Kadaba

ಪುತ್ತೂರು: ರಸ್ತೆಯಲ್ಲಿರುವ ಅಪಾಯಕಾರಿ ಮರಗಳ ತೆರವು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 06: ಪಾಂಗಾಳಾಯಿ ಮಂಡ್ಯತ್ತಾಯ ದೈವಸ್ಥಾನದ ರಸ್ತೆ ಬದಿಯಲ್ಲಿ ಇತ್ತೀಚಿಗೆ ದೊಡ್ಡ ಪ್ರಮಾಣದಲ್ಲಿ ಬೆಳೆದು ನಿಂತ ಮರಗಳು ಸಾರ್ವಜನಿಕರಿಗೆ ನಡೆದುಕೊಂಡು ಹೋಗುವುದಕ್ಕೆ ಅಪಾಯವಾಗುತ್ತಿತ್ತು.       ಇದನ್ನು ಮನಗಂಡು ವಾರ್ಡ್‍ನ ನಗರ ಸಭಾ ಸದಸ್ಯೆ ವಿದ್ಯಾ ಗೌರಿ ಯವರು ನಗರಸಭಾ ಉಪಾಧ್ಯಕ್ಷರಾಗಿ ಹುದ್ದೆ ಅಲಂಕರಿಸಿದ ಕೆಲವೇ ದಿನಗಳಲ್ಲಿ ಈ ರಸ್ತೆ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸಿದ್ದಾರೆ.  

ಪುತ್ತೂರು: ರಸ್ತೆಯಲ್ಲಿರುವ ಅಪಾಯಕಾರಿ ಮರಗಳ ತೆರವು Read More »

ಕರಾವಳಿ

ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 06: ಹಿರಿಯ ಪತ್ರಕರ್ತ ಕಲ್ಲಡ್ಕ ಸಮೀಪ ಅಮ್ಟೂರು ಪೂವಳ ನಿವಾಸಿ ಸೂರ್ಯನಾರಾಯಣ ರಾವ್ ಪೂವಳ (51) ಅಲ್ಪಕಾಲದ ಅಸೌಖ್ಯದಿಂದ ತನ್ನ ಮನೆಯಲ್ಲಿ ನಿಧನ ಹೊಂದಿದರು.ಕಳೆದ ಇಪ್ಪತ್ತೈದು ವರ್ಷಗಳಿಗಿಂತಲೂ ಅಧಿಕ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಇವರು, ಇಂದು ಮುಂಜಾನೆ ವಿಧಿವಶರಾಗಿದ್ದಾರೆ.     ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕಳೆದ ದಿನ (ಗುರುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.  ಮೃತರು ತಾಯಿ, ಪತ್ನಿ ಸಹಿತ

ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ Read More »

ಕರಾವಳಿ

ಸುಳ್ಯದಲ್ಲಿ ಗಾಂಜಾ ಸಾಗಾಟ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ ನ. 06: ಸುಳ್ಯದಲ್ಲಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಸುಳ್ಯ ಠಾಣಾ ಉಪನಿರೀಕ್ಷಕರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ರಿಜಿಸ್ಟರ್ ನಂಬರ್ ಹೊಂದಿದ್ದ ಕಾರಿನಲ್ಲಿ ಅಕ್ರಮವಗಿ ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರಿಸಿ ಸುಳ್ಯ ಠಾಣಾ ಉಪನಿರೀಕ್ಷಕರಾದ ಹರೀಶ್ ಎಮ್ ಆರ್ ತಂಡದೊಂದಿಗೆ ಕಾರ್ಯಾಚರಣೆ ನಡೆಸಿ ಸುಳ್ಯ ಜ್ಯೋತಿ ಸರ್ಕಲ್ ಬಳಿ 8ಕೆ,ಜಿ ಗಾಂಜಾ ಸಹಿತ ಆರೋಪಿಗಳಾದ ಎಂ ಎ ಅಬ್ಬಾಸ್(63) ಅಬ್ದುಲ್ (50)

ಸುಳ್ಯದಲ್ಲಿ ಗಾಂಜಾ ಸಾಗಾಟ ➤ ಆರೋಪಿಗಳು ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ  : ಭಾರಿ ಗಾಳಿ ಮಳೆಗೆ ಅಲ್ಲಲ್ಲಿ ಹಾನಿ

(ನ್ಯೂಸ್ ಕಡಬ) newskadaba.com ಕಡಬ ನ. 06: ಕಳೆದ ದಿನ ಸಂಜೆ ವೇಳೆ ಸುರಿದ ಭಾರೀ ಗಾಳಿ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಸುಂಕದ ಕಟ್ಟೆ, ನೆಟ್ಟಣ ಬಳಿ ವಿದ್ಯುತ್ ಲೈನ್ ಗಳಿಗೆ ಮರಗಳು ಬಿದ್ದು ವಾಹನಗಳು ಓಡಾಡಲು ಪರಾದಡುವಂತಾಗಿತ್ತು.   ತಕ್ಷಣವೇ ಕಾರ್ಯಪ್ರವರ್ತರಾದ ಮೆಸ್ಕಾಂ ಸಿಬ್ಬಂದಿಗಳು, ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನು ಯೇನೆಕಲ್ಲು ಆಸುಪಾಸಿನಲ್ಲಿ ನೂರಾರು ಅಡಿಕೆ ಮರಗಳು ಗಾಳಿಯ ಅಬ್ಬರಕ್ಕೆ ಧರೆಗುರುಳಿದೆ. ತಾ.ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆರವರ ತೋಟದಲ್ಲಿ 20ಕ್ಕೂ ಅಧಿಕ

ಕಡಬ  : ಭಾರಿ ಗಾಳಿ ಮಳೆಗೆ ಅಲ್ಲಲ್ಲಿ ಹಾನಿ Read More »

ಕರಾವಳಿ

ರಾಜ್ಯಾದ್ಯಂತ ಮಸೀದಿಗಳಲ್ಲಿ ಹಾಕಿರುವ ಅನಧಿಕೃತ ಧ್ವನಿವರ್ಧಕ ತೆರವಿಗೆ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಮಾಡಿದ್ದಾರೆ.   ಕಳೆದ ತಿಂಗಳು ವಕೀಲರದ ಹರ್ಷ ಮುತಾಲಿಕ್, ಮಸೀದಿಯಲ್ಲಿನ ಧ್ವನಿ ವರ್ಧಕಗಳಿಂದ ಇತರೇ ಧರ್ಮದರಿಗೆ ತೊಂದರೆ ಆಗುತ್ತಿದೆ. ದಿನಕ್ಕೆ ಐದಾರು ಬಾರಿ ಪ್ರಾರ್ಥನೆ ಮಾಡಲಾಗತ್ತೆ. ಇದ್ದರಿಂದ ಮಕ್ಕಳಿಗೆ, ವಯಸ್ಸಾದವರಿಗೆ, ಹೃದಯ ಸಂಬಂಧಿ ಖಾಯಿಲೆ ಇರುವವರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಬೇಕು ಎಂದು ದೂರು ನೀಡಿದ್ದರು.ಈಗ ಈ

ರಾಜ್ಯಾದ್ಯಂತ ಮಸೀದಿಗಳಲ್ಲಿ ಹಾಕಿರುವ ಅನಧಿಕೃತ ಧ್ವನಿವರ್ಧಕ ತೆರವಿಗೆ ಆದೇಶ Read More »

ಕರಾವಳಿ

ನಟಿ ಪೂನಂ ಪಾಂಡೆ ಗೋವಾ ಪೊಲೀಸ ವಶಕ್ಕೆ

(ನ್ಯೂಸ್ ಕಡಬ) newskadaba.com ಗೋವಾ ನ. 05: ಕರಾವಳಿ ರಾಜ್ಯ ಗೋವಾದ ಸರ್ಕಾರಿ ಪ್ರದೇಶದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ನಟಿ ಪೂನಂ ಪಾಂಡೆಯನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಗೋವಾದ ಚಾಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದನ್ನು ಪೊಲೀಸರು ಗುರುತಿಸಿದ್ದರು.   ಸರ್ಕಾರದ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯೊಂದಿಗೆ ನಟಿ ಪೂನಂ ವಿರುದ್ಧವೂ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಗೋವಾ ಸಂಸ್ಕೃತಿ, ಚಾಪೋಲಿ ಡ್ಯಾಂ ಪವಿತ್ರತೆಗೆ ಧಕ್ಕೆ ತರುವಂತೆ ವರ್ತಿಸಿದ ಕಾರಣ ಪ್ರಕರಣ ದಾಖಲಿಸಿದ್ದೇವೆ ಎಂದು

ನಟಿ ಪೂನಂ ಪಾಂಡೆ ಗೋವಾ ಪೊಲೀಸ ವಶಕ್ಕೆ Read More »

ಕರಾವಳಿ

ಕೊನೆಯ ಕ್ಷಣದಲ್ಲಿ ಅತಿವೃಷ್ಟಿ/ಪ್ರವಾಹ ಪೀಡಿತ ಪಟ್ಟಿಯಲ್ಲಿ ಸುಳ್ಯ ತಾಲೂಕು ಘೋಷಣೆ

(ನ್ಯೂಸ್ ಕಡಬ) newskadaba.com ಸುಳ್ಯ, ನ. 05: ತಿಂಗಳ ಹಿಂದೆ ಸರಕಾರದಿಂದ ಬಿಡುಗಡೆಗೊಂಡಿದ್ದ ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕು ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯವನ್ನು ಹೊರತುಪಡಿಸಿ ಉಳಿದ ಎಲ್ಲಾ ತಾಲೂಕುಗಳನ್ನು ಆ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿತ್ತು. ಇದೀಗ ಮತ್ತೆ ಸುಳ್ಯ ತಾಲೂಕನ್ನು ಸೇರ್ಪಡೆಗೊಳಿಸಿ ಸರಕಾರದಿಂದ ಆದೇಶ ಮಾಡಲಾಗಿದೆ.     ಸುಳ್ಯ ತಾಲೂಕಿನಲ್ಲಿ ಈ ಬಾರಿ ವಿಪರೀತ ಮಳೆಯಾಗಿದ್ದು, ಕೃಷಿ ಸೇರಿದಂತೆ, ಮನೆಗಳಿಗೂ ಹಾನಿಯಾಗಿತ್ತು. ಅತಿವೃಷ್ಟಿ ಪಟ್ಟಿಯಲ್ಲಿ ಸುಳ್ಯ ಸೇರದಿದ್ದುದರಿಂದ ತಾಲೂಕಿನಲ್ಲಿ ಆದ ನಷ್ಟಗಳಿಗೂ ಪರಿಹಾರ ಸಿಗದೆ ಸ್ಥಿತಿ

ಕೊನೆಯ ಕ್ಷಣದಲ್ಲಿ ಅತಿವೃಷ್ಟಿ/ಪ್ರವಾಹ ಪೀಡಿತ ಪಟ್ಟಿಯಲ್ಲಿ ಸುಳ್ಯ ತಾಲೂಕು ಘೋಷಣೆ Read More »

ಕರಾವಳಿ

ಸುಳ್ಯ :ನಗರ ಪಂಚಾಯತ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ಸುಳ್ಯನಗರ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯು ಇಂದು ನಡೆದಿದೆ. ಆಧ್ಯಕ್ಷ ಸ್ಥಾನವನ್ನು ವಿನಯ್ ಕುಮಾರ್ ಕುಂದಡ್ಕ ಅಲಂಕರಿಸಿದರೆ, ಉಪಾಧ್ಯಕ್ಷ ಸ್ಥಾನವನ್ನು ಸರೋಜಿನಿ ಪೆಲತ್ತಡ್ಕ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.     ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಅನಂತ ಶಂಕರ್ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್ ಅಂಗಾರ, ಉಪತಹಶೀಲ್ದಾರ್ ಚಂದ್ರಕಾಂತ್ ಕಂದಾಯ ನಿರೀಕ್ಷಕರು ಕೊರಗಪ್ಪ ಹೆಗಡೆ ಹಾಗೂ ನಗರ

ಸುಳ್ಯ :ನಗರ ಪಂಚಾಯತ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ Read More »

ಕರಾವಳಿ

ಬೆಳ್ತಂಗಡಿ :ಶ್ರವಣದೋಷದ ಕಂದಮ್ಮನ ಚಿಕಿತ್ಸೆಗೆ ಸಿಎಂ BSY ನಿಂದ ನೆರವು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 05: ಬೆಳ್ತಂಗಡಿಯ ತಣ್ಣಿರು ಪಂತದಲ್ಲಿ ಶ್ರವಣದೋಷದಿಂದ ಮಾತನಾಡಲು ಸಾದ್ಯವಾಗದೆ ಸಮಸ್ಯೆ ಎದುರಿಸುತ್ತಿರುವ ಮೂರು ವರುಷ 7 ತಿಂಗಳ ಪುಟ್ಟ ಕಂದಮ್ಮನ ಚಿಕಿತ್ಸೆಗಾಗಿ ಸಿಎಂ ಬಿಎಸ್‍ವೈ ರವರು ವಿಶೇಷ ಪರಿಹಾರದಡಿಯಲ್ಲಿ 5 ಲಕ್ಷರೂ ಘೋಷಣೆ ಮಾಡಿದ್ದಾರೆ.       ತಣ್ಣೀರುಪಂತ ಗ್ರಾಮದ ದೇಸಿನ್ ಕೊಡಿ ರವಿ ಪೂಜಾರಿ ಅವರ ಮೂರು ವರುಷ 7 ತಿಂಗಳ ಪುಟ್ಟ ಕಂದಮ್ಮ ಆರಾಧ್ಯಳ ಚಿಕಿತ್ಸೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪರವರನ್ನು ಶಾಸಕ

ಬೆಳ್ತಂಗಡಿ :ಶ್ರವಣದೋಷದ ಕಂದಮ್ಮನ ಚಿಕಿತ್ಸೆಗೆ ಸಿಎಂ BSY ನಿಂದ ನೆರವು Read More »

ಕರಾವಳಿ

ಸುರತ್ಕಲ್: ಇಂಜಿನ್ ವೈಫಲ್ಯಕ್ಕೊಳಗಾಗಿ ಸಮುದ್ರ ದಡ ಸೇರಿದ ಬೋಟ್

(ನ್ಯೂಸ್ ಕಡಬ) newskadaba.com ಸುರತ್ಕಲ್, ನ. 05: ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು ಚಿತ್ರಾಪುರ ಬಳಿ ಮೀನುಗಾರಿಕಾ ದೋಣಿಯೊಂದು ಇಂಜಿನ್ ವೈಫಲ್ಯಕ್ಕೊಳಗಾಗಿ ಸಮುದ್ರ ದಡ ಸೇರಿದ ಘಟನೆ  ನಡೆದಿದೆ.     ಇಂಜಿನ್ ವೈಫಲ್ಯ ಉಂಟಾಗಿ ಗಾಳಿಯ ರಭಸಕ್ಕೆ ಸಮುದ್ರದಂಡೆಗೆ ಬಂದು ಅಪ್ಪಳಿಸಿದ್ದು, ಶ್ರೀ ಮಾರುತಿ ಎಂಬ ಹೆಸರಿನ ಬೋಟ್ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಬೋಟ್ ನಲ್ಲಿ ನಾಲ್ಕು ಜನ ಮೀನುಗಾರರಿದ್ದು, ಎಲ್ಲರೂ  ಪ್ರಾಣಾಪಾಯದಿಂದ ಪಾರಾಗಿದ್ದಾರೆ.    

ಸುರತ್ಕಲ್: ಇಂಜಿನ್ ವೈಫಲ್ಯಕ್ಕೊಳಗಾಗಿ ಸಮುದ್ರ ದಡ ಸೇರಿದ ಬೋಟ್ Read More »

ಕರಾವಳಿ
Scroll to Top