Kadaba News

“ಫೆವಿಕಲ್” ಯಕ್ಷಗಾನ ಜಾಹಿರಾತು ವಿರುದ್ದ ಕರಾವಳಿಯಲ್ಲಿ ಆಕ್ರೋಶ ➤ ಜಾಹಿರಾತು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ ಕ್ಷಮೆಗೆ ಶಾಸಕ ಕಾಮತ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ‘ಫೆವಿಕಾಲ್’ ಗಮ್ ಗೆ ಸಂಬಂಧಿಸಿದ ಹೊಸ ಜಾಹೀರಾತೊಂದು ಇದೀಗ ಕರಾವಳಿ ಭಾಗದ ಮಂದಿಯ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ರಾಜ್ಯ ಮಟ್ಟದ ವಾಹಿನಿಯಲ್ಲೂ ಬಿತ್ತರವಾಗುತ್ತಿರುವ ಈ ಜಾಹೀರಾತಿನಲ್ಲಿ ಕರಾವಳಿ ಕರ್ನಾಟಕದ ಗಂಡು ಕಲೆ ಎಂದು ಗುರುತಿಸಿಕೊಂಡ ಯಕ್ಷಗಾನಕ್ಕೆ ಅವಮಾನಿಸಲಾಗಿದೆ ಅನ್ನೋದೆ ಆಕ್ರೋಶಕ್ಕೆ ಕಾರಣ. ಜಾಹೀರಾತಿನಲ್ಲಿ ಯಕ್ಷಗಾನದ ವೇಷಧಾರಿಗಳನ್ನು ಹಾಗೂ ಭಾಗವತರು ಮತ್ತಿತರರನ್ನು ತಮಾಷೆಯ ರೀತಿಯಲ್ಲಿ ಬಿಂಬಿಸಲಾಗಿದ್ದು, ಜಾಹೀರಾತಿಗಾಗಿ ಯಕ್ಷಗಾನ ಕಲೆಯನ್ನು ದುರ್ಬಳಕೆ ಮಾಡಲಾಗಿದೆ ಅನ್ನೋದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.ಜಾಹಿತಾರು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ […]

“ಫೆವಿಕಲ್” ಯಕ್ಷಗಾನ ಜಾಹಿರಾತು ವಿರುದ್ದ ಕರಾವಳಿಯಲ್ಲಿ ಆಕ್ರೋಶ ➤ ಜಾಹಿರಾತು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ ಕ್ಷಮೆಗೆ ಶಾಸಕ ಕಾಮತ್ ಆಗ್ರಹ Read More »

ಕರಾವಳಿ, ಕರ್ನಾಟಕ

ಮಂಗಳೂರು ಖಾಸಗಿ ಆಸ್ಪತ್ರೆಗೆ ಪ್ರಧಾನಿ ಕಾರ್ಯಾಲಯದಿಂದ 12ಲಕ್ಷ ರೂಪಾಯಿ ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು  ನ. 24: ಕೊರೊನಾ ಹಿನ್ನಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವಾಗ ಖಾಸಗಿ ಆಸ್ಪತ್ರೆಗಳು ಒಂದಲ್ಲ ಒಂದು ರೀತಿಯಲ್ಲಿ ಹಣ ಮಾಡುವ ದಂಧೆ ನಡೆಯುತ್ತಲೇ ಇದೆ. ಇದೀಗ ಮಂಗಳೂರಿನಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಡ ರೋಗಿಯನ್ನು ಸೂಕ್ತ ಚಿಕಿತ್ಸೆ ನೀಡುವುದು ಬಿಟ್ಟು, ಲಕ್ಷಾಂತರ ರೂಪಾಯಿ ಬಿಲ್ ಮಾಡಿರುವ ಘಟನೆ ಬಗ್ಗೆ ಬಂದ ದೂರಿನ ಹಿನ್ನಲೆಯಲ್ಲಿ ಪ್ರಧಾನಿ ಕಾರ್ಯಾಲಯ ಆಸ್ಪತ್ರೆಗೆ 12,96,320 ರೂಪಾಯಿ ದಂಡ ವಿಧಿಸಿರುವ ಘಟನೆ ನಡೆದಿದೆ.     ಪಣಂಬೂರು ವ್ಯಕ್ತಿಯೊಬ್ಬರು ಫೆಬ್ರವರಿ ತಿಂಗಳಿನಲ್ಲಿ

ಮಂಗಳೂರು ಖಾಸಗಿ ಆಸ್ಪತ್ರೆಗೆ ಪ್ರಧಾನಿ ಕಾರ್ಯಾಲಯದಿಂದ 12ಲಕ್ಷ ರೂಪಾಯಿ ದಂಡ Read More »

ಕರಾವಳಿ

ಶಿವಮೊಗ್ಗ: ಹೊಸ ಸೈನಿಕ ಶಾಲೆ ಆರಂಭಿಸುವ ಕುರಿತು ಸಂಸದ ಬಿವೈ ರಾಘವೇಂದ್ರ ಮಾಹಿತಿ

(ನ್ಯೂಸ್ ಕಡಬ) newskadaba.com ಶಿವಮೊಗ್ಗ ನ. 24: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ ಹೊಸ ಸೈನಿಕ ಶಾಲೆ ಆರಂಭಿಸುವ ಕುರಿತು ಸಂಸದ ಬಿವೈ ರಾಘವೇಂದ್ರ ಮಾಹಿತಿ ನೀಡಿದ್ದಾರೆ.     ಮುಂದಿನ ದಿನಗಳಲ್ಲಿ ಸುಮಾರು 300 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಲೆ ನಿರ್ಮಾಣವಾಗಲಿದ್ದು, ಸೈನಿಕ ಶಾಲೆಗಾಗಿ ಆಗುಂಬೆಯಲ್ಲಿ 100 ಎಕರೆ ಜಮೀನು ಗುರುತಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರಲ್ಲಿ ಚರ್ಚಿಸಲಾಗಿದೆ ಎಂದು ಬಿವೈ ರಾಘವೇಂದ್ರ ಅವರು ಹೇಳಿದ್ದಾರೆ.  

ಶಿವಮೊಗ್ಗ: ಹೊಸ ಸೈನಿಕ ಶಾಲೆ ಆರಂಭಿಸುವ ಕುರಿತು ಸಂಸದ ಬಿವೈ ರಾಘವೇಂದ್ರ ಮಾಹಿತಿ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 24: ಮಂಜೇಶ್ವರ ಸಮೀಪ ಮಜೀರ್ಪಳ್ಳ ಎಂಬಲ್ಲಿ ಪೊಲೀಸರನ್ನು ಕಂಡು ಹೆದರಿ ಓಡಿ ಯುವಕ ಪಾಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೋಳ್ಯೂರಿನ ಸಂಪತ್(26) ಎಂದು ಗುರುತಿಸಲಾಗಿದೆ.     ಸ್ನೇಹಿತರ ಜೊತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರ ವಾಹನವನ್ನು ಗಮನಿಸಿದ ಈತ ಅಲ್ಲಿಂದ ಪರಾರಿಯಾಗಿದ್ದು, ಸ್ವಲ್ಪ ಸಮಯ ಕಳೆದು ಜೊತೆಗಿದ್ದ ಸ್ನೇಹಿತರು ಹುಡುಕಾಡಿದಾಗ ಸಂಪತ್ ನಾಪತ್ತೆಯಾಗಿದ್ದನು. ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು

ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 24: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನರಾಗಿದ್ದಾರೆ. ಅರೆಭಾಷೆ ಕುಂದಾಪುರದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪಣ್ಕ್ ಮಕ್ಕಳ್ ಆಲ್ಬಮ್ ಸಾಂಗ್ ಮೂಲಕ ಹೊಸ ಅಧ್ಯಾಯ ಬರೆದಿದ್ದರು. ಸಂಗೀತ ನಿರ್ದೇಶಕ ರವಿ ಬಸ್ರೂರ್ ಗರಡಿಯಲ್ಲಿ ಹಲವು ಕುಂದಗನ್ನಡದ ಸಾಹಿತ್ಯ ಉಣಬಡಿಸಿದ ಒಬ್ಬ ಅದ್ಭುತ ಬರಹಗಾರರಾಗಿದ್ದರು.     ನಂತರ ಕನ್ನಡದ ಕಮರ್ಷಿಯಲ್ ಸಿನಿಮಾಗಳತ್ತ ಮುಖಮಾಡಿದ ಅಶೋಕ್ ನೀಲಾವರ, ನಿರ್ಮಾಪಕ ಪಿ. ಆರ್. ಅಮೀನ್ ನಿರ್ಮಾಣದ ಕತ್ತಲೆ ಕೋಣೆ ಕನ್ನಡ ಚಿತ್ರಕ್ಕೆ ಎರಡು

ಉಡುಪಿ: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನ Read More »

ಕರಾವಳಿ

ಮಂಗಳೂರು ವಿವಿ : ಕೋವಿಡ್ ನಿಂದ ಪರೀಕ್ಷೆ ತಪ್ಪಿಸಿಕೊಂಡವರಿಗೆ ಮತ್ತೊಮ್ಮೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದು ವಿದ್ಯಾರ್ಥಿಗಳಿಗೆ ಮಂಗಳೂರು ವಿವಿ ಇನ್ನೊಂದು ಅವಕಾಶವನ್ನ ಒದಗಿಸಿದೆ. ಡಿಸೆಂಬರ್ 21 ರಂದು ಮಡಿಕೇರಿ, ಮಂಗಳೂರು ವಿವಿ ಕಾಲೇಜು ಹಾಗೂ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಅವಕಾಶವನ್ನ ಮಾಡಿಕೊಡುವುದಾಗಿ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ.     ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಪದವಿ ಪರೀಕ್ಷೆ ಫಲಿತಾಂಶವೂ ಪ್ರಕಟಗೊಂಡಿದ್ದು, ಕೋವಿಡ್ ಕಾರಣದಿಂದ ಪರೀಕ್ಷೆಗೆ ಆಗಮಿಸಲು ಸಾಧ್ಯವಾಗದ ಪದವಿ, ಸ್ನಾತಕೋತ್ತರ

ಮಂಗಳೂರು ವಿವಿ : ಕೋವಿಡ್ ನಿಂದ ಪರೀಕ್ಷೆ ತಪ್ಪಿಸಿಕೊಂಡವರಿಗೆ ಮತ್ತೊಮ್ಮೆ ಅವಕಾಶ Read More »

ಕರಾವಳಿ

ಎರಡೂ ಕಾಲಿಲ್ಲದ ಯುವತಿಗೆ “ಬಾಳ ದೀಪ” ವಾದ ಸಂ”ದೀಪ”

(ನ್ಯೂಸ್ ಕಡಬ) newskadaba.com ಉಡುಪಿ ನ. 24: ಕಾಲುಗಳೆರಡೂ ಬಲಹೀನವಾದರೂ, ಈ ಯುವತಿಯ ಅದೃಷ್ಟಬಲ ಮಾತ್ರ ದೃಢವಾಗಿತ್ತು. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಯುವಕ ತಾನೇ ಮುಂದೆ ಬಂದು ಈ ಹೆಣ್ಣು ಮಗಳ ಬಾಳಿಗೆ ಬೆಳಕಾಗಿದ್ದಾರೆ.     ಪೋಲಿಯೊಗೆ ತುತ್ತಾಗಿ ಎರಡೂ ಕಾಲುಗಳಲ್ಲಿ ಈಕೆ ಬಲ ಕಳೆದುಕೊಂಡಿದ್ದಾರೆ. ಪಿಯುಸಿ ವರೆಗೆ ಓದಿ, ತಂದೆ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡ ನಿರಾಧಾರವಾಗುತ್ತೆ ಎಂದು ಖಿನ್ನತೆಗೆ ಜಾರಿದ್ದಳು. ಈ ಸಂದರ್ಭದಲ್ಲಿ ಅದೃಷ್ಟದ ಬಾಗಿಲು ತೆರೆದಿದೆ.

ಎರಡೂ ಕಾಲಿಲ್ಲದ ಯುವತಿಗೆ “ಬಾಳ ದೀಪ” ವಾದ ಸಂ”ದೀಪ” Read More »

ಕರಾವಳಿ, ಕರ್ನಾಟಕ

ಕಾಪು: ಕಾರು ಢಿಕ್ಕಿ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು ನ. 24: ಉಚ್ಚಿಲ ಪೇಟೆಯಲ್ಲಿ ಪಾದಚಾರಿಯೋರ್ವರಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ.   ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದಿಂದ ಮಂಗಳೂರಿಗೆ ಚಲಿಸುತ್ತಿದ್ದ ಕಾರು, ನರ್ಸರಿಯಲ್ಲಿ ಸಸಿ ಖರೀದಿಸಿ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಉಚ್ಚಿಲ ಪೇಟೆಯತ್ತ ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡು ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯರ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ

ಕಾಪು: ಕಾರು ಢಿಕ್ಕಿ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪುತ್ತೂರು: ಪೊಲೀಸ್ ಠಾಣೆಯ ಬಳಿಯಿಟ್ಟ ದ್ವಿಚಕ್ರ ವಾಹನ ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು ನ. 24: ಕಳೆದ ದಿನ ರಾತ್ರಿ ಮಹಿಳಾ ಪೊಲೀಸ್ ಠಾಣೆಯ ಬಳಿ ಶಿವಕೃಪಾ ಸ್ಟೋರ್ ಎದುರು ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವೊಂದು ಕಳವಾದ ಬಗ್ಗೆ ವರದಿಯಾಗಿದೆ.     ಪುತ್ತೂರು ಪತ್ರಕರ್ತರ ಸಂಘದ ಸದಸ್ಯ ಅನೀಶ್ ಮರೀಲ್ ಎಂಬವರು ಪೊಲೀಸ್ ಠಾಣೆಯ ಬಳಿ ತನ್ನ ಹಿರೋ ಫ್ಲಜರ್ ಸ್ಕೂಟರ್ ನಿಲ್ಲಿಸಿದ್ದರು. ವಾಹನ ನಿಲ್ಲಿಸಿದ ಸ್ಥಳಕ್ಕೆ ಬಂದು ನೋಡಿದಾಗ ವಾಹನ ಕಳವಾಗಿರುವುದು ಬೆಳಕಿಗೆ ಬಂದಿದೆ. ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.    

ಪುತ್ತೂರು: ಪೊಲೀಸ್ ಠಾಣೆಯ ಬಳಿಯಿಟ್ಟ ದ್ವಿಚಕ್ರ ವಾಹನ ಕಳವು Read More »

ಕರಾವಳಿ

ಉಡುಪಿ: ಏಕಾಏಕಿ ಮೇಲಿಂದ ಬಿದ್ದ ಫ್ಯಾನ್ ➤ ಅಪಾಯದಿಂದ ಪಾರಾದ ಅಂಗಡಿ ಮಾಲಿಕ

(ನ್ಯೂಸ್ ಕಡಬ) newskadaba.com ಉಡುಪಿ ನ. 24: ಉಡುಪಿ ಜಿಲ್ಲೆಯಲ್ಲಿ ಏಕಾಏಕಿ ಮೇಲಿನಿಂದ ಫ್ಯಾನ್ ಬೀಳುತ್ತಿದ್ದಂತೆ ಅಂಗಡಿ ಮಾಲಿಕ ಅಪಾಯದಿಂದ ಪಾರಾದ ಘಟನೆ ನಡೆದಿದೆ.     ಘಟನೆಯಿಂದ ಪಾರಾದ ವ್ಯಕ್ತಿಯನ್ನು ಸತೀಶ್ ಎಂದು ಗುರುತಿಸಲಾಗಿದೆ. ಎಂದಿನಂತೆ ತರಕಾರಿ ಮಾರಾಟದ ಲೆಕ್ಕಾಚಾರ ಬರೆಯುತ್ತಿದ್ದ ಸತೀಶನ ತಲೆ ಮೇಲೆ ತಿರುಗುತ್ತಿದ್ದ ಸೀಲಿಂಗ್ ಫ್ಯಾನ್ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಫ್ಯಾನ್ ಮೇಲಿಂದ ಬೀಳುತ್ತಿರುವ ದೃಶ್ಯವಾಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.    

ಉಡುಪಿ: ಏಕಾಏಕಿ ಮೇಲಿಂದ ಬಿದ್ದ ಫ್ಯಾನ್ ➤ ಅಪಾಯದಿಂದ ಪಾರಾದ ಅಂಗಡಿ ಮಾಲಿಕ Read More »

ಕರಾವಳಿ
Scroll to Top