Kadaba News

ಕತಾರ್ : ಕಂಪ್ರೆಶರ್ ಸಿಡಿದು ಮೃತಪಟ್ಟ ದ.ಕ ಮೂಲದ ಸಂದೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಕತಾರ್ ನಲ್ಲಿ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಮೂಲದ ಯುವಕ ಸಂದೇಶ್ ಶೆಟ್ಟಿ (30) ಕಂಪ್ರೆಶರ್ ಸಿಡಿದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಮೂಲತಃ ಪುಂಜಾಲಕಟ್ಟೆ ಸಮೀಪದ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಪುರಿಯ ನಿವಾಸಿ ಗಣೇಶ್ ಶೆಟ್ಟಿ – ವಾರಿಜಾ ಶೆಟ್ಟಿ ದಂಪತಿ ಕೊನೆಯ ಪುತ್ರ ಸಂದೇಶ್ ಉದ್ಯೋಗ ನಿಮಿತ್ತ ಕತಾರ್ ನಲ್ಲಿದ್ದರು. ಸಂದೇಶ್ ಅವರ ಅಜ್ಜಿ ಮನೆ (ತಾಯಿಯ ಮನೆ) ಪುರಿಯಲ್ಲಿದ್ದು, ಪುಂಜಾಲಕಟ್ಟೆಯಲ್ಲಿ ಶಿಕ್ಷಣ ಪಡೆದಿದ್ದರು. ಸಂದೇಶ್ […]

ಕತಾರ್ : ಕಂಪ್ರೆಶರ್ ಸಿಡಿದು ಮೃತಪಟ್ಟ ದ.ಕ ಮೂಲದ ಸಂದೇಶ್ Read More »

ಕರಾವಳಿ

ಕಡಿಮೆ ವೇತನವನ್ನು ವಿರೋಧಿಸಿ ಗಾರ್ಮೆಂಟ್ಸ್ ನೌಕರರ ಮುಷ್ಕರ

(ನ್ಯೂಸ್ ಕಡಬ) newskadaba.com ಹಾಸನ, ಜು.24.ಹಾಸನದ ಹಿಮತ್ ಸಿಂಕಾ ಗಾರ್ಮೆಂಟ್ಸ್ ನೌಕರರು ಕಡಿಮೆ ವೇತನ ನೀಡುತ್ತಿರುವುದಾಗಿ ಆರೋಪಿಸಿ ಪ್ರತಿಭಟನೆ ನಡೆಸಿದರು. ಈ ಘಟನೆ ಹಾಸನದಲ್ಲಿ  ನಡೆದಿದೆ. ತಮಗೆ ಕೊಡಬೇಕಾಗಿರುವ ಬಾಕಿ ಹಣ ಪಾವತಿ ಮಾಡುವಂತೆ ನೌಕರರು ಒತ್ತಾಯಿಸಿದ್ದು, ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಎಲ್ಲಾ ಬೇರೆ ರಾಜ್ಯಗಳ ಜನರೇ ತುಂಬಿಕೊಂಡಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. ಪ್ರತಿಭಟನಾ ನಿರತ ನೌಕರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ನಡೆಸುತ್ತಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ ಪರಿಣಾಮ ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿಚಾರ್ಜ್ ನಡೆಸಿದ್ದು, ಇದರಿಂದ

ಕಡಿಮೆ ವೇತನವನ್ನು ವಿರೋಧಿಸಿ ಗಾರ್ಮೆಂಟ್ಸ್ ನೌಕರರ ಮುಷ್ಕರ Read More »

ಕರ್ನಾಟಕ

ಜಿಲ್ಲಾ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯಡಿ ರೈತರಿಗೆ ಸಲಹೆ ಹಾಗೂ ➤ ಶ್ರೇಷ್ಟ ಕೃಷಿಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.2019-20ನೇ ಸಾಲಿನಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಟ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕಾಗಿರುತ್ತದೆ. ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಬಿವೃದ್ದಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೇಕ್ ತಂತ್ರಜ್ಞಾನ ಅಳವಡಿಕೆ(ಹಸಿರು ಮನೆ, ಅಬಿವೃದ್ಧಿ,

ಜಿಲ್ಲಾ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯಡಿ ರೈತರಿಗೆ ಸಲಹೆ ಹಾಗೂ ➤ ಶ್ರೇಷ್ಟ ಕೃಷಿಕ ಪ್ರಶಸ್ತಿ Read More »

ಕರಾವಳಿ

ಡೆಂಗ್ಯು ನಿಯಂತ್ರಣಕ್ಕೆ ಕಾರ್ಯಾಚರಣೆ ತೀವ್ರಗೊಳಿಸಲು ಸೂಚನೆ ➤ ಉಸ್ತುವಾರಿ ಕಾರ್ಯದರ್ಶಿ: ಬಿ.ಎಚ್. ಅನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಜಿಲ್ಲೆಯಲ್ಲಿ ಕಂಡು ಬಂದಿರುವ ಡೆಂಗ್ಯು ರೋಗ ನಿಯಂತ್ರಣಕ್ಕೆ ಅಗತ್ಯ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಈಗಾಗಲೇ ನಡೆಸುತ್ತಿರುವ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಇದರಲ್ಲಿ ಯಾವುದೇ ಲೋಪವನ್ನು ಸಹಿಸಲಾಗದು. ಆರೋಗ್ಯ ಇಲಾಖೆಯು

ಡೆಂಗ್ಯು ನಿಯಂತ್ರಣಕ್ಕೆ ಕಾರ್ಯಾಚರಣೆ ತೀವ್ರಗೊಳಿಸಲು ಸೂಚನೆ ➤ ಉಸ್ತುವಾರಿ ಕಾರ್ಯದರ್ಶಿ: ಬಿ.ಎಚ್. ಅನಿಲ್ ಕುಮಾರ್ Read More »

ಕರಾವಳಿ

ಪಿಲಿಕುಳದಲ್ಲಿ ವನಮಹೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಜುಲೈ 23 ರಂದು ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ಕಮೀಷನರ್ ಡಾ. ಎನ್.ಜಿ. ಮೋಹನ್ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೈಂಟ್ ರೇಮೆಂಡ್ಸ್ ಕಾಲೇಜು ವಾಂಣಜೂರು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾವೂರು ಇಲ್ಲಿನ ಎನ್.ಎಸ್.ಎಸ್. ಸ್ವಯಂಸೇವಕರು ಹಾಗೂ ಶುಭೋಧಯ ವಿದ್ಯಾಲಯ ವಾಮಂಜೂರು ಇಲ್ಲಿನ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂಸೇವಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಬಳಿಕ ನಡೆದ

ಪಿಲಿಕುಳದಲ್ಲಿ ವನಮಹೋತ್ಸವ ಆಚರಣೆ Read More »

ಕರಾವಳಿ

ಬಂಟ್ವಾಳ ➤ ಮಾರುಕಟ್ಟೆ ದರ ನಿಗದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ದ.ಕ ಜಿಲ್ಲೆ ಬಂಟ್ವಾಳ ನೋಂದಾಣಿ ಉಪಜಿಲ್ಲೆಯ ವ್ಯಾಪ್ತಿಯೊಳಗಿನ ಹೊಸ ಯೋಜನೆಯಾದ Crystal Plaza ಎಂಬ ವಾಣಿಜ್ಯ ಸಂಕೀರ್ಣದಲ್ಲಿರುವ ವಾಣಿಜ್ಯ ಕೋಣೆಗಳಿಗೆ ಚ.ಮೀ. ಗೆ ರೂ.40,000/- ದಂತೆ ನಿಗದಿಗೊಳಿಸಲಾಗಿದೆ. ಹಾಗೂ ವಾಸ್ತವ್ಯ ಪ್ಲ್ಯಾಟ್‍ಗಳಿಗೆ ಚ.ಮೀ. ಗೆ ರೂ. 30,000/- ಮಾರುಕಟ್ಟೆ ದರಗಳನ್ನು ನಿಗದಿಪಡಿಸಲಾಗಿದೆ. ಪರಿಷ್ಕೃತ ದರಪಟ್ಟಿ ಕರಡು ಪ್ರತಿಯನ್ನು ಸಾರ್ವಜನಿಕರ ಅವಗಾಹನೆಗೆ ತರಲು ಬಂಟ್ವಾಳ ವ್ಯಾಪ್ತಿಯ ಉಪನೋಂದಣಿ ಕಚೇರಿಗಳ ಸೂಚನಾ ಫಲಕಗಳಲ್ಲಿ ಜುಲೈ 23 ರಂದು ಪ್ರಕಟಿಸಲಾಗಿದೆ. ಸಾರ್ವಜನಿಕರು ಪ್ರಕಟಗೊಂಡ ದಿನಾಂಕದಿಂದ 15

ಬಂಟ್ವಾಳ ➤ ಮಾರುಕಟ್ಟೆ ದರ ನಿಗದಿ Read More »

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿವತಿಯಿಂದ ➤ ತುಳು ಅಕಾಡೆಮಿ ಚಾವಡಿ ಸನ್ಮಾನ : ವಸಂತ ವಿ. ಅಮೀನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ. ಅದರ ಪ್ರಕಾರ ಜುಲಾಯಿ 26 ರ ಶುಕ್ರವಾರ ಅಪರಾಹ್ನ 3.30 ಕ್ಕೆ ಅಕಾಡೆಮಿ ಸಿರಿಚಾವಡಿಯಲ್ಲಿ ನಾಟಕ ನಿರ್ದೇಶಕರು ಹಾಗೂ ಬರಹಗಾರರಾದ ವಸಂತ ವಿ. ಅಮೀನ್ ಇವರನ್ನು ಸನ್ಮಾನಿಸಲಾಗುವುದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ ಇವರು ಕಾರ್ಯಕ್ರಮದ ಅಧ್ಯಕ್ಷತೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿವತಿಯಿಂದ ➤ ತುಳು ಅಕಾಡೆಮಿ ಚಾವಡಿ ಸನ್ಮಾನ : ವಸಂತ ವಿ. ಅಮೀನ್ Read More »

ಕರಾವಳಿ

ಏಷಿಯನ್ ಫಿಶರೀಸ್ ಸೊಸೈಟಿ ಭಾರತೀಯ ಶಾಖೆ ➤ ಕಡಲ ಮೀನುಗಾರಿಕೆ ಸುಧಾರಣೆ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಏಷಿಯನ್ ಫಿಶರೀಸ್ ಸೊಸೈಟಿ ಭಾರತೀಯ ಶಾಖೆ, ಮೀನುಗಾರಿಕೆ ಇಲಾಖೆ, ಕರ್ನಾಟಕ ಸರಕಾರ ಇವರ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆ ಪ್ರಯುಕ್ತ  ಜುಲೈ 25 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಓಷಿಯನ್ ಪರ್ಲ್ ಹೊಟೇಲಿನ ಪೆಸಿಫಿಕ್-5 ಸಭಾಂಗಣದಲ್ಲಿ ‘ಕಡಲ ಮೀನುಗಾರಿಕೆ ಸುಧಾರಣೆ ಯೋಜನೆ’ಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಜಿಲ್ಲಾಧಿಕಾರಿ ಎಸ್. ಶಶಿಕಾಂತ ಸೆಂಥಿಲ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡೀನ್, ಮೀನುಗಾರಿಕಾ ಮಹಾವಿದ್ಯಾಲಯ, ಮಂಗಳೂರು ಡಾ| ಎ.

ಏಷಿಯನ್ ಫಿಶರೀಸ್ ಸೊಸೈಟಿ ಭಾರತೀಯ ಶಾಖೆ ➤ ಕಡಲ ಮೀನುಗಾರಿಕೆ ಸುಧಾರಣೆ ಯೋಜನೆಗೆ ಚಾಲನೆ Read More »

ಕರಾವಳಿ

ಕನ್ನಡ ಪುಸ್ತಕ ಪ್ರಾಧಿಕಾರ ➤ ಜಾಣ ಜಾಣೆಯರ ಬಳಗ ರಚಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ‘ಜಾಣ ಜಾಣೆಯರ ಬಳಗ’ವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಕನಿಷ್ಟ 5 ರಿಂದ 15 ಮಂದಿ ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು, ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಾಲೇಜಿನಲ್ಲಿ ಕನ್ನಡ ಸಾಹಿತ್ಯಿಕ ವಾತಾವರಣವನ್ನು ಕ್ರಿಯಾಶೀಲವಾಗಿಡುವ ನಿಟ್ಟಿನಲ್ಲಿ ವರ್ಷದಲ್ಲಿ 2 ಕಾರ್ಯಕ್ರಮಗಳಂತೆ ಕನ್ನಡ

ಕನ್ನಡ ಪುಸ್ತಕ ಪ್ರಾಧಿಕಾರ ➤ ಜಾಣ ಜಾಣೆಯರ ಬಳಗ ರಚಿಸಲು ಅರ್ಜಿ ಆಹ್ವಾನ Read More »

ಕರಾವಳಿ

ಆದಾಯ ತೆರಿಗೆ ಇಲಾಖೆ ಮಂಗಳೂರು ಇದರ ವತಿಯಿಂದ ➤ ಆದಾಯ ತೆರಿಗೆ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಆದಾಯ ತೆರಿಗೆ ಇಲಾಖೆ ಮಂಗಳೂರು ಇವರ ವತಿಯಿಂದ ಅಪರಾಹ್ನ 3 ಗಂಟೆಗೆ ಅತ್ತಾವರದ ಇಂಡಿಯನ್ ಮೆಡಿಕಲ್ ಹೌಸ್‍ನಲ್ಲಿ “ಆದಾಯ ತೆರಿಗೆ ದಿನಾಚರಣೆ” ಯನ್ನು ಆಚರಿಸಲು ನಿರ್ಧರಿಸಿದೆ. ಆ ಪ್ರಯುಕ್ತ ಪತ್ರಕರ್ತರನ್ನು ಈ ಕಾರ್ಯಕ್ರಮಕ್ಕೆ ಆಗಮಿಸಲು ಕೋರಿದೆ.

ಆದಾಯ ತೆರಿಗೆ ಇಲಾಖೆ ಮಂಗಳೂರು ಇದರ ವತಿಯಿಂದ ➤ ಆದಾಯ ತೆರಿಗೆ ದಿನಾಚರಣೆ Read More »

ಕರಾವಳಿ
Scroll to Top