Kadaba News

ಪಡುಪೆರಾರೆ ಗ್ರಾಮ ಪಂಚಾಯತ್ ➤ 2019-20 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಪಡುಪೆರಾರೆ ಗ್ರಾಮ ಪಂಚಾಯತ್‍ನ 2019-20 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯನ್ನು ಆಯೋಜಿಸಲಾಗಿದೆ. ಸಪ್ಟೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಪಡುಪೆರಾರೆಗ್ರಾಮ ಪಂಚಾಯತ್‍ನ ಸಭಾಭವನದಲ್ಲಿ ನಡೆಯಲಿದೆ.

ಪಡುಪೆರಾರೆ ಗ್ರಾಮ ಪಂಚಾಯತ್ ➤ 2019-20 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ Read More »

ಕರಾವಳಿ

ನಿವೃತ್ತ ಮುಖ್ಯ ಶಿಕ್ಷಕ, ಪ್ರಶಸ್ತಿ ಪುರಸ್ಕೃತ ಬಾಬು ಅಜಿಲ ಕಲ್ಲುಗುಡ್ಡೆ ನಿಧನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.30.ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ದಿ. ನೋಣಯ್ಯ ಅಜಿಲರ ಪುತ್ರ ನಿವೃತ್ತ ಮುಖ್ಯ ಶಿಕ್ಷಕ ಬಾಬು ಅಜಿಲ ಕೆ.(63 ವ.) ಅವರು ಅಸೌಖ್ಯದಿಂದ ಆ. 29ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಾಬು ಮಾಸ್ಟರ್ ಎಂದೇ ಪರಿಚಿತರಾಗಿದ್ದ ಇವರು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಜಾನಪದ ಕಲಾವಿದ ಪ್ರಶಸ್ತಿಗೆ ಭಾಜನರಾಗಿದ್ದರು. ಎಡಮಂಗಿಲದ ಕಂರ್ಬಿಲ, ರೆಂಜಿಲಾಡಿ, ಸುಬ್ರಹ್ಮಣ್ಯ, ನೇರ್ಲ, ನೇಲಡ್ಕ, ನೂಜಿಬಾಳ್ತಿಲ, ಸಂಪ್ಯ, ಕುಂಬ್ರ ಶಾಲೆಗಳಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,

ನಿವೃತ್ತ ಮುಖ್ಯ ಶಿಕ್ಷಕ, ಪ್ರಶಸ್ತಿ ಪುರಸ್ಕೃತ ಬಾಬು ಅಜಿಲ ಕಲ್ಲುಗುಡ್ಡೆ ನಿಧನ Read More »

ಕರಾವಳಿ

ಕಾಲೇಜಿನಲ್ಲಿ ಅಟೋಟದ ಜೊತೆ ನಿತ್ಯ ವ್ಯಾಯಾಮ ➤ ಡಾ. ಎ.ಟಿ ರಾಮಚಂದ್ರ ನಾಯ್ಕ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಫಿಟ್ ಇಂಡಿಯಾ ಕಾರ್ಯಕ್ರಮದ ಪ್ರಯಕ್ತ ನಗರದ ಎಕ್ಕೂರಿನ ಸಮೀಪವಿರುವ ಮತ್ಸ್ಯನಗರ ಕ್ಯಾಂಪಸ್‍ನ ಮೀನುಗಾರಿಕಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಇಂದು ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ, ಕಾಲೇಜಿನ ಡೀನ್ ಡಾ. ಎ. ಸೆಂಥಿಲ್ ವೆಲ್ ಮಾತನಾಡಿ, ವಿದ್ಯಾರ್ಥಿ ಮತ್ತು ಭೋದಕ-ಭೋದಕೇತರ ಸಿಬ್ಬಂದಿಯವರು ತಮ್ಮ ದಿನನಿತ್ಯದ ಕಾರ್ಯಚಟುವಟಿಕೆಗಳ ಜೊತೆ ದೈಹಿಕ ವ್ಯಾಯಾಮವನ್ನು ಮಾಡುವ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯ ಸುಧಾರಣೆ ಮಾಡಬಹುದಾಗಿದೆ ಎಂದು ಹೇಳಿದರು. ಕಾಲೇಜಿನ ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.

ಕಾಲೇಜಿನಲ್ಲಿ ಅಟೋಟದ ಜೊತೆ ನಿತ್ಯ ವ್ಯಾಯಾಮ ➤ ಡಾ. ಎ.ಟಿ ರಾಮಚಂದ್ರ ನಾಯ್ಕ Read More »

ಕರಾವಳಿ

“ಮೂಲವಿಜ್ಞಾನಕ್ಕೆ ಹೆಚ್ಚು ಗಮನ ಇಂದಿನ ಅಗತ್ಯ” ➤ ಡಾ| ರೊನಾಲ್ಡ್ ನಜ್ರತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಆಧುನಿಕ ಯುಗವು ವಿಜ್ಞಾನ ತಂತ್ರಜ್ಞಾನದ ಯುಗವಾಗಿದೆ. ಮುಂದುವರಿಯುತ್ತಿರುವ ನಮ್ಮ ದೇಶವು ಹೊಸ ಹೊಸ ವೈಜ್ಞಾನಿಕ ಸಂಶೋಧನೆ ಮಾಡುವುದರೊಂದಿಗೆ ಮೂಲ ವಿಜ್ಞಾನದ ವಿಷಯಗಳ ಕುರಿತು ಹೆಚ್ಚು ಗಮನ ನೀಡುವುದು ಅತೀ ಅಗತ್ಯ. ವಿಜ್ಞಾನದ ವಿದ್ಯಾರ್ಥಿಗಳು ಈ ಕುರಿತು ಹೆಚ್ಚು ಗಮನ ನೀಡಬೇಕು. ಕೇಂದ್ರ ಸರಕಾರದ ಸ್ಟಾರ್ ಕಾಲೇಜು ಸ್ಕೀಮ್ ಇದಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತದೆ ಎಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ| ರೊನಾಲ್ಡ್ ನಜ್ರತ್ ಹೇಳಿದರು.ಅವರು

“ಮೂಲವಿಜ್ಞಾನಕ್ಕೆ ಹೆಚ್ಚು ಗಮನ ಇಂದಿನ ಅಗತ್ಯ” ➤ ಡಾ| ರೊನಾಲ್ಡ್ ನಜ್ರತ್ Read More »

ಕರಾವಳಿ

ಸೊಳ್ಳೆಗಳ ನಿಯಂತ್ರಣ ಸಾರ್ವಜನಿಕರಲ್ಲಿ ತಿಳುವಳಿಕೆ ಕೊರತೆ ➤ ಗಾಯತ್ರಿ ನಾಯಕ್,

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30. ಸೊಳ್ಳೆಗಳ ನಿಯಂತ್ರಣಕ್ಕೆ ಮೊದಲು, ಲಾರ್ವಗಳ ನಾಶ ಮುಖ್ಯವಾಗಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ತಿಳುವಳಿಕೆ ಕೊರತೆ ಕಂಡುಬರುತ್ತಿದೆ. ಹಾಗಾಗಿ ಎಲ್ಲರಿಗೂ ಏಕರೂಪದ ಮಾಹಿತಿ ನೀಡಲು ಕಾರ್ಯಾಗಾರ ನಡೆಸಬೇಕು ಎಂದು ನಗರಪಾಲಿಕೆ ಜಂಟಿ ಆಯುಕ್ತೆ ಗಾಯತ್ರಿ ನಾಯಕ್ ಹೇಳಿದರು. ಗುರುವಾರ ಮಂಗಳೂರು ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ ಡೆಂಗ್ಯೂ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಂಬಂಧ ಬಿಲ್ಡರ್‍ಗಳ ಜೊತೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಅವರು ಡೆಂಗ್ಯೂ ಜ್ವರವು ವೈರಸ್‍ನಿಂದ ಉಂಟಾಗುವ ಕಾಯಿಲೆ,

ಸೊಳ್ಳೆಗಳ ನಿಯಂತ್ರಣ ಸಾರ್ವಜನಿಕರಲ್ಲಿ ತಿಳುವಳಿಕೆ ಕೊರತೆ ➤ ಗಾಯತ್ರಿ ನಾಯಕ್, Read More »

ಕರಾವಳಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ➤ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಡಾ.ಪಿ ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ಆಗಸ್ಟ್ 27 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ ಮತ್ತು ಮಾಹಿತಿ ಮತ್ತು ಅಭಿವಿನ್ಯಾಸ ಕಾರ್ಯಾಗಾರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದಯಾನಂದ ನಾಯ್ಕ್ ಇವರು ನೆರೆವೇರಿಸಿದರು. ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಮತ್ತು ಸಮಾಜ ಮುಖಿ ಕಾರ್ಯದಲ್ಲಿ ತಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕೆಂದು

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ➤ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ Read More »

ಕರಾವಳಿ

2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ➤ ಸಪ್ಟೆಂಬರ್ ಮಾಹೆಯಲ್ಲಿ ಜಿಲ್ಲಾದ್ಯಂತ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಸಪ್ಟೆಂಬರ್ ಮಾಹೆಯಲ್ಲಿ ಜಿಲ್ಲಾದ್ಯಂತ ಆರಂಭವಾಗುತ್ತಿದೆ. ಸಮೀಕ್ಷೆ ನಡೆಸುವವರಲ್ಲಿ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಸಿಬ್ಬಂದಿಗಳು ಹಾಗೂ ಆಯಾ ಗ್ರಾಮದವರೇ ಆದ ಯುವಕರು ಬೆಳೆ ಸಮೀಕ್ಷೆಯನ್ನು ಮೊಬೈಲ್ ತಂತ್ರಾಂಶದ ಮೂಲಕ ಕೈಗೊಳ್ಳುತ್ತಾರೆ.ಮೊಬೈಲ್ ತಂತ್ರಾಂಶದ ಮೂಲಕ ನಡೆಸುವ ಬೆಳೆ ಸಮೀಕ್ಷೆ ಆಧಾರದ ಮೇಲೆಯೇ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿ, ಬೆಳೆ ಪರಿಹಾರ ಹಾಗೂ ಬೆಳೆ ವಿಮೆ ಇತ್ಯಾದಿಗಳು ನಿರ್ಧಾರವಾಗುವುದರಿಂದ ರೈತರು ತಾವು ಬೆಳೆದ

2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ➤ ಸಪ್ಟೆಂಬರ್ ಮಾಹೆಯಲ್ಲಿ ಜಿಲ್ಲಾದ್ಯಂತ ಆರಂಭ Read More »

ಕರಾವಳಿ

ಅಡಿಕೆ ಕೊಳೆರೋಗ ಹಾಗೂ ಕಾಳುಮೆಣಸು ಸೊರಗು ರೋಗ ಹತೋಟಿಗೆ ತರಲು ಇಲ್ಲಿದೆ ಸೂಕ್ತ ಪರಿಹಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಹವಾಮಾನ ವೈಪರಿತ್ಯದಿಂದಾಗಿ ಅಡಿಕೆ ಬೆಳೆಗೆ ಕೊಳೆರೋಗವು ಬಾಧಿಸಿ ಹೆಚ್ಚಿನ ನಷ್ಟವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಕಳೆದ ವರ್ಷ ಕೊಳೆರೋಗ ಬಂದ ತೋಟಗಳಲ್ಲಿ ರೋಗಾಣು ಸುಪ್ತಾವಸ್ಥೆಯಲ್ಲಿದ್ದು, ಈಗ ಪೂರಕ ವಾತಾವರಣ ಇರುವುದರಿಂದ ಒಮ್ಮೆಲೆ ತೀವ್ರವಾಗುತ್ತದೆ. ಮುಂದೆ ಇದು ಗಾಳಿ ಮುಖಾಂತರ ಹರಡುತ್ತಾ ಹೋಗುತ್ತದೆ. ಆದ್ದರಿಂದ ರೈತರು ಮಳೆ ಬಿಡುವಿದ್ದಾಗ ರೋಗ ಬಂದಿರುವ ತೋಟಗಳಲ್ಲಿ ಶೇ. 1 ರ ಬೋರ್ಡೋ ದ್ರಾವಣವನ್ನು ತಯಾರಿಸಿ ಸಿಂಪಡಿಸಬೇಕು. ಕಾಳುಮೆಣಸು ಸೊರಗು ರೋಗ ನಿಯಂತ್ರಿಸಲು ಶೇ. 1 ರ

ಅಡಿಕೆ ಕೊಳೆರೋಗ ಹಾಗೂ ಕಾಳುಮೆಣಸು ಸೊರಗು ರೋಗ ಹತೋಟಿಗೆ ತರಲು ಇಲ್ಲಿದೆ ಸೂಕ್ತ ಪರಿಹಾರ Read More »

ಕರಾವಳಿ

‘ಇತಿಹಾಸ ಅರಿತು ಇತಿಹಾಸ ನಿರ್ಮಿಸುವಂತವರಾಗಿ’ ➤ ಶಾಸಕ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಇಡೀ ವಿಶ್ವದಲ್ಲೇ ನಮ್ಮ ದೇಶದ ಹಾಕಿ ಕ್ರೀಡೆಗೆ ಮತ್ತು ದೇಶಕ್ಕೆ ಗೌರವಯುತ ಸ್ಥಾನಮಾನ ಇದೆ. ಅಂದರೆ ಅದು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಪ್ರಮುಖ ಕಾರಣ ಎಂದು ಶಾಸಕ ಯು.ಟಿ ಖಾದರ್ ಹೇಳಿದರು. ಗುರುವಾರ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮಂಗಳೂರು ಮತ್ತು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಕಿಮಾಂತ್ರಿಕ ಮೇಜರ್ ಧ್ಯಾನ್‍ಚಂದ್‍ರವರ ಹುಟ್ಟುಹಬ್ಬದ ಪ್ರಯುಕ್ತ “ರಾಷ್ಟ್ರೀಯ ಕ್ರೀಡಾ ದಿನಾಚರಣೆ-2019” ಉದ್ಘಾಟಿಸಿ

‘ಇತಿಹಾಸ ಅರಿತು ಇತಿಹಾಸ ನಿರ್ಮಿಸುವಂತವರಾಗಿ’ ➤ ಶಾಸಕ ಯು.ಟಿ ಖಾದರ್ Read More »

ಕರಾವಳಿ

ಗೌರಿ ಗಣೇಶ ಹಬ್ಬ ➤ ಜಲಮೂಲಗಳಲ್ಲಿ ಪಿಒಪಿ ವಿಗ್ರಹಗಳ ವಿಸರ್ಜನೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಮುಂಬರುವ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಿ.ಒ.ಪಿ ಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದನ್ನು ನಿಬ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆಯನ್ನು ಹೊರಡಿಸಿದೆ. ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ಹಾಗೂ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿರುವ ನಿರ್ದಿಷ್ಟ ಜಲಮೂಲಗಳ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು.

ಗೌರಿ ಗಣೇಶ ಹಬ್ಬ ➤ ಜಲಮೂಲಗಳಲ್ಲಿ ಪಿಒಪಿ ವಿಗ್ರಹಗಳ ವಿಸರ್ಜನೆ ನಿರ್ಬಂಧ Read More »

ಕರಾವಳಿ
Scroll to Top