Kadaba News

ಕಡಬ: ರಾಮಕುಂಜ ಸಂಸ್ಕೃತ ಹಿ.ಪ್ರಾ.ಶಾಲಾ ಶತಮಾನೋತ್ಸವ ► ಪೂರ್ವಭಾವಿ ಸಭೆ, ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಕಡಬ, ನ.8. ಗ್ರಾಮೀಣ ಪ್ರದೇಶದಲ್ಲಿ 1919ರಲ್ಲಿ ಆರಂಭಗೊಂಡ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವದ ಸಂಭ್ರಮದಲ್ಲಿದೆ. ವಿದ್ಯಾಲಯದ ಶತಮಾನದ ಹಾದಿಯಲ್ಲಿ ಸೇವೆಗೈದವರನ್ನು ಸ್ಮರಿಸುವ ಉತ್ಸವವನ್ನು 2018ರ ಕೊನೆಗೆ ನಡೆಸಲು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರ ಮಾರ್ಗದರ್ಶನದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಶಾಲಾ ಆಡಳಿತ ಮಂಡಳಿ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸದಸ್ಯರ ಉಪಸ್ಥಿತಿಯಲ್ಲಿ ಹಾಗೂ ಊರವರ ಸಹಭಾಗಿತ್ವದಲ್ಲಿ ಶತಮಾನೋತ್ಸವದ ಆಚರಣೆಗೆ ವಿವಿಧ ಸಮಿತಿಗಳಿಗೆ ಮುಖ್ಯಸ್ಥರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು. […]

ಕಡಬ: ರಾಮಕುಂಜ ಸಂಸ್ಕೃತ ಹಿ.ಪ್ರಾ.ಶಾಲಾ ಶತಮಾನೋತ್ಸವ ► ಪೂರ್ವಭಾವಿ ಸಭೆ, ಸಮಿತಿ ರಚನೆ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದ ಪಾದಯಾತ್ರಿಕರಿಗೆ ► ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಕಡಬ, ನ.8. ತಣ್ಣೀರುಪಂತ ಶ್ರೀ ಶಾರದಾಂಬಾ ಭಜನಾ ಮಂದಿರ ಹಾಗೂ ಪುತ್ತಿಲ ದೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದ ಆಶ್ರಯದಲ್ಲಿ ತನಿಯಪ್ಪ ಹಳೆಕೋಟೆ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಆಗಮಿಸಿದ 59 ಮಂದಿ ಪಾದಯಾತ್ರಿಕರಿಗೆ ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಸ್ವಾಗತ ಕೋರಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಪಾದಯಾತ್ರಿಕರನ್ನು ಭಜನಾ ಮಂದಿರಕ್ಕೆ ಬರಮಾಡಿಕೊಂಡು ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಯಿತು. ಪೆರಾಬೆ ಗ್ರಾ.ಪಂ.ಉಪಾಧ್ಯಕ್ಷರಾದ ಜನಾರ್ದನ ಶೆಟ್ಟಿಯವರು ಭೋಜನದ ವ್ಯವಸ್ಥೆ ಮಾಡಿದ್ದರು. ಭಜನಾ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದ ಪಾದಯಾತ್ರಿಕರಿಗೆ ► ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ Read More »

ಕರಾವಳಿ

ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ನ.8. ಕಾಂಗ್ರೆಸ್ ಹಮ್ಮಿಕೊಂಡಿರುವ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ನಡೆಯಿತು. ಕೊೖಲ ಗ್ರಾಮದ ಬೂತ್ ನಂ.1ರ ಶಕ್ತಿನಗರ ಅಬೂಬಕ್ಕರ್ರವರ ಮನೆಯಲ್ಲಿ, ಬೂತ್ ನಂ.2ರ ಆತೂರು ಬೈಲು ಬಿಪಾತುಮರವರು ಮನೆಯಲ್ಲಿ ಹಾಗೂ ವಳಕಡಮ ಭಜನಾ ಮಂದಿರದ ಬಳಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಉದ್ಘಾಟಿಸಿ ಚಾಲನೆ ನೀಡಲಾಯಿತು. ದ.ಕ.ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರ್ವೋತ್ತಮ ಗೌಡರವರು ಉದ್ಘಾಟಿಸಿ ಮಾತನಾಡಿ, ಕಳೆದ ನಾಲ್ಕುವರೇ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ

ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಲತಾ ಬಿ. ► ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.8.  ಪ.ಪೂ.ಶಿಕ್ಷಣ ಇಲಾಖೆ ವತಿಯಿಂದ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಲತಾ ಬಿ.,ಇವರು 100 ಮೀ., 200 ಮೀ., ಓಟದಲ್ಲಿ ಪ್ರಥಮ ಹಾಗೂ 400 ಮೀ.ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಎಂ.ತರಬೇತಿ ನೀಡಿದ್ದಾರೆ.

ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಲತಾ ಬಿ. ► ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕ್ರೀಡಾ ನ್ಯೂಸ್

ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಕಡಬ, ನ.8. ► ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳನ್ನು ತಯಾರಿಸುವ ಬಗ್ಗೆ ” ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಸರೋಳಿ ಹಾಗೂ ಸುಮಂತ್.ಕೆ ಸಂಶೋಧನೆ ನಡೆಸಿ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದಿರೆಯಲ್ಲಿ ನಡೆದ “INSEF”- ಪ್ರಾದೇಶಿಕ ಮಟ್ಟದ ವಿಜ್ಙಾನಮೇಳದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ವಿಜ್ಞಾನ ಶಿಕ್ಷಕಿಯರಾದ ಪವಿತ್ರ ಹಾಗೂ ರಶ್ಮಿ ಸಹಕರಿಸಿದ್ದಾರೆ ಹಾಗೂ ಶಾಲಾ ಮುಖ್ಯಗುರು ಸತೀಶ್ ಭಟ್

ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ Read More »

ಕರಾವಳಿ

ಕುಂತೂರು: ‘ನಕ್ಷತ್ರ’ ಸ್ವಸಹಾಯ ಸಂಘ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ನ.8. ಶ್ರೀ ಕ್ಷೇ.ಧ.ಗ್ರಾ.ಯೋಜನೆ ಮಾರ್ಗದರ್ಶನದಲ್ಲಿ ನಡೆಯುವ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪೆರಾಬೆ ಇದರ ಆಶ್ರಯದಲ್ಲಿ ರಚನೆಗೊಂಡಿರುವ ‘ನಕ್ಷತ್ರ’ಸ್ವಸಹಾಯ ಸಂಘ ಕುಂತೂರು ಕಚೇರಿಯಲ್ಲಿ ಉದ್ಘಾಟನೆಗೊಂಡಿತು. ಶ್ರೀ ಶಾರದಾಂಬಾ ನವಜೀವನ ಸಮಿತಿ ಅಧ್ಯಕ್ಷರಾದ ಸುಬ್ರಾಯ ಗೌಡ ಉದ್ಘಾಟಿಸಿದರು. ಪೆರಾಬೆ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುಜಾತರವರು ತಂಡದ ನಿಯಾಮಾವಳಿ, ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕಡಬ ವಲಯ ಮೇಲ್ವಿಚಾರಕ ಬಾಬು, ಸುವಿಧಾ ಸಹಾಯಕ ಚೆನ್ನಕೇಶವ ರೈ

ಕುಂತೂರು: ‘ನಕ್ಷತ್ರ’ ಸ್ವಸಹಾಯ ಸಂಘ ಉದ್ಘಾಟನೆ Read More »

ಕರಾವಳಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07, ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರ ಅನುಮಾನಾಸ್ಪದ ಸಾವಿಗೆ ಕಾರ್ಬನ್‌ ಮಾನಾಕ್ಸೈಡ್ ಕಾರಣ ಎಂದು ತಿಳಿದುಬಂದಿದೆ. ಕೋಟೆಕಾರು ಶಾಖೆಯ ಭದ್ರತಾ ಸಿಬ್ಬಂದಿಗಳಾದ ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂಬವರು ಸೋಮವಾರದಂದು ಗುಡುಗು ಮಳೆ ಇದ್ದ ಹಿನ್ನೆಲೆಯಲ್ಲಿ ಜನರೇಟರ್ ಚಾಲನೆ ಮಾಡಿ ಫ್ಯಾನ್ ಹಾಕಿ‌ ಶಾಖೆಯ ಒಳಗಡೆ ಮಲಗಿದ್ದು, ಜನರೇಟರ್ ನ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆನ್ನಲಾಗಿದೆ‌. ಈ ಬಗ್ಗೆ ಶಾಖೆಯ ಸಿಸಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ Read More »

ಕರಾವಳಿ

Oppo F3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ ► ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.7.  ಒಪ್ಪೋ ಎಫ್3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಕಡಿತಗೊಂಡಿದೆ. ಈ ವರ್ಷದ ಏಪ್ರಿಲ್ ನಲ್ಲಿ ಈ ಫೋನ್ ಬಿಡುಗಡೆಯಾದಾಗ 30,990 ರೂ. ದರ ನಿಗದಿ ಪಡಿಸಿತ್ತು. ಆದರೆ ಈಗ ಈ ಫೋನ್ 24,990 ರೂ. ದರದಲ್ಲಿ ಮಾರಾಟವಾಗುತ್ತಿದೆ. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ದರ ಕಡಿತ ಮಾರಾಟವಿದ್ದು, ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ ಇರಲಿದೆ. 6 ಇಂಚಿನ ಸ್ಕ್ರೀನ್

Oppo F3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ ► ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ Read More »

ತಂತ್ರಜ್ಞಾನ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.6. ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು ಜಿಲ್ಲೆಯಾದ್ಯಂತ ಜಾತ್ಯಾತೀತ ಜನತಾದಳ ಪ್ರಬಲವಾಗಿ ಬಲವರ್ಧನೆಯಾಗುತ್ತಿದೆ. ಬಿಜೆಪಿ ಕಾಂಗ್ರೆಸ್ನಲ್ಲಿ ಭ್ರಮನಿರಸನಗೊಂಡಿರುವ ಹಲವಾರು ಪದಾಧಿಕಾರಿಗಳು, ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಹೇಳಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಆದಿತ್ಯವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಯ್ಯದ್ ಮೀರಾ ಸಾಹೇಬ್, ಬೇರೆ ಬೇರೆ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ Read More »

ಕರಾವಳಿ

ಕಾರ್ಕಳ: ಆವರಣವಿಲ್ಲದ 20 ಅಡಿ ಆಳದ ಬಾವಿಗೆ ಬಿದ್ದ ಕಾಡುಕೋಣ ► ಸ್ಥಳೀಯರಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ನ.7. ಆವರಣ ಇಲ್ಲದ ಬಾವಿಯೊಂದಕ್ಕೆ ಕಾಡು ಕೋಣವೊಂದು ಬಿದ್ದ ಘಟನೆ ಈದು ಗ್ರಾಮದಲ್ಲಿ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ಈದು ಪರಿಸರದ ಮಲಂಜ ಆನಂದ ಪೂಜಾರಿ ಎಂಬವರಿಗೆ ಸೇರಿದ ಜಾಗದಲ್ಲಿ ಸುಮಾರು 20 ಅಡಿ ಆಳದ ಬಾವಿಯೊಳಗಿನಿಂದ ಪ್ರಾಣಿಯೊಂದರ ಕೂಗು ಕೇಳಿ ಬಂದ ಹಿನ್ನಲೆಯಲ್ಲಿ  ಹೋಗಿ ನೋಡಿದಾಗ ಕಾಡುಕೋಣ ಬಾವಿಯಲ್ಲಿರುವುದು ಬೆಳಕಿಗೆ ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿ ಜೆಸಿಬಿ ಮೂಲಕ ಬಾವಿಗೆ ಕಣಿ ತೋಡಿ ಕಾಡು ಕೋಣವನ್ನು ರಕ್ಷಿಸಿದರು.

ಕಾರ್ಕಳ: ಆವರಣವಿಲ್ಲದ 20 ಅಡಿ ಆಳದ ಬಾವಿಗೆ ಬಿದ್ದ ಕಾಡುಕೋಣ ► ಸ್ಥಳೀಯರಿಂದ ರಕ್ಷಣೆ Read More »

ಕರಾವಳಿ
Scroll to Top