Kadaba News

ಕಾರವಾರ: ಉದ್ಯಮಿಯ ಹತ್ಯೆ ಪತ್ನಿಗೆ ಗಂಭೀರ ಗಾಯ-ದುಷ್ಕರ್ಮಿಗಳ ದಾಳಿ

(ನ್ಯೂಸ್ ಕಡಬ) newskadaba.com ಕಾರವಾರ ಸೆ.23: ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಇಂದು ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ ಉದ್ಯಮಿ ವಿನಾಯಕ ನಾಯ್ಕ (54) ಅವರನ್ನು ಹತ್ಯೆಗೈದು, ಅವರ ಪತ್ನಿ ವೈಶಾಲಿ ಅವರನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.ವಿನಾಯಕ ಮತ್ತು ವೈಶಾಲಿ ದಂಪತಿ ಪುಣೆ ನಗರದಲ್ಲಿ ವಾಸವಿದ್ದು, ಕೈಗಾರಿಕೋದ್ಯಮ ನಡೆಸುತ್ತಿದ್ದರು. ಅವರು ಇತ್ತೀಚೆಗೆ ಸಾತೇರಿ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಹಣಕೋಣಕ್ಕೆ ಬಂದಿದ್ದು, ತಮ್ಮ ಮನೆಯಲ್ಲಿಯೇ ವಾಸವಿದ್ದರು. ಇಂದು ಮುಂಜಾನೆ ದರೋಡೆಕೋರರು ದಂಪತಿಯ ಮೇಲೆ ದಾಳಿ ನಡೆಸಿದ್ದಾರೆ. […]

ಕಾರವಾರ: ಉದ್ಯಮಿಯ ಹತ್ಯೆ ಪತ್ನಿಗೆ ಗಂಭೀರ ಗಾಯ-ದುಷ್ಕರ್ಮಿಗಳ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ      ಪ್ರಯಾಣಿಕರಲ್ಲಿ ಆತಂಕ   

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಜ.27.  ಸುಬ್ರಹ್ಮಣ್ಯ ಸಮೀಪದ ರೈಲ್ವೆ ಹಳಿ ಮೇಲೆ ಸಂಜೆ 6:56 ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಮಣ್ಣಿನ ಸವಕಳಿ ಸಂಭವಿಸಿದ್ದು, ಹಲವು ರೈಲು ಸೇವೆಗಳನ್ನು ರದ್ದು ಪಡಿಸಲಾಗಿದೆ. ರದ್ದು ಪಡಿಸಲಾದ  ರೈಲು ಸೇವೆಗಳು ಈ ಕೆಳಗಿನಂತಿವೆ ರೈಲು ಸಂಖ್ಯೆ 16595 KSR ಬೆಂಗಳೂರು – ಕಾರವಾರ ಪಂಚಗಂಗಾ ಸೂಪರ್-ಫಾಸ್ಟ್ ಎಕ್ಸ್‌ಪ್ರೆಸ್, 26.07.2024 ರಂದು ಪ್ರಾರಂಭವಾಗುವ ರೈಲು ಸಂಚಾರ ರದ್ದು ಪಡಿಸಲಾಗಿದೆ. ರೈಲು ಸಂಖ್ಯೆ 16596 ಕಾರವಾರ – ಕೆಎಸ್‌ಆರ್ ಬೆಂಗಳೂರು ಪಂಚಗಂಗಾ ಸೂಪರ್-ಫಾಸ್ಟ್

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ      ಪ್ರಯಾಣಿಕರಲ್ಲಿ ಆತಂಕ    Read More »

ಕರಾವಳಿ

ರಾಜ್ಯದಲ್ಲಿ ‘ವಿವಾಹ ನೋಂದಣಿ’ ಈಗ ಇನ್ನಷ್ಟು ಸುಲಭ

(ನ್ಯೂಸ್‌ ಕಡಬ) newskadaba ಬೆಂಗಳೂರು, ಮಾ.09: ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಕ್ರಮ ಕೈಗೊಂಡಿದೆ. ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. https://kaveri.karnataka.gov.in/ ಭೇಟಿ ನೀಡಿ

ರಾಜ್ಯದಲ್ಲಿ ‘ವಿವಾಹ ನೋಂದಣಿ’ ಈಗ ಇನ್ನಷ್ಟು ಸುಲಭ Read More »

ಕರ್ನಾಟಕ

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

(ನ್ಯೂಸ್‌ ಕಡಬ) newskadaba ಕಲಬುರಗಿ, ಮಾ.09: ಬಾಲಕಿಯರ ಹಾಸ್ಟಲ್​ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಓರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾ| ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾ| ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಹಾಸ್ಟೆಲ್

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ Read More »

ಕರ್ನಾಟಕ

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ

(ನ್ಯೂಸ್‌ ಕಡಬ) newskadaba ಮೈಸೂರು, ಮಾ.09: ಕಾಂಗ್ರೆಸ್​ನ ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಇಂದು (ಮಾ.09) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರಿಗೆ ಮಕ್ಕಳಾದ ಕವೀಶ್​, ಅವೀಶ್​ ಹಾಗೂ ರಿತೇಷ್​ ಇದ್ದಾರೆ. ಗಾಯತ್ರಿಪುರಂ ವಾರ್ಡ್​​ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಗೊಂಡು ನಂತರ ಮೇಯರ್​​ ಆಗಿ ಆಯ್ಕೆಗೊಂಡಿದ್ದರು. ಇದರಿಂದ ವಾಸು ಅವರು ಮೇಯರ್ ವಾಸು ಎಂದೇ ಪ್ರಖ್ಯಾತರಾಗಿದ್ದರು. ಚಾಮರಾಜ ಕ್ಷೇತ್ರದಲ್ಲಿ ನಾಲ್ಕು ಬಾರಿ ಕಾಂಗ್ರೆಸ್​

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ Read More »

ಕರ್ನಾಟಕ

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ

(ನ್ಯೂಸ್‌ ಕಡಬ) newskadaba ಬಂಟ್ವಾಳ, ಮಾ.09: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ Read More »

ಕರಾವಳಿ

ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್

(ನ್ಯೂಸ್‌ ಕಡಬ) newskadaba ನವದೆಹಲಿ, ಮಾ.09: ಪ್ರಸಿದ್ಧ ಹಾನರ್ ಕಂಪನಿ ಇತ್ತೀಚೆಗಷ್ಟೆ ಭಾರತದಲ್ಲಿ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಹಾನರ್ X9b ಎಂಬ ಫೋನನ್ನು ಬಿಡುಗಡೆ ಮಾಡಿತ್ತು. ಇದೀಗ ಈ ಫೋನ್ ಶೇ. 16 ರಷ್ಟು ರಿಯಾಯಿತಿ ಪಡೆದುಕೊಂಡಿದ್ದು, 25,999 ರೂ. ಗೆ ಸೇಲ್ ಆಗುತ್ತಿದೆ. ಅಮೆಜಾನ್​ನಲ್ಲಿ ಆಫರ್ ಘೋಷಣೆ ಮಾಡಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದಲ್ಲಿ ಕ್ಯಾಮೆರಾ ಫೋನುಗಳ ಹಾವಳಿ ತಗ್ಗಿತ್ತು. ಹೀಗಿರುವಾಗ ಮಾರುಕಟ್ಟೆಗೆ ದಿಢೀರ್ ಎಂಟ್ರಿ ಕೊಟ್ಟಿದ್ದು ಪ್ರಸಿದ್ಧ ಹಾನರ್ ಕಂಪನಿ.

ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್ Read More »

ತಂತ್ರಜ್ಞಾನ

ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba ನವದೆಹಲಿ, ಮಾ.09:ಪ್ರಧಾನಿ ಮೋದಿ ಅವರು ಈಶಾನ್ಯ ಪ್ರವಾಸದ ಎರಡನೇ ದಿನವಾದ ಶನಿವಾರ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದು, ಸಾವಿರಾರು ಕೋಟಿ ರೂಪಾಯಿ ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇವುಗಳಲ್ಲಿ, ವಿಶ್ವದ ಅತಿ ಎತ್ತರದಲ್ಲಿ (13000 ಅಡಿ) ನಿರ್ಮಿಸಲಾಗಿರುವ ಆಯಕಟ್ಟಿನ, ಪ್ರಮುಖವಾದ, ಬಹು ನಿರೀಕ್ಷಿತ ಮತ್ತು ಉದ್ದವಾದ ಸೆಲಾ ಪಾಸ್ ದ್ವಿಪಥ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದರು. ಈ ಸುರಂಗ ಮಾರ್ಗವು ಅರುಣಾಚಲ ಪ್ರದೇಶದ ಪಶ್ಚಿಮ ಕಮಿಂಗ್ ಮತ್ತು ತವಾಂಗ್ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ.

ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ Read More »

ರಾಷ್ಟ್ರೀಯ ನ್ಯೂಸ್

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ದೆಹಲಿ ಫೆ. 24: ಎರಡು ದಿನಗಳಿಂದ ತಣ್ಣಗಾಗಿದ್ದ ದೆಹಲಿ ಚಲೋ ಇಂದಿನಿಂದ ಮತ್ತೆ ವೇಗ ಪಡೆದುಕೊಳ್ಳಲಿದೆ. ಅನ್ನದಾತರ ಆಕ್ರೋಶದ ಕಿಡಿ, ಜ್ವಾಲೆಯಾಗಿ ರಾಷ್ಟ್ರ ರಾಜಧಾನಿಗೆ ಸಂಕಷ್ಟ ಉಂಟುಮಾಡದಂತೆ ಪೊಲೀಸರು ಅಲರ್ಟ್​ ಆಗಿದ್ದಾರೆ.. ಈ ಮಧ್ಯೆ ಹರಿಯಾಣದಲ್ಲಿ ನಡೆದ ಸಂಘರ್ಷ ಪ್ರತಿಭಟನೆಯ ಸ್ವರೂಪವನ್ನೇ ಬದಲಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ಹೊತ್ತಿಸಿದ್ದ ಪ್ರತಿಭಟನೆ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಳ್ತಿದೆ. ಕಳೆದ ಫೆಬ್ರವರಿ 21 ರಂದು ನಡೆದ ಸಂಘರ್ಷದಲ್ಲಿ ಯುವ ರೈತ ಸಾವನ್ನಪ್ಪಿದ ಘಟನೆಯೂ ನಡೆದು

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ Read More »

ರಾಷ್ಟ್ರೀಯ ನ್ಯೂಸ್

ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು

(ನ್ಯೂಸ್ ಕಡಬ) newskadaba.com ಲಕ್ನೋ ಫೆ. 24: ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ಪೊಲೀಸರು ಉಸಿರುಗಟ್ಟಿಸಿ ಸಾಯಿಸಿರೋ ಘಟನೆ ಸಂಭಾಲ್‌ನಲ್ಲಿ ನಡೆದಿದೆ. ಸಂಭಾಲ್‌ನ ರಸುಲ್‌ಪುರ ಧಾತ್ರಾ ಗ್ರಾಮದ ಮನೆಯೊಂದಕ್ಕೆ ಚಿರತೆ ನುಗ್ಗಿದೆ. ಆ ವೇಳೆ ಮನೆಯಲ್ಲಿದ್ದವರು ಕೂಡಲೇ ಅಡಗಿ ಕುಳಿತು ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ದೌಡಾಯಿಸಿ ಚಿರತೆಯಿದ್ದ ಜಾಗದ ಸುತ್ತ ಮುತ್ತ ಕಾರ್ಯಾಚರಣೆ ನಡೆಸಿದ್ದರು. ಆಗ ಚಿರತೆ ಕುಳಿತುಕೊಂಡಿದ್ದ ಮಂಚವನ್ನು ಪಲ್ಟಿ ಮಾಡಿದ್ದು ಅದನ್ನು ಸೆರೆಹಿಡಿಯಲು ಮುಂದಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ

ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು Read More »

ರಾಷ್ಟ್ರೀಯ ನ್ಯೂಸ್
Scroll to Top