Kadaba News

ಉಡುಪಿ: ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಉಡುಪಿ ನ. 26: ಕರಾವಳಿ ನಗರಿ ಉಡುಪಿಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಳೆದ ದಿನ ನಡೆದಿದೆ.     ಉಡುಪಿ ತಾಲೂಕಿನ ಮಲ್ಪೆ ಬಸ್ಸು ನಿಲ್ದಾಣದ ಬಳಿ ಕಟ್ಟಡಕ್ಕೆ ತಾಗಿಕೊಂಡಿರುವ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನಾ ಸ್ಥಳಕ್ಕೆ ಮಲ್ಪೆ ಠಾಣೆ ಪೊಲೀಸರು ಆತನನ್ನು ಕಂಬದಿಂದ ಇಳಿಸಿ ವಿಚಾರಿಸಿದಾಗ ಈತ ಫಕೀರಪ್ಪ ಸವದತ್ತಿ ಮೂಲದವ ಅಲ್ಲದೇ, ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ.  

ಉಡುಪಿ: ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ Read More »

ಕರಾವಳಿ

ಪೋಕ್ಸೊ ಮತ್ತು ಸೈಬರ್ ಕ್ರೈಮ್ ಕಾಯಿದೆಯ ಕುರಿತು ಮಾಹಿತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಡಾ. ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ, ಇಲ್ಲಿಯ ಐ.ಕ್ಯೂ.ಎ.ಸಿ. ಮತ್ತು ಎನ್.ಎಸ್.ಎಸ್‍ ಘಟಕ ಹಾಗೂ ಲಯನ್ಸ್ ಕಬ್ಲ್ ಮಂಗಳಾದೇವಿ ಇವುಗಳ ಜಂಟಿ ಆಶ್ರಯದಲ್ಲಿ ಪೋಕ್ಸೋ ಕಾಯಿದೆಯ ಕುರಿತು ಕಾನೂನು ಮಾಹಿತಿ ಕಾರ್ಯಕ್ರಮವು ಜರುಗಿತು. ಇತೀಚೆಗೆ ನಗರದ ಕಾರ್‍ಸ್ಟ್ರೀಟ್‍ನ ಕಾಲೇಜಿನಲ್ಲಿ ಜಿಲ್ಲಾ ಕಾನೂನು ವೇದಿಕೆಯ ಅಧ್ಯಕ್ಷರು ಹಾಗೂ ವಕೀಲ ಎಸ್.ಪಿ ಚಂಗಪ್ಪರವರು ಉದ್ಘಾಟಿಸಿ ಮಾತನಾಡಿ, ಕಾನೂನು ವ್ಯಕ್ತಿಯ ಹುಟ್ಟಿನಿಂದ ಸಾಯುವವರೆಗೆ ರಕ್ಷಣೆಯ ನೆಲೆಯಾಗಿದೆ. ಯುವಜನರು

ಪೋಕ್ಸೊ ಮತ್ತು ಸೈಬರ್ ಕ್ರೈಮ್ ಕಾಯಿದೆಯ ಕುರಿತು ಮಾಹಿತಿ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ

“ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ತಳಮಟ್ಟದ ಕೌಶಲ್ಯಅಭಿವೃದ್ಧಿ ಅವಶ್ಯ”– ವೇದವ್ಯಾಸ ಕಾಮತ್ 

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕೌಶಲ್ಯಅಭಿವೃದ್ಧಿ ಅವಶ್ಯಕವಾಗಿದೆಯೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ವೇದವ್ಯಾಸ್‍ ಕಾಮತ್ ಹೇಳಿದರು. ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿಕೇಂದ್ರ (ಸಿಡಾಕ್), ಧಾರವಾಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತುಅಭಿವೃದ್ಧಿ ಟ್ರಸ್ಟ್, ಮಂಗಳೂರು ಹಾಗೂ ಸರಕಾರಿ ಮಹಿಳಾ ಕೈಗಾರಿಕಾ ಸಂಸ್ಥೆ, ಕದ್ರಿ ಮಂಗಳೂರು

“ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ತಳಮಟ್ಟದ ಕೌಶಲ್ಯಅಭಿವೃದ್ಧಿ ಅವಶ್ಯ”– ವೇದವ್ಯಾಸ ಕಾಮತ್  Read More »

ಕರಾವಳಿ, ಕರ್ನಾಟಕ

ಮಹಿಳೆಯರು ಶಿಕ್ಷಣ ಸ್ವ-ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು-ಶಿಲ್ಪ ಎ.ಜಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಮಹಿಳೆಯರು ಶಿಕ್ಷಣವಂತರಾಗಿ ಸ್ವ -ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಎ.ಜಿ ತಿಳಿಸಿದರು. ಅವರು ಉಳ್ಳಾಲದ ಬಿ.ಎಂ. ಶಾಲೆ ಸಂಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಮತ್ತು ವಕೀಲರ ಸಂಘ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಹಿಳಾ ದಿನ ಕಾರ್ಯಕ್ರಮವನ್ನು

ಮಹಿಳೆಯರು ಶಿಕ್ಷಣ ಸ್ವ-ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು-ಶಿಲ್ಪ ಎ.ಜಿ Read More »

ಕರಾವಳಿ, ಕರ್ನಾಟಕ

ಉಲ್ಲಾಳ ಬೀಚ್‍ನಲ್ಲಿ ಯೋಗ ಮತ್ತು ಸ್ವಚ್ಚತಾ ಅಭಿಯಾನ

(ನ್ಯೂಸ್ ಕಡಬ) newskadaba.com ಉಲ್ಲಾಳ ನ. 26: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಉಳ್ಳಾಲ ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರರಕ್ಷಣಾ ಪಡೆಯ ಸಂಯುಕ್ತ ಆಶ್ರಯದಲ್ಲಿ ನ. 22 ರಂದು ಉಲ್ಲಾಳ ಬೀಚ್‍ನ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಪ್ರಾಣಾಯಾಮ, ಯೋಗ ಶಿಬಿರ ಕಾರ್ಯಕ್ರಮವು ನಡೆಯಿತು. ನ.22 ರ ಭಾನುವಾರದಂದು ಉಳ್ಳಾಲ ಕಡಲತೀರದಲ್ಲಿ ಬೆಳಗ್ಗೆ 7.00 ರಿಂದ 8.30 ರವರೆಗೆ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರ ನೇತೃತ್ವದಲ್ಲಿ ಪ್ರಾಣಾಯಾಮ ಮತ್ತು ಯೋಗ

ಉಲ್ಲಾಳ ಬೀಚ್‍ನಲ್ಲಿ ಯೋಗ ಮತ್ತು ಸ್ವಚ್ಚತಾ ಅಭಿಯಾನ Read More »

ಕರಾವಳಿ

ಶೌರ್ಯ ಪ್ರಶಸ್ತಿ ಪುರಸ್ಕೃತ ಕೊರೋನಾ ವಾರಿಯರ್‍ ಡಾ. ಪಿ.ಆರ್.ಎಸ್.ಚೇತನ್ ರವರಿಗೆ‌ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಕೋವಿಡ್ ಸಂದರ್ಭ ದೇಶದೆಲ್ಲೆಡೆ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ ,ರಾಷ್ಟ್ರಪತಿಗಳಿಂದ ಶೌರ್ಯ ಪ್ರಶಸ್ತಿ ಪಡೆದ ಕೊರೋನಾ ವಾರಿಯರ್‍ಸ್ ಡಾ. ಪಿ.ಆರ್.ಎಸ್.ಚೇತನ್‌ರಿಗೆ ಮಂಗಳೂರಿನಲ್ಲಿ ಸನ್ಮಾನ ಮಾಡಲಾಯಿತು ಪ್ರಶಸ್ತಿಗಳ ಸರದಾರ ರಾಷ್ಟ್ರದ ಅತ್ಯೂನ್ನತ ಪ್ರಶಸ್ತಿಯಾದ ಶೌರ್ಯ ಪ್ರಶಸ್ತಿ ಪಡೆದ ಕೊರೋನಾ ವಾರಿಯರ್‍ಸ್ ಇವರಾಗಿದ್ದಾರೆ . ಕೊರೋನಾ ಸೈನಿಕ್ ಟಾಸ್ಕ್ ಫೋರ್‍ಸ್‌ನ ಚೆಯರ್ ಪರ್ಸನ್ ಹಾಗೂ ಕಮಂಡಿಗ್ (HQ & Ops ) ಸಿವಿಲ್ ಡಿಫೆನ್ಸ್‌ನ ಸಹಾಯಕ ಮುಖ್ಯ ಅಧಿಕಾರಿ ಲಯನ್.ಡಾ. ಪಿ.ಆರ್.ಎಸ್.ಚೇತನ್ ಅವರ

ಶೌರ್ಯ ಪ್ರಶಸ್ತಿ ಪುರಸ್ಕೃತ ಕೊರೋನಾ ವಾರಿಯರ್‍ ಡಾ. ಪಿ.ಆರ್.ಎಸ್.ಚೇತನ್ ರವರಿಗೆ‌ ಸನ್ಮಾನ Read More »

ಕರಾವಳಿ, ಕರ್ನಾಟಕ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಳಸಿ ಪೂಜೆ

(ನ್ಯೂಸ್ ಕಡಬ) newskadaba.com ಪುತ್ತೂರು ನ. 26: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ತುಳಸಿ ಪೂಜೆ ಕಾರ್ಯಕ್ರಮ ನಡೆಯಿತು.     ದೇವಳದ ಪ್ರಧಾನ ಅರ್ಚಕ ವಸಂತ ಕುಮಾರ್ ಕೆದಿಲಾಯ ಅವರ ನೇತೃತ್ವದಲ್ಲಿ ದೇವಳದ ಬೆಳಗ್ಗಿನ ಪೂಜೆ, ನಿತ್ಯ ಬಲಿ ಉತ್ಸವದ ಬಳಿಕ ದೇವಳದ ಒಳಾಂಗಣದಲ್ಲಿರುವ ಮಾವಿನ ಎಲೆ ಮತ್ತು ಹೂವಿನಿಂದ ಅಲಂಕೃತಗೊಂಡ ತುಳಸಿ ಕಟ್ಟೆಯಲ್ಲಿ ತುಳಸಿ ಪೂಜೆ ನಡೆಯಿತು. ತುಳಸಿಗೆ ಹಾಲು, ಪಂಚಾಮೃತ ಅಭಿಷೇಕ, ಸುವಸ್ತುಗಳ ಸಮರ್ಪಣೆ ಮಾಡಿ ಪೂಜೆ ಮಾಡಲಾಯಿತು. ಪೂಜಾ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಳಸಿ ಪೂಜೆ Read More »

ಕರಾವಳಿ

ಮುರುಡೇಶ್ವರದಲ್ಲಿ ದೋಣಿಗಳ ಸ್ಥಳಾಂತರಕ್ಕೆ ವಿರೋಧ ➤ ಅಭಿವೃದ್ಧಿಪಡಿಸಲು ಸಹಕರಿಸುವಂತೆ ಅಧಿಕಾರಿಗಳಿಂದ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26:  ಪ್ರವಾಸಿ ತಾಣ ಮುರುಡೇಶ್ವರ ಸಮುದ್ರ ತೀರವನ್ನು ಅಭಿವೃದ್ಧಿ ಪಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ ನಿರ್ಧಾರಕ್ಕೆ ಇಲ್ಲಿನ ಮೀನುಗಾರರ ವಿರೋಧ ಮುಂದುವರೆದಿದೆ. ಸಮುದ್ರ ಬೇಲೆಯ ಮೇಲೆ ನಿಲ್ಲಿಸಲಾಗಿರುವ ಮೀನುಗಾರಿಕಾ ದೋಣಿಗಳನ್ನು ಬದಿಗೆ ಸರಿಸಿ, ಅಂಗಡಿಗಳಿಗೆ ಅವಕಾಶ ಮಾಡಿಕೊಡುವ ಪ್ರಸ್ತಾಪಕ್ಕೆ ಮೀನುಗಾರರು ಒಪ್ಪುತ್ತಲೇ ಇಲ್ಲ.ವಿಶ್ವ ಪ್ರಸಿದ್ಧ ತಾಣವಾಗಿರುವ ಮುರುಡೇಶ್ವರವನ್ನು ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುತುವರ್ಜಿ ವಹಿಸಿ ಕಾರ್ಯಾಚರಣೆಗೆ ಇಳಿದಿದೆ. ರಸ್ತೆ ಅಗಲೀಕರಣ, ಚರಂಡಿ ನಿರ್ಮಾಣದೊಂದಿಗೆ ಸಮುದ್ರ ತೀರದಲ್ಲಿಯೂ ಪ್ರವಾಸೋದ್ಯಮ ಚಟುವಟಿಕೆಗಳನ್ನು ಉತ್ತೇಜಿಸಲು ಮುಂದಾಗಿದೆ ಮುರುಡೇಶ್ವರ

ಮುರುಡೇಶ್ವರದಲ್ಲಿ ದೋಣಿಗಳ ಸ್ಥಳಾಂತರಕ್ಕೆ ವಿರೋಧ ➤ ಅಭಿವೃದ್ಧಿಪಡಿಸಲು ಸಹಕರಿಸುವಂತೆ ಅಧಿಕಾರಿಗಳಿಂದ ಮನವಿ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಅಕ್ರಮ ಮರ ಸಾಗಾಟ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 26: ಕಡೇ ಶಿವಾಲಯ ಗ್ರಾಮದ ಬುಡೋಳಿ ಎಂಬಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಬಂಟ್ವಾಳ ಅರಣ್ಯ ಇಲಾಖೆ ಸಿಬ್ಬಂದಿಗಳು ಪುತ್ತೂರು ವಲಯ ಅರಣ್ಯಾಧಿಕಾರಿಗಳ ಸಹಕಾರದೊಂದಿಗೆ ಪತ್ತೆ ಹಚ್ಚಿ ಲಾರಿ ಸಮೇತ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ಬಂಟ್ವಾಳ ವಲಯ ಅರಣ್ಯಾಧಿಕಾರಿಗಳಾದ ರಾಜೇಶ್ ಬಳೆಗಾರ, ಉಪವಲಯ ಅರಣ್ಯಾಧಿಕಾರಿಗಳಾದ ಪ್ರೀತಂ ಎಸ್, ಯಶೋಧರ, ಅರಣ್ಯ ರಕ್ಷಕರುಗಳಾದ ಲಕ್ಷ್ಮೀ ನಾರಾಯಣ. ಜಿತೇಶ್, ಸಿಬ್ಬಂದಿಗಳಾದ ಪ್ರವೀಣ್ ಕಲ್ಮಲೆ, ಭಾಸ್ಕರ, ಡಿ. ಜಯರಾಂ ಪಾಲ್ಗೊಂಡಿದ್ದರು.

ಬಂಟ್ವಾಳ: ಅಕ್ರಮ ಮರ ಸಾಗಾಟ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ➤ ರೌಡಿಶೀಟರ್ ಓರ್ವನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಕಳೆದ ದಿನ ರಾತ್ರಿ  ರೌಡಿಶೀಟರ್‌ ಓರ್ವನನ್ನು ಭೀಕರವಾಗಿ ಹತ್ಯೆಗೈದ  ಘಟನೆ ಬೊಕ್ಕಪಟ್ಟಣದ ಕರ್ನಲ್‌ ಗಾರ್ಡನ್‌ ಒಳಗಡೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಇಂದ್ರಜೀತ್‌ (29)  ಎಂದು ಗುರುತಿಸಲಾಗಿದೆ.     ಈತ ರೌಡಿಶೀಟರ್‌ ಎಂದು ತಿಳಿದು ಬಂದಿದ್ದು, ಕಳೆದ ರಾತ್ರಿ ಈತನು ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ರಾತ್ರಿ ಸುಮಾರು 2 ಗಂಟೆಗೆ ಕರ್ನಲ್‌ ಗಾರ್ಡನ್‌ ಬಳಿ ಈತನ ಹತ್ಯೆಗೈಯಲಾಗಿದೆ ಹಾಗೂ

ಮಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ➤ ರೌಡಿಶೀಟರ್ ಓರ್ವನ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top