Kadaba

ಕಡಬ: ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 12. ಇಲ್ಲಿನ ಕಡಬ ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಡಬ ಹಾಗೂ ಪಂಜ ಉಪವಲಯ ಅರಣ್ಯಾಧಿಕಾರಿಗಳಾದ ಅಜಿತ್ ಕುಮಾರ್ ಕೆ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗಿಡ ಮರಗಳಿಂದ ಕೂಡಿದ ವನ ಸಂಪತ್ತು ನಮ್ಮ ಉಸಿರಿಗೆ ವರವಿದ್ದಂತೆ, ಯುವ ಪೀಳಿಗೆಯಲ್ಲಿ ಗಿಡಗಳನ್ನು ನೆಟ್ಟು ಅದನ್ನು ಪೋಷಿಸುವ ಹವ್ಯಾಸ ಹಾಗೂ ಜವಾಬ್ದಾರಿ ಮೂಡಬೇಕು. ಈ ಮೂಲಕ […]

ಕಡಬ: ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ Read More »

ಕರಾವಳಿ

ಕಡಬ: ಗರ್ಭವತಿಯಾದ ಅಪ್ರಾಪ್ತೆ ➤ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಜು. 10. ಅಪ್ರಾಪ್ತ ಬಾಲಕಿಯೋರ್ವಳನ್ನು ಅತ್ಯಾಚಾರಗೈದು ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಪೋಕ್ಸೋ ಪ್ರಕರಣದಡಿ ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಕೋಡಿಂಬಾಳದಿಂದ ತಡವಾಗಿ ವರದಿಯಾಗಿದೆ. ಬಂಧಿತನನ್ನು ಕೋಡಿಂಬಾಳ ಗ್ರಾಮದ ನಿಶಾಂತ್ ಎಂದು ಗುರುತಿಸಲಾಗಿದೆ. ಈತ ತನ್ನ ಸಂಬಂಧಿ 14ರ ಹರೆಯದ ಬಾಲಕಿಯನ್ನು ಅತ್ಯಾಚಾರವೆಸಗಿ ಎಂಟು ತಿಂಗಳ ಗರ್ಭಕ್ಕೆ ಕಾರಣಾಗಿದ್ದ ಎಂದು ಅರೋಪಿಸಲಾಗಿದೆ. ಬಾಲಕಿಯು ತಾಯಿ ಜೊತೆ ಕಡಬ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾದ ಘಟನೆ ಬೆಳಕಿಗೆ ಬಂದಿದೆ. ಶಾಲಾ ಬಾಲಕಿ ಎಂಟು ತಿಂಗಳ

ಕಡಬ: ಗರ್ಭವತಿಯಾದ ಅಪ್ರಾಪ್ತೆ ➤ ಯುವಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಮಾಲಕನೇ ಬೆಂಕಿ ಕೊಟ್ಟು ಕ್ರೂರವಾಗಿ ಕೊಂದಿರುವ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯಲ್ಲಿ ಕೆಲಸಕ್ಕಿದ್ದ ಜಗ್ಗು (35) ಎಂಬವರೇ ಮೃತ ದುರ್ದೈವಿ. ಶನಿವಾರದಂದು ಕ್ಷುಲ್ಲಕ ಕಾರಣಕ್ಕೆ ಅಂಗಡಿ ಮಾಲಕ ತೌಸೀಫ್ ಹುಸೈನ್ ಎಂಬಾತ ಜಗ್ಗುವನ್ನು ಕೊಲೆ‌ ಮಾಡುವ ಉದ್ದೇಶದಿಂದ ಬೆಂಕಿ‌ಕೊಟ್ಟಿದ್ದು, ಸುಟ್ಟ ದೇಹದೊಂದಿಗೆ ಚೀರಾಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಜಮಾಯಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವಿದ್ಯುತ್ ಶಾಕ್

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ Read More »

ಕರಾವಳಿ

ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.8. ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ನಿವಾಸಿ ಶಿವರಾಜ್ ಹೆಚ್.ಕೆ.(37) ಎಂದು ಗುರುತಿಸಲಾಗಿದೆ. ಆರೋಪಿಯು ನಕಲಿ ಟ್ವಿಟರ್ ಖಾತೆಯೊಂದರಲ್ಲಿ ತುಳುನಾಡಿನ ದೈವರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಿದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯ ಪದಾಧಿಕಾರಿಗಳು ಮಂಗಳೂರು ಸೆನ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ್ದ

ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನಾಳೆ (ಜುಲೈ 08) ಶನಿವಾರ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿರಲಿವೆ. ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಿದ್ಯಾರ್ಥಿಗಳು ಶಾಲೆಗೆ ತೆರಳಲು ತೊಂದರೆಯಾಗುತ್ತಿರುವುದನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಸ್ಥಿತಿಗೆ ಅನುಗುಣವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಶುಕ್ರವಾರ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ Read More »

ಕರಾವಳಿ

ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤ ಮಜ್ಜಾರು ದೈವಗಳ ಮೊರೆಹೋದ ಕಾಂಗ್ರೆಸ್ ಮುಖಂಡರು

(ನ್ಯೂಸ್ ಕಡಬ) newskadaba.com ಕಡಬ, ಜು. 04. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತು ಪಕ್ಷದಿಂದ ಉಚ್ಚಾಟಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಕೊನೆಗೆ ದೈವದ ಮೊರೆ ಹೋಗಿದ್ದಾರೆ. ಜು. 04ರಂದು ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು

ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤ ಮಜ್ಜಾರು ದೈವಗಳ ಮೊರೆಹೋದ ಕಾಂಗ್ರೆಸ್ ಮುಖಂಡರು Read More »

ಕರಾವಳಿ

ಗೋಳಿತ್ತಡಿ: ಹೆದ್ದಾರಿಗೆ ಬಿದ್ದ ಬೃಹತ್ ಮರ ➤ ಸಂಚಾರಕ್ಕೆ ಅಡ್ಡಿ

(ನ್ಯೂಸ್ ಕಡಬ) newskadaba.com ರಾಮಕುಂಜ, ಜು. 04. ಬೃಹತ್ ಮರವೊಂದು ರಸ್ತೆಗೆ ಅಡ್ಡಬಿದ್ದ ಪರಿಣಾಮ ಸುಮಾರು 1 ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ಸೋಮವಾರದಂದು ಸಂಜೆ ನಡೆದಿದೆ. ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಮುರಿದು ಬಿದ್ದಿತ್ತು. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು

ಗೋಳಿತ್ತಡಿ: ಹೆದ್ದಾರಿಗೆ ಬಿದ್ದ ಬೃಹತ್ ಮರ ➤ ಸಂಚಾರಕ್ಕೆ ಅಡ್ಡಿ Read More »

ಕರಾವಳಿ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ನಡೆದಿದೆ. ನೆಟ್ಟಣದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬೈಕ್ ನಡುವೆ ಕೈಕಂಬ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಗಸ್ತಿನಲ್ಲಿದ್ದ ಹೈವೇ ಪಾಟ್ರಲ್ ಸಿಬ್ಬಂದಿಗಳಾದ ಕಡಬ ಠಾಣಾ ಎಎಸ್ಐ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಅಕ್ರಮ ಜಾನುವಾರು ಸಾಗಾಟ

(ನ್ಯೂಸ್ ಕಡಬ) newskadaba.com ಕಡಬ, ಜೂ. 20. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಜಾನುವಾರು ಹಾಗೂ ವಾಹನವನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಮುಳಿಮಜಲು ಎಂಬಲ್ಲಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಡಬ: ಅಕ್ರಮ ಜಾನುವಾರು ಸಾಗಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 17. ಇಲ್ಲಿನ ಸೈಂಟ್ ಆನ್ಸ್ ಶಾಲೆಯಲ್ಲಿ ಅಬಾಕಸ್ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಗುರುವಾರದಂದು ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಅನ್ಸ್ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ, ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ಧಿಶಕ್ತಿ ಉತ್ತಮಗೊಳ್ಳುತ್ತದೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿಯೂ ಪ್ರಗತಿ ಸಾಧಿಸುತ್ತಾರೆ ಎಂದು ಹೇಳಿದರು. ಅಬಾಕಸ್ ತರಗತಿಯ ಬಗ್ಗೆ ತರಬೇತಿ

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ Read More »

ಕರಾವಳಿ
Scroll to Top