Kadaba News

ಕಡಬ: ಗಾಂಧೀ ಜಯಂತಿ ಆಚರಣೆ ► ಪಂಚಾಯತ್ ವಠಾರದಲ್ಲಿ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಕಡಬ,ಅ.3. ಇಲ್ಲಿನ ಗ್ರಾ.ಪಂ. ವತಿಯಿಂದ ಗಾಂಧೀ ಜಯಂತಿ ಆಚರಣೆಯನ್ನು ಪಂಚಾಯತ್ ಸಭಾಭವನದಲ್ಲಿ ಸೋಮವಾರ ಆಚರಿಸಿದರು. ಗ್ರಾ.ಪಂ. ಅಧ್ಯಕ್ಷರಾದ ಬಾಬು ಮುಗೇರರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಗ್ರಾಮ ಸಮೃದ್ಧಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮವಾಗಿ ಪಂಚಾಯತ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ತಾ.ಪಂ.ಸದಸ್ಯ ಪಝಲ್ ಕೋಡಿಂಬಾಳ, ಗ್ರಾ.ಪಂ. ಉಪಾಧ್ಯಕ್ಷೆ ಜ್ಯೋತಿ ಡಿ.ಕೋಲ್ಪೆ, ಗ್ರಾ.ಪಂ.ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಹಾಜಿ ಕೆ.ಎಂ. ಹನೀಫ್, ನಾರಾಯಣ ಪುಜಾರಿ, ಶೆರೀಫ್ ಎ.ಎಸ್., ಶಾಲಿನಿ ಸತೀಶ್ ನಾೖಕ್, ಹರ್ಷ ಕೋಡಿ, ಜಯಂತಿ, ಸರೋಜಿನಿ […]

ಕಡಬ: ಗಾಂಧೀ ಜಯಂತಿ ಆಚರಣೆ ► ಪಂಚಾಯತ್ ವಠಾರದಲ್ಲಿ ಸ್ವಚ್ಛತೆ Read More »

ಕರಾವಳಿ

ಕೊಂಬಾರು: ಬಾವಿಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.03. ತಮ್ಮ ತೋಟದಲ್ಲಿನ ಕೆರೆಗೆ ಶಾಲಾ ಬಾಲಕನೋರ್ವ ಕಾಲು ಜಾರಿ ಮೃತಪಟ್ಟ ಘಟನೆ ಕೊಂಬಾರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಇಲ್ಲಿನ ಕೊಂಬಾರು ಗ್ರಾಮದ ಕೊಡೆಂಕೀರಿ ನಿವಾಸಿ ನಾಗೇಶ್ ಎಂಬವರ ಪುತ್ರ ರಕ್ಷಿತ್(8) ಮೃತಪಟ್ಟ ದುರ್ದೈವಿ. ತಮ್ಮ ಮಗನನ್ನು ಮನೆಯಲ್ಲಿ ಬಿಟ್ಟು ತಂದೆ ತಾಯಿ ಪೇಟೆ ಕಡೆ ಹೋಗಿದ್ದು, ಮನೆಗೆ ಹಿಂತಿರುಗಿ ಬಂದಾಗ ರಕ್ಷಿತ್ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಪಕ್ಕದಲ್ಲೆಲ್ಲಾ ಹುಡುಕಾಡಿದಾಗ ರಕ್ಷಿತ್ ನ ಮೃತದೇಹ ಕೆರೆಯಲ್ಲಿ ಕಂಡುಬಂದಿದೆ. ಸ್ಥಳಕ್ಕೆ ಕಡಬ

ಕೊಂಬಾರು: ಬಾವಿಗೆ ಬಿದ್ದು ಬಾಲಕ ಮೃತ್ಯು Read More »

ಕರಾವಳಿ

ಕಡಬ: ಮಾತೃಪೂರ್ಣ ಯೋಜನೆಗೆ ಚಾಲನೆ ► ತಲೆಗೆ ಹೂ ಮುಡಿಸಿ, ಕೈಗೆ ಬಳೆತೊಡಿಸಿ, ಹಣೆಗೆ ಕುಂಕುಮ ಇಟ್ಟು ಗರ್ಭಿಣಿ- ಭಾಣಂತಿಯರಿಗೆ ಗೌರವ

(ನ್ಯೂಸ್ ಕಡಬ) newskadaba.com ಕಡಬ,ಅ.3. ಕರ್ನಾಟಕ ಸರ್ಕಾರವು ಜಾರಿಗೆ ತಂದ ಮಾತೃಪೂರ್ಣ ಯೋಜನೆಯ ಉದ್ಘಾಟನೆಯು ಸೋಮವಾರ ಕಡಬ ಚರ್ಚು ಅಂಗನವಾಡಿಯಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ. ವರ್ಗೀಸ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಮಾತೃಪೂರ್ಣ ಯೋಜನೆಯು ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯದ ದೃಷ್ಟಿಯಿಂದ ರೂಪಿಸಿರುವ ಉತ್ತಮ ಯೋಜನೆಯಾಗಿದೆ ಈ ಯೋಜನೆ ನಮ್ಮ ದ.ಕ.ಹಾಗೂ ಉಡುಪಿ ಜಿಲ್ಲೆಗೆ ಔಚಿತ್ಯವಾಲ್ಲವಾದರೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೌಷ್ಠಿಕ ಆಹಾರ ಸರಿಯಾಗಿ ದೊರಕುವುದಿಲ್ಲ ಇದನ್ನು ಗಮನದಲ್ಲಿಟ್ಟು ಸರ್ಕಾರ ಯೋಜನೆ ರೂಪಿಸಿದೆ. ಇಂತಹ

ಕಡಬ: ಮಾತೃಪೂರ್ಣ ಯೋಜನೆಗೆ ಚಾಲನೆ ► ತಲೆಗೆ ಹೂ ಮುಡಿಸಿ, ಕೈಗೆ ಬಳೆತೊಡಿಸಿ, ಹಣೆಗೆ ಕುಂಕುಮ ಇಟ್ಟು ಗರ್ಭಿಣಿ- ಭಾಣಂತಿಯರಿಗೆ ಗೌರವ Read More »

ಕರಾವಳಿ

ರೆಂಜಿಲಾಡಿ: ಕಾಡಾನೆ ಹಾವಳಿ ► ಅಪಾರ ಪ್ರಮಾಣದ ಕೃಷಿ ನಾಶ..!!!

(ನ್ಯೂಸ್ ಕಡಬ) newskadaba.com ಕಡಬ,ಅ.3. ರೆಂಜಿಲಾಡಿ ಗ್ರಾಮದ ಎಳುವಾಲೆ ನಿವಾಸಿ ಬಾಬು ಗೌಡ ಅವರ ಅಡಿಕೆ ತೋಟಕ್ಕೆ ಕಾಡಾನೆ ಹಿಂಡು ಕಳೆದ ಮೂರು ದಿನಗಳಿಂದ ಲಗ್ಗೆ ಇಟ್ಟಿದ್ದು ಅಪಾರ ಪ್ರಮಾಣದ ಅಡಿಕೆ, ತೆಂಗು, ಬಾಳೆ ಕೃಷಿಯನ್ನು ನಾಶ ಮಾಡಿದೆ. ಕಾಡಾನೆ ದಾಳಿಯಿಂದಾಗಿ ಸುಮಾರು 25000ರೂ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಈ ಪರಿಸರದ ಜರ್ನಾಧನ ಗೌಡ ಹಾಗೂ ರಾಮಚಂದ್ರ ಗೌಡ ಎಳುವಾಲೆ ಅವರ ಕೃಷಿ ತೋಟಕ್ಕೆ ಕೂಡ ದಾಳಿ ಮಾಡಿದ್ದು ಕೃಷಿಗೆ ಹಾನಿ ಮಾಡಿದೆ. ಈ ಬಗ್ಗೆ

ರೆಂಜಿಲಾಡಿ: ಕಾಡಾನೆ ಹಾವಳಿ ► ಅಪಾರ ಪ್ರಮಾಣದ ಕೃಷಿ ನಾಶ..!!! Read More »

ಕರಾವಳಿ

ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಅ.3. ಇಲ್ಲಿನ ನೂಜಿಬಾಳ್ತಿಲ ಗ್ರಾ.ಪಂ.ನಲ್ಲಿ ಗಾಂಧಿಜಯಂತಿ ದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ಸೋಮವಾರ ನಡೆಸಲಾಯಿತು. ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸ್ವಚ್ಚತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಮಹಾತ್ಮ ಗಾಂಧೀಜಿಯವರ ಕನಸನ್ನು ನನಸಾಗಿಸುವುದರೊಂದಿಗೆ ದೇಶಾದ್ಯಂತ ಗಾಂಧಿ ಜಯಂತಿಯನ್ನು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ನಮ್ಮ ಕಡಬ ತಾಲೂಕಿನಾದ್ಯಂತ ಎಲ್ಲಾ ಗ್ರಾ.ಪಂ.ನಲ್ಲಿ ಸಂಘಸಂಸ್ಥೆಗಳಲ್ಲಿ, ಶಾಲಾ ಕಾಲೇಜುಗಳು, ಪ್ರಾರ್ಥನಾ ಮಂದಿರಗಳು ಸೇರಿದಂತೆ ಪರಿಸರದಲ್ಲಿ ಸಂಪೂರ್ಣ ಸ್ವಚ್ಚತೆಯನ್ನು

ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಸಮುದ್ರದ ಅಲೆಗೆ ಸಿಳುಕಿ ► ಇಬ್ಬರು ಬಾಲಕರು ನೀರುಪಾಲು

(ನ್ಯೂಸ್ ಕಡಬ) newskadaba.com ಕಾರವಾರ,ಅ.03. ಸಮುದ್ರಕ್ಕೆ ಆಟವಾಡಲು ತೆರಳಿದ್ದ ಬಾಲಕರಿಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ ದುರ್ದೈವಿಗಳು. ಸೋಮವಾರ ಸಂಜೆ ನೀರಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಬಾಲಕರು ಸಮುದ್ರದ ಅಲೆಗಳಿಗೆ ಸಿಳುಕಿ ಕೊಚ್ಚಿ ಹೋಗಿದ್ದರು. ತಡರಾತ್ರಿ ಹುಡುಕಾಟ ನಡೆಸಿದರೂ ಇಬ್ಬರು ಬಾಲಕರ ಸುಳಿವು ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಗ್ರಾಮದ ಕಡಲತೀರದಲ್ಲಿ ಬಾಲಕರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು

ಸಮುದ್ರದ ಅಲೆಗೆ ಸಿಳುಕಿ ► ಇಬ್ಬರು ಬಾಲಕರು ನೀರುಪಾಲು Read More »

ಕರಾವಳಿ

ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ►ಪ್ರಯಾಣಿಕರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಹೊಸನಗರ,ಅ.02, ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಗಾಯಗಳು ಆಗಿರುವ ಘಟನೆ ತಾಲೂಕಿನ ಹನಿಯಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಕುಂದಾಪುರದಿಂದ ಶಿವಮೊಗ್ಗ ದತ್ತ ಸಾಗುತ್ತಿದ್ದ ಹನುಮಾನ್ ಕಂಪನಿಯ ಬಸ್ ಹಾಗೂ ಹೊಸನಗರ ಕಡೆಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಬಸ್ಸುಗಳ ಮುಂಬಾಗ ನಜ್ಜುಗುಜ್ಜಾಗಿದೆ. ಬಸ್ ಗಳ ಚಾಲಕರಿಗೆ ಹಾಗೂ 5 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. 20 ಪ್ರಯಾಣಿಕರು

ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ►ಪ್ರಯಾಣಿಕರಿಗೆ ಗಂಭೀರ ಗಾಯ Read More »

ಕರ್ನಾಟಕ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ

 (ನ್ಯೂಸ್ ಕಡಬ) newskadaba.com  ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ Read More »

ಕರಾವಳಿ

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಮುಂಬೈ,ಸೆ.29. ಇಲ್ಲಿನ ಎಲ್ಫಿನ್‍ಸ್ಟೋನ್ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 22 ಮಂದಿ ಸಾವಿಗೀಡಾದ ದುರಂತ ಘಟನೆ ಶುಕ್ರವಾರ ಸಂಭವಿಸಿದೆ. ಭಾರಿ ಮಳೆಯಿಂದಾಗಿ ನಂತರ ಮುಂಬೈ ರೈಲು ನಿಲ್ದಾಣದಲ್ಲಿ ರೈಲು ಪ್ರಯಾಣಿಗರ ಸಂಖ್ಯೆ ಜಾಸ್ತಿಯಾಗಿತ್ತು. ಈ ವೇಳೆ ಪರೇಲ್ ಮತ್ತು  ಎಲ್ಫಿನ್‍ಸ್ಟೋನ್ ರೋಡ್ ಸ್ಟೇಷನ್ ನಡುವೆಯಿರುವ ಪಾದಚಾರಿಗಳ ಸಂಚಾರ ಮಾರ್ಗ ಸೇತುವೆ ಮೇಲೆ ನೂಕು ನುಗ್ಗಲು ಉಂಟಾಗಿ ಸಂಭವಿಸಿದೆ. ಈ ದುರಂತದಲ್ಲಿ 22 ಮಂದಿ ಸಾವುಗೀಡಾಗಿದ್ದು ಸುಮಾರು 30ಕ್ಕಿಂತಲೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ನಾಲ್ಕು ರೈಲುಗಳು

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ Read More »

ಕರ್ನಾಟಕ

ನಾಳೆ(ಸೆ.30ರಂದು) ನೂಜಿಬಾಳ್ತಿಲದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ► ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ಮಲಂಕರ ಸಿರಿಯನ್ ಕ್ಯಾಥಲಿಕ್ ಧರ್ಮ ಸಭೆ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತೀವಂದನೀಯ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಕಾಲಾಯಿಲ್ರವರ ಪೀಠಾರೋಹಣ ಹಾಗೂ ಅಭಿನಂದನಾ ಸಮಾರಂಭವು ಸೆ.30ರಂದು ನೂಜಿಬಾಳ್ತಿಲ ಸೈಂಟ್ ಮೇರೀಸ್ ಕಥೀಡ್ರಲ್ನಲ್ಲಿ ನಡೆಯಲಿದೆ ಎಂದು ಪೀಠಾರೋಹಣ ಸಮಾರಂಭದ ಪ್ರಧಾನ ಸಂಯೋಜಕರಾದ ಫಾ. ಪಿಲಿಪ್ ನೆಲ್ಲಿವಿಳ ಹೇಳಿದ್ದಾರೆ. ಸೆ.30ರಂದು ಬೆಳಿಗ್ಗೆ 8.30ಕ್ಕೆ ಭಾರತ ಕಥೋಲಿಕ್ ಧರ್ಮಾಧ್ಯಕರುಗಳ ಮಂಡಳಿಯ ಅಧ್ಯಕ್ಷ ಘನವೆತ್ತ ಪರಮಪೂಜ್ಯ ಬಸೇಲಿಯೋಸ್ ಕಾರ್ಡಿನಲ್ ಕ್ಲೀಮೀಸ್ ಕಾತೋಲಿಕೋಸ್ ಹಾಗೂ ನೂತನ ಧರ್ಮಾಧ್ಯಕ್ಷರುಗಳಿಗೆ ಧಾರ್ಮಿಕ

ನಾಳೆ(ಸೆ.30ರಂದು) ನೂಜಿಬಾಳ್ತಿಲದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ► ಅಭಿನಂದನಾ ಸಮಾರಂಭ Read More »

ಕರಾವಳಿ
Scroll to Top