Kadaba News

ಅಂಗನವಾಡಿ ನೇಮಕಾತಿ ➤ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 17 ಅಂಗನವಾಡಿ ಸಹಾಯಕಿಯರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಪ್ರಕಟಣಾ ಫಲಕದಲ್ಲಿ ಜುಲೈ 29 ರಂದು ಪ್ರಕಟಿಸಲಾಗಿದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 5 ರಂದು ಅಪರಾಹ್ನ 5.30ರೊಳಗೆ ಲಿಖಿತವಾಗಿ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ), ಸ್ವೀಕಾರ ಕೇಂದ್ರ ಕಟ್ಟಡ, ಮೂಡುಶೆಡ್ಡೆ, ವಾಮಂಜೂರು ಇವರಿಗೆ ನೀಡಬೇಕು. ನಿಗದಿತ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು […]

ಅಂಗನವಾಡಿ ನೇಮಕಾತಿ ➤ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ Read More »

ಕರಾವಳಿ

ಭತ್ತ ಬೆಳೆಗಾರರಿಗೆ “ಕರಾವಳಿ ಪ್ಯಾಕೇಜ್” ➤ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಭತ್ತದ ಬೇಸಾಯವನ್ನು ಸತತವಾಗಿ ಹಲವಾರು ವರ್ಷಗಳಿಂದ ಅಧಿಕ ಮಳೆ ಬೀಳುವ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ಈ ಜಿಲ್ಲೆಗಳ ಪ್ರದೇಶವು ಭೌಗೋಳಿಕವಾಗಿ ತಗ್ಗು ದಿಣ್ಣೆಯಿಂದ ಕೂಡಿದ್ದು ಮಣ್ಣಿನ ಫಲವತ್ತತೆಯು ಸಂರಕ್ಷಣೆ ಕಷ್ಟಸಾಧ್ಯ, ಕಡಿಮೆ ಹಿಡುವಳಿ, ಕೃಷಿ ಕಾರ್ಮಿಕ ಸಮಸ್ಯೆ ಅಧಿಕವಾಗಿರುವುದರಿಂದ ಭತ್ತದ ಬೆಳೆ ಉತ್ಪಾದನಾ ವೆಚ್ಚ ಅಧಿಕವಾಗಿರುತ್ತದೆ. ರೈತರಿಗೆ ಸಾಂಸ್ಥಿಕ ಸಾಲ ಸೌಲಭ್ಯದ ಕೊರತೆ ಹಾಗೂ ಉತ್ಪಾದನಾ ವೆಚ್ಚ ಹೆಚ್ಚಳದಿಂದಾಗಿ ಭತ್ತ ಬೆಳೆಯುವಲ್ಲಿ

ಭತ್ತ ಬೆಳೆಗಾರರಿಗೆ “ಕರಾವಳಿ ಪ್ಯಾಕೇಜ್” ➤ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಲಾರ್ವಾ ಮುಕ್ತ ಪ್ರದೇಶದ ನಿರ್ಮಾಣವಾಗಲಿ ➤ ದ.ಕ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾರ್ವಾ ಮುಕ್ತ ಪ್ರದೇಶದ ನಿರ್ಮಾಣ ಮಾಡಲು ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದರು. ಸೋಮವಾರ ಪುರಭವನದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯೋಪಾಧ್ಯಾಯರು ಹಾಗೂ ಪ್ರಾಂಶುಪಾಲರ ಸಭೆಯಲ್ಲಿ ಮಾತಾನಾಡಿದ ಅವರು, ಡೆಂಗ್ಯೂ ಸುಲಭವಾಗಿ ನಿಯಂತ್ರಿಸುವ ರೋಗ, ಏಡಿಸ್ ಈಜಿಪ್ಟಿ ಎಂಬ ಹೆಣ್ಣು ಸೊಳ್ಳೆಯು ಸ್ವಚ್ಚ ನೀರಿನಲ್ಲಿ ಸಾಮಾನ್ಯವಾಗಿ ಸಂತಾನಾಭಿವೃದ್ದಿ

ಲಾರ್ವಾ ಮುಕ್ತ ಪ್ರದೇಶದ ನಿರ್ಮಾಣವಾಗಲಿ ➤ ದ.ಕ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಪಿಲಿಕುಳ ಆಟಿಕೂಟ ➤ ವಿಶೇಷ ಭೋಜನ ಸಾರ್ವಜನಿಕರಿಗೆ ಕೂಪನ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಪಿಲಿಕುಳದ ಗುತ್ತು ಮನೆಯಲ್ಲಿ ಆಗಸ್ಟ್ 4 ರಂದು ಪೂರ್ವಾಹ್ನ 10 ಗಂಟೆಯಿಂದ ಪಿಲಿಕುಳ ಆಟಿಕೂಟವನ್ನು ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗಗೆ ಆಯೋಜಿಸಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದರಾದ ಸೀತಾರಾಮ್ ಕುಮಾರ್ ಕಟೀಲ್ ಇವರ ಸಾರಥ್ಯದಲ್ಲಿ “ಯಕ್ಷ, ನೃತ್ಯ ಮತ್ತು ಹಾಸ್ಯ ವೈಭವ” ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದವರಿಂದ ಆಟಿಯ ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನವೂ ನಡೆಯಲಿದೆ. ಮಧ್ಯಾಹ್ನ 1

ಪಿಲಿಕುಳ ಆಟಿಕೂಟ ➤ ವಿಶೇಷ ಭೋಜನ ಸಾರ್ವಜನಿಕರಿಗೆ ಕೂಪನ್ ವ್ಯವಸ್ಥೆ Read More »

ಕರಾವಳಿ

ಪ್ರತಿಪಕ್ಷಗಳ ಯಾವುದೇ ಆಮಿಷಕ್ಕೆ ಒಳಗಾಗದಂತೆ ಸೂಚನೆ ➤ಬಿಎಸ್ ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.29.ಭಾನುವಾರ ಸಂಜೆ ನಗರದ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಸೋಮವಾರ ಸದನದಲ್ಲಿ ಬಹುಮತ ಸಾಬೀತು ವೇಳೆ ಎಲ್ಲರೂ ಒಗ್ಗಟ್ಟಾಗಿ ಸರ್ಕಾರದ ಪರ ಮತ ಚಲಾಯಿಸುವಂತೆ ನೂತನ ಶಾಸಕರಿಗೆ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಆಮಿಷಗಳಿಗೆ ಬಲಿಯಾಗಬೇಡಿ ಎಂದು ತಾಕೀತು ಮಾಡಿದ್ದಾರೆ. ಸೋಮವಾರ ಅಧಿವೇಶನದಲ್ಲಿ ಶಾಸಕರು ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ತೀರ್ಮಾನ ಸಂವಿಧಾನಬಾಹಿರ. ಆದರೆ ಸದ್ಯದಮಟ್ಟಿಗೆ ನಮಗೆ

ಪ್ರತಿಪಕ್ಷಗಳ ಯಾವುದೇ ಆಮಿಷಕ್ಕೆ ಒಳಗಾಗದಂತೆ ಸೂಚನೆ ➤ಬಿಎಸ್ ವೈ Read More »

ಕರ್ನಾಟಕ

ಜೋಕಟ್ಟೆ ಅಂಜುಮಾನ್ ಸುವರ್ಣ ಮಹೋತ್ಸವ ಸಮಾರೋಪ

  (ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.29. ಜೋಕಟ್ಟೆ ಅಂಜುಮಾನ್ ಖುವ್ವತುಲ್ ಇಸ್ಲಾಂ ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭ ಜು.31ರಿಂದ ಆ.4ರ ವರೆಗೆ ನಡೆಯಲಿದೆ. ೩೧ರಂದು ಶೈಖುನಾ ಅಸ್ಸಯ್ಯದ್ ಝೈನುಲ್ ಆಬಿದೀನ್ ತಂಙಳ್ ಅಲ್ ಬುಖಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಅಂಜುಮಾನ್ ಸುವರ್ಣಮಹೋತ್ಸವ ಸಮಿತಿ ಅಧ್ಯಕ್ಷ ಬಿ.ಎಸ್.ಹುಸೈನ್ ತಿಳಿಸಿದ್ದಾರೆ.ಆ.೧ರಂದು ಕಾವಳಕಟ್ಟೆ ಇಸ್ಲಾಮಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಅಲ್‌ಹಾಫಿಲ್ ಸುಫ್ಯಾನ್ ಸಖಾಫಿ, ಆ.೨ರಂದು ಅಬೂಬಕ್ಕರ್ ಫೈಝಿ ಕುಂಭರಾಜೆ, ಆ.೩ರಂದು ಅಲ್ ಹಾಫಿಲ್ ಕುಮ್ಮನಮ್ ನಿಝಾಮುದ್ದಿನ್ ಅಝ್ಹರಿ ಅಲ್ ಖಾಸಿಮಿ

ಜೋಕಟ್ಟೆ ಅಂಜುಮಾನ್ ಸುವರ್ಣ ಮಹೋತ್ಸವ ಸಮಾರೋಪ Read More »

ಕರಾವಳಿ

ಸಂಪೂರ್ಣ ಮಾದರಿಯ ಇಲೆಕ್ಟ್ರಿಲ್ ಕಾರನ್ನು ಪರಿಚಯಿಸಿದ ಖ್ಯಾತಿಗೆ ಹ್ಯುಂಡೈ ಭಾಜನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.29.ಕಾರುಗಳ ಉತ್ಪಾದಕ ಹ್ಯುಂಡೈ ಕಂಪೆನಿಯು ಹೊಸ ಮಾದರಿಯ   ಇಲೆಕ್ಟ್ರಿಕಲ್‌ ಕಾರನ್ನು ಮಾರುಕಟ್ಟೆಗೆ ಪರಿಚಯಿಸಿದೆ.ಈ ಕಾರಿಗೆ ಕಂಪನಿಯು ಹ್ಯುಂಡೈ ಕೋನಾ ಎಂಬ ಹೆಸರನ್ನು ನೀಡಿ ಬಿಡುಗಡೆ ಗೊಳಿಸಿದೆ. ಸಂಪೂರ್ಣ ಮಾದರಿಯ ಇಲೆಕ್ಟ್ರಿಲ್‌ ಕಾರನ್ನು ಪರಿಚಯಿಸಿದ ಹೆಗ್ಗಳಿಕೆಗೆ ಹ್ಯುಂಡೈ ಕಂಪನಿ ಭಾಜನವಾಗಿದೆ. ಇಲೆಕ್ಟ್ರಿಕಲ್‌ ಕಾರುಗಳ ಓಡಾಟಕ್ಕೆ ಚಾರ್ಜಿಂಗ್‌ ಪಾಯಿಂಟ್‌ ವ್ಯವಸ್ಥೆಗಳು ಭಾರತದಲ್ಲಿ ಇಲ್ಲದಿರುವ ನಡುವೆಯೂ ಕಂಪೆನಿ ಕಾರನ್ನು ಬಿಡುಗಡೆಗೊಳಿಸುವ ಮೂಲಕ ಧೈರ್ಯ ಪ್ರದರ್ಶಿಸಿದೆ. 136ಬಿಎಚ್‌ಪಿ ಅಥವಾ 100 ಕೆ.ವಿ. ಎಲೆಕ್ಟ್ರಿಕಲ್‌ ಮೋಟಾರ್‌ ಮತ್ತು 39.2ಕೆಡಬ್ಲ್ಯುಎಚ್‌

ಸಂಪೂರ್ಣ ಮಾದರಿಯ ಇಲೆಕ್ಟ್ರಿಲ್ ಕಾರನ್ನು ಪರಿಚಯಿಸಿದ ಖ್ಯಾತಿಗೆ ಹ್ಯುಂಡೈ ಭಾಜನ Read More »

ಕರ್ನಾಟಕ, ತಂತ್ರಜ್ಞಾನ

ಚಲಿಸುತ್ತಿರುವ ಉಗಿಬಂಡಿಯಿಂದ ಕೆಳಕ್ಕೆ ಧುಮುಕಿ ಗಾಯಗೊಂಡ ಮಹಿಳೆ

(ನ್ಯೂಸ್ ಕಡಬ) newskadaba.com ಉಡುಪಿ, ಜುಲೈ.29.ತಿರುವನಂತಪುರ – ನಿಜಾಮುದ್ದೀನ್‌ ರೈಲಿನಲ್ಲಿ (22655) ಸಂಚರಿಸುತ್ತಿದ್ದ ಮಹಿಳೆ ಚಲಿಸುತ್ತಿರುವ ರೈಲಿನಿಂದ ಕೆಳಕ್ಕೆ ಧುಮುಕಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ವೇಳೆ ಬೈಂದೂರು ರೈಲು ನಿಲ್ದಾಣದಲ್ಲಿ ವರದಿಯಾಗಿದೆ. ಕೂಡಲೇ ರಿಕ್ಷಾ ಚಾಲಕ ಮಹೇಶ್‌ ಅವರು ಗಾಯಾಳನ್ನು ಬೈಂದೂರಿನ ಅಂಜಲಿ ಆಸ್ಪತ್ರೆಗೆ ದಾಖಲಿಸಿದರು.“ಇವರು ಮಣಿಪಾಲದಲ್ಲಿ ಕೆಲಸ ಮಾಡುತ್ತಿದ್ದು ಉಡುಪಿ ರೈಲು ನಿಲ್ದಾಣದಲ್ಲಿ ಬೈಂದೂರಿಗೆ ಹೋಗಲು ಜನರಲ್‌ ಟಿಕೆಟ್‌ ಪಡೆದಿದ್ದರು. ಅವರು ತಪ್ಪಾಗಿ ತಿಳಿದು ದಿಲ್ಲಿಗೆ ತೆರಳುವ ಈ ರೈಲನ್ನು ಹತ್ತಿದ್ದರು. ಈ ರೈಲಿಗೆ

ಚಲಿಸುತ್ತಿರುವ ಉಗಿಬಂಡಿಯಿಂದ ಕೆಳಕ್ಕೆ ಧುಮುಕಿ ಗಾಯಗೊಂಡ ಮಹಿಳೆ Read More »

ಕರ್ನಾಟಕ

ಮುಂಬೈ: ರೆಡ್ ಅಲರ್ಟ್ ಘೋಷಣೆ ➤ಮಹಾರಾಷ್ಟ್ರ ದ ಜನರನ್ನು ಆತಂಕಕ್ಕೆ ನೂಕಿರುವ ವರ್ಷಧಾರೆ

(ನ್ಯೂಸ್ ಕಡಬ) newskadaba.com ಮುಂಬೈ, ಜುಲೈ.29.ಮಹಾರಾಷ್ಟ್ರದಲ್ಲಿ ವರ್ಷಧಾರೆ ಮುಂದುವರಿದಿದ್ದು ಸೋಮವಾರವೂ ಮುಂಬೈನ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರವಿವಾರ ಹಾಗೂ ಸೋಮವಾರಕ್ಕೆ ಮುಂಬೈನ ಬಹುತೇಕ ಪ್ರದೇಶಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಗುಡುಗು ಸಹಿತ ಧಾರಾಕಾರ ಮಳೆಯಾಗುವುದಾಗಿ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿರುವ ಕಾರಣ, ಎಲ್ಲರೂ ಅಲರ್ಟ್‌ ಆಗಿರುವಂತೆ ಬೃಹನ್ಮುಂಬೈ ಮಹಾನಗರ ಪಾಲಿಕೆ ಸೂಚಿಸಿದೆ. ರವಿವಾರದ ಮಳೆಯಿಂದ ಮುರ್ಬಾದ್‌ ನಿಂದ ಕಲ್ಯಾಣ್‌ಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಯು ಭಾಗಶಃ ಕೊಚ್ಚಿ ಹೋಗಿದೆ. ಜನರನ್ನು ಆತಂಕಕ್ಕೆ

ಮುಂಬೈ: ರೆಡ್ ಅಲರ್ಟ್ ಘೋಷಣೆ ➤ಮಹಾರಾಷ್ಟ್ರ ದ ಜನರನ್ನು ಆತಂಕಕ್ಕೆ ನೂಕಿರುವ ವರ್ಷಧಾರೆ Read More »

ರಾಷ್ಟ್ರೀಯ ನ್ಯೂಸ್

ಅಪರಿಚಿತ ಗುಂಪೊದರಿಂದ ನಿವೃತ್ತ ಸೇನಾಧಿಕಾರಿಯ ಹತ್ಯೆ

(ನ್ಯೂಸ್ ಕಡಬ) newskadaba.com ಅಮೇಠಿ, ಜುಲೈ.29.ನಿವೃತ್ತ ಸೇನಾಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಅಮೇಠಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಅಪರಿಚಿತ ವ್ಯಕ್ತಿಗಳ ಗುಂಪೊಂದು ರಾತ್ರಿ ವೇಳೆ ಏಕಾಏಕಿ ಮನೆಯೊಳಗೆ ನುಗ್ಗಿ  ದೊಣ್ಣೆಗಳಿಂದ ಅಮಾನತ್‌ ಉಲ್ಲಾ ಅವರ ಮೇಲೆ ಹಲ್ಲೆ ಮಾಡಿದೆ. ತಮ್ಮ ಮನೆ ಮುಂಭಾಗದಲ್ಲಿರುವ ಅಂಗಡಿಯಲ್ಲಿನ ಸಾಮಾನುಗಳನ್ನು ಕಳವು ಮಾಡಲು ಯತ್ನಿಸುತ್ತಿರುವಾಗ ಪತಿ ಅಮಾನುಲ್ಲಾ ತಡೆದಿದ್ದರು. ನಾನು ಪೊಲೀಸರಿಗೆ ಮಾಹಿತಿ ನೀಡುತ್ತೇನೆ

ಅಪರಿಚಿತ ಗುಂಪೊದರಿಂದ ನಿವೃತ್ತ ಸೇನಾಧಿಕಾರಿಯ ಹತ್ಯೆ Read More »

ರಾಷ್ಟ್ರೀಯ ನ್ಯೂಸ್
Scroll to Top