Kadaba News

ಡಿ.10ರಿಂದ ಮಂಗಳೂರು-ಮೈಸೂರು ವಿಮಾನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ನ. 23: ಮಂಗಳೂರಿನಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ವಿಮಾನಯಾನ ಸೇವೆ ಒದಗಿಸುವ ಬಹುದಿನಗಳ ಬೇಡಿಕೆ ನೆರವೇರುವ ಕಾಲ ಹತ್ತಿರವಾಗಿದೆ. ಏರ್‌ ಇಂಡಿಯಾದ ಅಲಯನ್ಸ್‌ ವಿಮಾನಯಾನ ಸಂಸ್ಥೆ ವತಿಯಿಂದ ಡಿ.10ರಿಂದ ಮಂಗಳೂರು-ಮೈಸೂರು ನಡುವೆ ವಿಮಾನ ಸೇವೆ ಆರಂಭವಾಗಲಿದೆ.   ಪ್ರತಿ ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ಮಾತ್ರ ಈ ವಿಮಾನ ಸೇವೆ ಲಭ್ಯವಿರಲಿದೆ. ಮೈಸೂರಿನಿಂದ ಬೆಳಗ್ಗೆ 11.15ಕ್ಕೆ ಹೊರಡುವ ವಿಮಾನ ಮಧ್ಯಾಹ್ನ 12.15ಕ್ಕೆ ಮಂಗಳೂರು ತಲುಪಲಿದೆ. ಮಂಗಳೂರಿನಿಂದ ಮಧ್ಯಾಹ್ನ 12.40ಕ್ಕೆ ಹೊರಡುವ ವಿಮಾನ […]

ಡಿ.10ರಿಂದ ಮಂಗಳೂರು-ಮೈಸೂರು ವಿಮಾನ ಸೇವೆ ಆರಂಭ Read More »

ಕರಾವಳಿ

ಸಂಪ್ರದಾಯಬದ್ಧವಾಗಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ನಡೆಯಲಿದೆ ➤ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 23: ಪೂರ್ವಶಿಷ್ಠ ಸಂಪ್ರದಾಯಗಳಿಗೆ ಅನುಗುಣವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾ ಷಷ್ಠಿ ಜಾತ್ರೋತ್ಸವ ನಡೆಯಲಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.     ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಾನುವಾರ ಆಗಮಿಸಿ ಶ್ರೀ ದೇವರ ದರ್ಶನ ಬಳಿಕ ಮಾತನಾಡಿದ ಅವರು, ಪರಂಪರೆ ಮತ್ತು ಸಂಪ್ರದಾಯಗಳಿಗೆ ಧಕ್ಕೆ ಬಾರದಂತೆ ಕೋವಿಡ್‌ ನಿಯಮಗಳಿಗೆ ಅನುಗುಣವಾಗಿ ಜಾತ್ರೋತ್ಸವ ನಡೆಯಲಿದೆ. ಈ ಹಿಂದೆ ಬ್ರಹ್ಮರಥೋತ್ಸವ ಸೇವೆ ನೆರವೇರಿಸಲು ಭಕ್ತರಿಗೆ ಅವಕಾಶವಿತ್ತು. ಆದರೆ

ಸಂಪ್ರದಾಯಬದ್ಧವಾಗಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ನಡೆಯಲಿದೆ ➤ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

ಗೂನಡ್ಕ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ ನ. 23: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರ ಕಚೇರಿಯಲ್ಲಿ ಕೆ.ಪಿ.ಸಿ.ಸಿ.ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷರು ಮತ್ತು ಕರ್ನಾಟಕ ಸರ್ಕಾರದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣರವರು ಸಂಪಾಜೆ ಗ್ರಾಮದ ಗೂನಡ್ಕಕ್ಕೆ ಕಳೆದ ದಿನ ಭೇಟಿ ನೀಡಿ ಸಭೆಯಲ್ಲಿ ಭಾಗವಹಿಸಿದರು.     ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕರವರು “ಸಂಪಾಜೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ ಇದು ಎಲ್ಲಾ ಚುನಾವಣೆಗಳಲ್ಲಿಯೂ

ಗೂನಡ್ಕ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ Read More »

ಕರಾವಳಿ

ಕಾಶಿಬೆಟ್ಟು: ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಬೈಹುಲ್ಲು ಲಾರಿ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಕಾಶಿಬೆಟ್ಟು ನ. 23: ಆಕಸ್ಮಿಕವಾಗಿ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿಗಾಹುತಿಯಾದ ಘಟನೆ ಕಾಶಿಬೆಟ್ಟು ಅರಳಿ ರಸ್ತೆಯಲ್ಲಿ ನಡೆದಿದೆ.     ಈ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ರಸ್ತೆಗೆ ಬೈಹುಲ್ಲು ಹಾಕುವ ಸಲುವಾಗಿ ಬೈಹುಲ್ಲು ಹೊತ್ತು ತರುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ್ದು, ಲಾರಿಗೆ ಬೆಂಕಿ ಹತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಕಾಶಿಬೆಟ್ಟು: ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಬೈಹುಲ್ಲು ಲಾರಿ ಬೆಂಕಿಗಾಹುತಿ Read More »

ಕರಾವಳಿ

ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಕೊರೊನಾಗೆ ಬಲಿ

(ನ್ಯೂಸ್ ಕಡಬ) newskadaba.com ಜೋಹಾನ್ಸಬರ್ಗ್ ನ. 23: ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ ತಗುಲಿತ್ತು.

ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಕೊರೊನಾಗೆ ಬಲಿ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಬೆಳ್ಳಂಬೆಳಗ್ಗೆ ಮಾಜಿ ಸಚಿವ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 23: ಬೆಳ್ಳಂಬೆಳಗ್ಗೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.     ಇವರನ್ನು ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದ ಸಂಬಂಧ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಕಳೆದ ದಿನ ಬಂಧಿಸಿದ್ದಾರೆ. ಬೆಂಗಳೂರಿನ ಪುಲಕೇಶಿ ನಗರದ ಕೋಲ್ಸ್ ಪಾರ್ಕ್‍ನಲ್ಲಿರುವ ರೋಷನ್ ಬೇಗ್ ಅವರ ಮನೆಗೆ ಬೆಳ್ಳಂಬೆಳಗ್ಗೆ ಸಿಬಿಐ 7 ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲನೆ  ನಡೆಸುತ್ತಿದ್ದಾರೆ.  

ಬೆಂಗಳೂರು: ಬೆಳ್ಳಂಬೆಳಗ್ಗೆ ಮಾಜಿ ಸಚಿವ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ದಾಳಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸ್ಕೂಟರ್ ಗೆ ಲಾರಿ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರ ಸ್ಥಳಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಚ್ಚಿಲ ನ. 23: ಇಂದು ಮುಂಜಾನೆ ಉಚ್ಚಿಲ ಪೇಟೆಯಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹೆಜಮಾಡಿ ಅಡ್ಕ ಹೌಸ್ ನಿವಾಸಿ ವಾಸು ಡಿ. ಕೋಟ್ಯಾನ್(65) ಎಂದು ಗುರುತಿಸಲಾಗಿದೆ.     ಮಂಗಳೂರಿನತ್ತ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಚಲಿಸುತ್ತಿದ್ದ ಲಾರಿ ಹಾಗೂ ಉಚ್ಚಿಲ ಪೇಟೆಯಿಂದ ಪಡುಬಿದ್ರೆ ಕಡೆಗೆ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದ ವೇಳೆ

ಮಂಗಳೂರು: ಸ್ಕೂಟರ್ ಗೆ ಲಾರಿ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರ ಸ್ಥಳಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ: 180 ಕೊಠಡಿಗಳುಳ್ಳ “ಅನಘ” ವಸತಿಗೃಹ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ ನ. 23: ಕಳೆದ ದಿನ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಿರ್ಮಿಸಲ್ಪಟ್ಟ 180 ಕೊಠಡಿಗಳುಳ್ಳ “ಅನಘ” ವಸತಿಗೃಹವನ್ನು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟನೆ ಮಾಡಿ ಲೋಕಾರ್ಪಣೆ ಮಾಡಿದ್ದಾರೆ.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಎಸ್.ಅಂಗಾರ ರವರು ವಹಿಸಿದ್ದರು. ವೇದಿಕೆಯಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ರೂಪ ಎಂ,ಜೆ, ಸುಳ್ಯ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಕಡಬ ತಾಲೂಕು ಪಂ. ಸದಸ್ಯ ಅಶೋಕ್ ನೆಕ್ರಾಜೆ, ಅಭಿವೃದ್ಧಿ ಸಮಿತಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ: 180 ಕೊಠಡಿಗಳುಳ್ಳ “ಅನಘ” ವಸತಿಗೃಹ ಲೋಕಾರ್ಪಣೆ Read More »

ಕರಾವಳಿ

ನೆಲ್ಯಾಡಿ : ಕ್ಯಾನ್ಸರ್ ಪೀಡಿತೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಕಂದಕ ನಿರ್ಮಿಸಿದ ನೆರೆಯ ಮನೆಯವರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 23: ಕ್ಯಾನ್ಸರ್ ಪೀಡಿತ ಮಹಿಳೆಯೊಬ್ಬರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವ್ಯಕ್ತಿಯೋರ್ವ ಕಂದಕ ನಿರ್ಮಿಸಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.     ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಅರಸಿನಮಕ್ಕಿ ಪಂಚಾಯತ್ ವ್ಯಾಪ್ತಿಯ ಎಂಜಿರ ಎಂಬಲ್ಲಿ ಹೀಗೆ ರಸ್ತೆಗೆ ಕಂದಕ ನಿರ್ಮಿಸಲಾಗಿದ್ದು, ರೆಜಿ ಎಂಬವರು ಈ ರೀತಿಯ ಅಮಾನವೀಯತೆ ತೋರಿಸಿದ್ದಾರೆ .ರಾಷ್ಟ್ರೀಯ 75ರ ಸಮೀಪದ ಹೆದ್ದಾರಿ ಸಮೀಪ ಇರುವ ಕ್ಯಾನ್ಸರ್​ನಿಂದ ಬಳಲುತ್ತಿರುವ

ನೆಲ್ಯಾಡಿ : ಕ್ಯಾನ್ಸರ್ ಪೀಡಿತೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಕಂದಕ ನಿರ್ಮಿಸಿದ ನೆರೆಯ ಮನೆಯವರು Read More »

ಕರಾವಳಿ

ಚಹಾ ಸೇವಿಸಿ ಇಬ್ಬರು ಸಾಧುಗಳು ಮೃತ್ಯು ➤ ಓರ್ವರ ಸ್ಥಿತಿ ಗಂಭೀರ.

(ನ್ಯೂಸ್ ಕಡಬ) newskadaba.com ಮಥುರಾ ನ. 23: ಇಬ್ಬರು ಸಾಧುಗಳು ಚಹಾ ಕುಡಿದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಸಾಧುಗಳು ಚಹಾ ಸೇವಿಸಿದ್ದು, ಈ ಪೈಕಿ ಇಬ್ಬರು ಸಾಧುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಲಾಬ್ ಸಿಂಗ್ ಮತ್ತು ಶ್ಯಾಮ್ ಸುಂದರ್ ಎಂಬ ಇಬ್ಬರು ಸಾಧುಗಳು ಸಾವಿಗೀಡಾಗಿದ್ದು, ಇನ್ನೋರ್ವ ಸಾಧು ರಾಮ್ ಬಾಬು ಎಂಬವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾವು ತಂಗಿದ್ದ ಪ್ರದೇಶಕ್ಕೆ ಚಹಾ ತರಿಸಿಕೊಂಡು ಇವರು ಸೇವಿಸಿದ್ದರು. ಚಹಾದಲ್ಲಿ ವಿಷ ಬೆರೆಸಿದ್ದಾರೆ ಎಂಬ ಅನುಮಾನಗಳು ಸೃಷ್ಟಿಯಾಗಿವೆ.

ಚಹಾ ಸೇವಿಸಿ ಇಬ್ಬರು ಸಾಧುಗಳು ಮೃತ್ಯು ➤ ಓರ್ವರ ಸ್ಥಿತಿ ಗಂಭೀರ. Read More »

ರಾಷ್ಟ್ರೀಯ ನ್ಯೂಸ್
Scroll to Top