Kadaba News

ಕಡಬ: ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ► ತಾಲೂಕು ತಹಶೀಲ್ದಾರರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ.17. ತಾಲೂಕು ಕೇಂದ್ರದಲ್ಲಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ರವರ ಪ್ರತಿಮೆಯನ್ನು ಅನಾವರಣಗೊಳಿಸುವುದಲ್ಲದೆ ಡಿಸಿ ಮನ್ನಾ ಒತ್ತುವರಿಯಾದ ಜಾಗವನ್ನು ಭೂರಹಿತ ದಲಿತ ವರ್ಗಕ್ಕೆ ನೀಡುವುದು ಹೀಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ಕಡಬ ತಾಲೂಕು ಘೋಷಣೆಯಾಗಿದ್ದು ತಾಲೂಕಿನ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳುವಾಗ ಅಂಬೇಡ್ಕರ್ ಪ್ರತಿಮೆಯನ್ನು ಕಡಬ ತಾಲೂಕು ಕೇಂದ್ರದಲ್ಲಿ ಅನಾವರಣಗೊಳಿಸಬೇಕು. ತಹಶೀಲ್ದಾರರು ದಲಿತ ಕಾಲೋನಿಗೆ ಭೇಟಿ ಕೊಟ್ಟು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಕಡಬದಲ್ಲಿ ಇರುವ […]

ಕಡಬ: ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ► ತಾಲೂಕು ತಹಶೀಲ್ದಾರರಿಗೆ ಮನವಿ Read More »

ಕರಾವಳಿ

ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ಮದುವೆ ವಿವರ ಹಾಕಿ ► 11.39 ಲಕ್ಷ ರೂ. ಕಳೆದುಕೊಂಡ ಮುಲ್ಕಿಯ ವ್ಯಕ್ತಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.17. ಫಾರಿನ್ ಹುಡುಗಿಯನ್ನು ಮದುವೆಯಾಗುವ ಆಸೆಯಿಂದ ವ್ಯಕ್ತಿಯೋರ್ವರು ತನ್ನ ಮದುವೆಯ ಕುರಿತು ಕನ್ನಡ ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ವಿವರ ಹಾಕಿದ ಬಳಿಕ ಲಕ್ಷಾಂತರ ರೂಪಾಯಿಯನ್ನು ಕಳೆದುಕೊಂಡ ಘಟನೆ ಮುಲ್ಕಿಯಲ್ಲಿ ನಡೆದಿದೆ. ವಿದೇಶಿ ಯುವತಿಯ ಜಾಲದಲ್ಲಿ ಬಿದ್ದ ಯುವಕ ಈಗ ಸರಿ ಸುಮಾರು 11.39 ಲಕ್ಷ ರೂಪಾಯಿ ಕಳೆದು ಕೊಂಡಿದ್ದಾನೆ. ಸಿಂಗಾಪುರದಲ್ಲಿ ಉದ್ಯೋಗದಲ್ಲಿದ್ದ ಮುಲ್ಕಿಯ ಯುವಕನಿಗೆ ಈಗಾಗಲೇ ಒಂದು ಮದುವೆಯಾಗಿದ್ದು, ಕೆಲವು ಸಮಯದ ಹಿಂದೆ ಹೆಂಡತಿಗೆ ಡೈವೋರ್ಸ್ ನೀಡಿದ್ದ. ಎರಡನೇ ಮದುವೆಗೋಸ್ಕರ ಈತ 2017 ರ ಜೂನ್ ನಲ್ಲಿ ಮ್ಯಾಟ್ರಿಮೋನಿಯಲ್

ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ಮದುವೆ ವಿವರ ಹಾಕಿ ► 11.39 ಲಕ್ಷ ರೂ. ಕಳೆದುಕೊಂಡ ಮುಲ್ಕಿಯ ವ್ಯಕ್ತಿ..!!! Read More »

ಕರಾವಳಿ

ಕೊರುಂದೂರು ಅಂಗನವಾಡಿಯಲ್ಲಿ ಪ್ಲಾಸ್ಟಿಕ್ ಸಂಗ್ರಹ ► ಕಡಬ ಗ್ರಾ.ಪಂ.ಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿಯ ಗ್ರಾ.ಪಂ.ಗೊಳಪಟ್ಟ ಕೋಡಿಂಬಾಳ ಗ್ರಾಮದ ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಸಂಗ್ರಹಿಸಲಾದ ಪ್ಲಾಸ್ಟಿಕ್ ಗಳನ್ನು ಕಡಬ ಗ್ರಾ.ಪಂ.ಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ನೀಲಾವತಿ ಶಿವರಾಮ್, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್, ಪಂಚಾಯತ್ ಸಿಬ್ಬಂದಿ ಪದ್ಮಯ, ಸ್ಥಳೀಯರಾದ ಸತ್ಯಭಾಮ, ತನಿಯಪ್ಪ, ಅಬ್ದುಲ್ ಲತೀಫ್, ದಯಾನಂದ, ವಿದ್ಯಾ, ವಾರಿಜ, ಪ್ರಮೀಳಾ, ಆಯಿಷತ್ತಾಹಿರಾ, ಸುಮಲತಾ, ಯಶೋಧ, ಗಿರಿಜಾ, ಮಧುರ, ಮಂಜುಳಾ,

ಕೊರುಂದೂರು ಅಂಗನವಾಡಿಯಲ್ಲಿ ಪ್ಲಾಸ್ಟಿಕ್ ಸಂಗ್ರಹ ► ಕಡಬ ಗ್ರಾ.ಪಂ.ಗೆ ಹಸ್ತಾಂತರ Read More »

ಕರಾವಳಿ

ಕಡಬ: ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿನ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಡಬ ಎ ಮತ್ತು ಬಿ ಒಕ್ಕೂಟ ಹಾಗೂ ಶಾಲಾಭಿವೃದ್ದಿ ಸಮಿತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಡಬ ಗ್ರಾ.ಪಂ.ಸದಸ್ಯೆ ಶಾಲಿನಿ ಸತೀಶ್ ನಾೖಕ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೃಷ್ಣ ಬಿ, ಶ್ರೀಕ್ಷೇ.ಧ.ಗ್ರಾ.ಯೋ. ಎ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ, ಬಿ ಒಕ್ಕೂಟದ ಅಧ್ಯಕ್ಷ ಆನಂದ ಗೌಡ ಕೊಂಕ್ಯಾಡಿ, ಉಪಾಧ್ಯಕ್ಷರಾದ ಕೃಷ್ಣಪ್ಪ ಗೌಡ, ಜಯಾನಂದ ಗೌಡ, ಪ್ರಭಾಕರ ಕೆ.ಎಸ್, ಕೊರಗಪ್ಪ ಗೌಡ, ಶೇಖರ ಅರ್ಪಜೆ, ಲಕ್ಷ್ಮೀಶ ಬಂಗೇರ, ಸೇವಾಪ್ರತಿನಿಧಿಗಳಾದ

ಕಡಬ: ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಮರ್ದಾಳ: ಸಾರಕೆರೆ-ಪೊನೈತ್ತೂರು ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ..!!

(ನ್ಯೂಸ್ ಕಡಬ) newskadaba.com ಕಡಬ, ಅ.17. ತೀರ ಹದಗೆಟ್ಟ ಮರ್ದಾಳ ವ್ಯಾಪ್ತಿಯ ಸಾರಕೆರೆ-ಪೊನೈತ್ತೂರು ರಸ್ತೆಯ ಕಾಂಕ್ರೀಟೀಕರಣಕ್ಕೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಅವರಿಂದ ಸೋಮವಾರ ಚಾಲನೆ ದೊರೆಯಿತು. 2017-18ನೇ ಸಾಲಿನ ತಾ.ಪಂ.ಸದಸ್ಯರ ಅನುದಾನದಿಂದ ರೂ.1ಲಕ್ಷ ಹಾಗೂ ಗ್ರಾ.ಪಂ.ಅನುದಾನದಿಂದ ರೂ 1ಲಕ್ಷ ವರೆಗಿನ ಒಟ್ಟು 2ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ಕರಣ ನಡೆಯಲಿರುವ ಕಾಮಗಾರಿಗೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಉಪಾಧ್ಯಕ್ಷೆ ಲತಾ ಕೆ., ಎ.ಪಿ.ಎಂ.ಸಿ.ನಿರ್ದೇಶಕ ಮೇದಪ್ಪ ಗೌಡ

ಮರ್ದಾಳ: ಸಾರಕೆರೆ-ಪೊನೈತ್ತೂರು ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ..!! Read More »

ಕರಾವಳಿ

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ

(ನ್ಯೂಸ್ ಕಡಬ) newskadaba.com ಕಡಬ, ಅ.17. ಜ್ಯಾತತೀತ ನಿಲುವಿನೊಂದಿಗೆ ದಲಿತರನ್ನು ಉದ್ಧಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗಿನ ಜಿಲ್ಲಾ ಉಸ್ತುವಾರಿ ಸಚಿವರಂತಹ ದಲಿತ ವಿರೋಧಿ ನಾಯಕರಿಂದ ದೀನ ದಲಿತ ಕಡೆಗಣನೆ ನಡೆಯುತ್ತಿದೆ. ಡಿ.ಸಿ.ಮನ್ನಾ ಭೂಮಿಯಲ್ಲಿ ಕೂಡ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ದಲಿತರು ಎಚ್ಚರವಾಗಬೇಕಾಗಿದೆ ಎಂದು ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಹೇಳಿದ್ದಾರೆ. ಅವರು ಅಲಂಕಾರು ರೈತ ಭವನದಲ್ಲಿ ಭಾನುವಾರ ನಡೆದ ದಲಿತ್ ಸೇವಾ ಸಮಿತಿ ಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ Read More »

ಕರಾವಳಿ

ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ► ಇಂಟರ್ಲಾಕ್ ಕಾಮಗಾರಿಗೆ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅಂಗಳಕ್ಕೆ ಐತ್ತೂರು .ಪಂ.ಸದಸ್ಯರ 2017-18ನೇ ಸಾಲಿನ ರೂ.1ಲಕ್ಷ ಅನುದಾನದಲ್ಲಿ ಇಂಟರ್ಲಾಕ್ ಅಳವಡಿಸಲು ಸೋಮವಾರ ಗುದ್ದಲಿಪೂಜೆ ನಡೆಯಿತು. ತಾ.ಪಂ ಸದಸ್ಯೆ ಪಿ.ವೈ. ಕುಸುಮ ಗುದ್ದಲಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು  ನಾನು ಇದೇ ಶಾಲೆಯ ಹಳೇಯ ವಿದ್ಯಾರ್ಥಿಯಾಗಿದ್ದು, ಇಲ್ಲಿನ ಶಿಕ್ಷಕರು ಅನೇಕ ಬಾರಿ ಶಾಲಾ ಅಂಗಳಕ್ಕೆ ಇಂಟರ್ಲಾಕ್ ಅಳವಡಿಸುವ ಬಗ್ಗೆ ಬೇಡಿಕೆ ಇಟ್ಟಿದ್ದರು. ಆದರೆ ಈಗ ಸೂಕ್ತ ಸಮಯ ಒದಗಿ ಬಂದಿದೆ ಮುಂದಿನ ದಿನಗಳಲ್ಲಿ

ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ► ಇಂಟರ್ಲಾಕ್ ಕಾಮಗಾರಿಗೆ ಗುದ್ದಲಿಪೂಜೆ Read More »

ಕರಾವಳಿ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಅ.17. ಉದನೆ-ಶಿಬಾಜೆ ಜಿ.ಪಂ. ರಸ್ತೆಯ ಮರುಡಾಮರೀಕರಣಕ್ಕೆ ನಬಾರ್ಡ್ನಿಂದ 80 ಲಕ್ಷ ರೂ.ಅನುದಾನ ಮಂಜೂರುಗೊಂಡಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ತಿಳಿಸಿದ್ದಾರೆ. ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿಗೆ 2 ವರ್ಷಗಳ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಒತ್ತಡ ಹೇರಲಾಗಿತ್ತು. ಈ ವೇಳೆ ಅನುದಾನ ಬಿಡುಗಡೆಗೊಂಡಿದ್ದರೂ ಅನುದಾನವನ್ನು ಕಾರಣಾಂತರದಿಂದ ತಡೆಹಿಡಿಯಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನೊಂದಿಗೆ ಕೆಪಿಸಿಸಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ, ನೆಲ್ಯಾಡಿ ಕ್ಷೇತ್ರದ ಜಿ.ಪಂ.ಸದಸ್ಯ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್ Read More »

ಕರಾವಳಿ

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಮಹಾಮಳೆಯಿಂದಾಗಿ ಸಾವು-ನೋವು ಸಂಭವಿಸಿದ ಬೆಂಗಳೂರಿನ ಕೆಲವು ಸ್ಥಳಗಳಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪ್ರತ್ಯೇಕವಾಗಿ ಭೇಟಿ ನೀಡಿದರು. ಸಚಿವರಾದ ರಾಮಲಿಂಗಾರೆಡ್ಡಿ, ಡಿ.ಕೆ. ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್‌ ನೀಡಿದರು. ಇನ್ನು ಪ್ರತ್ಯೇಕವಾಗಿ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಸದಾನಂದಗೌಡರು ಲಗ್ಗೆರೆಯಲ್ಲಿ ಕೊಚ್ಚಿ ಹೋದ ಮೃತ ದಂಪತಿ ಮತ್ತು ಅರ್ಚಕ ವಾಸುದೇವ ಕುಟುಂಬಕ್ಕೆ ಸಾಂತ್ವನ ಹೇಳಿದರು. ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ,

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ Read More »

ಕರ್ನಾಟಕ

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.14. ಗುರುವಾರ ಕಳುವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರು ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಯ ಸರ್ಕಾರದ ಸಚಿವಾಲಯದ ಬಳಿ ನಿಲ್ಲಿಸಿದ್ದ ನೀಲಿ ಬಣ್ಣದ ವ್ಯಾಗನಾರ್ ಕಾರನ್ನು ಕಳ್ಳರು ಕದ್ದೊಯ್ದಿದ್ದರು. ಉತ್ತರಪ್ರದೇಶ ಪೊಲೀಸರು ಕಾರನ್ನು ಪತ್ತೆ ಮಾಡಿ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ್ರೆ ಕಳ್ಳತನಕ್ಕೆ ಸಂಬಂಧಿಸಿದಂತೆ ಯಾವುದೇ ಬಂಧನವಾಗಿಲ್ಲ. ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಕಳ್ಳನನ್ನು

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!! Read More »

ಕರಾವಳಿ
Scroll to Top