Kadaba News

ರಾಜ್ಯದಲ್ಲಿ2.37 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) ಸೆಪ್ಟೆಂಬರ್ 1 ರವರೆಗೆ ರಾಜ್ಯದಲ್ಲಿ ಸುಮಾರು 2,37,079.24 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಅರಣ್ಯ ಇಲಾಖೆಯಿಂದ 1,25,306 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರದ ಅಂಕಿಅಂಶಗಳು ಬಹಿರಂಗಪಡಿಸಿವೆ. ಮೂರು ಎಕರೆಗಿಂತ ಕಡಿಮೆ ಭೂಮಿಯಲ್ಲಿ ಅತಿಕ್ರಮಣದ ಒಟ್ಟು ಪ್ರಮಾಣವು ಅತ್ಯಧಿಕವಾಗಿದೆ. ಒಟ್ಟು 1,39,055.99 ಎಕರೆ ಭೂಮಿ ಒತ್ತುವರಿಯಾಗಿದ್ದು, ಅದರಲ್ಲಿ 1,07,477 ಪ್ರಕರಣಗಳು ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿದವುಗಳಾಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. […]

ರಾಜ್ಯದಲ್ಲಿ2.37 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರ: ಕನಿಷ್ಠ ವೇತನ ಹೆಚ್ಚಳ

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.27): ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ ದರ ಹೆಚ್ಚಿಸಿದೆ. ಈ ಹೆಚ್ಚಳವು ಕಾರ್ಮಿಕರಿಗೆ ಹೆಚ್ಚುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಟ್ಟಡ ನಿರ್ಮಾಣ, ಲೋಡಿಂಗ್ ಮತ್ತು ಅನ್‌ಲೋಡಿಂಗ್, ವಾಚ್ ಮತ್ತು ವಾರ್ಡ್, ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೇಂದ್ರ ಗೋಳದ ಸಂಸ್ಥೆಗಳಲ್ಲಿ ಕೃಷಿ ಸೇರಿದಂತೆ

ಕೇಂದ್ರ ಸರ್ಕಾರ: ಕನಿಷ್ಠ ವೇತನ ಹೆಚ್ಚಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ

 (ನ್ಯೂಸ್ ಕಡಬ) newskadaba.com ಪುತ್ತೂರು(ಸೆ.27) :  ಪುತ್ತೂರು ಕೋರ್ಟ್‌ ರೋಡ್‌ನ‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ರಿಲೇಷನ್‌ಶಿಪ್‌ ಮ್ಯಾನೇಜರ್‌ ಚೈತನ್ಯ ಎಚ್‌.ಸಿ. ಅವರು ನೀಡಿದ ದೂರಿನಂತೆ ಅಖಿಲೇಶ್ ಮತ್ತು ಕೃಷ್ಣ ಕಿಶೋರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬೊಳುವಾರು ಬಳಿ ತಿರುಮಲ ಹೋಂಡಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಉಜಿರ್ಪಾದೆ ನಿವಾಸಿ ಕೀರ್ತಿ ಎನ್ನುವವರು ಅಖಿಲೇಶ್ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 2 ಕೋಟಿ ರೂ. ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡದೇ ಎನ್‌ಪಿಎ ಆಗಿತ್ತು. ಸಾಲ ಬಾಕಿಯ ಬಗ್ಗೆ ಹಲವಾರು

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ..!

(ನ್ಯೂಸ್ ಕಡಬ) newskadaba.com ಚೆನ್ನೈ (ಸೆ.25) :ಚೆನ್ನೈನಿಂದ ದುಬೈಗೆ ಹೊರಟಿದ್ದ ಎಮಿರೇಟ್ಸ್ ವಿಮಾನದ ರೆಕ್ಕೆ ಭಾಗದಿಂದ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಿಕರು ಆತಂಕಗೊಂಡ ಘಟನೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಳೆದ ರಾತ್ರಿ 9.15 ಕ್ಕೆ ಹೊಗೆ ಕಾಣಿಸಿಕೊಂಡ ನಂತರ, ಅಧಿಕಾರಿಗಳು ವಿಮಾನದ ಸಿಬ್ಬಂದಿ ಮತ್ತು ತಾಂತ್ರಿಕ ತಜ್ಞರು ವಿಮಾನವನ್ನು ಪರಿಶೀಲಿಸಿದರು ಮತ್ತು ಅಗ್ನಿಶಾಮಕ ಸಿಬ್ಭಂದಿ ಬಂದು ಸುಮಾರು 10 ನಿಮಿಷ ಕಾರ್ಯಾಚರಣೆ ನಡೆಸಿದರು. ವಿಮಾನ ಹೊರಡುವ ಮುನ್ನ, ರೆಕ್ಕೆ ಭಾಗದಿಂದ ಹೊಗೆ ಹೊರಹೊಮ್ಮಿತು ಕೂಡಲೆ ವಿಮಾನ ನಿಲ್ಲಿಸಿ

ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ (ಸೆ.25) : ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷವೂ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋಧ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೇಶನ್ -2024 ಅನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ನಾರಾವಿ ಗ್ರಾ.ಪಂ. ವವ್ಯಾಪ್ತಿಯ

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಚಲಿಸುತ್ತಿದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಗಾಯ

 (ನ್ಯೂಸ್ ಕಡಬ) newskadaba.com ಕುಂದಾಪುರ(ಸೆ.25) : ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರದ ಕೊಂಬೆಯೊಂದು ಬಿದ್ದ ಪರಿಣಾಮ ಸ್ಕೂಟರ್ ಸವಾರ ಗಂಗೊಳ್ಳಿ ನಿವಾಸಿ, ಮಸೀದಿ ಧರ್ಮಗುರು, ಜನಾಬ್ ಮೌಲಾನ ಮೊಹಮ್ಮದ್ ಮತೀನ್ ಸಾಹಬ್ ಸಿದ್ದಿಕಿ ಗಾಯಗೊಂಡ ಘಟನೆ ತ್ರಾಸಿ ಹೋಲೀ ಕ್ರಾಸ್ ಸಮೀಪ ರಸ್ತೆಯಲ್ಲಿ ನಡೆದಿದೆ. ರಸ್ತೆ ಪಕ್ಕದಲ್ಲಿದ್ದ ಮರದ ಕೊಂಬೆ ಇವರು ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದಿದೆ. ಘಟನೆಯಿಂದ ಅವರ ತಲೆ ಹಾಗೂ ಕುತ್ತಿಗೆಗೆ ಒಳ ಗಾಯಗಳಾಗಿದ್ದು, ಕುಂದಾಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕುಂದಾಪುರ: ಚಲಿಸುತ್ತಿದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

 (ನ್ಯೂಸ್ ಕಡಬ) newskadaba.com ಮಂಗಳೂರು(ಸೆ.25): ಕರಾವಳಿಯ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. 2019ರ ಮೇ 11ರಂದು ಮಂಗಳೂರು ನಗರದ ವೆಲೆನ್ಸಿಯಾದ ಸೂಟರ್ ಪೇಟೆಯಲ್ಲಿ ಶ್ರೀಮತಿ ಶೆಟ್ಟಿ ಕೊಲೆ ನಡೆದಿತ್ತು. ಮನೆಗೆ ಬಂದು ಚಿಟ್ ಫಂಡ್ ಹಣ ಕೇಳಿದ್ದ ಮಹಿಳೆಯನ್ನು ಜೋನ್ ಸ್ಯಾಮ್ಸನ್ ದೊಣ್ಣೆಯಿಂದ ಹೊಡೆದು ಕೊಂದಿದ್ದ. ಬಳಿಕ ಶ್ರೀಮತಿ ಶೆಟ್ಟಿ ಅವರನ್ನು 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿದೆಡೆ ಎಸೆಯಲಾಗಿತ್ತು.

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋಲಾರದಲ್ಲಿ ಆತಂಕಕಾರಿ ಸೂಟ್ ಕೇಸ್ ಪತ್ತೆ

 (ನ್ಯೂಸ್ ಕಡಬ) newskadaba.com ಕೋಲಾರ(ಸೆ.25): ಕೋಲಾರದ ಹೆದ್ದಾರಿ ಪಕ್ಕದಲ್ಲಿ ಕಂಡು ಬಂದ ಸೂಟ್‌ಕೇಸ್‌ವೊಂದು ಪತ್ತೆಯಾಗಿದೆ. ನಗರ ಹೊರವಲಯದಲ್ಲಿ ಸೂಟ್ ಕೇಸ್ ಕಂಡು ಬಂದಿದ್ದು, ಸೂಟ್‌ಕೇಸ್‌ನಿಂದ ಶಬ್ದ ಹೊರ ಬರುತ್ತಿದೆ. ಸ್ಫೋಟಕ ಇರುವ ಅನುಮಾನದ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕದಲ್ಲಿದ್ದಾರೆ. ಕ್ರೌನ್ ಕಂಪನಿಯ ಸೂಟ್‌ಕೇಸ್ ಇದಾಗಿದ್ದು, ಸೆನ್ಸಾರ್ ಇರುವ ಸೂಟ್‌ಕೇಸ್ ಆಗಿರುವ ಕಾರಣ ಶಬ್ದ ಬರುತ್ತಿದೆ ಎಂದು ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಇದೀಗ ಬಾಂಬ್ ತಜ್ಞರು ಹಾಗೂ ಕೋಲಾರ ಎಸ್ಪಿ ನಿಖಿಲ್.ಬಿ ಭೇಟಿ ನೀಡಿದ್ದಾರೆ ಹಾಗೂ ಶ್ವಾನ ದಳ,

ಕೋಲಾರದಲ್ಲಿ ಆತಂಕಕಾರಿ ಸೂಟ್ ಕೇಸ್ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಯೋಧರಿದ್ದ ರೈಲು ಬ್ಲಾಸ್ಟ್ ಗೆ ಸಂಚು- ರೈಲ್ವೇ ಸಿಬ್ಬಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯಕ್ಕೆ ಜಮ್ಮು-ಕಾಶ್ಮೀರದಿಂದ ಯೋಧರನ್ನು ಕರೆದೊಯ್ಯುತ್ತಿದ್ದ ರೈಲನ್ನು ಸ್ಫೋಟಿಸಲು ಸಂಚು ರೂಪಿಸಿ ಹಳಿಗಳುದ್ದಕ್ಕೂ ಸ್ಫೋಟಕ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಸಿಬ್ಬಂದಿಯೋರ್ವರನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಶಬೀರ್‌ ಎಂದು ಗುರುತಿಸಲಾಗಿದ್ದು, ಈತ ಮಧ್ಯಪ್ರದೇಶದಲ್ಲಿ ರೈಲ್ವೇ ಹಳಿಗಳ ಮೇಲೆ 10 ಸ್ಫೋಟಕ ವಸ್ತುಗಳನ್ನು ಇಟ್ಟು, ರೈಲು ಸ್ಫೋಟಕ್ಕೆ ಸಂಚು ರೂಪಿಸಿದ್ದ. ಆದರೆ ಅದೃಷ್ಟವಶಾತ್‌ ರೈಲ್ವೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ ಎನ್ನಲಾಗಿದೆ. ರೈಲ್ವೇ ಸಂರಕ್ಷಣಾ ಪಡೆ ಆರೋಪಿ

ಯೋಧರಿದ್ದ ರೈಲು ಬ್ಲಾಸ್ಟ್ ಗೆ ಸಂಚು- ರೈಲ್ವೇ ಸಿಬ್ಬಂದಿ ಅರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top