Kadaba News

ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಡಬ, ಫೆ.11.ಸುಬ್ರಹ್ಮಣ್ಯ ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿಯೊಬ್ಬರು ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಸುಳ್ಯತಾಲೂಕು ಏನೆಕಲ್ಲು  ಗ್ರಾಮ ಅಲೆಪ್ಪಾಡಿ ನಿವಾಸಿಯಾದ  ಚಿನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಚಿನ್ನಪ್ಪ ಗೌಡರು ಸುಮಾರು ದಿನಗಳ ಹಿಂದೆ ಕುಡಿಯುವ ನೀರಿಗಾಗಿ ಬೋರವೆಲ್ ತೆಗೆಸಿದ್ದರು.ಆದರೆ ಬೋರವೆಲ್ ನಲ್ಲಿ ನೀರು ದೊರೆತಿರಲಿಲ್ಲ.ಇದರಿಂದ ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಆಪರೇಷನ್ ಆಡಿಯೋದ ಬಗ್ಗೆ ಚಾಟಿ ಬೀಸಿದ ಸ್ಪೀಕರ್ ➤ಸದನದಲ್ಲಿ ಭಾವುಕರಾದ ರಮೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.11. ಆಪರೇಷನ್ ಆಡಿಯೋ ಕುರಿತು ವಿಧಾನಸಭಾ ಕಲಾಪದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.ಆಪರೇಷನ್ ಆಡಿಯೋವನ್ನು ನನ್ನ ಗಮನಕ್ಕೆ ತಂದ ಸಿಎಂ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳು. ಸದನದ ಎಲ್ಲ ಸದಸ್ಯರಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಗೌರವ ಪೂರಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಅಪಚಾರವಾಗುವಂತೆ ನೀವು ನಡೆದುಕೊಳ್ಳಬಾರದು. ದೌರ್ಭಾಗ್ಯಕ್ಕೆ ಆಪರೇಷನ್ ಡೀಲ್‍ನಲ್ಲಿ ಮಾತನಾಡಿರುವವರು ನನ್ನ ಹೆಸರು ಪ್ರಸ್ತಾಪಿಸಿದ್ದಾರೆ. ಶಾಸಕರು ರಾಜೀನಾಮೆ ನೀಡಿದರೆ ತಕ್ಷಣವೇ ಒಪ್ಪಿಕೊಳ್ಳಲು ಸ್ಪೀಕರ್ ಗೆ 50 ಕೋಟಿ ನೀಡಿ ಸರಿಮಾಡಿಕೊಂಡಿದ್ದೇವೆ ಎಂದು ಆಡಿಯೋದಲ್ಲಿ

ಆಪರೇಷನ್ ಆಡಿಯೋದ ಬಗ್ಗೆ ಚಾಟಿ ಬೀಸಿದ ಸ್ಪೀಕರ್ ➤ಸದನದಲ್ಲಿ ಭಾವುಕರಾದ ರಮೇಶ್ ಕುಮಾರ್ Read More »

ಕರ್ನಾಟಕ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಫೆ.11.ಪ್ರತೀ ವರ್ಷ ಫೆಬ್ರವರಿ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ. ಇದೊಂದು ದೇಶದ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಲಕ್ಷಾಂತರ ಮಕ್ಕಳನ್ನು ಏಕಕಾಲಕ್ಕೆ ಅತ್ಯಂತ ಕಡಿಮೆ ಅವಧಿಯಲ್ಲಿ ತಲುಪುವ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು Read More »

ಕರಾವಳಿ

ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಫೆ.9ರಂದು ಪ್ರಾರಂಭಗೊಂಡಿದ್ದು, ಗ್ರಾಮಸ್ಥರಿಂದ ಹೊರೆ ಕಾಣಿಕೆ ಸಮರ್ಪಣೆ ನಡೆಯಿತು.ಸಂಜೆ ಗ್ರಾಮಸ್ಥರಿಂದ ಕಾಣಿಕೆ ಹುಂಡಿ ಸಮರ್ಪಣೆ, ಬಳಿಕ ಶ್ರೀ ಉಮಾಮಹೇಶ್ವರೀ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಪ್ರಾರ್ಥನೆ, ಪುಣ್ಯಾಹ, ಪ್ರಾಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಪೂಜೆ ನಡೆದು ಮಹಾಪೂಜೆ ನಡೆಯಿತು. ಫೆ.9ರಂದು ಬೆಳಿಗ್ಗೆ ಉಮಾಮಹೇಶ್ವರಿ ಸೇವಾ ಟ್ರಸ್ಟ್‍ನ ಅಧ್ಯಕ್ಷ ಕೆ. ಚಿತ್ತರಂಜನ್ ರೈ ಮಾಣಿಗ,

ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ Read More »

ಕರಾವಳಿ

ಖಾಸಗಿ ನೆಟ್ ವರ್ಕ್ ಕಂಪನಿಗಳಿಗೆ ಸೆಡ್ಡು ಹೊಡೆದ BSNL ➤ತನ್ನ ಗ್ರಾಹಕರಿಗೆ ಬಂಪರ್ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಫೆ.09.BSNL ಹೊಸ ಗ್ರಾಹಕರನ್ನು ಸೆಳೆದುಕೊಳ್ಳುವ ಸಲುವಾಗಿ ನಿರಂತರವಾಗಿ ತನ್ನ ಪ್ಲಾನ್ ಗಳಲ್ಲಿ ಬದಲಾವಣೆ ತರುತ್ತಿದೆ. ಇದೀಗ ಕಂಪೆನಿಯು 525 ಹಾಗೂ 725 ರೂಪಾಯಿ ಪ್ಯಾಕ್ ಗಳಲ್ಲಿ ಬದಲಾವಣೆ ತಂದಿದೆ. ಇವೆರಡೂ ಪೋಸ್ಟ್ ಪೇಯ್ಡ್ ಪ್ಲಾನ್ ಎಂಬುವುದು ಗಮನಾರ್ಹ ಬದಲಾವಣೆಯಾಗಿದೆ.525 ರೂಪಾಯಿ ಪ್ಲಾನ್ ನಡಿಯಲ್ಲಿ 40 ಜಿಬಿ ಡೇಟಾದೊಂದಿಗೆ ಯಾವುದೇ FUP ಮಿತಿ ಇಲ್ಲದ ಅನಿಯಮಿತ ಕರೆ, 100 ಎಸ್ ಎಂ ಎಸ್ ನೀಡುವುದರೊಂದಿಗೆ ಹಾಗೂ ಅಮೆಜಾನ್ ಪ್ರೈಮ್ ನಲ್ಲಿ ಉಚಿತವಾಗಿ ಚಂದಾದಾರರಾಗುವ

ಖಾಸಗಿ ನೆಟ್ ವರ್ಕ್ ಕಂಪನಿಗಳಿಗೆ ಸೆಡ್ಡು ಹೊಡೆದ BSNL ➤ತನ್ನ ಗ್ರಾಹಕರಿಗೆ ಬಂಪರ್ ಆಫರ್ Read More »

ಕರಾವಳಿ

ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯದ ಸಮಿತಿಯಿಂದ “ಬಜೆಟ್ ವಿರೋಧಿ” ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಫೆ.09.ರಾಜ್ಯದಲ್ಲಿ ಶಿಕ್ಷಣ ಸಚಿವರನ್ನು ನೇಮಿಸದೆ ಬಜೆಟ್ ಮಂಡಿಸಿದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯ ಸಮಿತಿ ಉಪ್ಪಿನಂಗಡಿ ಬಸ್ ನಿಲ್ದಾಣದ ಸರ್ಕಲ್ ಬಳಿ ಪ್ರತಿಭಟನೆ ನಡೆಸಿತು.ಈ ವೇಳೆ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ, ಶಿಕ್ಷಣ ಸಚಿವರಾದ ಎನ್. ಮಹೇಶ್ ರವರು ರಾಜೀನಾಮೆ ನೀಡಿ ನಾಲ್ಕು ತಿಂಗಳುಗಳೇ ಕಳೆಯಿತು. ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದರೂ ಶಿಕ್ಷಣ ಇಲಾಖೆಗೆ ಇನ್ನೂ ಸಚಿವರನ್ನು ನೇಮಿಸಿಲ್ಲ.

ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯದ ಸಮಿತಿಯಿಂದ “ಬಜೆಟ್ ವಿರೋಧಿ” ಪ್ರತಿಭಟನೆ Read More »

ಕರಾವಳಿ

ಕೊೈಲ ಗ್ರಾಮಸಭೆ

(ನ್ಯೂಸ್ ಕಡಬ) newskadaba.comಕಡಬ,ಫೆ.09. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ  ಅಳವಡಿಸಲಾಗಿರುವ ದಾರಿದೀಪಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ಲೋಪ ಎಸೆಗಲಾಗಿದೆ ಎಂದು ಆರೋಪ ವ್ಯಕ್ತವಾದ ಘಟನೆ ಕೊೈಲ ಗ್ರಾಮ ಸಭೆಯಲ್ಲಿ ನಡೆದಿದೆ.   ಸಭೆ ಗ್ರಾ.ಪಂ.ಅಧ್ಯಕ್ಷೆ ಹೇಮಾ ಎಂ.ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ತಾ.ಪಂ.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್‍ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.   ಗ್ರಾ.ಪಂ.ವತಿಯಿಂದ ಸೋಲಾರ್ ದಾರಿದೀಪ ನಿಯಮಾನುಸಾರ ಅಳವಡಿಕೆಯಾಗಿಲ್ಲ. ಅಳವಡಿಸಿರುವ ಸೋಲಾರ್ ದಾರಿದೀಪಗಳು ಗುಣಮಟ್ಟದಿಂದ ಇಲ್ಲ ಅಲ್ಲದೆ ಟೆಂಡರ್ ಪ್ರಕ್ರಿಯೆಯ ನಿಗದಿತ ದಿನದೊಳಗೆ ಪೂರ್ಣಗೊಳಿಸಿ ಕಂಪೆನಿಯೊಂದಕ್ಕೆ ಟೆಂಡರ್  ನೀಡಲಾಗಿದೆ

ಕೊೈಲ ಗ್ರಾಮಸಭೆ Read More »

ಕರಾವಳಿ

ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು► ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.08. ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಿಂದ ವರದಿಯಾಗಿದೆ.ಮೃತ ಪಟ್ಟ ಯುವಕನನ್ನು ಪುತ್ತೂರು ತಾಲೂಕು ಬಾಳ್ನಾಡು ಗ್ರಾಮ ಉಜುರು ಮನೆ ಪಂಜಳ ನಿವಾಸಿಯಾದ  ಹರೀಶ ಎಂದು ಗುರುತಿಸಲಾಗಿದೆ.   ಮೃತಪಟ್ಟ ವ್ಯಕ್ತಿಯು ಪಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆಂದು ಹೋಗಿದ್ದರು. ದೇವಸ್ಥಾನದ ಹತ್ತಿರ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ

ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು► ಯುವಕನೋರ್ವ ಮೃತ್ಯು Read More »

ಕರಾವಳಿ

ರಾಷ್ಟ್ರೀಯ ಕೃಷಿ ವಿಜ್ಞಾನಿಗಳಿಂದ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.08.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆಂಗಿನ ಮರಗಳಿಗೆ ಬಿಳಿನೊಣದ ಬಾಧೆ ಕಂಡುಬಂದಿದ್ದು ಕೆಲವು ಮರಗಳಲ್ಲಿ ಈ ಬಾಧೆ ತೀವ್ರವಾಗಿರುತ್ತದೆ. ಆದುದರಿಂದ ಈ ಕೀಟ ಬಾಧೆಯ ಲಕ್ಷಣ, ಬಾಧೆಯ ಪರಿಣಾಮಗಳು ಹಾಗೂ ಸದರಿ ಕೀಟ ನಿಯಂತ್ರಣ ಕುರಿತು ರಾಷ್ಟ್ರೀಯ ಕೃಷಿ ವಿಜ್ಞಾನಿಗಳಿಂದ ತರಬೇತಿ ಹಾಗೂ ಪ್ರಾತ್ಯಕ್ಷತೆ ಕಾರ್ಯಕ್ರಮವನ್ನು ಫೆಬ್ರವರಿ 16 ರಂದು ಪೂರ್ವಾಹ್ನ 10.30 ಗಂಟೆಗೆ ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ, ಮಂಗಳೂರು ಇಲ್ಲಿ ಏರ್ಪಡಿಸಲಾಗಿದೆ.ಆಸಕ್ತ ತೆಂಗು ಬೆಳೆಗಾರರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಉಪನಿರ್ದೇಶಕರು ತೋಟಗಾರಿಕೆ ಇಲಾಖೆ

ರಾಷ್ಟ್ರೀಯ ಕೃಷಿ ವಿಜ್ಞಾನಿಗಳಿಂದ ತರಬೇತಿ ಕಾರ್ಯಕ್ರಮ Read More »

ಕರಾವಳಿ

  ಉಪನಿರ್ದೇಶಕರ  ಬ್ಯಾಗ್‍ಲಾಗ್  ಹುದ್ದೆಗಾಗಿ► ನಿವೃತ್ತ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು , ಫೆ.08.ಕರ್ನಾಟಕ ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಲ್ಲಿ ಖಾಲಿ ಇರುವ ಐದು ಉಪನಿರ್ದೇಶಕರ  ಬ್ಯಾಗ್‍ಲಾಗ್  ಹುದ್ದೆಗಾಗಿ  ಸಶಸ್ತ್ರ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನಿಸಿದೆ.  ಅಭ್ಯರ್ಥಿಯು ನಿವೃತ್ತಿ ಹೊಂದಿದ ಕರ್ನಲ್ ರ್ಯಾಂಕ್ ಅಥವಾ ಸರಿಸಮಾನವಾದ ರ್ಯಾಂಕ್ ಹೊಂದಿರುವ ಭಾರತೀಯ ನೌಕಾ ಸೇನೆ, ಏರ್ ಫೋರ್ಸ್ ಸೇನೆಯಿಂದ ನಿವೃತ್ತಿ ಹೊಂದಿದ ಸೇನಾಧಿಕಾರಿ ಆಗಿರಬೇಕು. ಪರಿಶಿಷ್ಟ ಜಾತಿಗೆ 4 ಹುದ್ದೆಗಳು ಹಾಗೂ ಪರಿಶಿಷ್ಟ ಪಂಗಡಗಳಿಗೆ 1

  ಉಪನಿರ್ದೇಶಕರ  ಬ್ಯಾಗ್‍ಲಾಗ್  ಹುದ್ದೆಗಾಗಿ► ನಿವೃತ್ತ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top