Kadaba News

ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠೆ ಹಾಗೂ ಕಲಶಾಭಿಷೇಕ

(ನ್ಯೂಸ್ ಕಡಬ) newskadaba.com ಕಡಬ,ಮಾ.31. ಕುಂತೂರು ಗ್ರಾಮದ ಪೆರಾಬೆ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಎ.24ರಿಂದ ಎ.27ರವರೆಗೆ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಹಾಗೂ ರಾಜನ್ ದೈವ(ಶಿರಾಡಿ ದೈವ)ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಕಾರ್ಯಕ್ರಮಗಳು ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬೈಪಡಿತ್ತಾಯ ಮತ್ತು ಶ್ರೀ ಕೃಷ್ಣಪ್ರಸಾದ್ ಉಪಾಧ್ಯಾಯ ಅರ್ಬಿ ರವರ ನೇತೃತ್ವದಲ್ಲಿ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದ್ದು ಜೀಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ನಡೆಯುತ್ತಿದೆ. ಶ್ರೀಕ್ಷೇತ್ರದ ಪರಿಚಯ ‘ಬೀರಂತಡ್ಕ’ ಹೆಸರೇ ಸೂಚಿಸುವಂತೆ ವೀರರ ಬಯಲು […]

ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠೆ ಹಾಗೂ ಕಲಶಾಭಿಷೇಕ Read More »

ಕರಾವಳಿ

ರಾಮಕುಂಜ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ ► ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಮಾ.30. ಪ್ರಕೃತಿಗೆ ವಿರುದ್ಧವಾಗಿ ನಡೆಯುವುದರಿಂದ ಪರಿಸರ ಹಾನಿಯಾಗುದಷ್ಟೇ ಅಲ್ಲ, ಮಾನವನ ಬದುಕಿಗೇ ಮಾರಕ. ಪ್ಲಾಸ್ಟಿಕ್ ಅತೀ ಅಪಾಯಕಾರಿ ವಸ್ತು. ಅದರ ಉಪಯೋಗದಲ್ಲಿ ನಿಯಂತ್ರಣ ಬೇಕು ಎಂದು ರಾಮಕುಂಜ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ಹೇಳಿದರು. ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರಾಮಕುಂಜ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಡೆದ ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಜಗತ್ತಿನಲ್ಲಿ ಮಾನವ ಅತೀ ಹೆಚ್ಚು ಬುದ್ದಿಶಕ್ತಿ  ಹೊಂದಿರುವ ಜೀವಿ.  ಆದರೆ ಮನುಷ್ಯನಿಗೆ ಪರಿಸರದ ವಿರುದ್ಧ

ರಾಮಕುಂಜ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ ► ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಜಾಗೃತಿ ಜಾಥಾ Read More »

ಕರಾವಳಿ

ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ನೂಜಿಬಾಳ್ತಿಲ ಗ್ರಾಮದ ಬೇರಿಕೆಯಿಂದ ಕುರಿಯಾಳಕೊಪ್ಪ ಶ್ರೀಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ 13.5 ಲಕ್ಷ ವೆಚ್ಚದಲ್ಲಿ ಸುಮಾರು 300 ಮೀಟರ್ ಕಾಂಕ್ರಿಟಿಕರಣ ರಸ್ತೆಯ ಸೋಮವಾರ ಉದ್ಘಾಟನೆ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ ಉದ್ಘಾಟಿಸಿ ಮಾತನಾಡಿ, ಜಿ.ಪಂ.ಅನುದಾನದೊಂದಿಗೆ ಗ್ರಾ.ಪಂ. ಹಾಗೂ ಉದ್ಯೋಗ ಖಾತರಿ ಯೋಜನೆ ಅನುದಾನವನ್ನು ಹೊಂದಿಸಿಕೊಂಡು ಸುಮಾರು 13.5 ಲಕ್ಷ ಅನುದಾನದಲ್ಲಿ ಅತ್ಯುತ್ತಮ ಕಾಂಕ್ರೀಟಿ ರಸ್ತೆಯನ್ನು ನಿರ್ಮಿಸಲಾಗಿದೆ. ಹಲವಾರು ವರ್ಷಗಳ ಬೇಡಿಕೆಯಾಗಿರುವ ಈ ರಸ್ತೆಯು ಇನ್ನೂ ದೇವಸ್ಥಾನದವರೆಗೆ ಅಭಿವೃದ್ದಿಯಾಗಬೇಕಾಗಿದ್ದು ಮುಂದಿನ

ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ Read More »

ಕರಾವಳಿ

ಕಡಬದಲ್ಲಿ ಏಕಾಹ ಭಜನೋತ್ಸವ ► ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿ: ಸುಬ್ರಹ್ಮಣ್ಯ ಶ್ರೀ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಹಿಂದಿನ ಕಾಲದಲ್ಲಿ ದೇವರನ್ನು ಒಲಿಸಿಕೊಳ್ಳಲು ಕಠಿಣ ತಪಸ್ಸು, ಯಾಗ ಯಜ್ಞಾದಿಗಳನ್ನು ಮಾಡಬೇಕಿತ್ತು. ಆದರೆ ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಸಂಕೀರ್ತನೆ ಸುಲಭಮಾರ್ಗ. ಅದರಲ್ಲಿಯೂ ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿಯಾಗಲು ಸಾಧ್ಯ ಎಂದು ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 57ನೇ ವರ್ಷದ ಏಕಾಹ ಭಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಭಜನೆ ಎಂಬುದು ದೇವರನ್ನು ಸಂತೃಪ್ತಿ ಪಡಿಸಲು ಇರುವ ಅತ್ಯಂತ

ಕಡಬದಲ್ಲಿ ಏಕಾಹ ಭಜನೋತ್ಸವ ► ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿ: ಸುಬ್ರಹ್ಮಣ್ಯ ಶ್ರೀ Read More »

ಕರಾವಳಿ

ಕಾಣಿಯೂರು ಕಲೆಂಜೋಡಿ ದಲಿತ ಕಾಲೋನಿ ರಸ್ತೆಗೆ ಮಾ.30ರೊಳಗೆ ಕಾಂಕ್ರೀಟಿಕರಣಕ್ಕೆ ಭರವಸೆ ► ಎ.2ರ ಪ್ರತಿಭಟನೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಕಾಣಿಯೂರು ಗ್ರಾಮದ ಕಲೆಂಜೋಡಿ ದಲಿತ ಕಾಲೋನಿ ರಸ್ತೆಗೆ ಮಂಜೂರಾದ ಅನುದಾನವನ್ನು ಬದಲಾಯಿಸಿದ ಬಗ್ಗೆ ಪ್ರತಿಭಟನೆಗೆ ಮುಂದಾದ ದಲಿತ ಮುಖಂಡರ ಬೇಡಿಕೆಗೆ ಸ್ಪಂಧಿಸಿದ ಪಿಡಬ್ಲ್ಯುಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಧಿಕಾರಿ ಗೋಕುಲದಾಸ್ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಮಾಡಿಸಿಕೊಡಲಾಗುವುದೆಂದು ಭರವಸೆ ನೀಡಿದರು. ಕಾಣಿಯೂರು ಗ್ರಾಮ ವ್ಯಾಪ್ತಿಯ ಕಲೆಂಜೋಡಿ ದಲಿತ ಕಾಲೋನಿಗೆ 2017-18ರ ಶಾಸಕರ ನಿಧಿಯಿಂದ ಬಿಡುಗಡೆಯಾದ ಕಾಂಕ್ರೀಟ್ ರಸ್ತೆಯನ್ನು ಅಕ್ರಮವಾಗಿ ದಲಿತ ಕಾಲೋನಿಗೆ ಕಾಂಕ್ರೀಟ್ ರಸ್ತೆಯನ್ನು ಮಾಡದೆ ಸ್ಥಳೀಯ ಮೇಲ್ವರ್ಗದ ನಿವಾಸಿಗಳ ರಸ್ತೆಗೆ

ಕಾಣಿಯೂರು ಕಲೆಂಜೋಡಿ ದಲಿತ ಕಾಲೋನಿ ರಸ್ತೆಗೆ ಮಾ.30ರೊಳಗೆ ಕಾಂಕ್ರೀಟಿಕರಣಕ್ಕೆ ಭರವಸೆ ► ಎ.2ರ ಪ್ರತಿಭಟನೆ ಮುಂದೂಡಿಕೆ Read More »

ಕರಾವಳಿ

ಕಡಬ: ಪಿಜಕಳ-ಉಜ್ರುಪಾದೆ ಸಂಪರ್ಕ ರಸ್ತೆ ಕಾಮಗಾರಿಗೆ ಗುದ್ದಲಿಪುಜೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಕಡಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಜಕಳ-ಉಜ್ರುಪಾದೆ ಸಂಪರ್ಕ ರಸ್ತೆಯ 145 ಮೀಟರ್ ಕಾಂಕ್ರಿಟ್ಕರಣ ಕಾಮಗಾರಿಗೆ ಗುದ್ದಲಿಪುಜೆ ಸೋಮವಾರ ನಡೆಯಿತು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಗುದ್ದಲಿಪುಜೆ ನೆರವೇರಸಿ ಮಾತನಾಡಿ, ಸುಳ್ಯ ಶಾಸಕರ ಸುಮಾರು 5 ಲಕ್ಷ ರೂ ಅನುದಾನದಲ್ಲಿ ರಸ್ತೆ ಕಾಂಕ್ರಿಟಿಕರಣ ನಡೆಸಲಾಗುವುದು ಎಂದರು. ಈ ಸಂದರ್ಭ ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಕಡಬ ಗ್ರಾಮ ಪಂಚಾಯಿತಿ ಸದಸ್ಯ ಆದಂ ಕುಂಡೋಳಿ, ಕಡಬ ಸಿ ಎ

ಕಡಬ: ಪಿಜಕಳ-ಉಜ್ರುಪಾದೆ ಸಂಪರ್ಕ ರಸ್ತೆ ಕಾಮಗಾರಿಗೆ ಗುದ್ದಲಿಪುಜೆ Read More »

ಕರಾವಳಿ

ಹಳೆನೇರಿಂಕಿ ಕುಡಿಯುವ ನೀರಿನ ಘಟಕಕ್ಕೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಹಳೆನೇರಿಂಕಿ ಗ್ರಾಮದ ಕಲ್ಲೇರಿ ದಲಿತ ಕಾಲೋನಿಯಲ್ಲಿ ಕುಡಿಯುವ ನೀರಿನ ಘಟಕಕ್ಕೆ ಗುದ್ದಲಿ ಪುಜೆ ಸೋಮವಾರ ನಡೆಯಿತು. ತಾಲೂಕು ಪಂಚಾಯಿತಿ ಸದಸ್ಯೆ ತೇಜಶ್ವಿನಿ ಕಟ್ಟಪುಣಿ ಮಾತನಾಡಿ, ಸುಳ್ಯ ಶಾಸಕ ಎಸ್ ಅಂಗಾರ 2.30 ಲಕ್ಷ , ತಾಲೂಕು ಪಂಚಾಯಿತಿಯ 85 ಸಾವಿರ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿಯ 1ಲಕ್ಷದ 60 ಸಾವಿರ ರೂ ಅನುದಾನದಲ್ಲಿ ಕುಡಿಯುವ ನೀರಿನ ಘಟಕಕ್ಕೆ ಸಂಬಂದಪಟ್ಟಂತೆ ಕೊಳವೆಬಾವಿ, ಪಂಪ್ , ನೀರಿನ ಟ್ಯಾಂಕ್, ಪೈಪು ಅಳವಡಿಕೆಗೆ ಮಾಡಲಾಗುವುದು. ಕಾಮಗಾರಿ ಶೀಘ್ರದಲ್ಲಿ

ಹಳೆನೇರಿಂಕಿ ಕುಡಿಯುವ ನೀರಿನ ಘಟಕಕ್ಕೆ ಶಂಕುಸ್ಥಾಪನೆ Read More »

ಕರಾವಳಿ

ಕಳಾರ ತಡೆಗೋಡೆಗೆ ಗುದ್ದಲಿಪುಜೆ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಡಬ ಗ್ರಾ.ಪಂ. ವ್ಯಾಪ್ತಿಯ ಕಳಾರ ದಲಿತ ಕಾಲೋನಿಯಲ್ಲಿ ಸುಳ್ಯ ಶಾಸಕರ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ ಸೋಮವಾರ ಗುದ್ದಲಿಪುಜೆ ನೆರವೇರಿಸಲಾಯಿತು. ಶಾಸಕರ ಸುಮಾರು 5 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣವಾಗಲಿರುವ ತಡೆಗೋಡೆಗೆ ತಾ.ಪಂ.ಮಾಜಿ ಅಧ್ಯಕ್ಷ ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ ಗುದ್ದಲಿಪುಜೆ ನೆರವೇರಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಮಾಜದ ಎಲ್ಲಾ ವರ್ಗದ ಜನತೆ ನೆಮ್ಮದಿಯ ಬದುಕನ್ನು ಕಾಣಬೇಕು ಎಂಬ ದೃಷ್ಟಿಯಿಂದ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಜನ ಮೆಚ್ಚುಗೆಯನ್ನು ಪಡೆದಿದ್ದಾರೆ. ಮುಂದೆ

ಕಳಾರ ತಡೆಗೋಡೆಗೆ ಗುದ್ದಲಿಪುಜೆ Read More »

ಕರಾವಳಿ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ

(ನ್ಯೂಸ್ ಕಡಬ) newskadaba.com ಮಾ.26.  ಪ್ರತಿ ವರ್ಷ ವಿಶ್ವದಾದ್ಯಂತ ಮಾರ್ಚ್ 26ರಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ” ಅಥವಾ ಪರ್ಪಲ್ ಡೇ ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ ಯಾವುದೇ ಜಾತಿ, ಧರ್ಮ, ಭಾಷೆಯ ಜನರಿಗೆ ಸಿಮೀತವಾಗದೆ ಎಲ್ಲರನ್ನು ಕಾಡುತ್ತಿದ್ದು, ಒಂದು ಜಾಗತಿಕ ಆರೋಗ್ಯ ಸಮಸ್ಯೆ ಎಂದರೂ ತಪ್ಪಲ್ಲ. ಪ್ರತಿ ವರ್ಷ ಫೆಬ್ರವರಿ 9ರಂದು “ವಿಶ್ವ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ Read More »

ಆರೋಗ್ಯ ಮಾಹಿತಿ

ಮಂಗಳೂರು: ನಿವೃತ್ತ ಸರಕಾರಿ ಉದ್ಯೋಗಿಯ ಹನಿ ಟ್ರ್ಯಾಪ್ ಭೇದಿಸಿದ ಸಿಸಿಬಿ ಪೊಲೀಸರು ► ಮೂವರು ಯುವತಿಯರು ಸೇರಿ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.23. ನಿವೃತ್ತ ಸರಕಾರಿ ಉದ್ಯೋಗಿಯನ್ನು ಹನಿಟ್ರ್ಯಾಪ್‌ ನಡೆಸುವ ಮೂಲಕ ಮೂರು ಲಕ್ಷ ರೂ. ವಸೂಲಿ ಮಾಡಿರುವ ಘಟನೆಯು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಸಿಸಿಬಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಮೂವರು ಯುವತಿಯರಾಗಿದ್ದು ಉಳಿದವರನ್ನು ಶಕ್ತಿನಗರದ ರಮೇಶ್‌ (35), ಕಳಸದ ರವಿ (35) ಮತ್ತು ಜೈಲು ರೋಡ್‌ನ‌ ಪ್ರೀತೇಶ್‌ (36) ಎಂದು ಗುರುತಿಸಲಾಗಿದೆ. ನಿವೃತ್ತ ಸರಕಾರಿ ಉದ್ಯೋಗಿಯೊಬ್ಬರನ್ನು ಯುವತಿಯರಿಂದ ಮಸಾಜ್‌ ಮಾಡಿಸುವುದಾಗಿ ಆರೋಪಿಗಳು ನಂಬಿಸಿ ಅವರಿಗೆ

ಮಂಗಳೂರು: ನಿವೃತ್ತ ಸರಕಾರಿ ಉದ್ಯೋಗಿಯ ಹನಿ ಟ್ರ್ಯಾಪ್ ಭೇದಿಸಿದ ಸಿಸಿಬಿ ಪೊಲೀಸರು ► ಮೂವರು ಯುವತಿಯರು ಸೇರಿ ಆರು ಮಂದಿಯ ಬಂಧನ Read More »

ಕರಾವಳಿ
Scroll to Top