Kadaba News

ಮಂಗಳೂರು: ಖಾಸಗಿ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗ್ರೆಟಾ ಡಿಸೋಜಾ (40) ಮೃತ ಶಿಕ್ಷಕಿ. ಮೂಲಗಳ ಪ್ರಕಾರ, ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮೇಜಿನ ಮೇಲೆ ಡೆತ್ ನೋಟ್ ಸಿಕ್ಕಿದ್ದು , ಅದರಲ್ಲಿ ‘ನಾನು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ನಾನು ಬದುಕುವುದಿಲ್ಲ’ ಎಂದು ಬರೆಯಲಾಗಿತ್ತು. ಬಳಿಕ ಮಕ್ಕಳು ಹುಡುಕಾಡಿದಾಗ ಮನೆ ಆವರಣದ ಬಾವಿಯಲ್ಲಿ ಶವ ತೇಲುತ್ತಿರುವುದು ಕಂಡು ಬಂದಿತ್ತು ಎಂದು ತಿಳಿದುಬಂದಿದೆ.ಈ ಕುರಿತು ಕಂಕನಾಡಿ ನಗರ ಪೊಲೀಸ್ […]

ಮಂಗಳೂರು: ಖಾಸಗಿ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಹಿಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಪ್ರಸ್ತುತ ಸಾಲಿನ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಮುಂದಿನ ಎರಡು ವಾರಗಳ ಕಾಲಾವಧಿಯಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್‍ನ್ನು ಅಭಿವೃದ್ಧಿ ಪಡಿಸಲಾಗಿದೆ.ಜಿಲ್ಲೆಯ ರೈತರು ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿರುವ  ಆ್ಯಪ್ಅನ್ನು ಡೌನ್‍ಲೋಡ್ ಮಾಡಿ ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು. ನಂತರ ಆಧಾರ್ ಕ್ಯೂ ಆರ್ ಕೋಡ್‍ನ್ನು ಸ್ಕ್ಯಾನ್ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ. ಬರಲಿದ್ದು,

ಹಿಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಿಡುಗಡೆ Read More »

ಕರಾವಳಿ

ಹೃದಯಾಘಾತದಿಂದಾಗಿ ಕೊನೆಯುಸಿರೆಳೆದ ಮಾಜಿ ಸಚಿವೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.16: ರೇಷ್ಮೆ ಖಾತೆ ಸಚಿವರಾಗಿ ಕೆಲಸ ನಿರ್ವಹಿಸಿ ರಾಜ್ಯ ರಾಜಕೀಯದಲ್ಲಿ ತನ್ನದೇಯಾದ ಛಾಪು ಮೂಡಿಸಿದ್ದ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ (78) ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ, ಇಂದು ಬೆಳಗ್ಗೆ ದಿಢೀರ್ ಹೃದಯಾಘಾತದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೊರೋನಾ ಇಡೀ ದೇಶಕ್ಕೆ ವ್ಯಾಪಿಸಿದ್ದ ಸಂದರ್ಭದಲ್ಲಿ ಹಿರಿಯ ರಾಜಕಾರಣಿ ರೇಣುಕಾ ರಾಜೇಂದ್ರನ್ ಅವರಿಗೂ ಸಹ ಸೋಂಕು ತಗುಲಿತ್ತು. ಆದರೆ, ಅವರು ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ

ಹೃದಯಾಘಾತದಿಂದಾಗಿ ಕೊನೆಯುಸಿರೆಳೆದ ಮಾಜಿ ಸಚಿವೆ Read More »

ಕರ್ನಾಟಕ

ಮಂಗಳೂರು :ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ತಲವಾರಿನಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಕರ್ತವ್ಯದಲ್ಲಿದ್ದ ಹೆಡ್‌‌ ಕಾನ್ಸ್‌ಟೇಬಲ್‌ಯೋರ್ವರ ಮೇಲೆ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿದ ಘಟನೆ ಇಂದು ಮಂಗಳೂರಿನ ರಥಬೀದಿಯ ಬಳಿಯ ನ್ಯೂ ಚಿತ್ರಾ ಟಾಕೀಸ್‌ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಬಂದರು ಠಾಣೆಯ ಹೆಡ್‌‌ ಕಾನ್ಸ್‌ಟೇಬಲ್‌‌‌ ಗಣೇಶ್‌‌ ಕಾಮತ್‌ ಹಾಗೂ ಇಬ್ಬರು ಸಿಬ್ಬಂದಿ ತಪಾಸಣೆ ನಿರತರಾಗಿದ್ದರು. ಈ ಸಂದರ್ಭ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೋರ್ವ ಮುಖ್ಯ ಪೇದೆ ಗಣೇಶ್‌ ಕಾಮತ್‌ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ

ಮಂಗಳೂರು :ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ತಲವಾರಿನಿಂದ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಮಿಕ ಇಲಾಖೆಯಲ್ಲಿ ಡಿ. 19 ರವರೆಗೆ ಸಕಾಲ ಸಪ್ತಾಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು, ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಸಕಾಲ ಸಪ್ತಾಹವನ್ನು ಡಿಸೆಂಬರ್ 19 ರವರೆಗೆ ಆಚರಿಸುತ್ತಿದೆ. ಕಾರ್ಮಿಕ ಇಲಾಖೆಯಲ್ಲಿ  ಸಕಾಲ ಯೋಜನೆಯಡಿ ವಿಲೇವಾರಿ ಮಾಡುವ ಸೇವೆಗಳು :  ಗುತ್ತಿಗೆ ಕಾರ್ಮಿಕ (ಕ್ರಮೀಕರಣ ಮತ್ತು ರದ್ಧತಿ) ಕಾಯ್ದೆ, 1970 ರಡಿಯಲ್ಲಿ ಪ್ರಮುಖ ಉದ್ಯೋಗದಾತರ ನೋಂದಣಿ, ಗುತ್ತಿಗೆದಾರರಿಗೆ ಪರವಾನಗಿ ನೀಡುವಿಕೆ, ಗುತ್ತಿಗೆದಾರರ ಪರವಾನಗಿ ನವೀಕರಣ, ಕಾರ್ಮಿಕ ಸಂಘಗಳ

ಕಾರ್ಮಿಕ ಇಲಾಖೆಯಲ್ಲಿ ಡಿ. 19 ರವರೆಗೆ ಸಕಾಲ ಸಪ್ತಾಹ Read More »

ಕರಾವಳಿ

ನೂಜಿಬಾಳ್ತಿಲ: ಶಾಸಕರಿಂದ ಮನೆ ಭೇಟಿ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಡಿ.16: ಸುಳ್ಯ ಶಾಸಕ ಎಸ್.ಅಂಗಾರ ಅವರು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ಸೋಮವಾರ ಮನೆ ಬೇಟಿ ನಡೆಸಿದರು. ನೂಜಿಬಾಳ್ತಿಲ 2ನೇ ವಾರ್ಡ್‍ಗೆ ಬೇಟಿ ನೀಡಿದ ಶಾಸಕರು ಸ್ಥಳೀಯರ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ, ಮನೆ ಬೇಟಿ ನಡೆಸಿದರು. ಬದಿಬಾಗಿಲು-ಒರುಂಬಾಲು ರಸ್ತೆಗೆ ವಿಶೇಷ ಅನುದಾನ ರೂ.10 ಲಕ್ಷ ಮಂಜೂರಾಗಿದ್ದು, ಚುನಾವಣೆ ಮುಗಿದ ತಕ್ಷಣ ಕಾಮಗಾರಿ ಆರಂಭವಾಗಲಿದೆ ಎಂದರು. ಪ್ರಮುಖರಾದ ವಾಡ್ಯಪ್ಪ ಗೌಡ ಎರ್ಮಾಯಿಲ್, ಎ.ಪಿ.ಗಿರೀಶ್, ಚಂದ್ರಶೇಖರ ನೂಜಿ, ರಾಮಚಂದ್ರ ಎಸ್., ಪ್ರಭಾಕರ ಬಳಕ್ಕ, ಅನಿಲ್

ನೂಜಿಬಾಳ್ತಿಲ: ಶಾಸಕರಿಂದ ಮನೆ ಭೇಟಿ Read More »

ಕರಾವಳಿ

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಮಾನ್ಯ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ   ರವರು ನಾಳೆ (ಡಿ.17) ಪೂರ್ವಾಹ್ನ 11 ಘಂಟೆಗೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆಕೊಳ್ಳಬೇಕೆಂದು ಕಡಬ ತಹಶೀಲ್ದಾರ್ ಅನಂತ ಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

ಗ್ರಾಮ ಪಂಚಾಯತ್ ಚುನಾವಣೆ ಮೊದಲನೇ ಹಂತ ➤ 3,854 ಅಭ್ಯರ್ಥಿಗಳು ಕಣದಲ್ಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 22 ರಂದು ನಡೆಯುವ ಮೊದಲನೇ ಹಂತದದಲ್ಲಿ ಮಂಗಳೂರು 37, ಮೂಡಬಿದಿರೆ 12, ಮತ್ತು ಬಂಟ್ವಾಳ 57 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 106 ಗ್ರಾಮಪಂಚಾಯತ್‍ಗಳ 1681 ಕ್ಷೇತ್ರಗಳಲ್ಲಿ 50 ಕ್ಷೇತ್ರಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿ 1631 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ವರ್ಗವಾರು ಸಂಖ್ಯಾ ವಿವರ: ಅನುಸೂಚಿತ ಜಾತಿಯಲ್ಲಿ ಒಟ್ಟು 238, ಅನುಸೂಚಿತ ಪಂಗಡದಲ್ಲಿ ಒಟ್ಟು 215 ಹಾಗೂ ಹಿಂದುಳಿದ ಅ ವರ್ಗದಲ್ಲಿ 958,

ಗ್ರಾಮ ಪಂಚಾಯತ್ ಚುನಾವಣೆ ಮೊದಲನೇ ಹಂತ ➤ 3,854 ಅಭ್ಯರ್ಥಿಗಳು ಕಣದಲ್ಲಿ Read More »

ಕರಾವಳಿ

ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.16: ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತ್ ಗಳಲ್ಲಿ ನಡೆಯಲಿದ್ದು, ಕೋವಿಡ್19 ಹಿನ್ನೆಲೆಯಲ್ಲಿ ಈ ಎಲ್ಲಾ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊರೋನಾ ಸುರಕ್ಷಿತ ಕಿಟ್‌ಗಳನ್ನು ರಾಜ್ಯ ಚುನಾವಣಾ ಆಯೋಗ ಸರಬರಾಜು ಮಾಡಿದೆ.   ಎಂ.ಎಸ್.ಐ.ಲ್ ನಿಂದ ಸರಬರಾಜು ಮಾಡಿರುವ ಈ ಕಿಟ್‌ಗಳಲ್ಲಿ, 500 ಎಂಲ್‌ನ 4 ಸ್ಯಾನಿಟೈಸ್ ಬಾಟೆಲ್, 100 ಎಂಎಲ್‌ನ

ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು Read More »

ಕರಾವಳಿ, ಕರ್ನಾಟಕ

ಪುತ್ತೂರಿನಲ್ಲಿ ಹೆಚ್ಚಿದ ಚಿರತೆ ಕಾಟ➤ ಆತಂಕದಲ್ಲಿ ಸ್ಥಳೀಯರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.16: ಕಳೆದ ಮೂರು ವರ್ಷಗಳಿಂದ ಪುತ್ತೂರು ತಾಲೂಕಿನ ವಿವಿಧ ಭಾಗದಲ್ಲಿ ಚಿರತೆ ಕಾಟ ಆರಂಭವಾಗಿದ್ದು, ಜನರನ್ನು ಆತಂಕಿತರನ್ನಾಗಿಸಿದೆ. ಕಳೆದ ವರ್ಷ ಹಳೆನೇರೆಂಕಿ, ವಳಕಡಮ, ಈಶ್ವರಮಂಗಲ ವ್ಯಾಪ್ತಿಯ ಕೆಲ ಭಾಗಗಳಲ್ಲಿ ಚಿರತೆ ಕಾಟ ಜನತೆಯನ್ನು ಕಾಡಿತ್ತು. ಇದೀಗ ಕೋಡಿಂಬಾಡಿಯಲ್ಲೂ ಸಿಸಿ ಕ್ಯಾಮರಾದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಇಲ್ಲಿನ ಜನತೆ ಭಯಭೀತರಾಗಿದ್ದಾರೆ.     ಕೋಡಿಂಬಾಡಿಯ ಜಿನರಾಜ್ ಜೈನ್ ಅವರ ಮನೆಯ ಬಳಿ ಕಳೆದ ಆದಿತ್ಯವಾರ ರಾತ್ರಿ ಸುಮಾರು 1:45ರ ಸುಮಾರಿಗೆ ಚಿರತೆಯೊಂದು ಓಡಾಟ ನಡೆಸಿರುವುದು

ಪುತ್ತೂರಿನಲ್ಲಿ ಹೆಚ್ಚಿದ ಚಿರತೆ ಕಾಟ➤ ಆತಂಕದಲ್ಲಿ ಸ್ಥಳೀಯರು Read More »

ಕರಾವಳಿ
Scroll to Top