Kadaba News

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 88ನೇ ಸರ್ವ ಧರ್ಮ ಸಮ್ಮೇಳನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.14: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ‌ ನಡೆಯುತ್ತಿದ್ದು, ಮೂರನೇ ದಿನದ ಅಂಗವಾಗಿ ಡಿ.13ರಂದು  88ನೇ ಸರ್ವ ಧರ್ಮ ಸಮ್ಮೇಳನ ಜರುಗಿತು. ವಸತಿ ಸಚಿವ ವಿ. ಸೋಮಣ್ಣ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ವಿಶ್ವದಲ್ಲೇ ಅತಿ ಶ್ರೇಷ್ಠ ಧಾರ್ಮಿಕ ಕೇಂದ್ರವಾಗಿದೆ. ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲರಿಗೂ ಆದರ್ಶಪ್ರಾಯರು. ಪ್ರಧಾನಿ ನರೇಂದ್ರ ಮೋದಿಯವರಿಗೂ ಡಾ.ಹೆಗ್ಗಡೆ ಯವರು ಅಚ್ಚುಮೆಚ್ಚಿನವರಾಗಿದ್ದಾರೆ.ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭಾರತ ರತ್ನ ಪುರಸ್ಕಾರ ಸಿಗಬೇಕೆಂಬುದು ಕೋಟ್ಯಂತರ […]

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 88ನೇ ಸರ್ವ ಧರ್ಮ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಡಿ.13 ರ ಕಳೆದ  ರಾತ್ರಿ ಸಮಯದಲ್ಲಿ ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದವೊಂದು ಕೇಳಿ ಬಂದಿದ್ದು ಜನರೆಲ್ಲ ಭಯಬೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಇನ್ನು ಕೆಲವರು ಶಬ್ದದ ಮೂಲ ಹುಡುಕಲು ಮುಂದಾಗಿದ್ದಾರೆ. ರಾತ್ರಿ ಸುಮಾರು ಹತ್ತು ಗಂಟೆ ವೇಳೆಗೆ ಭೂಮಿ ಬಾಯಿ ಬಿಟ್ಟಂತೆ ಭಾರೀ ಶಬ್ದವೊಂದು ಕೇಳಿ, ಹರಿಹರ ಪಲ್ಲತಡ್ಕದ ಮಂದಿಯೆಲ್ಲ ಮನೆಯಿಂದ ಹೊರ ಬಂದಿದ್ದಾರೆ.ನೆಲ ಅದುರಿದಂತೆ ಭಾಸವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು Read More »

ಕರಾವಳಿ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: ಸ್ಯಾಂಡಲ್​ವುಡ್​ ಕಂಡ ದಿಗ್ಗಜ ನಟ, ದಾದಾ, ಸಾಹಸಸಿಂಹ ವಿಷ್ಣುವರ್ಧನ್ ಅವರ ಬಗ್ಗೆ ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದ ತೆಲುಗು ನಟ ವಿಜಯ್ ರಂಗರಾಜು ಈಗ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ. ನನ್ನದು ತಪ್ಪಾಯಿತು. ಬಾಯಿತಪ್ಪಿ ಆರೀತಿ ಮಾತನಾಡಿದ್ದೆ. ನನ್ನನ್ನು ಕ್ಷಮಿಸಿಬಿಡಿ ಎಂದು ಕೈ ಮುಗಿದು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ವಿಜಯ್ ರಂಗರಾಜು ವಿಷ್ಟುದಾದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಬೆನ್ನಲ್ಲೇ ಅವರ ವಿರುದ್ಧ ಇಡೀ ಸ್ಯಾಂಡಲ್​ವುಡ್ ತಿರುಗಿಬಿದ್ದಿತ್ತು. ಕನ್ನಡದ ಕಿರಿಯ ಸ್ಟಾರ್ ನಟರಿಂದ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು Read More »

ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.13: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ ನೆರವೇರಲಿದೆ. ಇದಕ್ಕೆ ಸರ್ವ ಭಕ್ತರ ಸಹಕಾರ ಅಗತ್ಯ. ಲಕ್ಷ ದೀಪೋತ್ಸವದಂದು ಲಕ್ಷ ದೀಪಗಳು ಉರಿದು ಕ್ಷೇತ್ರವು ಹಣತೆ ಬೆಳಕಿನಿಂದ ಪ್ರಜ್ವಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್‌.ಅಂಗಾರ ಹೇಳಿದರು. ಶ್ರೀ ದೇವಳದ ಆಡಳಿತ ಕಚೇರಿ ಮೇಲ್ಮಹಡಿಯಲ್ಲಿ ಶನಿವಾರ ನಡೆದ ಸಾರ್ವಜನಿಕರ ಮತ್ತು ವರ್ತಕರ ಸಭೆಯಲ್ಲಿಅಧ್ಯಕ್ಷತೆ ವಹಿಸಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ Read More »

ಕರಾವಳಿ

ಡಿ.13ರ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಬಳ್ಪ, ಡಿ.13: ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.   ಹಿಂದೂ ಜಾಗರಣ ವೇದಿಕೆ ಬಳ್ಪ ಇದರ ಆಶ್ರಯದಲ್ಲಿ ಎ. ಜೆ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿರುವ ರಕ್ತದಾನ ಶಿಬಿರ ಡಿ.13ರ ಇಂದು ಬಳ್ಪದಲ್ಲಿ ನಡೆಯಲಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಆರಂಭಗೊಂಡಿದ್ದು ಸಂಜೆವರೆಗೆ ರಕ್ತದಾನ ಶಿಬಿರ ಬಳ್ಪದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿದೆ.    

ಡಿ.13ರ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್-19 ಅಂಕಿ ಅಂಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13: ಡಿ.12 ರ ವರದಿಯಂತೆ 53 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,325ಕ್ಕೆ ಏರಿಕೆಯಾಗಿದೆ. ಇನ್ನೂ ಡಿ.12 ರ ವರದಿಯಂತೆ 43 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 31,236ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕಳೆದ ದಿನ ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 732 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.      

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್-19 ಅಂಕಿ ಅಂಶ Read More »

ಕರಾವಳಿ

ಬಂಟ್ವಾಳ :ಪತಿಯ ನಾಮಪತ್ರ ತಿರಸ್ಕರಿಸುವಂತೆ ಪತ್ನಿಯಿಂದ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13:  ಗ್ರಾಪಂ ಚುನಾವಣೆ ಸಂದರ್ಭ ತನ್ನ ಪತಿ ಸಲ್ಲಿಸಿದ ನಾಮಪತ್ರವನ್ನು ತಿರಸ್ಕರಿಸಿ ಎಂದು ಪತ್ನಿಯೇ ಹೇಳಿದ ಪ್ರಕರಣ ಬಂಟ್ವಾಳ ತಾಲೂಕಿನ ಅನಂತಾಡಿ ಎಂಬಲ್ಲಿ ಡಿ.12 ರ ಕಳೆದ ದಿನ ನಡೆದಿದೆ. ನಾಮಪತ್ರ ಸಲ್ಲಿಸಿದ ವ್ಯಕ್ತಿಯ ವಿರುದ್ಧ ಕೆಲವು ಪ್ರಕರಣಗಳು ಇದ್ದು, ಈ ಹಿನ್ನೆಲೆಯಲ್ಲಿ ತಿರಸ್ಕರಿಸಬೇಕು ಎಂದು ಅವರ ಪತ್ನಿ ಮತ್ತು ಕೆಲವರು ಆಗಮಿಸಿ ಆಕ್ಷೇಪ ಸಲ್ಲಿಸಿದರು. ಈ ಕುರಿತು ಅವರು ದೂರನ್ನೂ ನೀಡಿದ್ದಾರೆ. ಆದರೆ, ಅಭ್ಯರ್ಥಿ ಅಪರಾಧಿ ಎಂದು ಯಾವುದೇ ಘೋಷಣೆ

ಬಂಟ್ವಾಳ :ಪತಿಯ ನಾಮಪತ್ರ ತಿರಸ್ಕರಿಸುವಂತೆ ಪತ್ನಿಯಿಂದ ಮನವಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.13: ಇಂದು ಪುತ್ತೂರಿನಲ್ಲಿ  KSRTC ಬಸ್ಸ್ ಗಳು ರಸ್ತೆಗಿಳಿಯದೆ ಬೆಂಬಲ ಸೂಚಿಸಿದೆ. ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ಬೆಳಗ್ಗಿನಿಂದ ಬಸ್ಸ್ಗಳು ಕಂಡು ಬಂದಿರಲಿಲ್ಲ. ಕಳೆದ ದಿನಡಿಪೋದಿಂದ ಬಸ್ ಗಳನ್ನು ತಂಗುದಾಣಕ್ಕೆ ತಂದು ಮುಷ್ಕರದಲ್ಲಿ ತೊಡಗಿಕೊಂಡಿದ್ದರು.ಇನ್ನು ದಿಢೀರ್ ಮುಷ್ಕರದಿಂದ ಮುಂಜಾನೆಯೇ KSRTC ವಿಭಾಗೀಯ ನಿಯಂತ್ರಣಾಧಿಕಾರಿ, ಡಿಪೋ ಮೆನೇಜರ್ ಅಧಿಕಾರಿ ವರ್ಗದವರು KSRTC ತಂಗುದಾಣಕ್ಕೆ ಆಗಮಿಸಿದ್ದರು.ಅದರಂತೆ ಇಂದು ಕೂಡ ¸ಸಾರಿಗೆ ಮುಷ್ಕರಕ್ಕೆ ಪುತ್ತೂರಿನಲ್ಲಿ ಬೆಂಬಲ

ಪುತ್ತೂರು: ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ Read More »

ಕರಾವಳಿ

ಮಂಗಳೂರು: ಬಿಜೆಪಿ ಬೆಂಬಲಿತ ಗ್ರಾ.ಪಂ ಅಭ್ಯರ್ಥಿ ಮೇಲೆ ಸುತ್ತಿಗೆಯಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13: ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮದರಸ ಧಾರ್ಮಿಕ ಗುರುವಿಗೆ ತಂಡವೊಂದು ಸುತ್ತಿಗೆಯಲ್ಲಿ ತಲೆಗೆ ಬಡಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರು ಹೊರವಲಯ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ತಡರಾತ್ರಿ ವೇಳೆ ನಡೆದಿದೆ.     ಅಸೈಗೋಳಿ ನಿವಾಸಿ ಹನೀಫ್ ನಿಜಾಮಿ (40) ಕೊಲೆಯತ್ನಕ್ಕೆ ಒಳಗಾದವರು. ಇವರಿಗೆ ಅಸೈಗೋಳಿ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಕರೀಂ ನೇತೃತ್ವದ ತಂಡ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಹನೀಫ್ ನಿಜಾಮಿ ಉಪ್ಪಳ,

ಮಂಗಳೂರು: ಬಿಜೆಪಿ ಬೆಂಬಲಿತ ಗ್ರಾ.ಪಂ ಅಭ್ಯರ್ಥಿ ಮೇಲೆ ಸುತ್ತಿಗೆಯಿಂದ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಿಕನ್ ವ್ಯಾಪಾರದ ಪಿಕಪ್ ವಾಹನ ಕದ್ದ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ಕೊಡಗು, ಡಿ.12: ಮಾಂಸಕ್ಕಾಗಿ ಕೋಳಿ ವ್ಯಾಪಾರ ಮಾಡಿ ನಿಲ್ಲಿಸಿದ್ದ ವ್ಯಾಪಾರಿಯ ಪಿಕಪ್ ವಾಹನವನ್ನೇ ಕಳ್ಳತನ ನಡೆಸಿ ನಕಲಿ ನಂಬರ್ ಪ್ಲೇಟ್ ಮಾಡಿ ಮಾರಟದ ವೇಳೆ ಖದೀಮರು ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಕುಶಾಲನಗರದಲ್ಲಿ ನಡೆದಿದೆ. ಬಂಧಿತರನ್ನು ಕಣ್ಣೂರಿನ ರೌಫ್,ಕರಿಕೆಯ ಅಬ್ದುಲ್ ಫಾರೂಕ್, ಸುಳ್ಯದ ಡೇವಿಡ್ ಎಂದು ಗುರುತಿಸಲಾಗಿದೆ.   ಕಳೆದ ಮೂರು ತಿಂಗಳ ಹಿಂದೆ ಕೋಳಿ ವ್ಯಾಪಾರ ಮುಗಿಸಿ ನಿಲ್ಲಿಸಿದ್ದ ವಾಹನ ಕಳುವಾಗಿದ್ದು,ಸಂಬಂಧ ಕುಶಾಲನಗರ ದಲ್ಲಿ ಪ್ರಕರಣ ದಾಖಲಾಗಿತ್ತು,ಅದರಂತೆ ಕೆಲವೊಂದು ದಾಖಲೆ ಮೂಲಕ

ಚಿಕನ್ ವ್ಯಾಪಾರದ ಪಿಕಪ್ ವಾಹನ ಕದ್ದ ಕಳ್ಳರ ಬಂಧನ Read More »

ಕರಾವಳಿ
Scroll to Top