Kadaba News

ಮೂಡುಬಿದಿರೆ :ಪಾಳು ಬಿದ್ದ ಕಟ್ಟಡದಲ್ಲಿ ನೇಣಿಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಡಿ.08: ಯುವಕನೋರ್ವ ಡಿ.07 ರ ಸಂಜೆ ಮನೆ ಸಮೀಪದ ಪಾಳುಬಿದ್ದ ಕಟ್ಟಡದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ.     ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಶಿರ್ತಾಡಿ ಪೇಟೆಯ ಮೆಡಿಕಲ್ ನಲ್ಲಿ ಉದ್ಯೋಗಿಯಾಗಿದ್ದು, ಕೆಲಸ ಮುಗಿದ ಬಳಿಕ ಸಂಜೆ ನಾಲ್ಕು ಗಂಟೆಗೆ ಮನೆಗೆ ಬಂದಿದ್ದ. ಬಳಿಕ ಮನೆ ಪರಿಸರದಲ್ಲಿ ಸುತ್ತಾಡಿ ಬರುವೆನ್ನೆಂದು ಹೇಳಿ ಹೋಗಿದ್ದ. ರಾತ್ರಿ ವೇಳೆಗೆ ಸಂದೀಪ್ ಮನೆಗೆ ಮನೆಗೆ ಬಾರದಿರುವುದನ್ನು […]

ಮೂಡುಬಿದಿರೆ :ಪಾಳು ಬಿದ್ದ ಕಟ್ಟಡದಲ್ಲಿ ನೇಣಿಗೆ ಶರಣಾದ ಯುವಕ Read More »

ಕರಾವಳಿ

ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಸುಳ್ಯ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮಿ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.08: ಈಗಾಗಲೇ ಗ್ರಾಮ ಪಂಚಾಯತ್ ಚುನಾವಣೆ ಹತ್ತಿರವಾಗುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಯಕ್ಕೆ ಹೊಸ ತಹಶೀಲ್ದಾರ್ ರನ್ನು ನೇಮಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಸುಳ್ಯ ತಹಶೀಲ್ದಾರ್ ಅನಂತಶಂಕರ್ ರವರು ಕಡಬ ತಹಶೀಲ್ದಾರ್ ಆಗಿಯೂ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಶಾಖೆಯ ತಹಶೀಲ್ದಾರ್ ಆಗಿರುವ ಕು. ಅನಿತಾಲಕ್ಷ್ಮಿ ಅವರನ್ನು ಸುಳ್ಯ ತಹಶೀಲ್ದಾರ್ ಆಗಿ ನೇಮಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು

ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಸುಳ್ಯ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮಿ ನೇಮಕ Read More »

ಕರಾವಳಿ

ಬೆಳ್ತಂಗಡಿ :ಏಣಿಯಿಂದ ಕಾಲುಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.08:  ಮನೆಯ ಮಹಡಿ ಹತ್ತುವ ವೇಳೆ ಏಣಿಯಿಂದ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಾಯಗೊಂಡಿದ್ದ ಸುಲೇಮಾನ್ (34) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ಘಟನೆ ಭಾನುವಾರ ನಡೆದಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರಿಯರರನ್ನು ಅಗಲಿದ್ದಾರೆ.  

ಬೆಳ್ತಂಗಡಿ :ಏಣಿಯಿಂದ ಕಾಲುಜಾರಿ ಬಿದ್ದು ಮೃತ್ಯು Read More »

ಕರಾವಳಿ

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.08: ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ವರು ಆರೋಪಿತರು ಒಂದೇ ಬಡಾವಣೆಯ ನಿವಾಸಿಗಳು. ಈ ಪೈಕಿ ಒಬ್ಬ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಮನೋಜ್, ಪ್ರಜ್ಬಲ್, ವಿನಯ್, ಸಂದೀಪ್ ಎಂಬವರನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಬಂಧಿತರೆಲ್ಲರೂ ಒಂದೇ ಬಡಾವಣೆಯವರಾಗಿದ್ದು, 20 ರಿಂದ 23 ವಷರ್ದವರಾಗಿದ್ದಾರೆ. ಬಂಧಿತರ ಪೈಕಿ

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಗುಡ್ಡೆದ ಭೂತ’ ಖ್ಯಾತಿಯ ನಟ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 07: ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿ ನಟ, ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ (79 ) ಇಂದು ಮಧ್ಯಾಹ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.   ರಂಗ ನಿರ್ದೇಶಕರಾಗಿ, ಕಥೆಗಾರ, ಕವಿಯಾಗಿ, ನಟರಾಗಿದ್ದ ಅವರು ಉಡುಪಿಯ ಸಮೂಹ ಸಂಸ್ಥೆ ಸಂಸ್ಥಾಪಕರಾಗಿ,ನಾಟಕ, ನೃತ್ಯ ರೂಪಕ ಮೂಲಕ ರಾಜ್ಯಾದ್ಯಂತ ಜನಮನ್ನಣೆ ಗಳಿಸಿದ್ದರು. ನಾಡಿನಾದ್ಯಂತ 50 ಕ್ಕೂ ಹೆಚ್ಚು ನಾಟಕಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಹೊಂದಿರುವ ಉದ್ಯಾವರ ಮಾಧವಾಚಾರ್ಯರು ರಾಜ್ಯೋತ್ಸವ, ರಂಗ ವಿಶಾರದ ಪ್ರಶಸ್ತಿಗೆ

‘ಗುಡ್ಡೆದ ಭೂತ’ ಖ್ಯಾತಿಯ ನಟ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ವಿಧಿವಶ Read More »

ಕರಾವಳಿ

ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 07: ಕೊರೊನಾದಿಂದ ಬಳಲುತ್ತಿದ್ದ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಯೇ ರಿಶ್ತಾ ಕ್ಯಾ ಕೆಹಲಾತಾ ಹೈ, ಉಡಾನ್, ಜೀತ್ ಗಯಿ ತೋ ಪಿಯಾ ಮೋ ಸೇರಿದಂತೆ ಹಲವು ಧಾರಾವಾಹಿಗಳು ಹಾಗೂ ಕೆಲವು ಸಿನಿಮಾಗಳಲ್ಲಿ ದಿವ್ಯಾ ನಟಿಸಿದ್ದರು.ನಟಿ ಶಿಲ್ಪಾ ಶಿರೋಡ್ಕರ್ ಇನ್ಸ್ಟಾಗ್ರಾಮ್ ಮೂಲಕ ಸಂತಾಪ ಸೂಚಿಸಿದ್ದು, ಭಟ್ನಾಗರ್ ಅವರು ನನ್ನ ಪ್ರೀತಿಯ ಗೆಳತಿಯಾಗಿದ್ದಳು, ಆಕೆಯ ನಿಧನದಿಂದ ನನಗೆ ತುಂಬಾ ದುಃಖವಾಗಿದೆ ಎಂದು ಬರೆದಿದ್ದಾರೆ. ನಟಿ ದೇವಲೋನಾ ಸೇರಿದಂತೆ

ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.! Read More »

ಕರಾವಳಿ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07: ರಾಜ್ಯದಲ್ಲೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತೇವೆ, ಇದರಲ್ಲಿ ಅನುಮಾನವೇ ಇಲ್ಲ. ವಿಧಾನಸಭೆಯಲ್ಲಿ ಬಿಲ್ ಮಂಡನೆ ಮಾಡ್ತೇವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು ಯುಪಿ ಸರ್ಕಾರ ಈಗಾಗಲೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ನಾನುಕೂಡ ಅಲ್ಲಿಗೆ ತೆರಳಿ ಕಾಯ್ದೆಯ ಬಗ್ಗೆ ಅಧ್ಯಯನ ನಡೆಸಿದ್ದೇನೆ. ಅಲ್ಲಿನ ಸರ್ಕಾರದ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಕರ್ನಾಟಕದಲ್ಲೂ ಕೂಡ ಗೋ ಹತ್ಯೆ ನಿಷೇಧ ಕಾಯ್ದೆ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ Read More »

ಕರ್ನಾಟಕ

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯ ➤ ಬಿಲ್ಲವ ಬ್ರಿಗೇಡ್ ವತಿಯಿಂದ ಕಾಲ್ನಡಿಗೆಯಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕೆಂದು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ವತಿಯಿಂದ ನಡೆದ ಬೃಹತ್ ಬೈಕ್ ರ್ಯಾಲಿಗೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಬೈಕ್ ರ್ಯಾಲಿ ಇಲ್ಲದೇ ಕಾಲ್ನಡಿಗೆಯಲ್ಲೇ ಬಿಲ್ಲವ ಬ್ರಿಗೇಡ್ ಮರವೂರಿನಿಂದ ಕೆಂಜಾರಿನವರೆಗೆ ಘೋಷಣೆ ಕೂಗುತ್ತಾ ಸಾಗಿತು.   ಇದೇ ವೇಳೆ ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು. ತುಳುನಾಡಿನ ಮಹಾಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕು. ರಾಜ್ಯ ಸರ್ಕಾರಕ್ಕೆ ತಲುಪಿಸಿದ ಮನವಿ ಪತ್ರ ಮೂಲೆ ಗುಂಪಾಗಿದೆ. ನಮ್ಮದು

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯ ➤ ಬಿಲ್ಲವ ಬ್ರಿಗೇಡ್ ವತಿಯಿಂದ ಕಾಲ್ನಡಿಗೆಯಲ್ಲಿ ಪ್ರತಿಭಟನೆ Read More »

ಕರಾವಳಿ

ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯತ್ ಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಮೊದಲ ಹಂತದಲ್ಲಿ 106 ಮತ್ತು ಎರಡನೇ ಹಂತದಲ್ಲಿ 114 ಗ್ರಾ.ಪಂ.ಗಳಿಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಮತದಾನ ಮಾಡಲು ಅರ್ಹತೆ ಹೊಂದಿದ್ದಾರೆ

ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ Read More »

ಕರಾವಳಿ, ಕರ್ನಾಟಕ

ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಮಧ್ಯರಾತ್ರಿ ಒಂದು ಗಂಟೆ ಗೆ ರಕ್ತದಾನಮಾಡುವ ಮೂಲಕ ಯುವಕರ ತಂಡವೊಂದು ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಓರ್ವ ವ್ಯಕ್ತಿಯ ಶಸ್ತ್ರ ಚಿಕಿತ್ಸೆ ಗೆ ನೆರವಾಗಿದ್ದಾರೆ.   ನಗರದ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರಿಗೆ ತುರ್ತು ರಕ್ತದ ಅವಶ್ಯಕತೆ ಇದ್ದಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ ಸದಸ್ಯರು ಮಧ್ಯರಾತ್ರಿ 1 ಗಂಟೆಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಯದುನಂದನ್ ಎಂಬವರಿಗೆ ತುರ್ತು ರಕ್ತದ ಅಗತ್ಯವಿತ್ತು. ಈ ವಿಷಯ

ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ Read More »

ಕರಾವಳಿ
Scroll to Top