Kadaba News

ಫ್ರೆಂಚ್ ಓಪನ್ ಟೆನಿಸ್ ಗೆ ಮಳೆಯಿಂದ ಅಡಚಣೆ

(ನ್ಯೂಸ್ ಕಡಬ) newskadaba.comಫ್ರೆಂಚ್(ಪ್ಯಾರಿಸ್), ಜೂನ್.6. ಬುಧವಾರದಂದು ನಡೆಯಬೇಕಾಗಿದ್ದ ಫ್ರೆಂಚ್‌ ಓಪನ್‌ ಟೆನಿಸ್‌ ಪಂದ್ಯಾವಳಿಗೆ ಭಾರೀ ಮಳೆ ಯಿಂದ ಅಡ ಚಣೆಯಾಗಿದೆ.  ಸಂಪೂರ್ಣವಾಗಿ ಕೊನೆಗೊಳಿಸುವ ಹಂತಕ್ಕೆ ತಲುಪಿತ್ತು. ಬೆಳಗ್ಗಿನಿಂದಲೂ ಪ್ಯಾರಿಸ್‌ನಲ್ಲಿ ಮಳೆ ಸುರಿಯುತ್ತಲೇ ಇತ್ತು. ಸಂಜೆಯ ತನಕವೂ ಆಟ ಆರಂಭವಾಗುವ ಸೂಚನೆ ಲಭಿಸಿಲ್ಲ. ಹೀಗಾಗಿ ಕ್ವಾರ್ಟರ್‌ ಫೈನಲ್‌ ಪಂದ್ಯಗಳೆಲ್ಲವೂ ಸ್ಥಗಿತಗೊಂಡವು.ಬುಧವಾರದ ಪಂದ್ಯ ಸಂಪೂರ್ಣವಾಗಿ 2000ದ ಬಳಿಕ ಮೂರನೇ ಬಾರಿ ಫ್ರೆಂಚ್‌ ಓಪನ್‌ ಪಂದ್ಯಾವಳಿ ಇಂಥದೊಂದು ಸಂಕಟಕ್ಕೆ ಸಿಲುಕಿದಂತಾಗುತ್ತದೆ. 2016ರಲ್ಲೊಮ್ಮೆ ದಿನದ ಪೂರ್ತಿ ಆಟ ಮಳೆಯಿಂದ ನಿಂತು ಹೋಗಿತ್ತು.

ಫ್ರೆಂಚ್ ಓಪನ್ ಟೆನಿಸ್ ಗೆ ಮಳೆಯಿಂದ ಅಡಚಣೆ Read More »

ಕ್ರೀಡಾ ನ್ಯೂಸ್

ಕರಾವಳಿ ಪ್ರದೇಶದಲ್ಲಿಈದುಲ್ ಫಿತ್ರ ಹಬ್ಬದ ಸಂರ್ಭಮಾಚರಣೆ

(ನ್ಯೂಸ್ ಕಡಬ) newskadaba.comಮಂಗಳೂರು, ಜೂನ್.6. ಈದುಲ್ ಫಿತ್ರ ಇದು ಮುಸಲ್ಮಾನ್ ಭಾಂದವರ ಶ್ರೇಷ್ಠ ಹಬ್ಬ ಎಲ್ಲೆಲ್ಲು ಸಂಭ್ರಮ ಸಡಗರ.ಶವ್ವಾಲ್‌ ತಿಂಗಳ ಆರಂಭದ ದಿನವಾದ ಬುಧವಾರದಂದು ಮುಸ್ಲಿಮರು ಈದುಲ್‌ ಫಿತ್ರ ಹಬ್ಬವನ್ನು ಮಂಗಳೂರು ಸಹಿತ ದಕ್ಷಿಣ ಕನ್ನಡ, ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಿದರು. ಕರಾವಳಿ ಜಿಲ್ಲೆಗಳ ಎಲ್ಲ ಪ್ರಮುಖ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ನಮಾಝ್, ಧರ್ಮ ಗುರುಗಳು ಈದ್‌ ಸಂದೇಶ ಮತ್ತು ಪ್ರವಚನ ನೀಡಿದರು. ಪ್ರಮುಖ ಮಸೀದಿಗಳಲ್ಲಿ ಸೌಹಾರ್ದ ಸಭೆ ನಡೆಯಿತು.ಈದುಲ್‌ ಫಿತ್ರ ಹಬ್ಬವು ಕುಟುಂಬ,

ಕರಾವಳಿ ಪ್ರದೇಶದಲ್ಲಿಈದುಲ್ ಫಿತ್ರ ಹಬ್ಬದ ಸಂರ್ಭಮಾಚರಣೆ Read More »

ಕರಾವಳಿ

ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳಿಂದ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.6.ಬುದವಾರದಂದು ವಿಶ್ವಪರಿಸರ ದಿನದ ಪ್ರಯುಕ್ತ ವಲಯ ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳು ಮಸೀದಿಗಳಲ್ಲಿ ಗಿಡ ನೆಟ್ಟು ಪರಿಸರ ಉಳಿಸಿ ಎಂಬ ಸಂದೇಶವನ್ನು ಸಾರಿದರು. ಅರಣ್ಯ ಇಲಾಖೆಯಿಂದ ಕಲ್ಲಗುಡ್ಡೆ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್‌ನಲ್ಲಿ ಪಶ್ಚಿಮಘಟ್ಟದ ವಿಶೇಷ ಜಾತಿಯ ಗಿಡ ನೆಟ್ಟು ಸಾಂಕೇತಿಕವಾಗಿ ಪರಿಸರ ದಿನವನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ, ಹಸುರು ಉಳಿವಿಗೆ ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರೂ ಕೈಜೋಡಿಸಬೇಕು. ಈಗಾಗಲೇ ಅರಣ್ಯ ಇಲಾಖೆಯಿಂದ ಈ ಬಾರಿ ಪಶ್ಚಿಮ

ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳಿಂದ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಸಕಾಲಕ್ಕೆ ಮಳೆ ಬಾರದೆ ಅನೇಕ ಕಡೆಗಳಲ್ಲಿನೀರಿನ ಅಭಾವ➤ಟ್ಯಾಂಕರ್ ಗಳ ಮುಕಾಂತರ ನೀರು ಪೂರೈಕೆ

(ನ್ಯೂಸ್ ಕಡಬ) newskadaba.com ಗುರುಪುರ, ಜೂನ್.6.ಸಕಾಲಕ್ಕೆ ಮಳೆ ಬಾರದೆ ಅನೇಕ ಕಡೆಗಳಲ್ಲಿನೀರಿನ ಅಭಾವ ಉಂಟಾಗಿದೆ.ಬೋರ್‌ವೆಲ್‌ನಲ್ಲಿ ನೀರು ಸಿಗದ ಕಾರಣ ಗಂಜಿಮಠ ಪಂ.ವ್ಯಾಪ್ತಿಯ ಸುರಲ್ಪಾಡಿ, ಕೈಕಂಬ ಪ್ರದೇಶಗಳಿಗೆ ಟ್ಯಾಂಕರ್‌ನಿಂದ ನೀರು ಸರಬರಾಜು ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅನೇಕ ಮನೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಮಳೆ ಬಾರದೇ ಇದ್ದರೆ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.  ಮಳೆ ಕಡಿಮೆಯಾದ ಹಿನ್ನೆಲೆ ಯಲ್ಲಿ ಬೋರ್‌ವೆಲ್‌ನಲ್ಲಿ ನೀರು ಕಡಿಮೆಯಾಗಿದ್ದು, ಮೊದಲೇ ನೀರು ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದ ಕಾರಣ ಕೆಲವೆಡೆ ಟ್ಯಾಂಕರ್‌ ನೀರು ಪೂರೈಸಲಾಗುತ್ತಿತ್ತು. ಈಗ

ಸಕಾಲಕ್ಕೆ ಮಳೆ ಬಾರದೆ ಅನೇಕ ಕಡೆಗಳಲ್ಲಿನೀರಿನ ಅಭಾವ➤ಟ್ಯಾಂಕರ್ ಗಳ ಮುಕಾಂತರ ನೀರು ಪೂರೈಕೆ Read More »

ಕರಾವಳಿ

ಕೈ ಅತೃಪ್ತನಾಯಕರಿಗೆ ಬಹಿರಂಗವಾಗಿ ಬಿಜೆಪಿಗೆ ಆಹ್ವಾನ➤ರಾಜ್ಯ ಬಿಜೆಪಿ ಉಸ್ತುವಾರಿ ಸಚಿವರ ವಿರುದ್ದ ರಾಜ್ಯ ಕಾಂಗ್ರೆಸ್ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.6.ಈಗಿನ ಬಿಜೆಪಿ ಉಸ್ತುವಾರಿ ಸಚಿವ ಮುರಳೀದರ್ ರಾವ್ ಅವರು ಬುಧವಾರ ನಡೆದ ಬಿಜೆಪಿ ಸಂಸದರ ಅಭಿನಂದನಾ ಸಭೆಯಲ್ಲಿ ಮೈತ್ರಿ ಸರ್ಕಾರದ ಶಾಸಕರನ್ನು ಬಹಿರಂಗವಾಗಿಯೇ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿರುವುದಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಸಚಿವರ ವಿರುದ್ದ ರಾಜ್ಯ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌ ಬಹಿರಂಗವಾಗಿಯೇ ನೀವು ಮೈತ್ರಿ ಸರ್ಕಾರದ ಶಾಸಕರನ್ನು ಆಹ್ವಾನಿಸುತ್ತಿದ್ದೀರಿ. ನಿಮ್ಮ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ, ಆಪರೇಷನ್‌ ಕಮಲದ ಕುದುರೆ ವ್ಯಾಪಾರವು ವಿಫ‌ಲ

ಕೈ ಅತೃಪ್ತನಾಯಕರಿಗೆ ಬಹಿರಂಗವಾಗಿ ಬಿಜೆಪಿಗೆ ಆಹ್ವಾನ➤ರಾಜ್ಯ ಬಿಜೆಪಿ ಉಸ್ತುವಾರಿ ಸಚಿವರ ವಿರುದ್ದ ರಾಜ್ಯ ಕಾಂಗ್ರೆಸ್ ಆಕ್ರೋಶ Read More »

ರಾಷ್ಟ್ರೀಯ ನ್ಯೂಸ್

ಕೈ ಅತೃಪ್ತನಾಯಕರಿಗೆ ಬಿಜೆಪಿಗೆ ಬರಲು ಆಹ್ವಾನ ➤ಉಸ್ತುವಾರಿ ಸಚಿವ ಮುರಳೀಧರರಾವ್ ಪರೋಕ್ಷ ಗಾಳ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.6. ಅರಮನೆ ಮೈದಾನದಲ್ಲಿ ಬುಧವಾರದಂದು ನಡೆದ ಸಭೆಯಲ್ಲಿ ಬಿಜೆಪಿ ಸಂಸದರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಅ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್‌, ಕಾಂಗ್ರೆಸ್‌ ಬಿಟ್ಟು ನಮ್ಮಲ್ಲಿ ಬಂದವರಿಗೆ ಏನು ಸಿಗಲಿದೆ ಎಂಬುದಕ್ಕೆ ಸಂಸದ ಡಾ.ಉಮೇಶ್‌ ಜಾಧವ್‌ ಅವರೇ ಉದಾಹರಣೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ನ ಅತೃಪ್ತ ಶಾಸಕರಿಗೆ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ. ಪಕ್ಷ ತೊರೆದು ಬಿಜೆಪಿಗೆ ಬಂದರೆ ಇಲ್ಲಿ ಶೇ.100ರಷ್ಟು ಫ‌ಲಿತಾಂಶ ಖಾತರಿ ಇರಲಿದೆ. ಕಾಂಗ್ರೆಸ್‌ನಲ್ಲಿ ಇದ್ದರೆ ಯಾವುದೇ

ಕೈ ಅತೃಪ್ತನಾಯಕರಿಗೆ ಬಿಜೆಪಿಗೆ ಬರಲು ಆಹ್ವಾನ ➤ಉಸ್ತುವಾರಿ ಸಚಿವ ಮುರಳೀಧರರಾವ್ ಪರೋಕ್ಷ ಗಾಳ Read More »

ರಾಷ್ಟ್ರೀಯ ನ್ಯೂಸ್

ಮಳೆಗಾಗಿ ದೇಗುಲದಲ್ಲಿ ಸರ್ಕಾರದ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com  ಚಿಕ್ಕಮಗಳೂರು, ಜೂನ್.5. ಸರ್ಕಾರದ ವತಿಯಿಂದ ಋಷ್ಯಶೃಂಗ ದೇಗುಲದಲ್ಲಿ ನಾಳೆ ಗುರುವಾರ ವಿಶೇಷ ಪೂಜೆ ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿ ಹೋಮಗಳು  ಪೂಜೆಗಳನ್ನು ನಡೆಸಲಾಗುತ್ತಿದೆ.ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಪಿ.ಟಿ.ಪರಮೇಶ್ವರ್‌ ನಾಯ್ಕ್‌ ಅವರು ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಲಿದ್ದಾರೆ. ಬೆಳೆ ಆಗುವಂತೆ ಪ್ರಾರ್ಥಿಸಿ ಭಕ್ತರು ಕ್ಷೇತ್ರಕ್ಕೆ ಬಂದು ಪೂಜಾಕೈಂಕರ್ಯಗಳನ್ನು ನೆರವೇರಿಸುವುದು ಹಿಂದಿನಿಂದಲೂ ನಡೆದು ಬಂದಿದೆ. ಪುರಾಣದಲ್ಲಿ ಕಶ್ಯಪ ಬ್ರಹ್ಮನ ಮೊಮ್ಮಗನಾದ ಮಹರ್ಷಿ ಋಷ್ಯಶೃಂಗರು ಮೋಡಗಳನ್ನು ಆಕರ್ಷಿಸಿ ಮಳೆ ತರಿಸುವ ವಿಶಿಷ್ಟ ಶಕ್ತಿಯಿದ್ದ ಕಾರಣಕ್ಕೆ ಈ ಕ್ಷೇತ್ರ ಹೆಸರಾಗಿದೆ. ಸಕಾಲಕ್ಕೆ ಮಳೆ

ಮಳೆಗಾಗಿ ದೇಗುಲದಲ್ಲಿ ಸರ್ಕಾರದ ವಿಶೇಷ ಪೂಜೆ Read More »

ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ಪತ್ತೆಯಾದ ನಿಫಾ ವೈರಸ್ ➤ದಕ್ಷಿಣ ಕನ್ನಡದಲ್ಲೂ ಮುಂಜಾಗ್ರತಾಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಕೇರಳದ ವಿದ್ಯಾರ್ಥಿಯೊಬ್ಬರಲ್ಲಿ ನಿಫಾ ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಗಡಿಯ ದಕ್ಷಿಣ ಕನ್ನಡದಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕೇರಳದಿಂದ ಮಂಗಳೂರಿಗೆ ಪ್ರತಿದಿನ ಹಲವರು ಸಂಚರಿಸುತ್ತಿರುತ್ತಾರೆ. ಅಲ್ಲದೆ ಇಲ್ಲಿನ ಆಸ್ಪತ್ರೆಗಳಿಗೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಾರೆ. ಅದ್ದರಿಂದ ಶಂಕಿತ ನಿಫಾ ವೈರಸ್‌ ಲಕ್ಷಣ ಗಳು ಕಂಡುಬಂದರೆ ತತ್‌ಕ್ಷಣ ಆರೋಗ್ಯ ಇಲಾಖೆಗೆ ತಿಳಿಸಬೇಕು ಎಂಬುದಾಗಿ ಜಿಲ್ಲೆಯ ಎಲ್ಲ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ.ಹಾಗೂ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ.ಕೇರಳದಿಂದ ಮಂಗಳೂರಿಗೆ ಬಹುತೇಕ ಮಂದಿ ರೈಲಿನಲ್ಲೇ

ಕೇರಳದಲ್ಲಿ ಪತ್ತೆಯಾದ ನಿಫಾ ವೈರಸ್ ➤ದಕ್ಷಿಣ ಕನ್ನಡದಲ್ಲೂ ಮುಂಜಾಗ್ರತಾಕ್ರಮ Read More »

ಕರಾವಳಿ

ಭಾರತದ ಅಗ್ರ ಬಾಕ್ಸಿಂಗ್ ಪಟು ಜತೆ ನೂತನ ಕ್ರೀಡಾ ಮಂತ್ರಿ

(ನ್ಯೂಸ್ ಕಡಬ) newskadaba.com ದೆಹಲಿ, ಜೂನ್.5.ನೂತನ ಕ್ರೀಡಾ ಮಂತ್ರಿ ಕಿರಣ್​​ ರಿಜಿಜು ಅವರು ಆರು ಬಾರಿ ವಿಶ್ವ ಚಾಂಪಿಯನ್​​ ಭಾರತದ ಅಗ್ರ ಬಾಕ್ಸಿಂಗ್​​ ಪಟು ಮೇರಿ ಕೋಮ್​​​ ಜತೆ ಬಾಕ್ಸಿಂಗ್​​​ ಪ್ರದರ್ಶನ ತೋರುವ ಮೂಲಕ ಕ್ರೀಡಾಭಿಮಾನಿಗಳ ಗಮನ ಸೆಳೆದಿದ್ದಾರೆ. ಮಂಗಳವಾರದಂದು ದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ರಿಜಿಜು ಅವರು ಬಾಕ್ಸಿಂಗ್​​​ ಕೈಚೀಲಗಳನ್ನು ಧರಿಸಿ ಮೇರಿಕೋಮ್​​​​ ಅವರೊಂದಿಗೆ ಬಾಕ್ಸಿಂಗ್​​ ಆಡುವ ರೀತಿಯಲ್ಲಿ ಪೋಟೋಗೆ ಪೋಸ್​​ ನೀಡಿದ್ದಾರೆ. ಬಳಿಕ ಕ್ರೀಡಾಂಗಣದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿದರು. ನಂತರ ಕ್ರೀಡಾ ಅಧಿಕಾರಿಗಳೊಂದಿಗೆ

ಭಾರತದ ಅಗ್ರ ಬಾಕ್ಸಿಂಗ್ ಪಟು ಜತೆ ನೂತನ ಕ್ರೀಡಾ ಮಂತ್ರಿ Read More »

ಕ್ರೀಡಾ ನ್ಯೂಸ್

ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು, 2019-20ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ, ಮತ್ತು ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನ ಜುಲೈ 31 ಆಗಿರುತ್ತದೆ. ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು ಇಂತಿವೆ: ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು

ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top