Kadaba News

ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ➤ ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹರಿಯುತ್ತಿರುವ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು,ಭಕ್ತಾದಿಗಳು ನೀರಿಗೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಕಳೆದೆರಡು ದಿನಗಳಿಂದ ಈ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು,ಈ ವರ್ಷದಲ್ಲಿ ಮೊದಲ ಸಲ ಈ ಸ್ನಾನ ಘಟ್ಟ ಮುಳುಗಡೆಯಾಗಿದೆ.ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆಗೊಂಡಿದೆ. ಕುಮಾರಧಾರ ನದಿ ನೀರು ತುಂಬಿ ಹರಿಯುತ್ತಿದೆ. ಎಡೆಬಿಡದೆ ಮಳೆ ಸುರಿಯುತ್ತಿದ್ದು,ನೀರಿನ ಮಟ್ಟ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.  

ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ➤ ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆ Read More »

ಕರಾವಳಿ

ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ : ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ ➤ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆಗಸ್ಟ್.6. ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಮೂರು ಕಡೆ ಗುಡ್ಡ ಕುಸಿತ ಸಂಭವಿಸಿದೆ. ಘಾಟ್ ನ ತಿರುವಿನಲ್ಲಿ ರಸ್ತೆಗೆ ಬೃಹತ್ ಮರವೊಂದು ಉರುಳಿ ಬಿದ್ದು, ಸಂಚಾರಕ್ಕೆ ತೊಡಕಾಗಿದ್ದು, ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಹಾಗೂ ಘಾಟಿಯ ಮಧ್ಯೆ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಇದಾರಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಗುಡ್ಡ ಕುಸಿತದ ಸ್ಥಳದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಟ್ರಾಫಿಕ್‌ ಜಾಮ್‌ ಉಂಟಾಗಿದ್ದು ವಾಹನ

ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ : ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ ➤ ಸಂಚಾರ ಸ್ಥಗಿತ Read More »

ಕರಾವಳಿ

ಕಡಬ : ಕೊಂಬಾರು ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಕೊಂಬಾರು ಗ್ರಾ.ಪಂ, ಶೀರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೊಂಬಾರು ಆರೋಗ್ಯ ಉಪಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಆ. 5 ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ. ಹರ್ಷಿತಾ ಡಿ.ಬಿ ಉಚಿತ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು ಆ.6 ರಂದು ಕೊಂಬಾರು ಗ್ರಾ.ಪಂ ವ್ಯಾಪ್ತಿಯ ಕೆಂಜಾಳ ,ಗುಂಡ್ಯ-ಪಿಲಿಕಜೆ ಶಾಲೆಯಲ್ಲಿ ಶಿಬಿರ ಮುಂದುವರಿಯಲಿದ್ದು, ಈ

ಕಡಬ : ಕೊಂಬಾರು ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಕಲ್ಲುಗುಡ್ಡೆ: ನೇರ್ಲ ಶಾಲೆಯಲ್ಲಿ ಚಪ್ಪಲಿ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಇಚ್ಲಂಪಾಡಿ ನೇರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸರಕಾರದ ಉಚಿತ ಚಪ್ಪಲಿಯನ್ನು ವಿತರಿಸಲಾಯಿತು. ಸರಕಾರದಿಂದ ಉಚಿತವಾಗಿ ನೀಡಲಾದ ಚಪ್ಪಲಿಯನ್ನು ನೇರ್ಲ ಶಾಲೆಯ ಸುಮಾರು 103 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಶಾಂತಿ ವಿ.ಭಟ್, ನೂಜಿಬಾಳ್ತಿಲ ಸಿ.ಆರ್.ಪಿ. ಗೋವಿಂದ ನಾಯ್ಕ್, ಶಿಕ್ಷಕ ಗಿರೀಶ್ ನೆಲ್ಯಾಡಿ ನ್ಯೂಸ್ ಸ್ಟೋರ್ ಮಾಲಕ ನಝೀಮ್ ಉಪಸ್ಥಿತರಿದ್ದರು.

ಕಲ್ಲುಗುಡ್ಡೆ: ನೇರ್ಲ ಶಾಲೆಯಲ್ಲಿ ಚಪ್ಪಲಿ ವಿತರಣೆ Read More »

ಕರಾವಳಿ

ಕಲ್ಲುಗುಡ್ಡೆ: ಎಸ್.ಅಂಗಾರರಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪ್ರಾರ್ಥನೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.6.ಸುಳ್ಯ ಶಾಸಕ ಎಸ್.ಅಂಗಾರ ರವರಿಗೆ ಸಚಿವ ಸ್ಥಾನ ಸಿಗಲೆಂದು ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಸೋಮವಾರ ವಿಶೇಷ ಪ್ರಾರ್ಥನೆ ಮಾಡಲಾಯಿತು. ಬಿ.ಎಸ್.ಯಡಿಯೂರಪ್ಪ ನವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ, ವಿಶ್ವಾಸಮತ ಸಾಭೀತುಪಡಿಸಿದ್ದು, ಮುಂದೆ ನಡೆಯುವ ಸಚಿವ ಸಂಪುಟ ರಚನೆಯಲ್ಲಿ ಸುಳ್ಯ ಕ್ಷೇತ್ರದ ಶಾಸಕರಾಗಿರುವ ಎಸ್.ಅಂಗಾರ ರವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲೆಂದು ರೆಂಜಿಲಾಡಿ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಲ್ಲುಗುಡ್ಡೆ: ಎಸ್.ಅಂಗಾರರಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪ್ರಾರ್ಥನೆ Read More »

ಕರಾವಳಿ

ನೂಜಿಬೈಲ್: ನಾಗರ ಪಂಚಮಿ, ನಾಗ ತಂಬಿಲ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ನಾಗಬನದಲ್ಲಿ ಸೋಮವಾರ ನಾಗರ ಪಂಚಮಿ ಪ್ರಯುಕ್ತ ನಾಗತಂಬಿಲ ಸೇವೆ ನಡೆಯಿತು. ದೈವಸ್ಥಾನದ ಬಳಿಯಲ್ಲಿರುವ ನಾಗಬನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಕ್ಷೀರಾಭಿಷೇಕ, ಸೀಯಾಳಭಿಷೇಕ ನಡೆದು, ಬಳಿಕ ನಾಗತಂಬಿಲ ಸೇವೆ ನಡೆಯಿತು. ಬಳಿಕ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಅರ್ಚಕರಾದ ಕೃಷ್ಣ ಹೆಬ್ಬಾರ್ ಹಾಗೂ ರವಿ ಹೆಬ್ಬಾರ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ

ನೂಜಿಬೈಲ್: ನಾಗರ ಪಂಚಮಿ, ನಾಗ ತಂಬಿಲ Read More »

ಕರಾವಳಿ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ➤ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.2019-20ನೇ ಸಾಲಿನ ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸುವ ಕುರಿತು ಕೇಂದ್ರೀಯ ಸೈನಿಕ ಬೋರ್ಡಿನಿಂದ ಚಾಲನೆ ನೀಡಲಾಗಿದೆ. ಅರ್ಹ ಮಾಜಿ ಸೈನಿಕರ ಮಕ್ಕಳು ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ವಬ್‍ಸೈಟ್ www.ksb.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಂಟಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ➤ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದ. ಕ ಇವರ ವತಿಯಿಂದ ➤ ಡೆಂಗಿ ನಿಯಂತ್ರಣ: ಆಯುಷ್ ವೈದ್ಯರಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದಕ್ಷಿಣ ಕನ್ನಡ ಇವರ ವತಿಯಿಂದ ಭಾನುವಾರ ನಗರದ ವೆನ್ಲಾಕ್ ಆಸ್ಪತ್ರೆಯ ಡಾ. ವಿವೇಕಾನಂದ ಪ್ರಭು ಸಭಾಂಗಣದಲ್ಲಿ ಆಯುಷ್ ಪದವೀಧರ ನೋಂದಾಯಿತ ವೈದ್ಯರಿಗಾಗಿ ಡೆಂಗಿ ರೋಗ ನಿಯಂತ್ರಣ ಮತ್ತು ಚಿಕಿತ್ಸಾ ವಿಧಾನಗಳ ಬಗ್ಗೆ ಉಪನ್ಯಾಸ ಹಮ್ಮಿಕೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್‍ಚಂದ್ರ ಕುಲಾಲ್ ಮಾತನಾಡಿ, ವೈದ್ಯರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಜಿಲ್ಲೆಯಲ್ಲಿ ಡೆಂಗಿ ರೋಗಜನರಲ್ಲಿ ಹೆಚ್ಚಿನ ಆತಂಕ

ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದ. ಕ ಇವರ ವತಿಯಿಂದ ➤ ಡೆಂಗಿ ನಿಯಂತ್ರಣ: ಆಯುಷ್ ವೈದ್ಯರಿಗೆ ತರಬೇತಿ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ ಮಕ್ಕಳ ಸೇವೆ: ಪ್ರಶಸ್ತಿ ಪುರಸ್ಕಾರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಕರ್ನಾಟಕ ಸರ್ಕಾರವು ಪ್ರತಿ ವರ್ಷ ಮಕ್ಕಳ ದಿನಾಚರಣೆಯಂದು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ವ್ಯಕ್ತಿಗಳಿಗೆ ತಲಾ ರೂ. 25,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ನೀಡಲಾಗುತ್ತದೆ.ಅರ್ಜಿ ಸಲ್ಲಿಸುವ ವ್ಯಕ್ತಿ/ಸಂಸ್ಥೆಗಳು ಅರ್ಜಿಯೊಂದಿಗೆ ದಾಖಲೆಗಳ ಪ್ರಸ್ತಾವನೆಯನ್ನು ಕನ್ನಡ ಭಾಷೆಯಲ್ಲಿ ದ್ವಿ-ಪ್ರತಿಯೊಂದಿಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ ಮಕ್ಕಳ ಸೇವೆ: ಪ್ರಶಸ್ತಿ ಪುರಸ್ಕಾರ – ಅರ್ಜಿ ಆಹ್ವಾನ Read More »

ಕರಾವಳಿ

ರಾಜ್ಯ ಸರಕಾರಿ ನೌಕರರ ಸಂಘ ➤ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಗ್ರಂಥಾಲಯ ಇಲಾಖೆಯ ಪಿ.ಕೆ. ಕೃಷ್ಣ ಅವರು ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಕರ್ನಾಟಕ ರಾಜ್ಯ ಸರಕಾರಿ ನೌಕರರ (ರಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಗ್ರಂಥಾಲಯ ಇಲಾಖೆಯ ಪಿ.ಕೆ. ಕೃಷ್ಣ ಅವರು ಆಯ್ಕೆಯಾಗಿದ್ದಾರೆ. ಶನಿವಾರ ಸಂಘದ ಸಭಾಂಗಣದಲ್ಲಿ ಅಧ್ಯಕ್ಷ/ಖಜಾ0ಚಿ/ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ 2019-2024ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅವರು ಆಯ್ಕೆಯಾಗಿದ್ದಾರೆ.ಖಜಾ0ಚಿಯಾಗಿ ಪಶುಸ0ಗೋಪನಾ ಇಲಾಖೆಯ ಅಕ್ಷಯ್ ಭ0ಡಾರ್‍ಕಾರ್ ಹಾಗೂ ರಾಜ್ಯ ಪರಿಷತ್ ಸದಸ್ಯರಾಗಿ ಶಿಕ್ಷಣ ಇಲಾಖೆಯ ಶೆರ್ಲಿ ಸುಮಾಲಿನಿ ಅವರು ಆಯ್ಕೆಗೊ0ಡಿದ್ದಾರೆ .

ರಾಜ್ಯ ಸರಕಾರಿ ನೌಕರರ ಸಂಘ ➤ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಗ್ರಂಥಾಲಯ ಇಲಾಖೆಯ ಪಿ.ಕೆ. ಕೃಷ್ಣ ಅವರು ಆಯ್ಕೆ Read More »

ಕರಾವಳಿ
Scroll to Top