Kadaba News

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.2. ಶಿಕ್ಷಕನ ಹುದ್ದೆಯ ಮಹತ್ವ ಅರಿತು ಗುಣಾತ್ಮಕ ಶಿಕ್ಷಣವನ್ನು ನೀಡುವುದೆ ಪ್ರತಿಯೊಬ್ಬ ಶಿಕ್ಷಕನ ಧೈಯವಾಗಬೇಕು ಎಂದು ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಮರನಾಥ ಗೌಡ ಹೇಳಿದರು. ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಯ್ಕೆ ಸಭೆ ಹಾಗೂ ಪ.ಪ್ರಾ.ಶಿಕ್ಷಕರ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಅರ್ಹತೆ ಅಧರಿಸಿ ಶಿಕ್ಷಕರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯದ ಹಕ್ಕನ್ನು ಪಡೆಯುವುದು ಸಂಘದ […]

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ Read More »

ಕರಾವಳಿ

ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ

(ನ್ಯೂಸ್ ಕಡಬ) newskadaba.com ಕಡಬ, ನ.2. ಆಲಂಕಾರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಂದ ಬಾರ್ಕುಲಿ ಅಧ್ಯಕ್ಷೆತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವ್ಯಾಪಾರ ಪರವಾನಿಗೆ ಇಲ್ಲದೆ ಕಾರ್ಯಾಚರಿಸುವ ಅಂಗಡಿಗಳ ಮೇಲೆ ಆಡಳಿತ ಮಂಡಳಿಯ ಸೂಕ್ತ ಕ್ರಮಕೈಗೊಳ್ಳುವ ನಿರ್ಣಯವನ್ನು ಅಂಗಿಕರಿಸಲಾಯಿತು. ಪಂಚಾಯಿತಿ ಸದಸ್ಯ ಕೇಶವ ಗೌಡ ಆಲಡ್ಕ ವಿಚಾರ ಪ್ರಸ್ತಾಪಿಸಿ, ಆಲಂಕಾರು ಪೇಟೆಯಲ್ಲಿ ಕೇವಲ ಕಟ್ಟಡ ಮಾಲಿಕರು ಕಟ್ಟಡ ಪರವಾನಿಗೆ ಮಾತ್ರ ಪಡೆದುಕೊಂಡು ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ವ್ಯಾಪಾರಸ್ಥರು ವ್ಯಾಪರ ಪರವಾನಿಗೆ ಪಡೆದುಕೊಳ್ಳದೆ ಗ್ರಾಮ ಪಂಚಾಯಿತಿಗೆ ಆದಾಯಕ್ಕೆ ವಂಚನೆ

ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ Read More »

ಕರಾವಳಿ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ನ.2. ಮದುವೆ ಮನೆಯಿಂದ ಜನರನ್ನು ಕರೆದುಕೊಂಡು ವಾಪಾಸ್ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗೇಟ್ ಬಳಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಾಗೇಪಲ್ಲಿಯ ಮಿಟ್ಟೆಮರಿ ಗ್ರಾಮದ ನಿವಾಸಿಗಳಾಗಿದ್ದು, ಬೆಂಗಳೂರಿನ ಸರ್ಜಾಪುರ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯನ್ನು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಮಧ್ಯರಾತ್ರಿ 12.30 ರ ಸುಮಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ 70ಕ್ಕೂ ಅಧಿಕ ಮಂದಿ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ Read More »

ಕರ್ನಾಟಕ

ಕೆನರಾ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ಪ್ರಾಧ್ಯಾಪಕರಿಗೆ ►ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಿಂದ ಡಾಕ್ಟರೇಟ್ ಪದವಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ.2. ಇಲ್ಲಿನ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕಿ ಶ್ರೀಮತಿ ಸುಮತಿ ಹಾಗೂ ಸಹ ಪ್ರಾಧ್ಯಾಪಕ ಸದಾಶಿವ ಪ್ರಭು ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಪಿ.ಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ಇನ್ಫರ್ಮೇಶನ್ ಸೈನ್ಸ್‌ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ಸುಮತಿ ಅವರು ನಿಟ್ಟೆ ಎನ್,ಎಂ.ಎ.ಎಂ.ಐ.ಟಿ. ಡಾ.ನಿರಂಜನ ಚಿಪಳೂಣ್ಕರ್ ಅವರ ಮಾರ್ಗದರ್ಶನದಲ್ಲಿ ‘ಡಿಸ್ಕವರಿ ಆ್ಯಂಡ್ ಇಂಟಿಗ್ರೇಶನ್ ಆಫ್ ವೆಬ್ ಸರ್ವೀಸಸ್ ಯೂಸಿಂಗ್ ಡಾಟಾ ಮೈನಿಂಗ್ ಟೆಕ್ನಿಕ್’ ವಿಷಯದಲ್ಲಿ ಮಂಡಿಸಿದ್ದರು. ಹಾಗೂ  ಮೆಕ್ಯಾನಿಕಲ್ ವಿಭಾಗದ ಸಹ ಪ್ರಾಧ್ಯಾಪಕ ಸದಾಶಿವ

ಕೆನರಾ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ಪ್ರಾಧ್ಯಾಪಕರಿಗೆ ►ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಿಂದ ಡಾಕ್ಟರೇಟ್ ಪದವಿ Read More »

ಕರಾವಳಿ

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ

(ನ್ಯೂಸ್ ಕಡಬ) newskadaba.com ವಿಜಯಪುರ, ನ.2. ಮನೆಯೊಳಗೆ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ಗೊಂಡ ಘಟನೆ ಸಿಂದಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ತಗಡು ಶೀಟಿನ ಮನೆ ಸಂಪೂರ್ಣವಾಗಿ ಜಖಂ ಗೊಂಡಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮನೆ ಹೊರಗೆ ಓಡಿದ ವೃದ್ದ ಮಹಿಳೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮನೆಯಲ್ಲಿದ್ದ ಧವಸ ಧಾನ್ಯ, ಬಟ್ಟೆ, ಗೃಹೊಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ. ಘಟನೆ ಕುರಿತು ದೇವರ ಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ Read More »

ಕರ್ನಾಟಕ

ಕಡಬ: ಕೆರೆಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.02. ಇಲ್ಲಿನ ಕುಟ್ರುಪ್ಪಾಡಿ ಎಂಬಲ್ಲಿ ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಕುಟ್ರುಪ್ಪಾಡಿ ಗ್ರಾಮದ ಹಳ್ಳಿ ನಿವಾಸಿ ರತ್ನಾವತಿ(65) ಎಂದು ಗುರುತಿಸಲಾಗಿದೆ. ಕಳೆದ 10 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರು ಬುಧವಾರ ರಾತ್ರಿ ವೇಳೆಗೆ ಕೆರೆಗೆ ಬಿದ್ದಿದ್ದಾರೆನ್ನಲಾಗಿದೆ. ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿರುವ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಡಬ: ಕೆರೆಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.2. ಕಲಬುರಗಿಯ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾದ 83 ವರ್ಷದ .ಡಾ.ಶರಣ ಬಸಪ್ಪ ರವರು ಗಂಡು ಮಗುವಾಗಿನ ತಂದೆಯಾಗಿದ್ದಾರೆ. ಮುಂಬೈ‌ನ ಖಾಸಗಿ ಆಸ್ಪತ್ರೆಯಲ್ಲಿ ಡಾ.ಶರಣ ಬಸಪ್ಪ ರವರ ಪತ್ನಿ ದಾಕ್ಷಾಯಿಣಿಗೆ ಹೆರಿಗೆಯಾಗಿದೆ. ಶರಣ ಬಸವೇಶ್ವರ ಸಂಸ್ಥಾನಕ್ಕೆ ವಾರುಸುಧಾರನ ಜನನವಾಗಿದೆ ಈ ಹಿನ್ನೆಲೆ ಭಕ್ತಾದಿಗಳಲ್ಲಿ  ಸಂಭ್ರಮ ಮನೆಮಾಡಿದೆ.  ಡಾ.ಶರಣ ಬಸವೇಶ್ವರರಿಗೆ  ಈಗಾಗಲೇ ನಾಲ್ಕು ಜನ ಹೆಣ್ಣು ಮಕ್ಕಳು ಇದ್ದಾರೆ.  83 ವರ್ಷದಲ್ಲಿ  ಡಾ.ಶರಣ ಬಸಪ್ಪ ಅಪ್ಪಾ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಮೊದಲ ಬಾರಿಗೆ ಮಗನ ಮುಖ

ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!! Read More »

ಕರ್ನಾಟಕ

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.1. ಉಜಿರೆಯ ವ್ಯಕ್ತಿಯೋರ್ವರು ಶಿವಮೊಗ್ಗದ ಆಲ್ಕೋಳದಲ್ಲಿರುವ ಚೈತನ್ಯ ರೂರಲ್ ಡೆವಲಪ್‌ಮೆಂಟ್‌ ಸೊಸೈಟಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉಜಿರೆ ಮೂಲದ ಸುನೀಲ್‌ ಫರ್ನಾಂಡಿಸ್(33) ಎಂದು ಗುರುತಿಸಲಾಗಿದೆ. ಮೇ ತಿಂಗಳಲ್ಲಿ ಉಜಿರೆಯಿಂದ ಪಾದ್ರಿ ತರಬೇತಿಗಾಗಿ ಶಿವಮೊಗ್ಗಕ್ಕೆ ತೆರಳಿದ್ದ ಸುನೀಲ್, ಬ್ರದರ್‌ ದೀಕ್ಷೆ ಪಡೆದು ತರಬೇತಿ ಪಡೆಯುತ್ತಿದ್ದರು. 14 ವರ್ಷಗಳ ಗುರು ಸೇವೆ ಪೂರ್ಣಗೊಂಡು ಮುಂದಿನ ತಿಂಗಳು ಪಟ್ಟಾಭಿಷೇಕಕ್ಕೆ ತಯಾರಿ ನಡೆಯುತ್ತಿತ್ತು. ಈ ವೇಳೆಯೇ

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ! Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್‌ ವಿದ್ಯಾಸಂಸ್ಥೆಯಲ್ಲಿ ಸ್ನೇಹ ಸಂಗಮ ಕಾರ್ಯಕ್ರಮ ► ವಿದ್ಯಾರ್ಥಿ ಹಾಗೂ ವಿದ್ಯಾಸಂಸ್ಥೆಯ ಬಾಂಧವ್ಯ ಗಟ್ಟಿಗೊಳಿಸಲು ಇದು ಸೂಕ್ತ ವೇದಿಕೆ- ಈಶೋ ಪಿಲಿಫ್

(ನ್ಯೂಸ್ ಕಡಬ) newskadaba.com ಕಡಬ, ನ.1. ಇಲ್ಲಿನ ಸೈಂಟ್ ಜೋಕಿಮ್ಸ್‌ ವಿದ್ಯಾಸಂಸ್ಥೆಯಲ್ಲಿ ಫಾ| ರೋನಾಲ್ಡೋ ಲೋಬೋರವರ ಅಧ್ಯಕ್ಷತೆಯಲ್ಲಿ ಪೂರ್ವ ವಿದ್ಯಾರ್ಥಿಗಳ ಸ್ನೇಹ ಸಂಗಮ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಸೈಂಟ್ ಮೇರಿಸ್ ಪ್ರೌಢಶಾಲಾ ಮುಖ್ಯಗುರು ಈಶೋ ಪಿಲಿಫ್ರವರು ಸಂಘಟನಾ ಶಕ್ತಿಯ ಮೂಲಕ ವಿದ್ಯಾರ್ಥಿ ಹಾಗೂ ವಿದ್ಯಾಸಂಸ್ಥೆಯ ಬಾಂಧವ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಸ್ನೇಹ ಸಂಗಮ ಕಾರ್ಯಕ್ರಮವು ಸೂಕ್ತ ವೇದಿಕೆ ಆಗಲಿದೆ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಚಾಲಕರಾದ ರೆ|ಫಾ| ರೋನಾಲ್ಡ್‌

ಕಡಬ: ಸೈಂಟ್ ಜೋಕಿಮ್ಸ್‌ ವಿದ್ಯಾಸಂಸ್ಥೆಯಲ್ಲಿ ಸ್ನೇಹ ಸಂಗಮ ಕಾರ್ಯಕ್ರಮ ► ವಿದ್ಯಾರ್ಥಿ ಹಾಗೂ ವಿದ್ಯಾಸಂಸ್ಥೆಯ ಬಾಂಧವ್ಯ ಗಟ್ಟಿಗೊಳಿಸಲು ಇದು ಸೂಕ್ತ ವೇದಿಕೆ- ಈಶೋ ಪಿಲಿಫ್ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ►ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ.1. 62ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಡಬದ ಸರಸ್ವತೀ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶ್ರೀಯುತ ಸತೀಶ್ ನಾಯ್ಕ್‌ ಕಡಬ ಇವರು ಧ್ವಜಾರೋಹಣಗೈದು ಕನ್ನಡ ರಾಜ್ಯೋತ್ಸವದ ಮಹತ್ವ ತಿಳಿಸಿದರು. ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಇವರು ಅಧ್ಯಕ್ಷೀಯ ಭಾಷಣ ಮಾಡಿದರು. ವೇದಿಕೆಯಲ್ಲಿ ಪ್ರಾಥಮಿಕ ವಿಭಾಗದ ಮುಖ್ಯ ಶ್ರೀಮಾನ್ ಶ್ರೀ ಮಾಧವ ಕೋಲ್ಪೆ ಹಾಗೂ ಪ್ರೌಢವಿಭಾಗದ ಮುಖ್ಯಮಾತಾಜಿ ಶೈಲಶ್ರೀ ಮಾತಜಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರರು ಭಾಗವಹಿಸಿದ್ದರು. ಶೈಲಶ್ರೀ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ►ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ
Scroll to Top