಬೆಳಿಗ್ಗೆ 10 ಗಂಟೆಯಿಂದ ಕಾಣೆಯಾಗಿರುತ್ತಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಮಹಿಳೆಯ ಚಹರೆ ಇಂತಿವೆ: ಎತ್ತರ 5.2 ಅಡಿ, ಗೋದಿ ಮೈಬಣ್ಣ, ಸಾಧಾರಣಾ ಮೈಕಟ್ಟು, ಕನ್ನಡ, ತುಳು ಭಾಷೆ ಮಾತಾಡುತ್ತಾರೆ. ಈ ಚಹರೆಯುಳ್ಳ ಮಹಿಳೆಯ ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ, ದೂರಾವಾಣಿ ಸಂಖ್ಯೆ 08251-251055 ಜಿಲ್ಲಾ ನಿಸ್ತಂತು ವಿಭಾಗ 0824-2220500 ಮಾಹಿತಿ

ಮಹಿಳೆ ಕಾಣೆಯಾಗಿದ್ದಾರೆ Read More »

ಕರಾವಳಿ

ಪರಿಶಿಷ್ಟ ಪಂಗಡದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಹಾಯಕ ನಿರ್ದೇಶಕರು, (ಗ್ರೇಡ್-1) ಸಮಾಜ ಕಲ್ಯಾಣ

ಪರಿಶಿಷ್ಟ ಪಂಗಡದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top