Kadaba

ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ನ. 20. ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ […]

ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಬೆಳ್ಳಂಬೆಳಗ್ಗೆ ಕಳ್ಳರ ಕೈಚಳಕ – ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ನ.20. ಇಲ್ಲಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೋಮವಾರ ಬೆಳಗಿನ ಜಾವ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ ಪತ್ತೆಯಾಗಿಲ್ಲ. ಸ್ಥಳಕ್ಕೆ

ಕಡಬ: ಬೆಳ್ಳಂಬೆಳಗ್ಗೆ ಕಳ್ಳರ ಕೈಚಳಕ – ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಕಳ್ಳತನ Read More »

ಕರಾವಳಿ

ಕಡಬ: ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಮೇಯಲು ಬಿಟ್ಟರೆ ದಂಡ – ಪಟ್ಟಣ ಪಂಚಾಯತ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 05. ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಪ್ರದೇಶದಲ್ಲಿ ಸಾಕು ಪ್ರಾಣಿಗಳನ್ನು ಮೇಯಲು ಬಿಡುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆ ಅಂತಹ ಸಾಕುಪ್ರಾಣಿಗಳನ್ನು ವಶಕ್ಕೆ ಪಡೆದು ಮಾಲಕರಿಗೆ ದಂಡ ವಿಧಿಸುವ ಬಗ್ಗೆ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ತಮ್ಮ ಮನೆಯಲ್ಲಿ ಸಾಕುತ್ತಿರುವ ಆಡು, ದನ- ಕರುಗಳನ್ನು ಬೇರೆಯವರ ಸ್ಥಳದಲ್ಲಿ ಸಾರ್ವಜನಿಕ ಪ್ರದೇಶ, ರಸ್ತೆಗಳಲ್ಲಿ ಮೇವುಗೆ ಬಿಡುತ್ತಿದ್ದು ಹಾಗೂ ಕಡಬ ಪಟ್ಟಣ

ಕಡಬ: ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಮೇಯಲು ಬಿಟ್ಟರೆ ದಂಡ – ಪಟ್ಟಣ ಪಂಚಾಯತ್ ಎಚ್ಚರಿಕೆ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಅ. 04. ಸೈಂಟ್ ಜೋಕಿಮ್ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಉದ್ಘಾಟಿಸಿ, ಬಳಿಕ ಗಾಂಧೀಜಿಯವರ ಮಹತ್ವದ ಕುರಿತು ಮಕ್ಕಳಿಗೆ ತಿಳಿಸಲಾಯಿತು.   ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಿಕೊಟ್ಟರು ಹಾಗೂ ಶಾಲೆಯ ಸುತ್ತಮುತ್ತ ಸ್ವಚ್ಛತೆಯನ್ನು ಮಾಡಿದರು. ಸೈಂಟ್ ಜೋಕಿಮ್ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಹಾಗೂ ಸೈಂಟ್ ಜೋಕಿಮ್ ಪ್ರೌಢಶಾಲೆಯ

ಕಡಬ: ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ- ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ. 02. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಶೈಲಶ್ರೀ ರೈ ಎಸ್ ದೀಪ ಪ್ರಜ್ವಲನ ಮಾಡಿ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು. ಗಾಂಧಿ ಜಯಂತಿಯ ಅಂಗವಾಗಿ ಮುಖ್ಯಸ್ಥರ ಹಾಗೂ ಶಿಕ್ಷಕರ ಕೊಠಡಿ, ತರಗತಿ ಕೊಠಡಿಗಳು, ಪ್ರಯೋಗಾಯ, ಗ್ರಂಥಾಲಯ, ಕಂಪ್ಯೂಟರ್ ಕೊಠಡಿ, ಸಭಾಭವನ, ಶೌಚಾಲಯ ಹಾಗೂ ಶಾಲಾ ಸುತ್ತಮುತ್ತಲಿನ ಸ್ಥಳಗಳನ್ನು ಸ್ವಚ್ಛ ಮಾಡುವುದರ ಮೂಲಕ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ- ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ. 01. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಮರ್ಧಾಳ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪತ್ನಿ ಅವ್ವಮ್ಮ ಎಂದು ಗುರುತಿಸಲಾಗಿದೆ. ಅವರು ಇಂದು ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು (ಸೆ. 24) ಕಡಬ ತಾಲೂಕು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಕಡಬ ಹಾಗೂ ಸವಣೂರು ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ. 24ರಂದು ಬೆಳಿಗ್ಗೆ 9 ಗಂಟೆಗೆ  ಸವಣೂರು  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ

ಇಂದು (ಸೆ. 24) ಕಡಬ ತಾಲೂಕು ದಸರಾ ಕ್ರೀಡಾಕೂಟ Read More »

ಕರಾವಳಿ

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಜೇಸಿಐ ಭಾರತದ ವಲಯ 15ರ ಪ್ರತಿಷ್ಠಿತ ಘಟಕ ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ – 2023’ ಕಾರ್ಯಕ್ರಮದ ಉದ್ಘಾಟನೆ ಶನಿವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಸಪ್ತಾಹದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ, ಅಂಗಾಂಗ ದಾನ ಘೋಷಣಾ ಪತ್ರಕ್ಕೆ ಸಹಿ ಸಂಗ್ರಹ ಕಾರ್ಯಕ್ರಮವನ್ನು ವಲಯ ಉಪಾಧ್ಯಕ್ಷರಾದ ದೇವರಾಜ್ ಕುದ್ಪಾಜೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಚಿತ್ರಾ

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ Read More »

ಕರ್ನಾಟಕ

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 22. ತಾಲೂಕಿನ ಗೃಹರಕ್ಷಕ ದಳದ ನೂತನ ಕಛೇರಿಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಮತ್ತು ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಭೂಮಿ ಪೂಜೆಯ ವೈದಿಕ ವಿಧಿವಿಧಾನವನ್ನು ಪ್ರಸಾದ್ ಕೆದಿಲಾಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಮಾಂಡೆಂಟ್ ಮಾತನಾಡಿ, ಇನ್ನು ಆರು ತಿಂಗಳ ಒಳಗೆ ಕಟ್ಟಡ ನಿರ್ಮಾಣವಾಗಿ ಗೃಹರಕ್ಷಕರ ಉಪಯೋಗಕ್ಕೆ ದೊರಕುವಂತಾಗಬೇಕು ಎಂದು ಶುಭ ಹಾರೈಸಿದರು. ಇನ್ನು ಮುಂದೆ

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಕರಾವಳಿ

ಕಡಬ: ಕೊಣಾಜೆ ಗ್ರಾ.ಪಂ.ಚುನಾವಣೆ – ಅಧ್ಯಕ್ಷೆಯಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ನವೀನ್ ಎಂ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 20. ಕೊಣಾಜೆ ಗ್ರಾಮ ಪಂಚಾಯತ್ ನ 2ನೇ ಅವಧಿಗೆ ಅಧ್ಯಕ್ಷೆಯಾಗಿ ರುಕ್ಮಿಣಿ ಹಾಗೂ ಉಪಾಧ್ಯಕ್ಷರಾಗಿ ನವೀನ್ ಎಂ. ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ರುಕ್ಮಿಣಿ ಹಾಗೂ ಮೈತ್ರಿ, ಉಪಾಧ್ಯಕ್ಷ ಸ್ಥಾನಕ್ಕೆ ನವೀನ್ ಎಂ. ಹಾಗೂ ಸರೋಜಿನಿ ಅವರು ನಾಮಪತ್ರ ಸಲ್ಲಿಸಿದ್ದರು. ಮತದಾನದ ವೇಳೆ ರುಕ್ಮಿಣಿಯವರು 3 ಮತ ಹಾಗೂ ಮೈತ್ರಿಯವರು 2 ಮತಗಳನ್ನು ಪಡೆದು ರುಕ್ಮಿಣಿಯವರು ಗೆಲುವು ಸಾಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ನವೀನ್

ಕಡಬ: ಕೊಣಾಜೆ ಗ್ರಾ.ಪಂ.ಚುನಾವಣೆ – ಅಧ್ಯಕ್ಷೆಯಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ನವೀನ್ ಎಂ ಆಯ್ಕೆ Read More »

ಕರಾವಳಿ
Scroll to Top