Kadaba News

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿ.20 ರವರೆಗೆ ಸಕಾಲ ಸಪ್ತಾಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿಸೆಂಬರ್ 14 ರಿಂದ 20 ರವರೆಗೆ ಸಕಾಲ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಅಗ್ನಿಶಾಮಕ ಇಲಾಖೆಯಲ್ಲಿ 05 ಸೇವೆಗಳನ್ನು ಸಕಾಲ ವ್ಯಾಪ್ತಿಯಲ್ಲಿ ತಂದಿದ್ದು, ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಇಲಾಖೆಯಲ್ಲಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಹೊಸ ಅರ್ಜಿಗಳನ್ನು ಸಕಾಲದಲ್ಲಿ ಸ್ವೀಕರಿಸಿ ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು. ಸಪ್ತಾಹದ ಅಂತ್ಯದಲ್ಲಿ ವಿಲೇವಾರಿ ಮಾಡಿರುವ ಅರ್ಜಿಗಳ ಕುರಿತು ಸಕಾಲ ಮಿಷನ್‍ಗೆ ವರದಿ ನೀಡಲಾಗುತ್ತದೆ. ಅಗ್ನಿಶಾಮಕ ಇಲಾಖೆಯಲ್ಲಿ […]

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿ.20 ರವರೆಗೆ ಸಕಾಲ ಸಪ್ತಾಹ Read More »

ಕರ್ನಾಟಕ

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿತ್ತು. ಸಭಾಪತಿ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು. ಇಂದು ಬೆಳಗ್ಗೆ 11.10ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಸ್ಥಾನದಲ್ಲಿ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡ ಕುಳಿತಿದ್ದದನ್ನು ಕಂಡು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಅವರನ್ನು ಎಬ್ಬಿಸಿ ಎಳೆದೊಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ, ತಳ್ಳಾಟ

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ Read More »

ಕರ್ನಾಟಕ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ➤ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳ ಹಂಚಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಪ್ರಸ್ತುತ ಸಾಲಿನ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ಕರ್ನಾಟಕಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ಅಧಿನಿಯಮ, 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆ ಮೇಲೆ ಪಕ್ಷದ ಬಾವುಟ, ಬ್ಯಾನರ್‍ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ➤ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳ ಹಂಚಿಕೆ Read More »

ಕರಾವಳಿ, ಕರ್ನಾಟಕ

ಬಾಲಕಾರ್ಮಿಕ ಯೋಜನಾ ಸಂಘ ➤ ಅಪಾರ್ಟ್‍ಮೆಂಟ್‍, ಹೋಟೆಲ್, ಗ್ಯಾರೇಜ್‍ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ)ಕಾಯ್ದೆ-1986ರನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000/-ದವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್‍ನ್ನು ಸಹ

ಬಾಲಕಾರ್ಮಿಕ ಯೋಜನಾ ಸಂಘ ➤ ಅಪಾರ್ಟ್‍ಮೆಂಟ್‍, ಹೋಟೆಲ್, ಗ್ಯಾರೇಜ್‍ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ  Read More »

ಕರಾವಳಿ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.15: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಇಬ್ಬರು ಮಹಿಳೆಯರೂ ಸೇರಿದಂತೆ ಮೂವರು ಆರೋಪಿತರನ್ನು ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಪತ್ತೆಹಚ್ಚಿದೆ. ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಪಡೆದಿದ್ದ ಬಾಡಿಗೆ ಮನೆಯಲ್ಲಿ  ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತಪಡಿಸಿಕೊಂಡ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ಬಂದ ಮಾಹಿತಿಯಂತೆ ನಡೆಸಿದ ಕಾರ್ಯಾಚರಣೆ ಯಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಬಂಧಿತರನ್ನು ಜನಾರ್ದನ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ Read More »

ಕರಾವಳಿ

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಡಿ.15:ಪವಿತ್ರ ಸುಪ್ರಸಿದ್ದ ನಾಗಕ್ಷೇತ್ರದಲ್ಲಿ ಷಷ್ಠಿ ಸಂಭ್ರಮ ಮನೆ ಮಾಡಿದೆ. ಡಿ,11ರಿಂದ ಮೂಲ ಮೃತಿಕಾ ಪ್ರಸಾದ ತೆಗೆಯುವ ಮೂಲಕ ಆರಂಭಗೊಂಡಿದೆ.ಇನ್ನು ಕಳೆದ ದಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವವು ಯಶಸ್ವಿಯಾಗಿ ಮೂಡಿ ಬಂದಿದೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಲಕ್ಷದೀಪೋತ್ಸವವು ಯಶಸ್ವಿಗೊಳಿಸಿದ್ದಾರೆ. ಕುಕ್ಕೆ ಶ್ರೀ ದೇವಳದ ಹೊರಾಂಗಣದಲ್ಲಿ ಶ್ರೀ ಸುಬ್ರಹ್ಮಣ್ಯನನ್ನು ಪಲ್ಲಕ್ಕಿಯಲ್ಲಿ ಸುತ್ತುಗಳನ್ನು ಮುಗಿಸಿ, ಬಳಿಕ ರಥದೊಂದಿಗೆ ಬೀದಿಗಿಳಿದು ಹಲವು ಕಟ್ಟೆ ಪೂಜೆಗಳನ್ನು ಮುಗಿಸಿಕೊಂಡು ಕಾಶಿ ಕಟ್ಟೆ ಶ್ರೀ ಗಣಪತಿ ದೇವಸ್ಥಾನಕ್ಕೆ ತೆರಳಿ

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಶಬರಿಮಲೆ, ಡಿ.15: ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿ ಮಲೆ ದರ್ಶನಕ್ಕೆ ಅವಕಾಶ ಇರಲಿದೆ. ಪ್ರಥಮವಾಗಿ ಪ್ರತಿ

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ Read More »

ಕರಾವಳಿ

ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15:ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.   ಪೋಷಕರು ತಮ್ಮ ಮಕ್ಕಳನ್ನು ಮರುದಾಖಲಾತಿ ಮಾಡುವುದರಿಂದ ರಾಜ್ಯದ ಶಾಲೆಗಳಲ್ಲಿ ತರಗತಿವಾರು ಮಕ್ಕಳ ದಾಖಲಾತಿ ಸಂಖ್ಯೆ ಲೆಕ್ಕಕ್ಕೆ ದೊರೆಯಲಿದ್ದು, ಅದು ಮುಂದಿನ ತರಗತಿಗಳಿಗೆ ಮಕ್ಕಳನ್ನು ಉತ್ತೀರ್ಣಗೊಳಿಸಲು ಅನುವಾಗಲಿದೆ. ಮಕ್ಕಳ ಮರು ದಾಖಲಾತಿಗೆ

ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ.15: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ, ಸಡಗರಕ್ಕೆ ತೆರೆ ಬಿದ್ದಿದೆ.ಲಕ್ಷದೀಪೋತ್ಸವದ ಅಂಗವಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ನಾನಾ ವಿಷಯ ಮಂಥನದ 88ನೇ ಸಾಹಿತ್ಯ ಸಮ್ಮೇಳನವೂ ನಡೆಯಿತು.   ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸಾಹಿತ್ಯ ಸಮ್ಮೇಳನ ನಡೆದಿದ್ದು, ಹಿರಿಯ ವಿದ್ವಾಂಸ, ವೇದಭೂಷಣ ಡಾ.ಎಸ್. ರಂಗನಾಥ್ ಉದ್ಘಾಟಿಸಿದರು.ಲಕ್ಷದೀಪೋತ್ಸವ ಈ ಬಾರಿ ಕೊರೊನಾ ಆತಂಕದ ನಡುವೆಯೂ ನಡೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ Read More »

ಕರಾವಳಿ

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ

(ನ್ಯೂಸ್ ಕಡಬ) newskadaba.com ಕಬಕ, ಡಿ.15: ಕಬಕ ಬಳಿ ಡಿವೈಡರ್‍ಗೆ ಬೈಕ್ ಹೊಡೆದ ಪರಿಣಾಮ ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಇಂದು (ಡಿ15) ಮುಂಜಾನೆ ನಡೆದಿದೆ. ಮೃತ ಪಟ್ಟವರನ್ನು ಆರ್‍ಎಸ್‍ಎಸ್ ನ ಹಿರಿಯ ಕಾರ್ಯಕರ್ತ ಬಂಟ್ವಾಳದ ನಿವಾಸಿ ವೆಂಕಟರಮಣ ಹೊಳ್ಳ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ ಸಂಭವಿಸಿದೆ.

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ Read More »

ಕರಾವಳಿ
Scroll to Top