Kadaba News

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.11. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಲೆಂದು ಬರುತ್ತಿದ್ದ 108 ಆಂಬುಲೆನ್ಸ್ ಪಲ್ಟಿಯಾದ ಘಟನೆ  ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಚಿಕ್ಕೋಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಮತ್ತು ಅರಟಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆಂಬುಲೆನ್ಸ್ ಅರಟಾಳ ಗ್ರಾಮದ ಗರ್ಭಿಣಿ ಮಹಿಳೆಯನ್ನು ಕರೆತರಲು ಬರುತ್ತಿದ್ದ ಸಂದರ್ಭದಲ್ಲಿ ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಮಧ್ಯೆ ಆಂಬುಲೆನ್ಸ್ ಪಲ್ಟಿಯಾಗಿದೆ. ಗರ್ಭಿಣಿಯನ್ನು ಕರೆತರಲು ಬರುತ್ತಿದ್ದಾಗ ಈ ಘಟನೆ ನಡೆದದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆಂಬುಲೆನ್ಸ್ […]

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ನ.11. ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರುನಗರದಲ್ಲಿ ಇತ್ತೀಚೆಗೆ ನಡೆದ ಕನಸುಗಳು ಎಂಬ ಕಾರ್ಯಕ್ರಮದಲ್ಲಿ ಸರಸ್ವತೀ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ದೀಪಕ್.ಕೆ ಇವರು ಭಾಗವಹಿಸಿ ವರ್ಣ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಇವರು ಕಲ್ಲುಗುಡ್ಡೆ ನಿವಾಸಿ ಕಿಟ್ಟು ಅಜಿಲ ಮತ್ತು ವೆಂಕಮ್ಮ ದಂಪತಿಯ ಸುಪುತ್ರ.

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ Read More »

ಕರಾವಳಿ

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್

(ನ್ಯೂಸ್ ಕಡಬ) newskadaba.com ಕಡಬ, ನ.11. ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಬಿಜೆಪಿ ಸರಕಾರದ ವೈಪಲ್ಯವನ್ನು ಮನೆ ಮನೆ ಭೇಟಿ ವೇಳೆ ಜನರಿಗೆ ತಿಳಿಸಿ ಮನದಟ್ಟು ಮಾಡಬೇಕು ಎಂದು ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸವಿತಾ ರಮೇಶ್ ಹೇಳಿದರು. ಬಲ್ಯ ಗ್ರಾಮದ ದೇರಾಜೆ ಬೂತ್‍ನ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರ ಇರುವುದು ಜನರ ಸೇವೆ ಮಾಡಲು ಆದರೆ ಇದನ್ನು ದುರುಪಯೋಗ ಮಾಡಬಾರದು, ಪಕ್ಷದ ಪದಾಧಿಕಾರಿಗಳಿಗೆ ದೊಡ್ಡ ಜವಾಬ್ದಾರಿ

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್ Read More »

ಕರಾವಳಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ►ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ನ.11. ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ರಾಧಕೃಷ್ಣ ಎಂ ತರಭೇತಿ ನೀಡಿರುತ್ತಾರೆ.

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ►ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ Read More »

ಕರಾವಳಿ

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ನ.11. ಅತಿವೇಗದಿಂದ ಬಂದ ಬೈಕೊಂದು ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಶುಕ್ರವಾರ ತಡರಾತ್ರಿ  ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಶಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅತಿವೇಗವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು Read More »

ಕರಾವಳಿ

ಮರೆಯಾದ ಕಡಬದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ► ಇಂದು ಕಡಬದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿಯ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ನ.11. ಇತ್ತೀಚೆಗೆ ನಮ್ಮಿಂದ ಅಗಲಿದ ಹಿರಿಯ ಸಾಹಿತಿ, ರಾಷ್ಟ್ರ ಪ್ರಶಸ್ತಿ ವಿಜೇತ ಧಾರ್ಮಿಕ ಮುಂದಾಳು, ನಿವೃತ್ತ ಮುಖ್ಯ ಶಿಕ್ಷಕ ದಿವಂಗತ ಕೆ. ಗೋಪಾಲ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಡೆಸುವ ಸಲುವಾಗಿ ಇಂದು ಸಮಾಲೋಚನಾ ಸಭೆ ಕರೆಯಲಾಗಿದೆ. ಕಡಬದ ಅನುಗ್ರಹ ಮಿನಿ ಹಾಲ್‌ನಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿರುವ ಈ ಸಮಾಲೋಚನಾ ಸಭೆಯಲ್ಲಿ ಗೋಪಾಲ ರಾವ್ ಅವರ ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಲಹೆ, ಸೂಚನೆಗಳನ್ನು ನೀಡಬೇಕಾಗಿ ಸಾರ್ವಜನಿಕ ಪ್ರಕಟಣೆ

ಮರೆಯಾದ ಕಡಬದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ► ಇಂದು ಕಡಬದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿಯ ಸಮಾಲೋಚನಾ ಸಭೆ Read More »

ಕರಾವಳಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ 8, ಕರ್ತವ್ಯದಲ್ಲಿದ್ದ ಪೊಲೀಸರಿಗೆ ವಿಚಾರಣಾದೀನ ಖೈದಿಯೊಬ್ಬ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ಬುಧವಾರ ಮದ್ಯಾಹ್ನ ನಡೆದಿದೆ. ಕಳ್ಳತನ ಮತ್ತು ಗಾಂಜಾ ಪ್ರಕರಣದ ಆರೋಪಿಯಾಗಿರುವ ಪುಂಜಾಲಕಟ್ಟೆಯ ಖೈದಿಯನ್ನು ವಿಚಾರಣೆಗಾಗಿ ನ್ಯಾಯಲಯಕ್ಕೆ ಕರೆತಂದು, ಜೈಲಿಗೆ ಹಿಂತಿರುಗುತ್ತಿರುವಾಗ ಕೈಗೆ ಹಾಕಿದ ಸರಪಳಿಯಿಂದ ಪೊಲೀಸರ ಮೇಲೆ ದಾಳಿ ಮಾಡಿ, ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಆದರೆ ತಕ್ಷಣ ಎಚ್ಚೆತ್ತ ಪೊಲೀಸರು ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಟ್ರಾಫಿಕ್ ಪೊಲೀಸ್ ಹಾಗೂ ಸಾರ್ವಜನಿಕರ ಸಹಾಯದಿಂದ ಆತನನ್ನು ಸೆರೆಹಿಡಿಯುವಲ್ಲಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ Read More »

ಕರಾವಳಿ

ಏರ್ ಟೆಲ್ ಬ್ರಾಡ್ ಬ್ಯಾಂಡ್ ಗ್ರಾಹಕರಿಗೆ ಗುಡ್ ನ್ಯೂಸ್ ► ಬಳಕೆಯಾಗದೇ ಉಳಿದ ಡಾಟಾವನ್ನು ಮುಂದಿನ ತಿಂಗಳು  ಬಳಕೆ ಮಾಡಬಹುದು

(ನ್ಯೂಸ್ ಕಡಬ) newskadaba.com ನವದೆಹಲಿ, ನ.8. ಏರ್ ಟೆಲ್ ಗ್ರಾಹಕರು ಬಳಕೆ ಮಾಡದೇ ಇರುವ ಬ್ರಾಡ್ ಬ್ಯಾಂಡ್ ಡಾಟಾ ವ್ಯರ್ಥವಾಗದಂತೆ ತಡೆಗಟ್ಟಲು ಏರ್ ಟೆಲ್ ಕ್ರಮ ಕೈಗೊಂಡಿದ್ದು, ತಿಂಗಳಾಂತ್ಯಕ್ಕೆ ಬಳಕೆಯಾಗದ ಡಾಟಾವನ್ನು ಮುಂದಿನ ತಿಂಗಳು ಬಳಕೆ ಮಾಡಬಹುದಾದ ಸೌಲಭ್ಯವನ್ನು ಘೋಷಿಸಿದೆ. ರೋಲ್‍ಓವರ್ ಸೌಲಭ್ಯ ಎಂಬ ಹೊಸ ಸೌಲಭ್ಯವನ್ನು ಗ್ರಾಹಕರು ಪಡೆದುಕೊಳ್ಳುವ ಮೂಲಕ ತಾವು ಬಳಕೆ ಮಾಡದೇ ಇರುವ ಡೇಟಾವನ್ನು ಮುಂದಿನ ತಿಂಗಳಿಗೆ ಕ್ಯಾರಿ ಮಾಡುವ ಅವಕಾಶವನ್ನು ನೀಡಿದೆ. ಈ ಹೊಸ ಸೌಲಭ್ಯ ಮನೆಯಲ್ಲಿ ಬ್ರಾಡ್ ಬ್ಯಾಂಡ್ ಸೇವೆಯನ್ನು

ಏರ್ ಟೆಲ್ ಬ್ರಾಡ್ ಬ್ಯಾಂಡ್ ಗ್ರಾಹಕರಿಗೆ ಗುಡ್ ನ್ಯೂಸ್ ► ಬಳಕೆಯಾಗದೇ ಉಳಿದ ಡಾಟಾವನ್ನು ಮುಂದಿನ ತಿಂಗಳು  ಬಳಕೆ ಮಾಡಬಹುದು Read More »

ತಂತ್ರಜ್ಞಾನ

ಅಸಹಾಯಕ ಯುವಕನಿಗೆ ನೆರವು ನೀಡಿದ ಉಪ್ಪಿನಂಗಡಿ ಆಟೋ ಚಾಲಕರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.8. ಗ್ರಾಮೀಣ ಭಾಗದ ಆಟೋ ರಿಕ್ಷಾ ಚಾಲಕರು ಸಂಕಷ್ಟದ ಬದುಕು ಸಾಗಿಸಿ ತಮ್ಮ ಜೀವನ ನಿರ್ವಹಣೆ ಮಾಡುತ್ತಿರುವುದು ಸಾಮಾನ್ಯ. ಆದರೆ ತಮ್ಮ ಸಮಸ್ಯೆಗಳ ನಡುವೆಯೂ ಉಪ್ಪಿನಂಗಡಿಯ ನೇತ್ರಾವತಿ ಆಟೋ ರಿಕ್ಷಾ ಚಾಲಕ-ಮಾಲಕ ಸಂಘದವರು ಅಸಾಹಯಕರೊಬ್ಬರಿಗೆ ನೆರವಾಗುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ. ಅಪರಿಚಿತ ಊರಿನಲ್ಲಿ ಬಸ್ಸಿಗೆ ಹಣವಿಲ್ಲದೆ ಒಬ್ಬಂಟಿಯಾಗಿದ್ದ ಚಿತ್ರದುರ್ಗದ ಯುವಕನಾದ ಮೋಹನ್‌ ಅವರಿಗೆ ಆಟೋ ರಿಕ್ಷಾದವರು ಹಣ ಸಂಗ್ರಹಿಸಿ ಅವರನ್ನು ಮರಳಿ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಚಿತ್ರದುರ್ಗದ ಹೊಳಲ್ಕೆರೆಯವರಾಗಿದ್ದ ಮೋಹನ್‌ ಅವರ ಗೆಳೆಯ ಪುತ್ತೂರಿನಲ್ಲಿ ಕೆಲಸಕ್ಕಿದ್ದರು. ಆತನಿಗೆ ನೀಡಿದ್ದ

ಅಸಹಾಯಕ ಯುವಕನಿಗೆ ನೆರವು ನೀಡಿದ ಉಪ್ಪಿನಂಗಡಿ ಆಟೋ ಚಾಲಕರು Read More »

ಕರಾವಳಿ

ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.8. ► ಇಲ್ಲಿನ ಕುಟ್ರುಪ್ಪಾಡಿ ಗ್ರಾಮದ ಪುರಿಯ ಎಂಬಲ್ಲಿ ಎಂಡೋ ಪೀಡಿತೆ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟವರನ್ನು ಪುರಿಯ ನಿವಾಸಿ ಪೋಸ್ಟ್‌ಮ್ಯಾನ್ ರವಿ ಎಂಬವರ ಪುತ್ರಿ ಅಶ್ವಿನಿ(28) ಎಂದು ಗುರುತಿಸಲಾಗಿದೆ. ಈಕೆ ಹುಟ್ಟಿನಿಂದಲೇ ಎಂಡೋ ಪೀಡಿತಳಾಗಿ ಕಳೆದ ಇಪ್ಪತ್ತೆಂಡು ವರ್ಷಗಳಿಂದ ದೃಷ್ಟಿಕ ಳೆದುಕೊಂಡು ಪೋಷಕರ ಆಶ್ರಯದಲ್ಲಿ ಬೆಳೆದು ಬಂದಿದ್ದಾಳೆ. ಕಳೆದ ಹತ್ತು ದಿನಗಳಿಂದ ಖಾಯಿಲೆ ಉಲ್ಭಣಿಸಿ ಮೃತಪಟ್ಟಿದ್ದಾಳೆ. ರವಿಯವರ ಇಬ್ಬರೂ ಹೆಣ್ಣು ಮಕ್ಕಳು ಕೂಡಾ ಎಂಡೋ ಪೀಡಿತರಾಗಿದ್ದು, ಈ ಪೈಕಿ ಹಿರಿ ಮಗಳು

ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು Read More »

ಕರಾವಳಿ
Scroll to Top