Kadaba

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 15. ಕೊವೀಡ್ 19 ವೈರಸ್ ಗೆ ತುತ್ತಾಗಿ, ಕಳೆದ ಹಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಆರೋಗ್ಯ ಕುರಿತಂತೆ ಎಸ್‌ಪಿಬಿ ಪುತ್ರ ಚರಣ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.   ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನು ಅವರಿಗೆ ಆಹಾರವನ್ನು […]

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ Read More »

ಕರಾವಳಿ

ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.14:  ಬಂಟ್ವಾಳ ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಯುವ ಕಾಂಗ್ರೆಸ್, ಮತ್ತು ಇರ್ವತ್ತೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ಇವರ ಸಹಕಾರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಲಾಬಾಗಿಲು ರಝಾನಗರದ ಬುರೂಜ್ ಆಂಗ್ಲ ಮಾದ್ಯಮ ಪ್ರೌಡ ಶಾಲಾ ಸಭಾಂಗಣದಲ್ಲಿ ರವಿವಾರ ರಕ್ತದಾನ ಶಿಬಿರ ನಡೆಯಿತು.   ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಮನುಷ್ಯನ ಪ್ರಾಣವನ್ನು ಕಾಪಾಡುವಂತಹ ರಕ್ತದಾನವು

ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ Read More »

ಕರ್ನಾಟಕ

ಜೆ.ಇ.ಇ, ನಾಟಾ ಪರೀಕ್ಷೆ ➤ ಉತ್ತಮ ಸಾಧನೆಗೈದ ಇಂದ್ರಪ್ರಸ್ಧ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.14:  ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ.ಇ.ಇ. ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದು, ಮುಂದಿನ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.   ಇಂದ್ರಪ್ರಸ್ಥದ ವಿದ್ಯಾರ್ಥಿಗಳಾದ ಸುಹಾಸ್ ಎಂ.ಕೆ. ಅವರು 4512ನೇ ರ‌್ಯಾಂಕ್, ನಿಹಾಲ್ ನೂಜಿಬೈಲ್ ಅವರು 10,174 ರ‌್ಯಾಂಕ್ ಪಡೆದಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳಾದ ಮುಹಮ್ಮದ್ ಶಿಹಾಬ್, ಅನನ್ಯ ಪಿ.ಕೆ., ಜೀವನ್ ಎನ್., ಎ.ಯು. ನಚಿಕೇತ್ ಕುಮಾರ್, ಜೋಶನ್ ವಿ.ಜೆ., ಮುಹಮ್ಮದ್ ತೈಸಿರ್ ಅಲಿ, ಆಯಿಶತ್ ಹೀನಾ, ಚೈತನ್ಯ ಜೆ., ಮೌಲ್ಯ

ಜೆ.ಇ.ಇ, ನಾಟಾ ಪರೀಕ್ಷೆ ➤ ಉತ್ತಮ ಸಾಧನೆಗೈದ ಇಂದ್ರಪ್ರಸ್ಧ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ

ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14:  ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ, ಆರೋಪಿ ಸಂಜನಾ ಗಲ್ರಾನಿ ಅವರ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.     ಸಂಜನಾರನ್ನು ಮತ್ತೆ 3 ದಿನಗಳ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ಒಪ್ಪಿಸಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸಂಜನಾ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿ ನಟಿಯನ್ನು ಐದು ದಿನಗಳ

ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.14: ಬಸ್ಸಿನಿಂದ ಇಳಿದ ಮಹಿಳೆ ಅಡ್ಯಾರ್ ನಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಅಡ್ಯಾರು ಕಟ್ಟೆ ಎಂಬಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಅಳಪೆ ಪಡೀಲ್‌ ನಿವಾಸಿ 48 ವರ್ಷ ಪ್ರಾಯದ ಮಾಲತಿ ಎಂದು ಗುರುತಿಸಲಾಗಿದೆ. ಇನ್ನು ಬೈಕ್‌ ಚಾಲಕನಿಗೆ ಹಾಗೂ ಹಿಂಬದಿ ಸವಾರರಾದ ಬೈಕ್‌ ಚಾಲಕನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ

ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹರಿಹರ : ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹರಿಹರ, ಸೆ.14: ಅಡಿಕೆ ಮಾರಾಟಕ್ಕೆಂದು ಪೇಟೆಗೆ ತೆರಳಿದ ವೇಳೆ ಹರಿಹರ ಪಲ್ಲತ್ತಡ್ಕ ಪೇಟೆಯಲ್ಲಿ ವ್ಯಕ್ತಿಯೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು(ಸೋಮವಾರ) ವರದಿಯಾಗಿದೆ.     ಮೃತರು ಮೂಲತಃ ಹರಿಹರ ಪಲ್ಲತ್ತಡ್ಕ ಗ್ರಾಮದ ಕೆರೆಕ್ಕೋಡಿ ನಿವಾಸಿ ಓಬಯ್ಯ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಮರದ ಕೆತ್ತನೆ ಕೆಲಸ ಮಾಡುವರಾಗಿದ್ದು, ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದರು. ಮೃತರು ತಾಯಿ, ಪತ್ನಿ, ಹಾಗೂ ಓರ್ವ ಪುತ್ರ ಮತ್ತು ಬಂಧುಗಳನ್ನು ಅಗಲಿದ್ದಾರೆ.    

ಹರಿಹರ : ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಬಿಳಿನೆಲೆ : ಬಡ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ನೀಡಿದ ಹಳೆ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಸೆ.14:  ಪ್ರಸ್ತುತ ಶ್ರೀ ಗೋಪಾಲಕೃಷ್ಣ ಪ್ರೌಢ ಬಿಳಿನೆಲೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಚ್ಚಿನ ಪೋಷಕರು ಆರ್ಥಿಕವಾಗಿ ತುಂಬಾ ಹಿಂದುಳಿದವರಾಗಿದ್ದು. . ಕೊರೋನಾ ತೊಂದರೆಯಿಂದಾಗಿ ಮಕ್ಕಳು ಶಾಲೆಗಳಿಗೆ ಬರುವಂತಿಲ್ಲವಾ ದುದರಿಂದ ,ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹಳೆ ವಿದ್ಯಾರ್ಥಿಗಳು, ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್ ನೀಡುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಹ ನೀಡಿದ್ದಾರೆ. . ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯ ಮಕ್ಕಳಿಗೆ ಕಲಿಕಾ ಚಟುವಟಿಕೆಗಳನ್ನು ಆನ್ಲೈನ್ ಮೂಲಕ ಶಿಕ್ಷಕರು ನಡೆಸುತ್ತಿದ್ದಾರೆ. ಆದರೆ ಸಂಬಂಧಿಸಿದ

ಬಿಳಿನೆಲೆ : ಬಡ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ನೀಡಿದ ಹಳೆ ವಿದ್ಯಾರ್ಥಿಗಳು Read More »

ಕರಾವಳಿ

ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ‘ಅಮೃತಮತಿ’ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14:  ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿ, ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಅಮೃತಮತಿ’ ಸಿನಿಮಾ ಅಮೆರಿಕದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.       ಹದಿಮೂರನೇ ಶತಮಾನದ ಜನ್ನಕವಿ ಬರೆದಿರುವ ‘ಯಶೋಧರ ಚರಿತೆ’ ಕಾವ್ಯವನ್ನು ಆಧರಿಸಿ ಈ ಚಿತ್ರವನ್ನ ಮಾಡಲಾಗಿದ್ದು, ಇದೀಗ, ಅಮೆರಿಕದ ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ವಿವಿಧ ದಶಗಳ ಚಿತ್ರಗಳ ಜೊತೆಗೆ ಹೊಸ ಭಾರತೀಯ ಚಿತ್ರಗಳಿಗೆ ಹೆಚ್ಚು ಅವಕಾಶ ಕೊಡುವ ಕಾರಣದಿಂದ ಈ ಚಿತ್ರೋತ್ಸವವನ್ನು ‘ಇಂಡಿಯಾ ಅಂತರರಾಷ್ಟ್ರೀಯ

ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ‘ಅಮೃತಮತಿ’ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಕಡಬ , ಪುತ್ತೂರಿನಲ್ಲಿ ಇಂದು 70 ಮಂದಿಗೆ ಕೊರೋನ ಪಾಸಿಟವ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.14:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಇಂದು (ಸೋಮವಾರ) 70 ಕೊರೋನ ಪ್ರಕರಣಗಳು ದೃಢಪಟ್ಟಿವೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 1,244 ಪ್ರಕರಣಗಳು ವರದಿಯಾಗಿವೆ. ಕಡಬ ತಾಲೂಕಿನ ಸವಣೂರಿನ 42ರ ಪುರುಷ, 40ರ ಪುರುಷ, 45ರ ಪುರುಷ, 20ರ ಯುವತಿ, 60ರ ಪುರುಷ, 62ರ ಮಹಿಳೆ, 40ರ ಮಹಿಳೆ, 15ರ ಬಾಲಕ, ಸಿರಿಬಾಗಿಲು 60ರ ಮಹಿಳೆ, ಪಾಲ್ತಾಡಿ 60ರ ಮಹಿಳೆ, 17ರ ಯುವಕ, 30ರ ಮಹಿಳೆ, 27ರ ಯುವತಿ, 29ರ

ಕಡಬ , ಪುತ್ತೂರಿನಲ್ಲಿ ಇಂದು 70 ಮಂದಿಗೆ ಕೊರೋನ ಪಾಸಿಟವ್ ದೃಢ Read More »

ಕರಾವಳಿ

ಮಂಡ್ಯ ಅರ್ಚಕರ ತ್ರಿಬಲ್ ಮರ್ಡರ್ ಪ್ರಕರಣ ➤ ಮೂವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.14:  ಇತ್ತೀಚೆಗೆ ನಡೆದಿದ್ದ ತ್ರಿಬಲ್ ಮರ್ಡರ್ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಆಂಧ್ರ ಮೂಲದ ವಿಜಿ(25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ(28) ಹಾಗೂ ತೊಪ್ಪನಹಳ್ಳಿಯ ಮಂಜು(30) ಬಂಧಿತ ಆರೋಪಿಗಳು.ಮಂಡ್ಯ ಜಿಲ್ಲೆಯ ಗುತ್ತಲಿನ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಕೊಲೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.     ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಮದ್ದೂರು ತಾಲೂಕಿನ ಸಾದೊಳಲು ಗೇಟ್ ಬಳಿ ತೆರಳಿದ್ದರು.

ಮಂಡ್ಯ ಅರ್ಚಕರ ತ್ರಿಬಲ್ ಮರ್ಡರ್ ಪ್ರಕರಣ ➤ ಮೂವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top