Kadaba News

ಪದವಿ ಪರೀಕ್ಷೆಗಳ ಫಲಿತಾಂಶ ವೈಯಕ್ತಿಕ ವೀಕ್ಷಣೆಗೆ ಅರ್ಜಿ ಸಲ್ಲಿಸಲು ➤ ಜೂನ್ 29 ಕಡೆಯ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಮಂಗಳೂರು ವಿಶ್ವವಿದ್ಯಾನಿಲಯದ ಎಪ್ರಿಲ್/ಮೇ 2019ರಲ್ಲಿ ನಡೆದ ಎಲ್ಲಾ ಪದವಿ ಪರೀಕ್ಷೆಗಳ ಫಲಿತಾಂಶಗಳನ್ನು ಜೂನ್ 18 ರಂದು ಅಪರಾಹ್ನದಿಂದ ವಿಶ್ವವಿದ್ಯಾನಿಲಯದ ಅಧೀಕೃತ ವೆಬ್‍ಸೈಟ್‍ನಲ್ಲಿ (www.mangaloreuniversity.ac.in) ಪ್ರಕಟಿಸಲಾಗಿದೆ. ಮರುಮೌಲ್ಯಮಾಪನ/ ಉತ್ತರ ಪತ್ರಿಕೆಗಳ ವೈಯಕ್ತಿಕ ವೀಕ್ಷಣೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಅರ್ಜಿಯನ್ನು ಜೂನ್ 29 ರೊಳಗೆ ಫಲಿತಾಂಶದ ವೆಬ್‍ಸೈಟ್ ಪ್ರತಿಯೊಂದಿಗೆ ಕಾಲೇಜು ಮುಖಾಂತರ ಸಲ್ಲಿಸಬಹುದು ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

ಪದವಿ ಪರೀಕ್ಷೆಗಳ ಫಲಿತಾಂಶ ವೈಯಕ್ತಿಕ ವೀಕ್ಷಣೆಗೆ ಅರ್ಜಿ ಸಲ್ಲಿಸಲು ➤ ಜೂನ್ 29 ಕಡೆಯ ದಿನ Read More »

ಕರಾವಳಿ

ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ ಟ್ರಸ್ಟ್ ಮತ್ತು ಕರ್ನಾಟಕ ರಾಜ್ಯ ದೇವಾಡಿಗರ ಸಂಘ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ಆಚರಿಸಲಾಗುವುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ. ರಾಮಕೃಷ್ಣ ರಾವ್, ಇವರು ಉದ್ಘಾಟಿಸಲಿದ್ದು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ದ.ಕ ಜಿಲ್ಲಾ ಶಾಖಾ ಚೆಯರ್‍ಮೆನ್ ಸಿಎ. ಶಾಂತಾರಾಮ್ ಶೆಟ್ಟಿ ಇವರು ಮುಖ್ಯ

ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ವಿವಿ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ಎಂ.ಎ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಮಂಗಳೂರು ವಿಶ್ವವಿದ್ಯಾನಿಲಯ ಪ್ರಸ್ತುತ ವರ್ಷದಿಂದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಎಂ.ಎ ಪದವಿ ಆರಂಭಿಸಿದೆ. ದೇಶದ ಕೆಲವೇ ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಇತಿಹಾಸ ಅಧ್ಯಯನದ ಜೊತೆಗೆ ಉದ್ಯೋಗಕ್ಕೆ ಪೂರಕವಾಗಿರುವ ಪುರಾತತ್ವ ವಿಷಯವನ್ನು ಬೋಧಿಸಲಾಗುತ್ತದೆ. ಇತ್ತೀಚೆಗಿನ ವರ್ಷಗಳಲ್ಲಿ ಪುರಾತತ್ವ ಶಾಸ್ತ್ರವು ಒಂದು ವೈಜ್ಞಾನಿಕ ವಿಷಯವಾಗಿ ಬೆಳೆಯುತ್ತಿದೆ. ಇದರ ಮೂಲ ಉದ್ದೇಶ ಮಾನವನ ವಿಕಾಸ ಕ್ರಮದಲ್ಲಿ ಅವನ ಸಾಧನೆಗಳ ಏರಿಳಿತಗಳು, ಅವುಗಳ ಕಾರಣ, ಪರಿಣಾಮಗಳನ್ನು ಅಧ್ಯಯನ ಮಾಡುವುದಾಗಿದೆ, ಈ ರೀತಿ ಮಾನವ

ವಿವಿ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ಎಂ.ಎ ಆರಂಭ Read More »

ಕರಾವಳಿ

ಅಲ್ಪಸಂಖ್ಯಾತರ ಅರ್ಹ ಅಭ್ಯರ್ಥಿಗಳಿಗೆ ಕಾನೂನು ತರಬೇತಿ ➤ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಅಲ್ಪಸಂಖ್ಯಾತರ ಅರ್ಹ ಅಭ್ಯರ್ಥಿಗಳಿಗೆ 2019-20ನೇ ಸಾಲಿಗೆ ನಾಲ್ಕು ವರ್ಷದ ಅವಧಿಗೆ ಕಾನೂನು ತರಬೇತಿ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತರ ಕಾನೂನು ಪದವೀಧರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿತರಾದ ಕಾನೂನು ಪದವೀಧರರಾಗಿದ್ದು, ಕುಟುಂಬದ ವಾರ್ಷಿಕ ಆದಾಯವು ರೂ. 3.50 ಲಕ್ಷವನ್ನು ಮೀರಿರಬಾರದು. 30 ವರ್ಷದೊಳಗಿನ ವಯೋಮಿತಿಯವರಾಗಿದ್ದು, ಅಂತಿಮ ಕಾನೂನು ಪದವಿಯನ್ನು ಪೂರ್ಣಗೊಳಿಸಿ 2 ವರ್ಷ ಮೀರಿರಬಾರದು. ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್

ಅಲ್ಪಸಂಖ್ಯಾತರ ಅರ್ಹ ಅಭ್ಯರ್ಥಿಗಳಿಗೆ ಕಾನೂನು ತರಬೇತಿ ➤ಅರ್ಜಿ ಆಹ್ವಾನ Read More »

ಕರಾವಳಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.2019-20ನೇ ಸಾಲಿನ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ನ್ಯಾಷನಲ್ ಓವರ್‍ಸೀಸ್ ವಿಧ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18. ಅರ್ಜಿಯನ್ನು ಇಲಾಖಾ ವೆಬ್‍ಸೈಟ್ (https://gokdom.kar.nic.in)ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಿ, ತಿಳಿಸಲಾದ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ. ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ➤ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿಯ ನೆಹರು ಯುವ ಕೇಂದ್ರವು ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಗೆ 2019-20ನೇ ಸಾಲಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಯೋಜನೆಯಡಿ ಕಾರ್ಯಕರ್ತರನ್ನು ಪ್ರತಿ ತಾಲೂಕಿಗೆ ಇಬ್ಬರಂತೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಿದೆ. ಎಸ್.ಎಸ್.ಎಲ್.ಸಿ/ಪಿ.ಯು.ಸಿ /ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಹತೆ ಹೊಂದಿರುವ 29 ವರ್ಷದೊಳಗಿನ ಯುವಕ-ಯುವತಿಯರು ಈ ನೇಮಕಾತಿಗೆ ಅರ್ಹರಿರಾಗಿರುತ್ತಾರೆ.ನೇರ ಸಂದರ್ಶನವು ಇದೇ ಜೂನ್ 25 ರಂದು ಪೂರ್ವಾಹ್ನ 10 ಗಂಟೆಗೆ ನೆಹರು ಯುವ ಕೇಂದ್ರ, ಕಂದಾಯ ಭವನ, ಜಿಲ್ಲಾಧಿಕಾರಿ

ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ➤ನೇರ ಸಂದರ್ಶನ Read More »

ಕರಾವಳಿ

ಮಾಧ್ಯಮ ತರಬೇತಿ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಂಗಳೂರು ಕಚೇರಿಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ ಮತ್ತು ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಮಹಿಳಾ ಅಭ್ಯರ್ಥಿಗಳಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ನೇಮಿಸಲಾಗುವುದು. ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಆಯಾ ಜಿಲ್ಲೆಯ

ಮಾಧ್ಯಮ ತರಬೇತಿ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

2030ರ ನಂತರ ಎಲೆಕ್ಟ್ರಿಕ್ ವಾಹನಗಳ ಕಾರುಬಾರು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.19.ಪರಿಸರ ಮಾಲಿನ್ಯ ತಗ್ಗಿಸುವ ದೃಷ್ಟಿಯಿಂದ 2030ರ ನಂತರ ದೇಶಾದ್ಯಂತ ಕೇವಲ ವಿದ್ಯುತ್ ಚಾಲಿತ (ಎಲೆಕ್ಟ್ರಿಕ್) ವಾಹನಗಳನ್ನೇ ಮಾರಾಟ ಮಾಡಬೇಕು ಎಂಬ ನಿಯಮ ಜಾರಿಗೆ ತರಲು ನೀತಿ ಆಯೋಗ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈಗಾಗಲೇ 2025ರಿಂದ 150 ಸಿಸಿ ಸಾಮರ್ಥ್ಯದ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಮಾರಾಟ ಮಾಡಬೇಕು ಎಂದು ಶಿಫಾರಸನ್ನು ನೀತಿ ಆಯೋಗ ಮಾಡಿದೆ ಎಲೆಕ್ಟ್ರಿಕ್ ವಾಹನಗಳನ್ನು ಕಡ್ಡಾಯಗೊಳಿಸುವುದರಿಂದ ದೇಶದ ತೈಲ ಬೇಡಿಕೆ ಶೇ. 64ರಷ್ಟು ಕಡಿಮೆ ಆಗುತ್ತದೆ. ಜತೆಗೆ

2030ರ ನಂತರ ಎಲೆಕ್ಟ್ರಿಕ್ ವಾಹನಗಳ ಕಾರುಬಾರು Read More »

ಕರಾವಳಿ

ಸಿದ್ದರಾಮಯ್ಯ ಸಿ ಎಲ್ ಪಿ ನಾಯಕ, ಗೌರವ ಕೊಡಲೇ ಬೇಕು ➤ ಸಚಿವ ಡಿಕೆಶಿವಕುಮಾರ್ ಹೇಳಿಕೆ

ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರು ರೋಷನ್‌ ಬೇಗ್‌ ಅವರ ಅಮಾನತು ವಿಚಾರದ ಕುರಿತು ಪ್ರಶ್ನಿಸಿದಾಗ, ಸಚಿವ ಡಿ.ಕೆ.ಶಿವಕುಮಾರ್‌ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಅವರಿಗೆ ಗೌರವ ಕೊಡಲೇಬೇಕು ಎಂದು ಹೇಳಿದ್ದಾರೆ.ಅವರು ಶಾಸಕ ರೋಷನ್‌ ಬೇಗ್‌ ಅವರ ಅಮಾನತು ವಿಚಾರಕ್ಕೆ ಸಂಬಂಧಿಸಿ  ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗ್ಗೆ ಯಾರೋ ಎಐಸಿಸಿಯಲ್ಲಿ ಮಾಹಿತಿ ನೀಡಿದರು. ಈ ಬಗ್ಗೆ ಕೇಳಿ ಹೇಳುತ್ತೇನೆ ಎಂದರು.ನಾವೆಲ್ಲ ಗಾಂಧಿ ಕಟುಂಬಕ್ಕೆ, ಪಕ್ಷಕ್ಕೆ ನಿಷ್ಠೆ ಉಳ್ಳವರು. ಯಾವತ್ತೂ ವ್ಯಕ್ತಿ ಪೂಜೆ ಮಾಡಬಾರದು, ಪಕ್ಷದ ಪೂಜೆ

ಸಿದ್ದರಾಮಯ್ಯ ಸಿ ಎಲ್ ಪಿ ನಾಯಕ, ಗೌರವ ಕೊಡಲೇ ಬೇಕು ➤ ಸಚಿವ ಡಿಕೆಶಿವಕುಮಾರ್ ಹೇಳಿಕೆ Read More »

ಕರಾವಳಿ

ಮೊಬೈಲ್ ಸೇವೆಯಲ್ಲಿ ವ್ಯತ್ಯಯ ➤ಬೇಸತ್ತ ಹರಿಹರ ಪಳ್ಳತ್ತಡ್ಕ ಗ್ರಾಮಸ್ಥರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂನ್.19.ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌ ಮೊಬೈಲ್‌ ಟವರ್‌ ಹರಿಹರ ಪಳ್ಳತ್ತಡ್ಕ ಗ್ರಾಮದಲ್ಲಿ ಕಳೆದ 8 ತಿಂಗಳಿಂದ ಸರಿಯಾಗಿ ಕಾರ್ಯಾಚರಿಸುತ್ತಿರಲಿಲ್ಲ. ಇದರಿಂದ ಬೇಸತ್ತ ಹರಿಹರ ಪಳ್ಳತ್ತಡ್ಕ ಗ್ರಾಮಸ್ಥರು ಮಂಗಳವಾರ ಮೊಬೈಲ್‌ ಟವರಿಗೆ ತರಕಾರಿ ಗಿಡಗಳನ್ನು ಹಬ್ಬಿಸುವ ಮೂಲಕ ವಿನೂತನ ಶೈಲಿಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಟವರ್‌ನ ಸಿಗ್ನಲ್‌ ಸಮಸ್ಯೆ ಸರಿಪಡಿಸುವಂತೆ ಗ್ರಾಮಸ್ಥರು ಅನೇಕ ಬಾರಿ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸರಿಯಾಗಿರಲಿಲ್ಲ. ಇದಕ್ಕೆ ಬೇಸತ್ತ ಗ್ರಾಮಸ್ಥರು ಉಪಯೋಗಕ್ಕೆ ಬಾರದ ಮೊಬೈಲ್‌ ಟವರಿಗೆ ತರಕಾರಿ ಗಿಡಗಳನ್ನು

ಮೊಬೈಲ್ ಸೇವೆಯಲ್ಲಿ ವ್ಯತ್ಯಯ ➤ಬೇಸತ್ತ ಹರಿಹರ ಪಳ್ಳತ್ತಡ್ಕ ಗ್ರಾಮಸ್ಥರಿಂದ ಪ್ರತಿಭಟನೆ Read More »

ಕರಾವಳಿ
Scroll to Top