Kadaba News

ಬೀಡಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ನವದೆಹಲಿ ನ. 29: ಬೀಡಿಗಾಗಿ ತಮ್ಮ ಸ್ನೇಹಿತನನ್ನೇ ಇನ್ನಿಬ್ಬರು ಸೇರಿ ಕೊಲೆ ಮಾಡಿದ ವಿಚಿತ್ರ ಘಟನೆ ನವದೆಹಲಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಮಲಾಡ್ ನ ಸಿದ್ದಿಕ್ (49) ಕೊಲೆಯಾದ ವ್ಯಕ್ತಿ. ಆತನ ಸ್ನೇಹಿತರಾದ ಮೊಹಮದ್ ಫೈಜಾನ್(20), ಮೊಹಮದ್ ಉಸ್ಮಾನ್ (22), ಜಹೀರ್ ಮನ್ಸೂರಿ(20) ಬಂಧಿತರು. ಎಲ್ಲರೂ ಶಾಹಿನ್ ಬಾಗದ ನದೀಮ್ ಎಂಬುವವರ ಬಳಿ ಕೆಲಸ ಮಾಡುತ್ತಿದ್ದರು.   ಯಮುನಾ ನದಿಯ ದಂಡೆಯ ಮೇಲೆ ಎಲ್ಲರೂ ಸೇರಿ ಕುಳಿತಿದ್ದರು. ಬೀಡಿಗಾಗಿ ಗಲಾಟೆ ಶುರುವಾಗಿದೆ. ಇಬ್ಬರು […]

ಬೀಡಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಮರದ ಸೌಂದರ್ಯವನ್ನು ಹೆಚ್ಚಿಸಿದ ಬಿಳಿ ಬಣ್ಣದ ಪಕ್ಷಿಗಳು

(ನ್ಯೂಸ್ ಕಡಬ) newskadaba.com ಪುತ್ತೂರು ನ. 29: ಎಷ್ಟೋ ಮರಗಳಲ್ಲಿ ಪಕ್ಷಿಗಳ ವಾಸ ಇರುತ್ತದೆ. ಆದರೇ ಮರಗಳನ್ನು ಕಡಿದು ನಾಶ ಮಾಡುವುದರಿಂದ ಇತ್ತೀಚೆಗೆ ಪ್ರಾಣಿ ಪಕ್ಷಿಗಳು ಕಣ್ಣಿಗೆ ಕಾಣಿಸುವುದಿಲ್ಲ. ಆದರೇ ಅವುಗಳ ಕೂಗು ಮಾತ್ರ ಕೇಳಿ ಬರುತ್ತದೆ ಅಷ್ಟೆ.     ಆದರೇ ಚಳಿಗಾಲದ ಸಮಯದಲ್ಲಿ ಮರಗಳ ಎಲೆಗಳು ಉದುರಿ ಹೋದರು ಪಕ್ಷಿಗಳ ಬಣ್ಣಗಳ ವ್ಯತ್ಯಾಸದಿಂದ ಅವು ಸರಿಯಾಗಿ ಗೋಚರಿಸದು. ಆದರೇ ಪುತ್ತೂರಿನ ಭಾಗ ಮಹಾತ್ಮ ಗಾಂಧೀ ಪ್ರತಿಮೆ ಬಳಿಯ ಅಶ್ವತ್ಥ ಮರದ ಆಶ್ರಯದಲ್ಲಿರುವ ಬಿಳಿ ಬಣ್ಣದ ಪಕ್ಷಿಗಳು

ಪುತ್ತೂರು: ಮರದ ಸೌಂದರ್ಯವನ್ನು ಹೆಚ್ಚಿಸಿದ ಬಿಳಿ ಬಣ್ಣದ ಪಕ್ಷಿಗಳು Read More »

ಕರಾವಳಿ

ಉಡುಪಿ: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ➤ ಕನಕಪುರ ಬಂಡೆ ಡಿಕೆಶಿ ಚಾಲನೆ

(ನ್ಯೂಸ್ ಕಡಬ) newskadaba.com ಉಡುಪಿ ನ. 29: ಕೆಪಿಸಿಸಿ ಅಧ್ಯಕ್ಷರಾಗಿ ನಿಯೋಜನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿದರು.ಉಡುಪಿಯ ಬಾಸೆಲ್ ಮಿಷನ್ ಚರ್ಚ್ ಹಾಲ್ ನಲ್ಲಿ ಈ ಬೃಹತ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ.     ಕಳೆದ ದಿನ ಜಿಲ್ಲೆಗೆ ಆಗಮಿಸಿದ್ದ ಡಿಕೆಶಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಇಂದು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ,ಅಭಯಚಂದ್ರ ಜೈನ್ , ಮಾಜಿ ಶಾಸಕರಾದ ಗೋಪಾಲ್ ಪೂಜಾರಿ, ಯು.ಆರ್. ಸಭಾಪತಿ,ಉಡುಪಿ

ಉಡುಪಿ: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ➤ ಕನಕಪುರ ಬಂಡೆ ಡಿಕೆಶಿ ಚಾಲನೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 29: 2019 20ನೇ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪಗ್ರತಿಯನ್ನು ಗುರುತಿಸಿ ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕಿಗೆ ದ,ಕ ಜಿಲ್ಲಾ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ.     ಮಂಗಳೂರಿನಲ್ಲಿ ನ.27 ರಂದು ನಡೆದ ದ.ಕ ಜಿಲ್ಲಾ ಸಹಕಾರಿ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಕಟ್ಟೆಮನೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ರವರಿಂದ ಪ್ರಶಸ್ತಿ ಸ್ವೀಕರಿಸಿದರು.  

ಸುಬ್ರಹ್ಮಣ್ಯ: ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ Read More »

ಕರಾವಳಿ

ಪಂಜ: ಎಂ.ಆರ್.ಎಫ್. ಬೈಕ್ ರ್ಯಾಲಿ

(ನ್ಯೂಸ್ ಕಡಬ) newskadaba.com ಪಂಜ ನ. 29: ಇಂದು ಎಂ.ಆರ್.ಎಫ್. ಡರ್ಟ್ ಟ್ರ್ಯಾಕ್ ಬೈಕ್ ರ್ಯಾಲಿಯು ಪಂಜದಲ್ಲಿ ನಡೆಯಿತು.     ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ, ಪಂಜ ಪಂಚಲಿಂಗೇಶ್ವರ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕ್ಕಳ ರವರು ಚಾಲನೆ ನೀಡಿದರು.  

ಪಂಜ: ಎಂ.ಆರ್.ಎಫ್. ಬೈಕ್ ರ್ಯಾಲಿ Read More »

ಕರಾವಳಿ

ನೆಲ್ಯಾಡಿ ಪೇಟೆಯಲ್ಲಿ ಎರಡು ಅಂಗಡಿಗಳಿಂದ ದರೋಡೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ ನ. 29: ನೆಲ್ಯಾಡಿ ಪೇಟೆಯಲ್ಲಿ ಶೆಟರ್ ಮುರಿದು ಎರಡು ಅಂಗಡಿಗಳಿಂದ ಕಳ್ಳರು ಸಾಮಾಗ್ರಿಗಳನ್ನ ದೋಚಿದ್ದಾರೆ. ಇಂದು (ನ.29) ಬೆಳಿಗ್ಗೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಧು ಇಚಿಲಂಪಾಡಿ ಇವರ ಮಾಲಕತ್ವದ ತರಕಾರಿ ಅಂಗಡಿ ಹಾಗೂ ದತ್ತ ಕೃಪಾ ಸ್ಟೋರ್ ನಿಂದ ಕಳ್ಳತನ ನಡೆದಿದ್ದು ಎರಡು ಅಂಗಡಿಗಳ ಶೆಟರ್ ಮುರಿದು ಒಳನುಗ್ಗಿರುವ ಕಳ್ಳರು ಸಾಮಾಗ್ರಿಗಳನ್ನು ದೋಚಿರುವುದು ವರದಿಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  

ನೆಲ್ಯಾಡಿ ಪೇಟೆಯಲ್ಲಿ ಎರಡು ಅಂಗಡಿಗಳಿಂದ ದರೋಡೆ Read More »

ಕರಾವಳಿ

ಮಲ್ಪೆ :ಸಮುದ್ರದಲ್ಲಿ ಮುಳುಗಿದ 7 ಮಂದಿಯಿದ್ದ ಮೀನುಗಾರಿಕೆ ದೋಣಿ

(ನ್ಯೂಸ್ ಕಡಬ) newskadaba.com ಮಲ್ಪೆ ನ. 29: ಗೋವಾ-ಮಹಾರಾಷ್ಟ್ರ ಗಡಿ ಭಾಗದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಏಳು ಮಂದಿ ಮೀನುಗಾರರಿದ್ದ ದೋಣಿ ಕಳೆದ ದಿನ  ಮುಳುಗಡೆಯಾಗಿತ್ತು. ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ . ಸಮುದ್ರದಲ್ಲಿ ಮುಳುಗಿದ ದೋಣಿಯು ಮಲ್ಪೆಯದ್ದಾಗಿದ್ದು, ಮಥುರಾ ಹೆಸರಿನ ಈ ಆಳಸಮುದ್ರ ಮೀನುಗಾರಿಕಾ ದೋಣಿಯು ನ. 17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು.   ದೋಣಿಯಲ್ಲಿ ಏಳು ಮಂದಿ ಮೀನುಗಾರರಿದ್ದರು. ಸಮುದ್ರದಲ್ಲಿ ಮುಳುಗಿದ ದೋಣಿಯಲ್ಲಿ ಬಲೆ, ಡೀಸೆಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ.

ಮಲ್ಪೆ :ಸಮುದ್ರದಲ್ಲಿ ಮುಳುಗಿದ 7 ಮಂದಿಯಿದ್ದ ಮೀನುಗಾರಿಕೆ ದೋಣಿ Read More »

ಕರಾವಳಿ, ಕರ್ನಾಟಕ

ಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದನವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ಕಾರ್ಕಳ ನ. 29: ನಿಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಆಸ್ಪತ್ರೆ ಹತ್ತಿರ ಮೇಯಲು ಬಿಟ್ಟಿದ ದನವೊಂದು ಆಕಸ್ವಿಕವಾಗಿ ಆವರಣವಿಲ್ಲದ ಬಾವಿಗೆ ಬಿದ್ದು ಗಾಯಗೊಂಡಿದೆ.     ಮಾಹಿತಿ ತಿಳಿದ ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಧಾವಿಸಿ ಯಶಸ್ವಿ ಕಾರ್ಯಚರನೆ ನಡೆಸಿ ದನವನ್ನು ಸುರಕ್ಷಿತವಾಗಿ ಬಾವಿಯಿಂದ ಮೇಲೆಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಠಾಣಧಿಕಾರಿ ಬಿ.ಎಂ ಸಂಜೀವ, ರೂಪೇಶ್, ಸಿಬ್ಬಂದಿಗಳಾದ ಸುರೇಶ್, ಜಯ ಮೂಲ್ಯ, ಗೃಹ ರಕ್ಷಕ ದಳದ ಮನ್ಮಥ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.  

ಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದನವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ Read More »

ಕರಾವಳಿ

ಪ್ರೊ ಕಬಡ್ಡಿ ಲೀಗ್ ಮುಂದಿನ ವರ್ಷಕ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ನ. 29: ಕೋವಿಡ್ -19 ಕಾರಣದಿಂದಾಗಿ ಪ್ರೊ ಕಬಡ್ಡಿ ಲೀಗ್ (ಪಿಕೆಎಲ್)ನ ಎಂಟನೇ ಆವೃತ್ತಿಯ ಟೂರ್ನಿಯನ್ನು ಮುಂದೂಡಲಾಗಿದೆ. ಆಟಗಾರರ ಅಧಿಕೃತ ಮಾರ್ಗಸೂಚಿಗಳು ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಂಘಟಕರು ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಿಕೆಎಲ್‌ನ 8ನೇ ಆವೃತ್ತಿಯನ್ನು ಮುಂದೂಡಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ. ಪುನರಾರಂಭಿಸಲು ಮುಂದಿನ ವರ್ಷ ಸೂಕ್ತ ಸಮಯ ನೋಡುತ್ತೇವೆ ಎಂದು ಸಂಘಟಕರು ತಿಳಿಸಿದ್ದಾರೆ.     ಸ್ಟಾರ್ ಸ್ಪೋರ್ಟ್ಸ್ ಲೀಗ್‌ನ ಐದು ವರ್ಷಗಳ ಒಪ್ಪಂದವು ಕಳೆದ ವರ್ಷ

ಪ್ರೊ ಕಬಡ್ಡಿ ಲೀಗ್ ಮುಂದಿನ ವರ್ಷಕ್ಕೆ Read More »

ರಾಷ್ಟ್ರೀಯ ನ್ಯೂಸ್

ಶಿಲೀಂಧ್ರಶಾಸ್ತ್ರ ಸಂಶೋಧನಾ ಕ್ಷೇತ್ರ ➤ ಪ್ರೊ.ಕೆ.ಆರ್. ಶ್ರೀಧರ್‍ರವರಿಗೆ ವಿಶೇಷ ಸ್ಥಾನಮಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 29: ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಪ್ರೊ. ಕೆ.ಆರ್.ಶ್ರೀಧರ್‍ರವರಿಗೆ ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್ ಪೋರ್ಡ್ ವಿಶ್ವವಿದ್ಯಾನಿಲಯದಿಂದ ನಿರ್ವಹಿಸಲ್ಪಟ್ಟ ಮೆಗಾ ದತ್ತಾಂಶ ವಿಶ್ಲೇಷಣೆಯ ಪ್ರಕಾರ ಶಿಲೀಂಧ್ರಶಾಸ್ತ್ರ ಸಂಶೋಧನಾಕ್ಷೇತ್ರದಲ್ಲಿ ವಿಶ್ವದಅಗ್ರ 2%ವಿಜ್ಞಾನಿಗಳಲ್ಲಿ ಉನ್ನತ ಸ್ಥಾನಮಾನ ಲಭಿಸಿದೆ. ಸ್ಟ್ಯಾನ್ ಪೋರ್ಡ್  ವಿಶ್ವವಿದ್ಯಾನಿಲಯದ ವಿಜ್ಞಾನಿಗಳು “ಓಪನ್ ಅಕ್ಸ್‍ಸ್ ಜರ್ನ್‍ಲ್ ಪ್ಲಾಸ್ ಬಯಾಲಜಿ” (PLOS Biology)ಯಲ್ಲಿ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.ಪ್ರೊ.ಕೆ.ಆರ್.ಶ್ರೀಧರ್‍ರವರು ಕರ್ನಾಟಕದ ದಕ್ಷಿಣಕನ್ನಡ, ಕೊಡಗು ಮತ್ತು ಪಶ್ಚಿಮಘಟ್ಟ ಪ್ರದೇಶಗಲ್ಲಿನ ಶಿಲೀಂದ್ರಗಳ ಕುರಿತು ನಿರ್ವಹಿಸಿದ ಸಂಶೋಧನೆಗೆ ವಿಶೇಷ ಸ್ಥಾನಮಾನದ ಗೌರವ

ಶಿಲೀಂಧ್ರಶಾಸ್ತ್ರ ಸಂಶೋಧನಾ ಕ್ಷೇತ್ರ ➤ ಪ್ರೊ.ಕೆ.ಆರ್. ಶ್ರೀಧರ್‍ರವರಿಗೆ ವಿಶೇಷ ಸ್ಥಾನಮಾನ Read More »

ಕರಾವಳಿ
Scroll to Top