Kadaba News

ಕಡಬ: ಕಬಡ್ಡಿಯನ್ನು ಪುನರಾಂಭಿಸುವಂತೆ ಕಡಬ ತಹಶೀಲ್ದಾರ್ ಗೆ ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ನಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ ನ. 27: ಗ್ರಾಮೀಣ ಕ್ರೀಡೆ ಕಬಡ್ಡಿ ಪಂದ್ಯಾಟವು ಕೊರೋನಾ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದು, ಮತ್ತೆ ಪುನರಾರಂಭಿಸಲು ತಾಲೂಕು ದಂಡಾಧಿಕಾರಿಗಳಿಗೆ ಕಡಬ ತಾಲೂಕು ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ನಿಂದ ಮನವಿ ಸಲ್ಲಿಸಲಾಯಿತು.     ಅಧ್ಯಕ್ಷ ಪಿ.ಯಂ. ಮೊಯಿದೀನ್ ಮೂಲೆ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಶೇಡಿಗುಂಡಿ, ಉಪಸ್ಥಿತರಿದ್ದರು. ಕೊರೋನಾ ಕಾನೂನು ನಿಯಮಗಳನ್ನು ಪಾಲಿಸಿ ಕಬಡ್ಡಿ ಕ್ರೀಡಾಕೂಟ ಸಂಘಟಿಸುವ ಸಂಘಟನೆಗಳಿಗೆ ಅನುಮತಿ ನೀಡಲು ಅವಕಾಶ ಕಲ್ಪಿಸುವಂತೆ ಕೇಳಿಕೊಳ್ಳಲಾಯಿತಿ. ಉಪ ತಹಸಿಲ್ದಾರರಾದ ಮನೋಹರ್ ಮೂಲಕ ಮನವಿ ಸಲ್ಲಿಸಲಾಯಿತು.  

ಕಡಬ: ಕಬಡ್ಡಿಯನ್ನು ಪುನರಾಂಭಿಸುವಂತೆ ಕಡಬ ತಹಶೀಲ್ದಾರ್ ಗೆ ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ನಿಂದ ಮನವಿ Read More »

ಕರಾವಳಿ

ಅಮರಮುಡ್ನೂರು: ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿ ಕೊನೆಯ ಹಂತ

(ನ್ಯೂಸ್ ಕಡಬ) newskadaba.com ಅಮರಮುಡ್ನೂರು ನ. 27: ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ರೂ.20 ಲಕ್ಷ ಅನುದಾನದಲ್ಲಿ ಪಂಚಾಯತ್ ನ ಪದವು ಎಂಬಲ್ಲಿ ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕ ನಿರ್ಮಾಣ ಕೊನೆಯ ಹಂತದ ಕಾಮಗಾರಿಯ ಕೆಲಸ ನಡೆಯುತ್ತಿದೆ.     ಮುಂದಿನ ತಿಂಗಳಿನಿಂದ ತ್ಯಾಜ್ಯ ಸಂಗ್ರಹದ ಕಾರ್ಯರಂಭವಾಗಲಿದ್ದು, ಕಸ ವಿಲೇವಾರಿಗೆ ಸ್ವಚ್ಚತಾ ವಾಹಿನಿ ಮಿನಿ ಟೆಂಪೊ ವಾಹನ(ಟಾಟಾ ಎಸ್) ಕೂಡ ಈಗಾಗಲೇ ಬಂದಿರುತ್ತದೆ.    

ಅಮರಮುಡ್ನೂರು: ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿ ಕೊನೆಯ ಹಂತ Read More »

ಕರಾವಳಿ

ಮಂಗಳೂರು: ತುಳು ಅಭಿವೃದ್ದಿ ಪ್ರಾಧಿಕಾರ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಬಿ.ಕೆ ಹರಿಪ್ರಸಾದ್ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ರವರು ರಾಜ್ಯ ಸರ್ಕಾರ ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆಯ ಬೆನ್ನಲ್ಲೇ ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.     ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಅಭಿವೃದ್ಧಿಗೆ ನಿಜವಾದ ಕೊಡುಗೆ ನೀಡಿದವರು ತುಳುವರು. ಅವರನ್ನು ಸರ್ಕಾರ ಕಡೆಗಣಿಸಿದೆ. ಹೀಗಾಗಿ ಕೊಡುವ ಇತ್ಯಾದಿ ಕರ್ನಾಟಕ ಅಂತರ್ಗತವಾದ ಸ್ಥಳೀಯ ಭಷೆಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  

ಮಂಗಳೂರು: ತುಳು ಅಭಿವೃದ್ದಿ ಪ್ರಾಧಿಕಾರ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಬಿ.ಕೆ ಹರಿಪ್ರಸಾದ್ ಒತ್ತಾಯ Read More »

ಕರಾವಳಿ

ಬೆಳ್ತಂಗಡಿ: ವಿದ್ಯುತ್ ಪ್ರವಾಹಿಸಿ ಓರ್ವ ಮೃತ್ಯು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 27: ಬೆಳ್ತಂಗಡಿ ತಾಲೂಕಿನ ಕಳೆಂಜ ಇಲ್ಲಿನ ಶಾಲೆತ್ತಡ್ಕ ಜಂಕ್ಷನ್ ನಲ್ಲಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಇಂದು ನಡೆದಿದೆ.     ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯನ್ನು ಪ್ರತಾಪ್ ಮೂಡಬಿದ್ರೆ(20.ವ) ಎಂದು ಗುರುತಿಸಲಾಗಿದೆ. ಮೂಡಬಿದ್ರೆಯ ಗುತ್ತಿಗೆದಾರರಾದ ಕುಮಾರ್ ಎಲೆಕ್ಟ್ರಿಕಲ್ಸ್ ನ ಸಿಬ್ಬಂದಿಗಳಾದ ಇವರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಕಂಬದಲ್ಲಿ ಇರುವಾಗಲೇ ವಿದ್ಯುತ್

ಬೆಳ್ತಂಗಡಿ: ವಿದ್ಯುತ್ ಪ್ರವಾಹಿಸಿ ಓರ್ವ ಮೃತ್ಯು ➤ ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಟ್ಟಡ ನೆಲಸಮ ಪ್ರಕರಣ, ಕಂಗನಾಗೆ ಗೆಲುವು ➤ ಬಿಎಂಸಿಗೆ ಹೈಕೋರ್ಟ್‌ ಚಾಟಿ, ವಿಲನ್‌ಗಳಿಗೆ ಕಂಗನಾ ಧನ್ಯವಾದ

(ನ್ಯೂಸ್ ಕಡಬ) newskadaba.com ಮುಂಬೈ ನ. 27: ಬೃಹನ್‌ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ವಿರುದ್ಧದ ಕಾನೂನು ಹೋರಾಟದಲ್ಲಿ ಬಾಂಬೆ ಹೈಕೋರ್ಟ್‌ ನಟಿ ಕಂಗನಾ ರಾಣಾವತ್‌ ಪರವಾಗಿ ತೀರ್ಪು ನೀಡಿದ್ದು ಮಹಾರಾಷ್ಟ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಂಗನಾ ರಣಾವತ್‌ ಅವರ ಕಟ್ಟಡವನ್ನು ಒಡೆದಿರುವ ಬಿಎಂಸಿ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ ಕೋರ್ಟ್‌ ಕಂಗನಾ ಸರ್ಕಾರದಿಂದ ಪರಿಹಾರ ಪಡೆಯಲು ಅರ್ಹರು ಎಂದು ಹೇಳಿದೆ. ನ್ಯಾ.ಎಸ್.ಜೆ.ಕಾತಾವಾಲ ಮತ್ತು ಆರ್.ಐ.ಚಾಗ್ಲಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ವ್ಯಕ್ತಿಯ ವಿರುದ್ಧ ಅಧಿಕಾರಿಗಳು ತೋಳ್ಬಲವನ್ನು ಪ್ರದರ್ಶಿಸುವುದನ್ನು ಒಪ್ಪಲಾಗದು. ಇದು

ಕಟ್ಟಡ ನೆಲಸಮ ಪ್ರಕರಣ, ಕಂಗನಾಗೆ ಗೆಲುವು ➤ ಬಿಎಂಸಿಗೆ ಹೈಕೋರ್ಟ್‌ ಚಾಟಿ, ವಿಲನ್‌ಗಳಿಗೆ ಕಂಗನಾ ಧನ್ಯವಾದ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಯೋಗೀಶ್ವರ್ ಪರ ಡಿಸಿಎಂ ಅಶ್ವತ್ಥ ನಾರಾಯಣ್ ಬ್ಯಾಟಿಂಗ್

(ನ್ಯೂಸ್ ಕಡಬ) newskadaba.com ಉಡುಪಿ, ನ. 27: ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಉಡುಪಿಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ್ ಯೋಗೀಶ್ ಪರ ಬ್ಯಾಟಿಂಗ್ ಮಾಡಿದ್ದಾರೆ.ಯೋಗೀಶ್ವರ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಅನ್ನೋ ಒತ್ತಾಯ ಇದೆ ಎಂದು ಹೇಳಿರುವ ಡಿಸಿಎಂ, ಅವರು ಬಹಳಷ್ಟು ಜವಾಬ್ದಾರಿ ಹೊತ್ತು‌ ಕಾರ್ಯನಿರ್ವಹಿಸಿದ್ದಾರೆ.ಅವರಿಗೂ ಸಚಿವ ಸ್ಥಾನದ ಅಪೇಕ್ಷೆ ಇದೆ.ಅವರಿಗೆ ಸಚಿವ ಸ್ಥಾನ ಸಿಗಲಿ ಅನ್ನೋದು ನಮ್ಮ ಅಭಿಪ್ರಾಯ ಇದೆ ಎಂದು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ,ಕೇಂದ್ರದ

ಉಡುಪಿ: ಯೋಗೀಶ್ವರ್ ಪರ ಡಿಸಿಎಂ ಅಶ್ವತ್ಥ ನಾರಾಯಣ್ ಬ್ಯಾಟಿಂಗ್ Read More »

ಕರಾವಳಿ

ಮಂಗಳೂರು : ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ಬಾಳೆಹೊನ್ನೂರಿನ ಕೆ.ಎಚ್ ಲತೀಫ್ ಎಂಬವರು (35) ಸೆಪ್ಟೆಂಬರ್ 13ರಿಂದ ಕಾಣೆಯಾಗಿದ್ದು,ಈ ಬಗ್ಗೆ ಪಣಂಬೂರು ಪೊಲೀಸ್‍ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೃಢಕಾಯ ಶರೀರ ಹೊಂದಿದ್ದು, 5.6 ಅಡಿ ಎತ್ತರವಿದ್ದು, ಬಿಳಿ ಮೈಬಣ್ಣ ಹೊಂದಿದ್ದಾರೆ, ಕನ್ನಡ, ತುಳು, ಹಿಂದಿ, ಮಲಯಾಳಿ ತೆಲುಗು ಭಾಷೆ ಬಲ್ಲವರಾಗಿದ್ದಾರೆ.ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಪಣಂಬೂರು ಪೊಲೀಸ್‍ ಠಾಣೆದೂ.ಸಂ: 0824-2220530, 9480805355, 9480805331 ಅಥವಾಮಂಗಳೂರು ಕಂಟ್ರೋಲ್‍ರೂಮ್‍ದೂ.ಸಂ: 0824-2220800ಗೆ ಮಾಹಿತಿಯನ್ನು ನೀಡುವಂತೆ ಪಣಂಬೂರು ಪೊಲೀಸ್‍ ಠಾಣೆಯ ಸಬ್‍ ಇನ್ಸ್‍ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು : ವ್ಯಕ್ತಿ ನಾಪತ್ತೆ Read More »

ಕರಾವಳಿ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಮಂಗಳೂರು ನಗರದಲ್ಲಿ ವಿ.ಹಿಂ.ಪ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ನಿಷೇಧಿತ ಉಗ್ರ ಸಂಘಟನೆ ಪರ ನಗರದ ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಜೈಕಾರ ಹಾಗೂ ಸಂಘಪರಿವಾರಕ್ಕೆ ಎಚ್ಚರಿಕೆಯ ನೀಡಿದ ಗೋಡೆ ಬರಹದ ವಿರುದ್ಧ ವಿಶ್ವ ಹಿಂದೂ ಪರಿಷತ್ ನಗರದ ಮಲ್ಲಿಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿತು. 50 ಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು ದೇಶ ವಿರೋಧಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.‌ ಈ ಸಂದರ್ಭ ವಿಹಿಂಪ ಮುಖಂಡ ಗೋಪಾಲ್ ಕುತ್ತಾರ್ ಮಾತನಾಡಿ, ಆರೋಪಿಗಳನ್ನ ಶೀಘ್ರವೇ ಬಂಧಿಸಿ, ಈ ದುಷ್ಕೃತ್ಯದ ಹಿಂದೆ ಇರೋ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಮಂಗಳೂರು ನಗರದಲ್ಲಿ ವಿ.ಹಿಂ.ಪ ಪ್ರತಿಭಟನೆ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 10 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ ನ. 27: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 10 ಮಂದಿಯಲ್ಲಿ ಕೋವಿಡ್ 19 ದೃಢಪಟ್ಟಿದೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ 50 ವರ್ಷದ ವ್ಯಕ್ತಿ, 22 ವರ್ಷದ ಯುವತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು ಪುತ್ತೂರು ತಾಲೂಕಿನ ಮರೀಲ್ ನಿವಾಸಿ 53 ವರ್ಷದ ಮಹಿಳೆ, ಪುರುಷರಕಟ್ಟೆ ನಿವಾಸಿ 27 ವರ್ಷದ ಮಹಿಳೆ, ಮುಂಡೂರು ನಿವಾಸಿ 19 ವರ್ಷದ ಯುವಕ, ಒಳಮೊಗ್ರು ನಿವಾಸಿ 43 ವರ್ಷದ ಮಹಿಳೆ, 25 ವರ್ಷದ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 10 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ

(ನ್ಯೂಸ್ ಕಡಬ) newskadaba.com ವಿಜಯನಗರ ನ. 27: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾಡಿದರು.       ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ Read More »

ಕರ್ನಾಟಕ
Scroll to Top