Kadaba News

ಬಂಟ್ವಾಳ :ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯಾಧಿಕಾರಿ ಸ್ಥಿತಿ ಗಂಭೀರಾ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕೃಷ್ಣ ಪುಣಚ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನು ಆರೋಗ್ಯಾಧಿಕಾರಿ ನನ್ನ ಸಾವಿಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎಂದು ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. “ನನಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬಿಟ್ಟೋ ಪ್ರತಿದಿನ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಜೊತೆಗೆ ಕಚೇರಿಯ ಸಿಬ್ಬಂದಿ ಇಕ್ಬಾಲ್ ಕೂಡ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾನೆ. ನಾನು ಬಂಟ್ವಾಳ ಪುರಸಭೆಗೆ 5 ತಿಂಗಳ […]

ಬಂಟ್ವಾಳ :ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯಾಧಿಕಾರಿ ಸ್ಥಿತಿ ಗಂಭೀರಾ Read More »

ಕರಾವಳಿ

ಮುಲ್ಕಿ :ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೂಲಿಕಾರ್ಮಿಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11:ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಗುಡ್ಡೆ ಹಾಡಿಯಲ್ಲಿ ಕೂಲಿಕಾರ್ಮಿಕ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಮುಲ್ಕಿ ಕೆಎಸ್ ರಾವ್ ನಗರ ನಿವಾಸಿ ಕೃಷ್ಣ ಪೂಜಾರಿ (58) ಗುರುತಿಸಲಾಗಿದೆ. ಮೃತ ಕೃಷ್ಣ ಪೂಜಾರಿ ಕೂಲಿ ಕೆಲಸ ಮಾಡಿಕೊಂಡಿದ್ದು, ಕಳೆದ ತಿಂಗಳ ಹಿಂದೆ ಕೋಲ್ನಾಡು ಹೋಯಿಗೆ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದು ಬಳಿಕ ಫ್ಯಾಕ್ಟರಿ ಮುಚ್ಚುಗಡೆಯಾದ ಬಳಿಕ ಪೈಪ್ ಕಂಪನಿಯೊಂದರಲ್ಲಿ ಮಾಡುತ್ತಿದ್ದರು.ಕಂಪನಿ ಮುಚ್ಚುಗಡೆಯಾದ ಬಳಿಕ ಆತಂಕಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಮುಲ್ಕಿ :ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೂಲಿಕಾರ್ಮಿಕ Read More »

ಕರಾವಳಿ

ಉಡುಪಿ :ಸಿಡಿಲು ಬಡಿದು ವರ್ಕ್ ಫ್ರಂ ಹೋಮ್ ಉದ್ಯೋಗಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.11: ಸಿಡಿಲು‌ ಬಡಿದು‌ ಯುವಕನೋರ್ವ ಸಾವನ್ನಪ್ಪಿದ ಘಟನೆ ವಂಡಾರಿನ ಬೋರ್ಡಕಲ್ಲಿನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ‌ ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಮೃತಪಟ್ಟ ಯುವಕ.   ಇವರು ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿದ್ದು ಕೊರೊನಾ ಸಮಸ್ಯೆಯ ಅನಂತರ ಹಲವು ತಿಂಗಳಿಂದ ಮನೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದರು.ಮನೆಯೊಳಗಡೆ ಲ್ಯಾಪ್‌ಟಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲಿನ‌ ಹೊಡೆತಕ್ಕೆ ಒಳಗಾಗಿ ಗಂಭೀರವಾಗಿ ಅಸ್ವಸ್ಥತಗೊಂಡಿದ್ದು ತಕ್ಷಣ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಗೆ ಕರೆದೊಯ್ಯಲಾಯಿತು.

ಉಡುಪಿ :ಸಿಡಿಲು ಬಡಿದು ವರ್ಕ್ ಫ್ರಂ ಹೋಮ್ ಉದ್ಯೋಗಿ ಮೃತ್ಯು Read More »

ಕರಾವಳಿ

ಬಂಟ್ವಾಳ :ಸಿಡಿಲು ಬಡಿದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.11: ಬಂಟ್ವಾಳ ತಾಲೂಕಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತಾಲೂಕಿನ ಗಡಿ ಭಾಗವಾಗಿರುವ ಕರೋಪಾಡಿ ಗ್ರಾಮದ ಸಾರ್ಥಕೋಡಿ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಚಂದಪ್ಪ ಮೂಲ್ಯ ಮೃತಪಟ್ಟವರು.ರಾತ್ರಿ ಮನೆಗೆ ಸಿಡಿಲು ಬಡಿದಿದೆ, ಸುಮಾರು 12.30ರ ಬಳಿಕ ಘಟನೆ ನಡೆದಿದ್ದು, ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇದೇ ಸಂದರ್ಭ ಮನೆಗೂ ಸಿಡಿಲಾಘಾತದಿಂದ ಹಾನಿಗಳುಂಟಾಗಿವೆ. ವಿದ್ಯುತ್ ಉಪಕರಣಗಳು ಸುಟ್ಟುಹೋಗಿವೆ.

ಬಂಟ್ವಾಳ :ಸಿಡಿಲು ಬಡಿದು ವ್ಯಕ್ತಿ ಮೃತ್ಯು Read More »

ಕರಾವಳಿ

ಗೃಹರಕ್ಷಕರು ಚುನಾವಣಾ ಕರ್ತವ್ಯ ನಿರ್ವಹಿಸಿ- ಚೂಂತಾರು 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಗುರುತಿನ ಚೀಟಿಯನ್ನು ಪಡೆಯದ ಗೃಹರಕ್ಷಕರು ಜಿಲ್ಲಾ ಗೃಹರಕ್ಷಕದಳ ಕಛೇರಿಗೆ ಬಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಸೂಚಿಸಿದರು. ಅವರು ಡಿಸೆಂಬರ್ 10 ರಂದು ಸುಳ್ಯ ಘಟಕಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಚರ್ಚಿಸಿದರು ಹಾಗೂ ಗೃಹರಕ್ಷಕರ ಕುಂದು ಕೊರತೆಗಳನ್ನು ಆಲಿಸಿದರು.ಸುಳ್ಯ ಘಟಕದ ಘಟಕಾಧಿಕಾರಿ ಜಯಂತ್

ಗೃಹರಕ್ಷಕರು ಚುನಾವಣಾ ಕರ್ತವ್ಯ ನಿರ್ವಹಿಸಿ- ಚೂಂತಾರು  Read More »

ಕರಾವಳಿ

ಮಗುವಿನ ಹಕ್ಕುಗಳ ಉಲ್ಲಂಘನೆಯಾದ್ದಲ್ಲಿ ಮಕ್ಕಳ ಸಹಾಯವಾಣಿ ➤1098 ಕರೆ ಮಾಡಿ- ಡಿ ಶಂಕರಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಪ್ರತಿಯೊಂದು ಮಗುವಿನ ಹಕ್ಕುಗಳ ಉಲ್ಲಂಘನೆಯಾಗಿದೆಂದು ತಿಳಿದಾಗ ಯಾವುದೇ ಹಿಂಜರಿಕೆಯನ್ನು ಮಾಡದೇ ಮಕ್ಕಳ ಸಹಾಯವಾಣಿ -1098 ತಕ್ಷಣ ಕರೆ ಮಾಡಿ ಮಾಹಿತಿ ನೀಡಿದರೆ ಮಗುವಿನ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಿ ಶಂಕರಪ್ಪ ಹೇಳಿದರು. ಅವರು ಬುಧವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಯುನಿಸೆಫ್ ಹೈದರಬಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮಂಗಳೂರು, ಜಿಲ್ಲಾ

ಮಗುವಿನ ಹಕ್ಕುಗಳ ಉಲ್ಲಂಘನೆಯಾದ್ದಲ್ಲಿ ಮಕ್ಕಳ ಸಹಾಯವಾಣಿ ➤1098 ಕರೆ ಮಾಡಿ- ಡಿ ಶಂಕರಪ್ಪ Read More »

ಕರಾವಳಿ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಪಾನ್ ಮಸಾಲಗಳನ್ನು ಜಗಿದು ಉಗುಳುವುದು ಶಿಕ್ಷಾರ್ಹ ಅಪರಾಧ ➤ ಡಾ. ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11:ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಸೇವನೆ ಹಾಗೂ ತಂಬಾಕು ಉತ್ಪನ್ನ ಜಗಿದು ಉಗಿಯುವುದು ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.  ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನುದ್ದೇಶಿ ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ್ದು ಇದನ್ನು ಉಲ್ಲಂಘನೆ ಮಾಡಿದವರಿಗೆ ರೂ. 200 ಗಳ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಪಾನ್ ಮಸಾಲಗಳನ್ನು ಜಗಿದು ಉಗುಳುವುದು ಶಿಕ್ಷಾರ್ಹ ಅಪರಾಧ ➤ ಡಾ. ರಾಜೇಂದ್ರ ಕೆ.ವಿ Read More »

ಕರಾವಳಿ

ರೆಂಜಿಲಾಡಿ: ಕಾಡಾನೆ ದಾಳಿಗೆ ಅಪಾರ ಕೃಷಿ ಹಾನಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.11: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ರೆಂಜಿಲಾಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಕೃಷಿ ಹಾನಿ ಉಂಟಾಗಿದೆ. ರೆಂಜಿಲಾಡಿ ಗ್ರಾಮದ ಕೃಷಿಕ ಕೆರೆತೋಟ ಮೃತ್ಯುಂಜಯ ಬೀಡೆ ಅವರ ಅಲಾಟ ಎಂಬಲ್ಲಿಯ ಕೃಷಿ ತೋಟಕ್ಕೆ ಡಿ.9ರ ರಾತ್ರಿ ಕಾಡಾನೆ ನುಗ್ಗಿ 250ಕ್ಕೂ ಅಧಿಕ ಅಡಿಕೆ ಮರ, 25ಕ್ಕೂ ಅಧಿಕ ಬಾಳೆ ಕೃಷಿಯನ್ನು ಪುಡಿಗೈದಿದೆ. ತಡೆ ಬೇಲಿ ಹಾಗೂ ನೀರಿನ ಪೈಪ್ ಕಾಡಾನೆ ದಾಳಿಗೆ ಹಾನಿಗೊಳಗಾಗಿದೆ.

ರೆಂಜಿಲಾಡಿ: ಕಾಡಾನೆ ದಾಳಿಗೆ ಅಪಾರ ಕೃಷಿ ಹಾನಿ Read More »

ಕರಾವಳಿ

ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟಿದ್ದಾರೆ. ಅವರು ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಶಂಕರನಾರಾಯಣ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹದ್ದೂರು ರಾಜೀವ್ ಶೆಟ್ಟಿಯವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.  

ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಹಿನ್ನಲೆ ➤ ಎಡೆಸ್ನಾನ, ಡಿಸಿ ಜತೆ ಚರ್ಚಿಸಿ ಅಂತಿಮ ತೀರ್ಮಾನ – ಡಾ.ಯತೀಶ್‌ ಉಳ್ಳಾಲ್‌

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.09: ಕೊರೊನಾದ ಕಾರಣದಿಂದ ಈ ಬಾರಿ ಎಡೆಸ್ನಾನವನ್ನು ಮೊಟಕುಗೊಳಿಸಲು ಈ ಹಿಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಮತ್ತೊಮ್ಮೆ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈ ಬಾರಿ ಬೀದಿ ಬದಿ ವ್ಯಾಪಾರಕ್ಕೆ ಮತ್ತು ಸಂತೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ದೇವಳದ ಆಡಳಿತಾಧಿಕಾರಿ ಮತ್ತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್‌ ಉಳ್ಳಾಲ್‌ ಹೇಳಿದರು.   ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ದೇವಳದ ಮೇಲ್ಮಹಡಿಯಲ್ಲಿ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಹಿನ್ನಲೆ ➤ ಎಡೆಸ್ನಾನ, ಡಿಸಿ ಜತೆ ಚರ್ಚಿಸಿ ಅಂತಿಮ ತೀರ್ಮಾನ – ಡಾ.ಯತೀಶ್‌ ಉಳ್ಳಾಲ್‌ Read More »

ಕರಾವಳಿ
Scroll to Top