Kadaba

ಕಡಬದಲ್ಲಿಂದು SSF ದಕ್ಷಿಣ ಕನ್ನಡ ಬ್ಲಡ್ ಸೈಬೋ ಇದರ ರಕ್ತದಾನ ಶಿಬಿರ ➤ 50 ಕ್ಕೂ ಅಧಿಕ ರಕ್ತದಾನಿಗಳಿಂದ ರಕ್ತದಾನ

 (ನ್ಯೂಸ್ ಕಡಬ) newskadaba.com ಕಡಬ, ಅ. 04. SSF ಕಡಬ ಸೆಕ್ಟರಿನ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ SSF ದಕ್ಷಿಣ ಕನ್ನಡ ಬ್ಲಡ್ ಸೈಬೋ ಇದರ 196ನೇ ಸಾರ್ವಜನಿಕ ರಕ್ತದಾನ ಶಿಬಿರ ಇಂದು (ಅ.04) ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡಬದಲ್ಲಿ ನಡೆಯಿತು. ಇನ್ನು ಸುಮಾರು50 ಕ್ಕೂ ಅಧಿಕ ಮಂದಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪ್ರಸ್ತುತ ಸಭೆಯ ಅಧ್ಯಕ್ಷತೆಯನ್ನು ಸೆಕ್ಟರ್ ಅಧ್ಯಕ್ಷರಾದ ಝಿಯಾರ್ ಕೋಡಿಂಬಾಳ […]

ಕಡಬದಲ್ಲಿಂದು SSF ದಕ್ಷಿಣ ಕನ್ನಡ ಬ್ಲಡ್ ಸೈಬೋ ಇದರ ರಕ್ತದಾನ ಶಿಬಿರ ➤ 50 ಕ್ಕೂ ಅಧಿಕ ರಕ್ತದಾನಿಗಳಿಂದ ರಕ್ತದಾನ Read More »

ಕರಾವಳಿ

ಬಿಳಿನೆಲೆ : ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಿಳಿನೆಲೆ , ಅ. 04.ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಲದ ರಂಗ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಇದರ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಶಾಸಕ ಎಸ್ ಅಂಗಾರರವರು ಆಗಮಿಸಿದರು. ಬಳಿಕ ಮಾತನಾಡಿದ ಅವರು, “ಪ್ರೀತಿ ವಿಶ್ವಾಸ ವಿದ್ದರೆ ಮಾತ್ರ ಯಾವುದೇ ಕುಟುಂಬ ಸಂಘಟನೆ ಉಳಿಯಲು ಸಾಧ್ಯ. ಅದರಂತೆ ಬಾಳೋಣ, ಸಂಘದ ಏಳಿಗಾಗಿ ದುಡಿಯೋಣ ಇದರ ಜೊತೆಗೆ ಜನತೆಯ ಏಳಿಗಾಗಿ ಆಗಾಬೇಕಾದ ಬೆಳವಣಿಯನ್ನು  ಒಟ್ಟಾಗಿ ಸೇರಿ ಮಾಡೋಣ,

ಬಿಳಿನೆಲೆ : ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮ Read More »

ಕರಾವಳಿ

ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ ➤ 6 ಮಂದಿಯ ಮಧ್ಯಂತರ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಕರ್ಮಾಯಿ, ಅ.04: 102 ನೆಕ್ಕಿಲಾಡಿ ಗ್ರಾಮದ ಕರ್ಮಾಯಿ ಎಂಬಲ್ಲಿ ಕಾಡಿಗೆ ಮೇಯಲು ಬಿಟ್ಟಿದ್ದ ಜಾನುವಾರುಗಳನ್ನು ಸಕಲೇಶಪುರ ಭಾಗಕ್ಕೆ ಮಾರಾಟ ಮಾಡಲು ಪಿಕಪ್ ನಲ್ಲಿ ಸಾಗಿಸುತ್ತಿದ್ದ ವೇಳೆ ಸ್ಥಳೀಯರು ತಡೆ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದು, ಬಳಿಕ ಕಡಬ ಠಾಣೆಯಲ್ಲಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.   ಜಾನುವಾರುಗಳನ್ನುಅಹಿಂಸಾತ್ಮಕವಾಗಿ ಸಾಗಾಟ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯ ವಿರುದ್ಧ FIR ದಾಖಲಾಗಿದ್ದು ನ್ಯಾಯಧೀಶರು ಎಲ್ಲರ ಜಾಮೀನನ್ನು ಕಳೆದ ದಿನ ವಜಾ ಗೊಳಿಸಿದ್ದಾರೆ.

ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ ➤ 6 ಮಂದಿಯ ಮಧ್ಯಂತರ ಜಾಮೀನು ಅರ್ಜಿ ವಜಾ Read More »

ಕರಾವಳಿ

ಮಂಗಳೂರಿನ ಪೆಟ್ರೋಲ್‌‌ ಬಂಕ್‌ಗಳಲ್ಲಿ ಕಳ್ಳತನ ➤ 6 ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಬಂಟ್ವಾಳ ಹಾಗೂ ಮಂಗಳೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಪೆಟ್ರೋಲ್‌‌ ಬಂಕ್‌‌‌‌‌‌ಗಳಲ್ಲಿ ನಡೆದ ಕಳ್ಳತನ ಹಾಗೂ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ಹಾಗೂ ಉಳ್ಳಾಲ ಠಾಣೆ ಪೊಲೀಸರು ಆರು ಮಂದಿ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕೆ.ಸಿ.ರೋಡ್‌‌‌ ನಿವಾಸಿ ಮೊಹಮ್ಮದ್‌‌ ಸುಹೈಲ್‌‌ ಯಾನೆ ಅಚ್ಚು(19), ಫಳ್ನೀರ್‌‌‌‌ ರಸ್ತೆ ಮಹಾರಾಜ ಹೈಟ್ಸ್‌‌‌ ಅಪಾರ್ಟ್‌ಮೆಂಟ್‌‌‌‌ ನಿಮಾಸಿ ಮಹಮ್ಮದ್‌‌ ಅರ್ಫಾನ್‌ (20), ತಲಪಾಡಿ ಕೆ.ಸಿ ನಗರ ನಿವಾಸಿಗಳಾದ ಆಶೀಕ್‌ ಯಾನೆ ಅಹ್ಮದ್‌‌‌ ಆಶಿಕ್‌‌‌

ಮಂಗಳೂರಿನ ಪೆಟ್ರೋಲ್‌‌ ಬಂಕ್‌ಗಳಲ್ಲಿ ಕಳ್ಳತನ ➤ 6 ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ :ಹತ್ರಾಸ್ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ A.B.V.Pಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಅ. 04. ಉತ್ತರ ಪ್ರದೆಶದಲ್ಲಿ ನಡೆದ ಮನಿಷಾ ವಾಲ್ಮೀಕಿ ಎಂಬ ಯುವತಿಯ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕ, ವತಿಯಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಪದ್ಮ ಕುಮಾರ್ ಇವರು ಪ್ರಾಸ್ತಾವಿಕ ಮಾತನಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು. ಹಿರಿಯ ಕಾರ್ಯಕರ್ತಆದ ಬುಕಿತ್ ನೀರ್ಪಾಡಿ , ವಿದ್ಯಾರ್ಥಿ ನಾಯಕ ರಕ್ಷಿತ್ ಪರಮಲೆ, ನಗರ ಕಾರ್ಯದರ್ಶಿ ಹಿತೇಶ್ ಕಟ್ರಮನೆ ಹಾಗೂ

ಸುಬ್ರಹ್ಮಣ್ಯ :ಹತ್ರಾಸ್ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ A.B.V.Pಯಿಂದ ಪ್ರತಿಭಟನೆ Read More »

ಕರಾವಳಿ

ಕಾರ್ಕಳ : ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

 (ನ್ಯೂಸ್ ಕಡಬ) newskadaba.com ಕಾರ್ಕಳ, ಅ. 04. ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರು ಮಾನಸಿಕ ನೊಂದು ಶುಕ್ರವಾರ ರಾತ್ರಿ ತಮ್ಮ ಮನೆಯ ಹಿಂದಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಮಾರ್ಕೆಟ್ ರಸ್ತೆಯ ರಾಧಿಕಾ ಟಾಕೀಸ್ ಬಳಿಯ ನಿವಾಸಿ ಪ್ರಸನ್ನ ಆರ್ಯ(46)ಎಂಬವರು ಆತ್ಮಹತ್ಯೆ ಮಾಡಿಕೊಂಡವರು.   ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಅವಿವಾಹಿತರಾಗಿದ್ದು ಒಬ್ಬಂಟಿಯಾಗಿ ಮನೆಯಲ್ಲಿ ವಾಸವಿದ್ದರು. ಕಳೆದ ನಾಲ್ಕು ದಿನದಿಂದ ಜ್ವರ ಹಾಗೂ ಬೇಧಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿದ್ದರು. ಇವರಿಗೆ ಕೊರೊನಾ ಸೋಂಕು

ಕಾರ್ಕಳ : ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಸಿಎಂ ಯಡಿಯೂರಪ್ಪ ಅವರಿಗೆ ಶನಿವಾರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.   ಸಿ.ಟಿ.ರವಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದೇ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಆದರೆ ಗಾಂಧಿ ಜಯಂತಿಯಂದು ಸಿಎಂ ಯಡಿಯೂರಪ್ಪ ಸಿಗದ ಕಾರಣ ನಿನ್ನೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.ಸಿ.ಟಿ.ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ➤ ಸಂಘ ಪರಿವಾರದಿಂದ ದಿಡೀರ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಕರಾವಳಿ ಭಾಗಗಳಲ್ಲಿ ಇತ್ತೀಚಿಗೆ ಹೆಚ್ಚು ಅಕ್ರಮ ಗೋ ಸಾಗಾಟ ಮಾಡುತ್ತಿರುವುದು ಕೇಳಿಬರುತ್ತಿದೆ. ಆದರೆ ಇಲ್ಲೋಂದು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಆರು ಕರುಗಳು ವಾಹನದಿಂದ ಬಿದ್ದ ಘಟನೆ ಮಂಗಳೂರಿನಲ್ಲಿ ಇಂದು ಬೆಳಕಿಗೆ ಬಂದಿದೆ. ಕರುಗಳನ್ನು ಅಕ್ರಮವಾಗಿ ಕುದ್ರೋಳಿಯ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಘಟನೆಯ ಬಗ್ಗೆ  ವಿಷಯ ತಿಳಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಭಜರಂಗದಳದ ಕಾರ್ಯಕರ್ತರು ಮನ್ನಗುಡ್ಡದಲ್ಲಿ ದಿಡೀರ್ ಪ್ರತಿಭಟನೆ ನಡೆಸಿ, ಅಕ್ರಮ ಗೋಸಾಗಾಟದ

ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ➤ ಸಂಘ ಪರಿವಾರದಿಂದ ದಿಡೀರ್ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಗೆ ಪೊಲೀಸರ ದಾಳಿ ➤ ಮೂವರ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಮಂಗಳೂರಿನ ವೆಲೆನ್ಸಿಯಾದಲ್ಲಿ ಪ್ಲ್ಯಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಬೆಂಗಳೂರು ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಿ, ಮೂವರನ್ನು  ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವೆಲೆನ್ಸಿಯಾದ ಈ ಪ್ಲ್ಯಾಟ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸ್ ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದ ತಂಡ ದಾಳಿ ನಡೆಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳಾದ ಗಣೇಶ್ ಶೆಟ್ಟಿ, ಪ್ಲ್ಯಾಟ್ ಓನರ್ ಹಫೀಜ್ ಮತ್ತು ಸಹಕರಿಸುತ್ತಿದ್ದ ಹರಿಣಾಕ್ಷಿ ಎಂಬವರನ್ನು ಪೊಲೀಸರು

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಗೆ ಪೊಲೀಸರ ದಾಳಿ ➤ ಮೂವರ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಅ.04: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಪೆರಾಬೆ ಗ್ರಾಮ ಉರುಂಬಿಯಲ್ಲಿ ಕುಮಾರಧಾರ ನದಿಗೆ ಬಾಗಿನ ಅರ್ಪಿಸಿದ ಬಳಿಕ ಕಡಬದ ಅಂಬೇಡ್ಕರ್‌ ಭವನದಲ್ಲಿ ಜೀವ ವೈವಿದ್ಯ ನಿರ್ವಹಣಾ ಸಭೆ ನಡೆಸಲಿದ್ದಾರೆ ಎಂದು ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ನವೀನ್‌ ಭಂಡಾರಿಯವರು ತಿಳಿಸಿದ್ದಾರೆ. ಸಭೆಯು ಪೂರ್ವಹ್ನ ಕಡಬ ಅಂಬೇಡ್ಕರ್‌ ಭವನದಲ್ಲಿ ಇಂದು ನಡೆಯಲಿದೆ.   ಈ ಸಭೆಯಲ್ಲಿ ಜೀವ ವೈವಿದ್ಯ ನಿರ್ವಹಣಾ ಸಮಿತಿಯ ಕಡವ ತಾಲೂಕು ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಸದಸ್ಯರಾದ

ಕಡಬ: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಭೇಟಿ Read More »

ಕರಾವಳಿ
Scroll to Top