Kadaba News

ಕಾವಳಕಟ್ಟೆ ಐಟಿಐಗೆ ಪ್ರವೇಶ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ರಾಜ್ಯದ ಸರ್ಕಾರಿ ಕೈಗಾರಿಕಾ ಸಂಸ್ಥೆಗಳಿಗೆ ಆಗಸ್ಟ್ 2019 ನೇ ಶೈಕ್ಷಣಿಕ ಸಾಲಿನ ಆಕಸ್ಮಿಕ ಸುತ್ತಿನ ಪ್ರವೇಶಕ್ಕೆ ಸೆಪ್ಟೆಂಬರ್ 16 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾದೆ. ಕಾವಳಕಟ್ಟೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶ ಪಡೆಯಲು ಬಯಸುವ ಹತ್ತನೆ ತರಗತಿಯಲ್ಲಿ ಉತ್ತೀರ್ಣರಾದ ಆಸಕ್ತ ಅರ್ಹ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಿ ಇಲೆಕ್ಟ್ರೀಷಿಯನ್ ಮತ್ತು ಫಿಟ್ಟರ್ ಕೋರ್ಸು/ವೃತ್ತಿಗಳಿಗೆ ಪ್ರವೇಶ ಪಡೆಯಬಹುದಾಗಿದೆ ಎಂದು ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಾವಳಕಟ್ಟೆ ಬಂಟ್ವಾಳ ತಾಲೂಕು ಇವರ ಪ್ರಕಟಣೆ ತಿಳಿಸಿದೆ.

ಕಾವಳಕಟ್ಟೆ ಐಟಿಐಗೆ ಪ್ರವೇಶ ಪ್ರಕ್ರಿಯೆ ಆರಂಭ Read More »

ಕರಾವಳಿ

ರೈತರಿಗೆ ಪಶುವೈದ್ಯರಿಂದ ಉಪನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಭಾರತ ಸರ್ಕಾರದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ, ವತಿಯಿಂದ ರೈತರಿಗೆ ಉಪನ್ಯಾಸನ ನಡೆಯಲಿದೆ. ರಾಷ್ಟ್ರೀಯ ಗೋಕುಲ ಮಿಷನ್ ಕಾರ್ಯಕ್ರಮದಡಿ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಅನುಕೂಲವಾಗುವಂತಹ NADCP National Animal Disease control Programme for FMD & Brucellosis and National Artificial Insemination Programme ನ್ನು ಪ್ರಧಾನ ಮಂತ್ರಿಗಳು ಸೆಪ್ಟಂಬರ್ 11 ರಂದು ಮಥುರಾದಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ನೇರ

ರೈತರಿಗೆ ಪಶುವೈದ್ಯರಿಂದ ಉಪನ್ಯಾಸ Read More »

ಕರಾವಳಿ

ಬೆಂಗರೆ: ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಸಭೆಯನ್ನು ಆಯೋಜಿಸಲಾಗಿದೆ. ಸೆಪ್ಟಂಬರ್ 9 ರಂದು ಅಪರಾಹ್ನ 4 ಗಂಟೆಗೆ ವಾರ್ಡ್ ನಂ.60, ಬೆಂಗ್ರೆ ವಾರ್ಡ್‍ನಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಪಡುಹೊಯ್ಗೆ ಗ್ರಾಮಸಭೆಯಲ್ಲಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಈ ಸಭೆಗೆ ವಾರ್ಡ್‍ನ ಮುಖಂಡರು, ಸಂಘ

ಬೆಂಗರೆ: ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಸೆಪ್ಟಂಬರ್ 12 ರಂದು ಬೆಳಿಗ್ಗೆ 10;30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಸಭೆ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಗುಡ್ಡಗಾಡು ಓಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ,ಸಪ್ಟೆಂಬರ್.7.ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಗುಡ್ಡಗಾಡು ಓಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಗುಡ್ಡಗಾಡು ಓಟ 2019ರಲ್ಲಿ ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜಿನಿಂದ 11 ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಹಿಳೆಯರ ತಂಡ ಪ್ರಶಸ್ತಿಯಲ್ಲಿ ಪ್ರಜ್ಞಾ ಡಿ.ಎಚ್. ದ್ವಿತೀಯ ಸ್ಥಾನವನ್ನು ಹಾಗೂ ಪ್ರಿನ್ಸ್ ಕೆ. 5ನೇ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಗುಡ್ಡಗಾಡು ಓಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಸೆ.12 ಇಂದ್ರಧನುಷ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಮಂಗಳೂರು ನಗರ ಅಧಿಕೃತ ಭಾಷಾ ಅನುಷ್ಠಾನ ಸಮಿತಿ ಹಾಗೂ ಆಕಾಶವಾಣಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಿಂದಿ ದಿನದ ಅಂಗವಾಗಿ ಇಂದ್ರಧನುಷ್ ವಿಶೇಷ ಕಾರ್ಯಕ್ರಮವು ಸೆಪ್ಟಂಬರ್ 12 ರಂದು ಸಂಜೆ 4.30 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನ.ರಾ.ಕಾ.ಸ ಮಂಗಳೂರಿನ ಅಧ್ಯಕ್ಷೆ ಮತ್ತು ಕಾರ್ಪೊರೇಶನ್ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಪಿ.ವಿ. ಭಾರತಿ ಭಾಗವಹಿಸಲಿದ್ದಾರೆ. ಆಕಾಶವಾಣಿ ಹಾಗೂ ದೂರದರ್ಶನ, ಬೆಂಗಳೂರು ದಕ್ಷಿಣ ವಲಯದ ಹೆಚ್ಚುವರಿ ಮಹಾನಿರ್ದೇಶಕರಾದ

ಸೆ.12 ಇಂದ್ರಧನುಷ್ ಕಾರ್ಯಕ್ರಮ Read More »

ಕರಾವಳಿ

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಿ.ಇ.ಟಿ ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಾಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2 ರ ಬಡ್ಡಿದರದಲ್ಲಿ ವಾರ್ಷಿಕವಾಗಿ ಗರಿಷ್ಟ ರೂ.1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ. 2019-20ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ಸಿ.ಇ.ಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಾಗೂ ಸಿ.ಇಟಿ ಪರೀಕ್ಷೆ ಹೊರತುಪಡಿಸಿದ ಕೋರ್ಸ್‍ಗಳಲ್ಲಿ ವ್ಯಾಸಾಂಗ ಮಾಡುವ ಅರ್ಹ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಹಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಧನ ಹಸ್ತಾಂತರಿಸಲಾಯಿತು. ಸೆಪ್ಟಂಬರ್ 3 ರಂದು ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ರೂ 50,000/- ಡಿ.ಡಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಮುಖಾಂತರ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಂದ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಹಸ್ತ Read More »

ಕರಾವಳಿ

“ಆಯುಷ್ ಪೌಷ್ಟಿಕ ಆಹಾರ ಸಪ್ತಾಹ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು ನಗರ, ಆಯುಷ್ ಫೌಂಡೇಶನ್ ದಕ್ಷಿಣ ಕನ್ನಡ ಹಾಗೂ ಬೋಳೂರು ಯುನೈಟೆಡ್ ಸ್ಪೋಟ್ರ್ಸ್ ಕ್ಲಬ್ ಇವರ ಸಹಭಾಗಿತ್ವದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಮಂಗಳೂರಿನ ಬೋಳೂರು ಸುಲ್ತಾನ್ ಬತ್ತೇರಿ ಅಂಗನವಾಡಿ ಕೇಂದ್ರದಲ್ಲಿ ಸೆಪ್ಟಂಬರ್ 4 ರಂದು ನಡೆಯಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ ಇಲಾಖೆಯು

“ಆಯುಷ್ ಪೌಷ್ಟಿಕ ಆಹಾರ ಸಪ್ತಾಹ” ಕಾರ್ಯಕ್ರಮ Read More »

ಕರಾವಳಿ

ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ಇವರಿಗೆ ಅಕ್ಟೋಬರ್ 1 ರಿಂದ ಒಂದು ವರ್ಷದ ಅವಧಿಗೆ ಮಾಸಿಕ ಬಾಡಿಗೆ ಆಧಾರದಲ್ಲಿ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನ.ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ದೂರವಾಣಿ ಸಂಖ್ಯೆ 08255-238080 ಇವರನ್ನು ಸಂಪರ್ಕಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಟ್ಲ ಇವರ ಪ್ರಕಟಣೆ ತಿಳಿಸಿದೆ.

ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ Read More »

ಕರಾವಳಿ
Scroll to Top