Kadaba News

ನ.25ರಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮ ದಿನದ ಸಂಭ್ರಮ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ನ. 24: ಧರ್ಮ ಸಮನ್ವಯತೆಯ ನೆಲೆವೀಡು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬ ನವೆಂಬರ್ 25ರಂದು ಶ್ರೀ ಕ್ಷೇತ್ರದಲ್ಲಿ ಕೊರೊನಾ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ನಡೆಯಲಿದೆ.   ಧರ್ಮಾಧಿಕಾರಿ ಡಾ. ಹೆಗ್ಗಡೆಯವರ ಕುಟುಂಬಸ್ಥರು, ಬಂಧುಗಳು, ಆಪ್ತರು, ಅಭಿಮಾನಿಗಳು, ಭಕ್ತರು ಗೌರವ ನಮನ ಸಲ್ಲಿಸುವರು. ಕೀರ್ತಿಶೇಷ ಹಿಂದಿನ ಧರ್ಮಾಧಿಕಾರಿಯಾಗಿದ್ದ ರತ್ನವರ್ಮ ಹೆಗ್ಗಡೆ, ರತ್ನಮ್ಮ ದಂಪತಿಯ ಜೇಷ್ಠ ಪುತ್ರರಾಗಿರುವ ಡಾ.ಹೆಗ್ಗಡೆಯವರು 1948ರ ನವೆಂಬರ್‌ 25ರಂದು ಜನಿಸಿದ ಅವರು, 1968ರ ಅಕ್ಟೋಬರ್‌ […]

ನ.25ರಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮ ದಿನದ ಸಂಭ್ರಮ Read More »

ಕರಾವಳಿ, ಕರ್ನಾಟಕ

ದಕ್ಷಿಣಕನ್ನಡ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ➤ ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಕಾಲೇಜುಗಳು ಆರಂಭವಾಗಿ ವಾರವಾಗಿದ್ದು, ದ.ಕ.ದಲ್ಲಿ 29 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ. ಇದರಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳೂ ಸೇರಿದ್ದಾರೆ. ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಮಂಗಳೂರಿಗೆ ಬಂದ 6 ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.ಕಳೆದ ಕೆಲವು ದಿನಗಳಿಂದ

ದಕ್ಷಿಣಕನ್ನಡ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ➤ ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ ನ. 24: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 3 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ.     ಕಡಬ ತಾಲೂಕಿನ ಕಾಣಿಯೂರು ಗ್ರಾಮದ 20 ವರ್ಷದ ಯುವಕನಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಪುತ್ತೂರು ತಾಲೂಕಿನ ಪುತ್ತೂರು ಕಸಬದ 42 ವರ್ಷದ ಮಹಿಳೆ ಮತ್ತು ಕುಂಬ್ರದ 81 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.  

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ ನ. 24: ಕಡಬದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಮಲೆನಾಡು ಹಿತರಕ್ಷಣಾ ವೇದಿಕೆಯ ಪ್ರಮುಖರಾದ ಹಾಜಿ ಸೈಯದ್ ಮೀರಾ ಸಾಹೇಬ್  ಸೇರಿದಂತೆ ಆನೇಕ ಗಣ್ಯರು ಪ್ರತಿಭಟನಾಗಾರರು ಪಾಲ್ಗೊಂಡಿದ್ದಾರೆ ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ ನಡೆಯುತ್ತಿದೆ.   ಮಲೆನಾಡು ಜನಹಿತ ರಕ್ಷಣಾ

ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ Read More »

ಕರಾವಳಿ

ಕಾಣಿಯೂರು: ಅಟೋ ರಿಕ್ಷಾ ಪಲ್ಟಿ

(ನ್ಯೂಸ್ ಕಡಬ) newskadaba.com ಶ್ರೀನಗರ ನ. 24: ಕಳೆದ ದಿನ ಬೆಳಂದೂರು ಸಮೀಪ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ನಡೆದಿದೆ.     ಘಟನೆಯಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.  

ಕಾಣಿಯೂರು: ಅಟೋ ರಿಕ್ಷಾ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಪ್ರಕೃತಿ ವಿಸ್ಮಯ ➤ 7 ಕಾಲು, 2 ತಲೆಗಳಿರುವ ಕರುವಿಗೆ ಜನ್ಮ ನೀಡಿದ ದನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 24: ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದ ಕಾಯರ್ತಡ್ಕ ರಾಮಣ್ಣ ಗೌಡ ಅವರ ಸಾಕು ದನವೊಂದು 2 ಕರುಗಳಿಗೆ ಜನ್ಮ ನೀಡಿದೆ.     ಒಂದು ಕರು ಸರಿಯಾಗಿಯೇ ಇದ್ದು, ಇನ್ನೊಂದು ಕರು ವಿಸ್ಮಯವಾಗಿದೆ. ಪ್ರಕೃತಿ ವೈಚಿತ್ರಗಳು ಹೇಗೆಲ್ಲಾ ನಡೆಯುತ್ತದೆ ಎಂಬುದಕ್ಕೆ ತಕ್ಕ ಸಾಕ್ಷಿಯಾಗಿರುವ ದನವೊಂದು 7 ಕಾಲು, 2 ತಲೆಗಳಿರುವ ಕರುವಿಗೆ ಜನ್ಮ ನೀಡಿದೆ. ಈ ವಿಸ್ಮಯಕಾರಿ ಕರುವನ್ನು ನೋಡಲು ಕುತೂಹಲದಿಂದ ಹಲವೆಡೆಯಿಂದ ಜನರು ಆಗಮಿಸುತ್ತಿದ್ದಾರೆ.    

ಬೆಳ್ತಂಗಡಿ: ಪ್ರಕೃತಿ ವಿಸ್ಮಯ ➤ 7 ಕಾಲು, 2 ತಲೆಗಳಿರುವ ಕರುವಿಗೆ ಜನ್ಮ ನೀಡಿದ ದನ Read More »

ಕರಾವಳಿ

ಬಂಟ್ವಾಳ: ಮನೆ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 24: ಸರಪಾಡಿ ಗ್ರಾಮದ ಮುನ್ನಲಾಯಿಪದವು ಎಂಬಲ್ಲಿ ವಸಂತಿ ಎಂಬವರ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ವಸಂತಿ ಹಾಗೂ ಅವರ ಮನೆಮಂದಿ ಶನಿವಾರ ಸುಳ್ಯಕ್ಕೆ ಸಂಬಂಧಿಕರ ಮನೆಗೆ ಕಾರ್ಯಕ್ರಮದ ನಿಮಿತ್ತ ತೆರಳಿದ್ದರು. ಸೋಮವಾರ ಮುಂಜಾನೆ ಮನೆ ಒಳಗಿನಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಮನೆಯತ್ತ ತೆರಳಿದಾಗ ಮನೆಯೊಳಗೆ ಸಾಮಗ್ರಿ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ತಕ್ಷಣ ಸ್ಥಳೀಯರು ಅಗ್ನಿಶಾಮಕದಳ ಹಾಗೂ ವಸಂತಿಯವರಿಗೆ ಕರೆ ಮಾಡಿ ಮಾಹಿತಿ ನೀಡಿದರು.  

ಬಂಟ್ವಾಳ: ಮನೆ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನಷ್ಟ Read More »

ಕರಾವಳಿ

WWE ಪ್ರಿಯರಿಗೆ ಟೇಕರ್ ಶಾಕ್ ➤ ಕುಸ್ತಿ ಅಂಗಳಕ್ಕೆ ವಿದಾಯ ಹೇಳಿದ “ಅಂಡರ್ ಟೇಕರ್”

(ನ್ಯೂಸ್ ಕಡಬ) newskadaba.com ದೆಹಲಿ ನ. 24: WWE ಕುಸ್ತಿ ನೋಡಿಕೊಂಡೇ ಬೆಳೆದ ದೊಡ್ಡವರಾದವರಿಗೆ ಬೇಸರವಾಗುವ ಬೆಳವಣಿಗೆಯೊಂದರಲ್ಲಿ, ‘ದಿ ಅಂಡರ್‌ಟೇಕರ್‌’ ಕುಸ್ತಿ ಅಂಗಳಕ್ಕೆ ನಿವೃತ್ತಿ ಘೋಷಿಸಿದ್ದಾರೆ. ‘ದಿ ಅಂಡರ್‌ಟೇಕರ್‌’ ಹೆಸರಿನ ಸ್ಟೇಜ್‌ನೇಮ್‌ನಿಂದಲೇ ಜನಪ್ರಿಯರಾದ ಮಾರ್ಕ್ ವಿಲಿಯಮ್ ಕಾಲವೇ, “ನೆಮ್ಮದಿಯಿಂದ ನಿವೃತ್ತ ಜೀವನ ನಡೆಸುವ ಕಾಲ ಬಂದಿದೆ” ಎಂದು ತಮ್ಮ ಟ್ವೀಟರ್‌ ಮೂಲಕ ಹೇಳಿಕೊಂಡಿದ್ದಾರೆ.   55ರ ಹರೆಯದ ಈ ವೃತ್ತಿಪರ ಕುಸ್ತಿಪಟುವಿನ ವಿದಾಯಕ್ಕೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ.  55 ವರ್ಷದ ಈ ಕುಸ್ತಿಪಟು, ತಮ್ಮ 30

WWE ಪ್ರಿಯರಿಗೆ ಟೇಕರ್ ಶಾಕ್ ➤ ಕುಸ್ತಿ ಅಂಗಳಕ್ಕೆ ವಿದಾಯ ಹೇಳಿದ “ಅಂಡರ್ ಟೇಕರ್” Read More »

ರಾಷ್ಟ್ರೀಯ ನ್ಯೂಸ್

ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸವನ್ನು ನೆರವೇರಿಸಿದರು. ಮಂಗಳೂರಿನ ಮೂಡುಶೆಡ್ಡೆ ಗ್ರಾಪಂ, ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಮೂಡುಶೆಡ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಸಹಯೋಗದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮದ ಹೊರಾಂಗಣ ರಸ್ತೆ ಡಾಮರೀಕರಣ ಮತ್ತು ಸುಮಾರು 69 ಲಕ್ಷ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮ ಮುಂದುವರಿದ ಪಿಲಿಕುಳ ದ್ವಾರದವರೆಗೆ ನಾಲ್ಕು ಪಥದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ

ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ Read More »

ಕರಾವಳಿ

ಬಂಟ್ವಾಳ: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ ➤ ವುಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 24: ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ದೇಶಾದ್ಯಂತ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬಂಟ್ವಾಳ ಮಿನಿ ವಿಧಾನ ಸೌದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವನ್ನು ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಹಿಸಿದ್ದರು. ವುಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್ ಮಾತನಾಡಿ, ದೇಶದಲ್ಲಿ ದಿನಗಳೆದಂತೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬಂಟ್ವಾಳ: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ ➤ ವುಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ Read More »

ಕರಾವಳಿ
Scroll to Top