Kadaba

ಗೃಹಲಕ್ಷ್ಮಿ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ ➤ ಗ್ರಾಮ ಒನ್ ಸೇವಾ ಕೇಂದ್ರಗಳ ಸಮಸ್ಯೆ ಪರಿಹರಿಸಲು ಸರಕಾರಕ್ಕೆ ಮನವಿ

(ನ್ಯೂಸ್ ಕಡಬ)newskadaba.com ಕಡಬ, ಜು.25. ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗ್ಯಾರಂಟಿ ಯೋಜನೆಗೆ ಉಚಿತವಾಗಿ ನೋಂದಣಿಗೆ ಸರಕಾರ ಆದೇಶ ನೀಡಿರುವುದರಿಂದ ಗ್ರಾಮ ಒನ್ ಕೇಂದ್ರಗಳು ಸಂಕಷ್ಟಕ್ಕೆ ಒಳಗಾಗಿದೆ. ಈ ಸಮಸ್ಯೆಯನ್ನು ಪರಿಹರಿಸುವಂತೆ ಕಡಬ ತಾಲೂಕಿನ ಗ್ರಾಮ ಒನ್ ಫ್ರಾಂಚೈಸಿನ ನಿರ್ವಾಹಕರು ಕಡಬ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಡಬ ತಾಲೂಕಿನ ಸುಮಾರು 20 ಗ್ರಾಮ ಒನ್ ಫ್ರಾಂಚೈಸಿ ನಿರ್ವಾಹಕರು ಮನವಿ ನೀಡಿದ್ದು, ನಾವು ಒಂದು ವರುಷದ ಹಿಂದೆ ಗ್ರಾಮ ಒನ್ ಕೇಂದ್ರಗಳನ್ನು ಬಂಡವಾಳ ಹೂಡಿಕೆ ಮಾಡಿ […]

ಗೃಹಲಕ್ಷ್ಮಿ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ ➤ ಗ್ರಾಮ ಒನ್ ಸೇವಾ ಕೇಂದ್ರಗಳ ಸಮಸ್ಯೆ ಪರಿಹರಿಸಲು ಸರಕಾರಕ್ಕೆ ಮನವಿ Read More »

ಕರಾವಳಿ

ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳ

(ನ್ಯೂಸ್ ಕಡಬ)newskadaba.com ಕಡಬ, ಜು.24. ಕಳೆದ ಎರಡು ದಿನಗಳಿಂದ ಎಲ್ಲೆಡೆ ವಿಪರೀತ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟ ಹೆಚ್ಚಳವಾಗುತ್ತಲೇ ಇದ್ದು, ನೇತ್ರಾವತಿ ಸೇರಿದಂತೆ ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು ಆತಂಕದ ಸ್ಥಿತಿ ವ್ಯಕ್ತವಾಗಿದೆ. ಇನ್ನೂ ಅತೀ ಹೆಚ್ಚಿನ ಮಳೆ ಆದರೆ, ತೊಂದರೆ ಆಗುವ ಸಾಧ್ಯತೆಗಳ ಪ್ರಮಾಣ ಹೆಚ್ಚಿದೆ ಎನ್ನಲಾಗಿದೆ.

ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳ Read More »

ಕರಾವಳಿ

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಜು.24. ದಲಿತ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು, ಉತ್ತಮ ವಿದ್ಯಾಭ್ಯಾಸ ಪಡೆದು ಸರಕಾರಿ ಉದ್ಯೋಗಳಿಗಾಗಿ ಪ್ರಯತ್ನ ಪಡಬೇಕು ಎಂದು ಕಡಬ ಠಾಣಾ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಹೇಳಿದರು ಎನ್ನಲಾಗಿದೆ. ಕಡಬ ಠಾಣೆಯಲ್ಲಿ ನಡೆದ ದಲಿತ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಇಂದಿನ ದಿನಗಳಲ್ಲಿ ದಲಿತರು ಸೇರಿದಂತೆ ಎಲ್ಲ ವರ್ಗದ ಯುವಕರು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಈ ಕುರಿತು ಮುಖಂಡರು ಗಮನ ಹರಿಸಿ ಇದರಿಂದ ಮುಕ್ತಿಗೊಳಿಸಲು ಪ್ರಯತ್ನಿಸ ಬೇಕು, ಅಲ್ಲದೆ ಉತ್ತಮ

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ Read More »

ಕರಾವಳಿ
crime, arrest, suspected

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಕೆಲಸಕ್ಕಿದ್ದ ಮನೆಯಲ್ಲಿಯೇ ಕಾರ್ಮಿಕನೋರ್ವ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪದಲ್ಲಿ ನಡೆದಿದೆ. ಬಂಧಿತನನ್ನು ಮರ್ದಾಳದ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಬಳ್ಪದ ಎಣ್ಣೆಮಜಲು ಪುಟ್ಟಣ್ಣ ಎಂಬವರ ಮನೆಗೆ ರಬ್ಬರ್‌ ಟ್ಯಾಪಿಂಗ್‌ ಕೆಲಸಕ್ಕೆಂದು ಹೋಗಿದ್ದನು. ಇತ್ತೀಚೆಗೆ ಪುಟ್ಟಣ್ಣ ರವರ ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ಹೊರ ಹೋಗಿದ್ದರು. ಈ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಾರ್ಮಿಕ ಪ್ರಸಾದ್, ಮನೆಯೊಳಗೆ ಹೋಗಿ ಸರ, ಉಂಗುರ, ಮೊದಲಾದ

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್ Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಕುಂತೂರು, ಜು. 19. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಸ್ಥೆಯ ಸ್ಥಾಪನೆಗೆ ಪ್ರೇರಕರಾಗಿ ಕಾರಣಕರ್ತರಾದ ಮಾರ್ ಇವಾನಿಯೋಸ್ ಅವರ 70ನೇ ಪುಣ್ಯದಿನವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನೆಲ್ಯಾಡಿಯ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿ ಓ.ಐ.ಸಿ. ಅವರು ಮಾರ್ ಇವಾನಿಯೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರೊಂದಿಗೆ ಮೊಂಬತ್ತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೇರಳದ ತಿರುವನಂತಪುರದಲ್ಲಿ ಹುಟ್ಟಿ ಬೆಳೆದು ಮಲಂಕರ ಕೆಥೋಲಿಕ್ ಚರ್ಚ್‍ನ

ಕುಂತೂರು: ಮಾರ್ ಇವಾನಿಯೋಸ್ ದಿನಾಚರಣೆ Read More »

ಕರಾವಳಿ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.15. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್’ ಮತ್ತು ‘ಡಿ’ ದರ್ಜೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. 17-01-2018 ರಂದು ಸರ್ಕಾರ ಹೊರಡಿಸಿದ ಆದೇಶದ ಅನುಸಾರ, ಕಡಬ ತಾಲೂಕು ಕಛೇರಿಯಲ್ಲಿ 1 ಬೆರಳಚ್ಚುಗಾರರು, ಡಾಟಾ ಎಂಟ್ರಿ ಆಪರೇಟರ್ ಮತ್ತು 3 ಡಿ ಗ್ರೂಪ್ ದರ್ಜೆ ನೌಕರರನ್ನು, ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ Read More »

ಉದ್ಯೋಗ, ಕರಾವಳಿ

ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ಮೊಟ್ಟೆ ವಿಚಾರವಾಗಿ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾಯಕ ನಾರಾಯಣಸ್ವಾಮಿ ಪ್ರಸ್ತಾಪಿಸಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆಯಾಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಆಗಿ ಬೆಳೆದಿದ್ದು, ಅದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ

ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ Read More »

ಕರ್ನಾಟಕ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಶಾಲಾ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಮತ್ತು ಪ್ರಮಾಣವಚನ ಕಾರ್ಯಕ್ರಮವು ಇಲ್ಲಿನ ಸರಸ್ವತೀ ವಿದ್ಯಾಲಯ ಹನುಮಾನ್ ನಗರ ಕೇವಳದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸುಂದರ ಗೌಡ ಪಣೆಮಜಲು ದೀಪ ಬೆಳಗಿಸಿ ಉದ್ಘಾಟಿಸಿ ಸಂಘಟನೆಯಿಂದ ಒಗ್ಗಟ್ಟು ಬರುತ್ತದೆ, ಒಗ್ಗಟ್ಟಾಗಿ ಕೆಲಸ ಮಾಡುವುದರಿಂದ ಸಂಸ್ಥೆಯ ಪ್ರಗತಿಗೆ ಸಹಕಾರಿಯಾಗುತ್ತದೆ. ಉತ್ತಮ ಸಂಘಟನೆಗೆ ಶಿಸ್ತು ಮತ್ತು ಸಂಸ್ಕಾರ ಅಗತ್ಯ. ವಿದ್ಯಾರ್ಥಿಗಳು ಈ ಮೂಲಕ ಉತ್ತಮ ಗುಣಗಳನ್ನು ಬೆಳಸಿಕೊಳ್ಳಬೇಕು

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

ಕರಾವಳಿ

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಖಂಡಿಸಿ ಹಾಗೂ ಇದರ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ ಆಗ್ರಹಿಸಿ ಕಡಬ ತಾಲೂಕಿನ ಜೈನ ಸಮಾಜ ಬಾಂಧವರು ಗುರುವಾರದಂದು ಕಡಬ ತಾಲೂಕು ಆಡಳಿತ ಸೌಧದ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಕಡಬದ ಸಿ.ಎ.ಬ್ಯಾಂಕ್ ವಠಾರದಿಂದ ಕಡಬದ ಮುಖ್ಯರಸ್ತೆಯ ಮೂಲಕ ಮೌನ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು,

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ Read More »

ಕರಾವಳಿ

ಕಡಬ: ಆನೆ ದಾಳಿ- ಬೃಹತ್ ಮರ ಬಿದ್ದು 3 ವಿದ್ಯುತ್ ಕಂಬಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಜು. 13. ಆನೆ ದಾಳಿಯಿಂದಾಗಿ ಬೃಹತ್ ಮರವೊಂದು ವಿದ್ಯುತ್ ತಂತಿಯ ಮೇಲೆ ಉರುಳಿಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳು ಹಾನಿಗೊಂಡಿರುವ ಘಟನೆ ತಾಲೂಕಿನ ರೆಂಜಿಲಾಡಿ ಗ್ರಾಮದ ಗೋಳಿಯಡ್ಕ ಬಾಂತಾಜೆ ಸಂಪರ್ಕ ರಸ್ತೆಯ ಬಾಂತಾಜೆ ಸಮೀಪ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿನ ಬೃಹತ್ ಈನ್ದ್ ಮರವನ್ನು ಕಾಡಾನೆ ಉರುಳಿಸಿ ಹಾಕಿ ಪುಡಿಗೈದಿದೆ. ಮರವು ವಿದ್ಯುತ್ ತಂತಿಯ ಮೇಲೆಯೇ ಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

ಕಡಬ: ಆನೆ ದಾಳಿ- ಬೃಹತ್ ಮರ ಬಿದ್ದು 3 ವಿದ್ಯುತ್ ಕಂಬಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top