Kadaba

ಆರ್‌.ಆರ್ ‌ನಗರದಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಮುನಿರತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್‌ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.     20ನೇ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಮುನಿರತ್ನ 1,03,139,  ಕಾಂಗ್ರೆಸ್‌ನ ಕುಸುಮಾ 58,258 ಜೆಡಿಎಸ್‌ ಕೇಶವಮೂರ್ತಿ 8,794, ನೋಟಾಗೆ 1,878 ಮತ ಬಿದ್ದಿದೆ. ಮುನಿರತ್ನ 42,045 ಮತಗಳಿಂದ ಮುನ್ನಡೆಯಲ್ಲಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.ಆರಂಭದಿಂದಲೂ ಮುನಿರತ್ನ ಮುನ್ನಡೆ ಸಾಧಿಸಿದ್ದರು.    

ಆರ್‌.ಆರ್ ‌ನಗರದಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಮುನಿರತ್ನ Read More »

ಕರಾವಳಿ

ಸಿಲಿಕಾನ್ ಸಿಟಿಯಲ್ಲಿ ಅಗ್ನಿ ದುರಂತ ➤ ವಾಹನಗಳು ಬೆಂಕಿಗೆ ಆಹುತಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ.ಫ್ಯಾಕ್ಟರಿ ಅಕ್ಕ ಪಕ್ಕ ನಿಲ್ಲಿಸಿದ್ದ

ಸಿಲಿಕಾನ್ ಸಿಟಿಯಲ್ಲಿ ಅಗ್ನಿ ದುರಂತ ➤ ವಾಹನಗಳು ಬೆಂಕಿಗೆ ಆಹುತಿ.! Read More »

ಕರ್ನಾಟಕ

ಕಾರ್ಕಳ: ಕಂಠಸಿರಿಯಲ್ಲಿ ಕೊರಗಜ್ಜನ ಹಾಡು ಹಾಡಿ ಸೂಪರ್ ಹಿಟ್ ಆದ ಪುಟ್ಟ ಬಾಲಕ

(ನ್ಯೂಸ್ ಕಡಬ) newskadaba.com ಕಾರ್ಕಳ, ನ.10: ಕೊರಗಜ್ಜ ದೈವವನ್ನು ಸ್ತುತಿಸುವ ಕಂಠಸಿರಿಯಲ್ಲಿ ಹಾಡು ಹಾಡಿ ಸೂಪರ್ ಹಿಟ್ ಎಂದು ಹೆಸರು ಗಳಿಸಿದ ಕಾರ್ಕಳ ಹಿರ್ಗಾನದ ಬಾಲಕ ಕಾರ್ತಿಕ್ ರವರ ಹಾಡು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಈ ಪುಟ್ಟ ಬಾಲಕನಿಗೆ ಜಾರಿಕಟ್ಟೆ ಶ್ರೀ ಕೊರಗಜ್ಜ ಕೊರಗ ಪಂಜುರ್ಲಿ ದೈವಸ್ಥಾನದ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಸನ್ಮಾನ ಕಾರ್ಯಕ್ರಮವು ನಡೆಯಿತು.     ಈತನ ಹಾಡಿನ ವೆಬ್ ಸೈಟ್ ನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಯವರು ಬಿಡುಗಡೆಗೊಳಿಸಿದರು.

ಕಾರ್ಕಳ: ಕಂಠಸಿರಿಯಲ್ಲಿ ಕೊರಗಜ್ಜನ ಹಾಡು ಹಾಡಿ ಸೂಪರ್ ಹಿಟ್ ಆದ ಪುಟ್ಟ ಬಾಲಕ Read More »

ಕರಾವಳಿ

ಕಡಬ, ಪುತ್ತೂರು ತಾಲೂಕಿನಲ್ಲಿ ಇಂದು 25 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ನ.10: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಕೌಕ್ರಾಡಿಯಲ್ಲಿ 58 ವರ್ಷದ ಮಹಿಳೆ, 53 ವರ್ಷದ ವ್ಯಕ್ತಿ, 16 ವರ್ಷದ ಬಾಲಕಿ, 35 ವರ್ಷದ ಮಹಿಳೆ, ಕಡಬದ 37 ವರ್ಷದ ವ್ಯಕ್ತಿ, ಸವಣೂರಿನ 30 ವರ್ಷದ ಮಹಿಳೆ, 31 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 18 ವರ್ಷದ ಯುವಕ, ಕೊಯಿಲದ 16 ವರ್ಷದ ಬಾಲಕನಲ್ಲಿ

ಕಡಬ, ಪುತ್ತೂರು ತಾಲೂಕಿನಲ್ಲಿ ಇಂದು 25 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ ನ. 10: ನೆಲ್ಯಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ. ಚಿಕ್ಕಾಬಳ್ಳಾಪುರದಿಂದ ಹೊರಟು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದು ಪಲ್ಟಿಯಾದ ಘಟನೆ ಎಂಜಿರ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.   ಮುಂಜಾನೆ ನಾಲ್ಕು ಘಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಚಾಲಕ ನಿದ್ದೆ ಮಂಪರಿನಲ್ಲಿಯಿದ್ದುದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಚಾಲಕ ಸೇರಿ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ

ಪಂಜ: ಮೂಲಭೂತ ಸಮಸ್ಯೆಯ ಬಗ್ಗೆ ಪ್ರಧಾನಮಂತ್ರಿಗೆ ಸಿ.ಡಿ ಕಳುಹಿಸಿದ ಹೋರಾಟ ಸಮಿತಿ

(ನ್ಯೂಸ್ ಕಡಬ) newskadaba.com ಪಂಜ, ನ.10: ಮೂಲಭೂತ ಸಮಸ್ಯೆಯ ಬಗ್ಗೆ ವಿವರಿಸಿ ಕಮಿಲ ಮೊಗ್ರ ಬಳ್ಳಕ್ಕದ ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರಿಂದ ಸಿ.ಡಿ ತಯಾರಿಸಲಾಗಿತ್ತು.   ಮೊಗ್ರ ಹೊಳೆಗೆ ಸೇತುವೆ ರಚನೆಯ ಬೇಡಿಕೆ ಹಲವಾರು ವರ್ಷಗಳಿಂದ ಇದ್ದರೂ ಇದುವರೆಗೂ ಈಡೇರಿಕೆಯಾಗಿಲ್ಲ. ಹೀಗಾಗಿ ಸಮಸ್ಯೆಯಗುತ್ತಿದೆ. ಅಲ್ಲದೇ ಗುತ್ತಿಗಾರು-ಕಮಿಲ-ಬಲ್ಪ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಇಡೀ ರಸ್ತೆ ಡಾಮರೀಕರಣ ಕಂಡಿಲ್ಲ. ಈಗ ಕಮಿಲ ಹಾಗೂ ಕಮಿಲ- ಬಲ್ಪ ರಸ್ತೆ ತೀರಾ ಹೊಂಡಗುಂಡಿಗಳಿಂದ ಕೂಡಿದ್ದು, ವಾಹನ ಓಡಾಡಲು ತೀರಾ ಸಂಕಷ್ಟವಾಗಿದೆ. ಬಳ್ಪದಿಂದ ಗುತ್ತಿಗೆದಾರರು

ಪಂಜ: ಮೂಲಭೂತ ಸಮಸ್ಯೆಯ ಬಗ್ಗೆ ಪ್ರಧಾನಮಂತ್ರಿಗೆ ಸಿ.ಡಿ ಕಳುಹಿಸಿದ ಹೋರಾಟ ಸಮಿತಿ Read More »

ಕರಾವಳಿ

ಲ್ಯಾಪ್‍ಟಾಪ್ ಇಲ್ಲದೇ ಬಡ ವಿದ್ಯಾರ್ಥಿನಿಯ ಪರದಾಟ ➤ ಆನ್‍ಲೈನ್ ಕ್ಲಾಸ್ ತಪ್ಪಿದ್ದಕ್ಕೆ ನೊಂದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹೈದರಾಬಾದ್ ನ. 10: ಓದಿಲ್ಲದೇ ನಾನು ಬದುಕಲಾರೆ, ಅಪ್ಪ-ಅಮ್ಮ ಕ್ಷಮಿಸಿ ಎಂದು ಡೆತ್ ನೋಟ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಧ್‍ನಗರದಲ್ಲಿ ನಡೆದಿದೆ.ಆತ್ಮಹತ್ಯೆಗೆ ಮುನ್ನ ಐಶ್ವರ್ಯಾ ಡೆತ್ ನೋಟ್ ಬರೆದು, ತನ್ನ ಈ ನಿರ್ಧಾರಕ್ಕೆ ಬಡತನವೇ ಕಾರಣ ಎಂಬುದನ್ನ ಪರೋಕ್ಷವಾಗಿ ಹೇಳಿದ್ದಾಳೆ. ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನಿಂದಾಗಿ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಇನ್ನು ನಾನು ಓದದೇ ಬದುಕಲಾರೆ. ಈ ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರ ಎಂದು ಅನ್ನಿಸುತ್ತಿದೆ. ನಾನು

ಲ್ಯಾಪ್‍ಟಾಪ್ ಇಲ್ಲದೇ ಬಡ ವಿದ್ಯಾರ್ಥಿನಿಯ ಪರದಾಟ ➤ ಆನ್‍ಲೈನ್ ಕ್ಲಾಸ್ ತಪ್ಪಿದ್ದಕ್ಕೆ ನೊಂದು ಆತ್ಮಹತ್ಯೆ Read More »

ಕರಾವಳಿ

ಡ್ರಗ್ಸ್ ದಂಧೆ ಬಗ್ಗೆ ವರದಿ ಮಾಡಿದ್ದಕ್ಕೆ ಪತ್ರಕರ್ತನ ಹತ್ಯೆ ➤ ಐದು ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ತಮಿಳುನಾಡು, ನ.10: ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದ ಪತ್ರಕರ್ತನನ್ನು ಇಸ್ರೇವೆಲ್ ಮೋಸೆಸ್(27) ಎಂದು ಗುರುತಿಸಲಾಗಿದೆ.     ಈತ ಡ್ರಗ್ಸ್ ದಂಧೆಯ ವರದಿ ಮಾಡುತ್ತಾರೆ ಎಂಬ ಭೀತಿಯಿಂದ ಕಳೆದ ದಿನ ಸಂಜೆ ಮೋಸಸ್ ರನ್ನು ಕರೆ ಮಾಡಿ ಕರೆಸಿಕೊಂಡ ಬಳಿಕ ದುಷ್ಕರ್ಮಿಗಳು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಿ ಆತನನ್ನು ರಸ್ತೆಯಲ್ಲಿ ಎಸೆದು ಹೋಗಿದ್ದು, ಬಳಿಕ ಮನೆಯವರಿಗೆ ತಿಳಿದು ಈ ಸಂಬಂಧ

ಡ್ರಗ್ಸ್ ದಂಧೆ ಬಗ್ಗೆ ವರದಿ ಮಾಡಿದ್ದಕ್ಕೆ ಪತ್ರಕರ್ತನ ಹತ್ಯೆ ➤ ಐದು ಮಂದಿ ಪೊಲೀಸರ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್ ➤ ವಿದ್ಯಾರ್ಥಿಗಳಿಗೆ ಕೋವಿಡ್-19 ಟೆಸ್ಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ಕೋವಿಡ್ ಅಬ್ಬರದ ನಡುವೆ ಶಾಲೆ ತೆಯುವುದರ ಬಗ್ಗೆ ಇನ್ನೂ ಸಭೆ ಸಮಾಲೋಚನೆಗಳು ನಡೆಯುತ್ತಲೇಯಿದೆ. ಇದರ ನಡುವೆ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಆರಂಭಕ್ಕೆ ಕಾಲೇಜು ಶಿಕ್ಷಣ ಇಲಾಖೆ  ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದಾಗಿ ಕಠಿಣ ಮಾರ್ಗಸೂಚಿಗಳನ್ನೇ ಪ್ರಕಟಿಸಿದೆ. ಕಾಲೇಜ್ ಆರಂಭಕ್ಕೆ 3 ದಿನ ಮೊದಲು ಬೋಧಕರು, ವಿದ್ಯಾರ್ಥಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಬೋಧಕರು ಫೇಸ್ ಮಾಸ್ಕ್, ಫೇಸ್ ಶೀಲ್ಡ್ ಧರಿಸಬೇಕು. ಅವಶ್ಯಕತೆ ಇದ್ದರೆ ಪಾಳಿ ವ್ಯವಸ್ಥೆಯಲ್ಲಿ

ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್ ➤ ವಿದ್ಯಾರ್ಥಿಗಳಿಗೆ ಕೋವಿಡ್-19 ಟೆಸ್ಟ್ ಕಡ್ಡಾಯ Read More »

ಕರಾವಳಿ

ಪಂಜ: ರಸ್ತೆ ಕಾಂಕ್ರೀಟಿಕರಣ ➤ ಶಾಸಕ ಎಸ್.ಅಂಗಾರ ದೀಪ ಬೆಳಗಿಸಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪಂಜ, ನ.10: ಕಳೆದ ದಿನ ಪಂಜ ಗ್ರಾಮ ಪಂಚಾಯತ್ ವಾಣಿಜ್ಯ ಸಂಕೀರ್ಣ ಮತ್ತು ಬಸ್ ತಂಗುದಾಣಕ್ಕೆ ಹೋಗುವ ರಸ್ತೆಗೆ ಕಾಂಕ್ರೀಟಿಕರಣ ಶಾಶ್ವತ ಕಾಮಗಾರಿ ಪೂರ್ಣಗೊಂಡಿದ್ದು, ಅದರ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಎಸ್.ಅಂಗಾರ ರವರು ದೀಪ ಬೆಳಗಿಸುವುದರ ಮೂಲಕ ಹಾಗೂ ತೆಂಗಿನಕಾಯಿ ಒಡೆದು ಉದ್ಘಾಟಿಸಿದರು.     ಕಾಂಕ್ರೀಟಿಕರಣ ಶಾಶ್ವತ ಕಾಮಗಾರಿ ಗೆ ಶಾಸಕ ಎಸ್.ಅಂಗಾರ ಅವರು 10 ಲಕ್ಷ.ರೂ. ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು 5.ಲಕ್ಷ ರೂ. ಅನುದಾನ ಒದಗಿಸಿದ್ದರು. ಇಲ್ಲಿ

ಪಂಜ: ರಸ್ತೆ ಕಾಂಕ್ರೀಟಿಕರಣ ➤ ಶಾಸಕ ಎಸ್.ಅಂಗಾರ ದೀಪ ಬೆಳಗಿಸಿ ಉದ್ಘಾಟನೆ Read More »

ಕರಾವಳಿ
Scroll to Top