Kadaba News

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಇನ್ನು ಮುಂದೆ ತೀರ್ಥ ಯಾತ್ರೆಗೆ ತೆರಳುವ ಯಾತ್ರಿಗಳಿಗೆ ಕರ್ನಾಟಕ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಉತ್ತರಾಖಂಡ್‍ನ ಬದ್ರಿನಾಥ್, ಕೇದಾರ್‍ನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ತೀರ್ಥ ಯಾತ್ರೆಗೆ ಹೋಗುವ ಯಾತ್ರಿಗಳಿಗೆ ನೀಡಲಾಗುವ 20,000 ರೂ. ಸಹಾಯಧನದ ದುರ್ಬಳಕೆಯನ್ನು ತಡೆಗಟ್ಟುವ ಉದ್ದೇಶದೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆಗಸ್ಟ್ 17 ರಂದು ಚಾರ್ ಧಾಮ್ ಯಾತ್ರಿಗಳಿಗೆ ನೀಡಲಾಗುವ ಸಬ್ಸಿಡಿ ಬಗ್ಗೆ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಮಾರ್ಗಸೂಚಿಯಲ್ಲಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವ ಅಂಶವನ್ನು ಸೇರಿಸಲಾಗಿದೆ. ಪ್ರತಿ […]

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…??? Read More »

ಕರಾವಳಿ

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.01, ರೈತರೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ರೈತನನ್ನು ಚಿಕ್ಕತಿಮ್ಮಯ್ಯ (45) ಎಂದು ಗುರುತಿಸಲಾಗಿದೆ. ಚಿಕ್ಕತಿಮ್ಮಯ್ಯ ಎಂದಿನಂತೆ ಗುರುವಾರ ಕೂಡ ತನ್ನ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಮ್ಮ ಮನೆಯವರು ಜಮೀನಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ರೈತ ಚಿಕ್ಕತಿಮ್ಮಯ್ಯ ಅವರನ್ನ ಕತ್ತು ಕೊಯ್ದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಕಾರಣವೇನು ಎಂಬುದು

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ Read More »

ಕರಾವಳಿ

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01,  7 ವರ್ಷಗಳ ಹಿಂದೆ ಸಿಎಂ ಆಗಿದ್ದ ಕಾಲದಲ್ಲಿ ಬಾಲಕನೊಬ್ಬನನ್ನು ದತ್ತು ಪಡೆದು ಕೊನೆವರೆಗೂ ವಿದ್ಯಾಭ್ಯಾಸ ಕೊಡಿಸುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರವರು ಇದೀಗ ದತ್ತು ಬಾಲಕನ ಕೈ ಬಿಟ್ಟಿದ್ದಾರೆ. ಯಾದಗಿರಿ ಮೂಲದ ಬಸವರಾಜು ಮತ್ತು ಶಿವಮ್ಮ ದಂಪತಿಯ 10 ವರ್ಷದ ಮಗನನಾದ ವಿಶ್ವನಾಥ್ ನನ್ನು ಬಿಎಸ್‍ವೈ ದತ್ತು ಪಡೆದು ಬಾಲಕನ ಹೆಸರಿನಲ್ಲಿ ಒಂದು ಲಕ್ಷ ರೂಪಾಯಿ ಬ್ಯಾಂಕಿನಲ್ಲಿ ಡೆಪಾಸಿಟ್ ಮಾಡ್ತೀನಿ ಅಂತಾ ದೇವರ ಮುಂದೆ ಆಣೆ ಪ್ರಮಾಣ ಕೂಡ ಮಾಡಿದ್ದರು.

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..??? Read More »

ಕರ್ನಾಟಕ

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ► 10 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳ್ಳತನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಸೆ.01, ಇಲ್ಲಿನ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ‌ ನುಗ್ಗಿದ ಕಳ್ಳರು ದೇವಿ ವಿಗ್ರಹ ಹಾಗೂ ಆಭರಣಗಳನ್ನು ಕಳವು ಮಾಡಿದ ಘಟನೆ ಶುಕ್ರವಾರದಂದು ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಲ್ಲಿ ಈ ಘಟನೆ ನಡೆದಿದ್ದು, ಪ್ರಾಚೀನ ಕಾಲದ ಶ್ರೀ ದೇವಿಯ ವಿಗ್ರಹ, ಪ್ರಭಾವಳಿ, ಆಭರಣಗಳನ್ನು ದೋಚಿದ ಕಳ್ಳರು ಸುಮಾರು 10 ಲಕ್ಷದ ಅಧಿಕ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ದೇವಸ್ಥಾನಕ್ಕೆ ಅಳವಡಿಸಿದ್ದ ಸಿಸಿಟಿವಿಯನ್ನು ಧ್ವಂಸಗೊಳಿಸಿದ ಬಳಿಕ ಕಳ್ಳರು ತಮ್ಮ ಕೈಚಳಕ

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ► 10 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳ್ಳತನ Read More »

ಕರಾವಳಿ

ಪತಿ ಮಾಡಿದ ಸಾಲಕ್ಕೆ ಬೇಸತ್ತ ಪತ್ನಿ ► ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣು..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಸಾಲಬಾಧೆಗೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಸುದ್ದಿ ಎಲ್ಲಾರಿಗೂ ಗೊತ್ತೇ ಇದೆ. ಆದರೆ ಗಂಡ ಮಾಡಿದ ಸಾಲಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಗುರುವಾರ ರಾತ್ರಿ ಹಲಸೂರಿನಲ್ಲಿ ನಡೆದಿದೆ. ಬೆಂಗಳೂರಿನ ಹಲಸೂರಿನಲ್ಲಿ ವಾಸವಿದ್ದ ರೇಣುಕಾ (34) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಮನೆಯಲ್ಲಿ ಗಂಡನಿಲ್ಲದ ಸಮಯದಲ್ಲಿ ಮಕ್ಕಳಾದ ನಿಶ್ಚಿತಾ(6) ಮತ್ತು ಪಾವನಿ(10 ತಿಂಗಳು)ಗೆ ನೇಣು ಬಿಗಿದು ಬಳಿಕ ರೇಣುಕಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್‌ ಟೆಕ್ನಿಷಿಯನ್ ಆಗಿ

ಪತಿ ಮಾಡಿದ ಸಾಲಕ್ಕೆ ಬೇಸತ್ತ ಪತ್ನಿ ► ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣು..!!! Read More »

ಕರಾವಳಿ

ಉಳಿತೊಟ್ಟು ಬಿಲಾಲ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝ್ಹಾಃ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸೆ.01, ಇಲ್ಲಿನ ಸಮೀಪದ ಉಳಿತೊಟ್ಟು ಬಿಲಾಲ್ ಜುಮಾ ಮಸೀದಿಯಲ್ಲಿ ತ್ಯಾಗ ಬಲಿದಾನದ ಸಂಕೇತವಾದ ಈದುಲ್ ಅಝ್ಹಾಃ ( ಬಕ್ರೀದ್) ಶುಕ್ರವಾರ ಆಚರಿಸಲಾಯಿತು. ಮಸೀದಿಯ ಖತೀಬ್ ಅಬೂಬಕರ್ ಸಿದ್ದೀಕ್ ಸಖಾಫಿ ಮಾಡಾವು ಈದ್ ನಮಾಝ್ ಗೆ ನೇತೃತ್ವ ನೀಡಿ ಈದ್ ಸಂದೇಶ ನೀಡಿದರು. ಈದ್ ಆಚರಣೆಯಲ್ಲಿ ಸೇರಿದ ಮಸೀದಿಯ ನೂರಾರು ಜಮಾಅತರು ಸಹೋದರತೆಯ ಸಂಕೇತವಾಗಿ ಪರಸ್ಪರ ಆಲಂಗಿಸಿ ಈದ್ ಆಚರಿಸಿದರು.  

ಉಳಿತೊಟ್ಟು ಬಿಲಾಲ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝ್ಹಾಃ Read More »

ಕರಾವಳಿ

ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ.01, ಮೊಣಕೈ ಮುರಿದುಕೊಂಡಿದ್ದ ಬಾಲಕಿಗೆ ವೈದ್ಯನೊಬ್ಬ ಶಸ್ತ್ರಚಿಕಿತ್ಸೆ ಮಾಡೋದಾಗಿ ಹೇಳಿ ಕೈ ಕತ್ತರಿಸಿ ಬಳಿಕ ಶಸ್ತ್ರ ಚಿಕಿತ್ಸೆಯನ್ನು ಅರ್ಧಕ್ಕೆ ಬಿಟ್ಟಿರೋ ಘಟನೆ ಗಂಗಾವತಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಇದರಿಂದಾಗಿ ಬಾಲಕಿಯ ಪೋಷಕರುಕರು ದಿಕ್ಕುತೋಚದೆ ಕಣ್ಣೀರಿಡ್ತಿದ್ದಾರೆ. ಗಂಗಾವತಿ ತಾಲೂಕಿನ ಬಸವರಾಜ ಹಾಗೂ ಅಂಬಮ್ಮ ದಂಪತಿಯ 8 ವರ್ಷದ ಪುತ್ರಿ ಅಂಕಿತಾ ಮನೆಯಲ್ಲಿ ಬಿದ್ದು ಮೊಣಕೈ ಮುರಿದುಕೊಂಡಿದ್ದಳು. ಬಳಿಕ ಪೋಷಕರು ಅಂಕಿತಾಳನ್ನ ಕೊಪ್ಪಳದ ಜಿಲ್ಲಾಸ್ಪತ್ರೆಗೆ ಸೇರಿಸಿದ್ರು. ವೈದ್ಯರು ಮಾತ್ರ ಎಕ್ಸ್‍ರೇ ಮಾಡಿದ 4 ದಿನಗಳ ಬಳಿಕ

ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!! Read More »

ಕರಾವಳಿ

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಸಿದ್ದರಾಮಯ್ಯ ಅವರು ಚುನಾವಣೆ ವೇಳೆಯಲ್ಲಿ ಮಾತ್ರ ಕನ್ನಡ ಪ್ರೀತಿ ತೋರಿಸುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿದ್ದರಾಮಯ್ಯ ಛೂ ಬಿಟ್ಟಿದ್ದಾರೆ. ಕೊಲೆ ಮಾಡಿ ಕೋರ್ಟ್ ನಲ್ಲಿ  ಕ್ಷಮೆ ಕೇಳಿದ್ರೆ ಕ್ಷಮಿಸಲ್ಲ, ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ಬಳಿಕವಷ್ಟೆ ಕ್ಷಮಾದಾನ ಸಿಗುತ್ತದೆ. ತಪ್ಪು ಮಾಡಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಕೇಳಿದ್ರೆ ಆಗಲ್ಲ. ಮೊದಲು ಅವರಿಗೆ ಶಿಕ್ಷೆ ಆಗಬೇಕು

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ Read More »

ಕರಾವಳಿ

ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು

(ನ್ಯೂಸ್ ಕಡಬ) newskadaba.com ಮುಂಬೈ, ಆ.31. ವಾಣಿಜ್ಯ ನಗರಿ ಮುಂಬಯಿನಲ್ಲಿ ಎಡೆಬಿಡದೇ ಸುರಿಯಿತ್ತಿರುವ ಮಳೆಯಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ನಿರಂತರ ಸುರಿಯುತ್ತಿರುವ ಮಹಾಮಳೆಯಿಂದಾಗಿ ಸುಮಾರು  125 ವರ್ಷದ ಹಳೆಯದಾದ  5 ಅಂತಸ್ತಿನ ಕಟ್ಟಡ ಕುಸಿದು 10 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಮೌಲಾನಿ ಶೌಕತ್ ಅಲಿ ರೋಡ್‍ನ ಭೆಂಡಿ ಬಜಾರ್‍ನಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದ ಅವಶೇಷಗಳ ಅಡಿ ಇನ್ನೂ ಕೆಲವರು ಸಿಲುಕಿರುವ ಶಂಕೆಯಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, 10 ಅಗ್ನಿಶಾಮಕ ವಾಹನಗಳು ಹಾಗೂ ಆಂಬುಲೆನ್ಸ್‍ಗಳು ಸ್ಥಳಕ್ಕೆ

ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು Read More »

ಕರಾವಳಿ

ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!!

(ನ್ಯೂಸ್ ಕಡಬ) newskadaba.com ಉಡುಪಿ, ಆ.31, ಜನ್ಮ ನೀಡಿದ ತಂದೆಯೇ ತನ್ನ ಮಗಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಕೊಡವೂರು ಎಂಬಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಮಲ್ಪೆಯ ಕೊಡವೂರು ನಿವಾಸಿಯಾದ ಶರತ್ ತನ್ನ 8 ವರ್ಷದ ಮಗಳು ಕನ್ನಿಕಾಳನ್ನು ಮೊದಲು ಬಾವಿಗೆ ತಳ್ಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ  ಎಂದು ಹೇಳಲಾಗಿದೆ. ಶರತ್ ಮತ್ತು ಮಗಳು ಕನ್ನಿಕಾ ಮಂಗಳವಾರ ರಾತ್ರಿ 12.30ರ ವೇಳೆಯಲ್ಲಿ ಮನೆಯಿಂದ ಕಾಣಿಯಾಗಿದ್ದರು. ಮನೆಯ ಸುತ್ತಮುತ್ತ ಪರಿಸರದಲ್ಲಿ ಹುಡುಕಾಟ ನಡೆಸಿದ ಮನೆಯವರು ಬಳಿಕ

ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!! Read More »

ಕರಾವಳಿ
Scroll to Top