Kadaba

ಕರಾವಳಿಯಲ್ಲಿ ಮತ್ತೇ ಮುಂದುವರಿದ ಮಳೆರಾಯ ➤ 10 ಕ್ಕೂ ಅಧಿಕ ಕಾರುಗಳು ಮಣ್ಣಿನಡಿ ಸಿಲುಕಿರುವ ಶಂಕೆ

(ನ್ಯೂಸ್ ಕಡಬ) newskadaba.com ಕರಾವಳಿ, ಸೆ.11. ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆಯು, ಬುಧವಾರ ಸಂಜೆ ಆರಂಭಗೊಂಡಿದ್ದು, ಇಂದು (ಶುಕ್ರವಾರ) ಮಳೆ ಮುಂದುವರೆದಿದೆ. ನಗರದ ಕುಂಟಿಕಾನದ ವಸತಿ ಸಮುಚ್ಛಯವೊಂದರ ತಡೆಗೋಡೆ ಕುಸಿದು ಬಿದಿದ್ದು ಮಣ್ಣಿನಡಿ ಸುಮಾರು 10 ಕ್ಕೂ ಅಧಿಕ ಕಾರುಗಳು ಹೂತು ಹೋಗಿರುವ ಶಂಕೆ ಉಂಟಾಗಿದೆ.   ಪುತ್ತೂರು, ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಮೂಡುಬಿದ್ರೆ, ಕಡಬ ಮುಂತಾದ ಸ್ಥಳಗಳಲ್ಲಿ ಗುರುವಾರ ಮಳೆಯ ತೀವ್ರತೆ ಕಡಿಮೆಯಾಗಿತ್ತು.ನಗರದಲ್ಲಿ ಬುಧವಾರ ರಾತ್ರಿಯಿಂದ ಆರಂಭವಾದ ಮಳೆಯಿಂದ ಕೃತಕ ಪ್ರವಾಹ ಉಂಟಾಗಿದ್ದು, […]

ಕರಾವಳಿಯಲ್ಲಿ ಮತ್ತೇ ಮುಂದುವರಿದ ಮಳೆರಾಯ ➤ 10 ಕ್ಕೂ ಅಧಿಕ ಕಾರುಗಳು ಮಣ್ಣಿನಡಿ ಸಿಲುಕಿರುವ ಶಂಕೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ಲಾರಿ ಮತ್ತು ಪಿಕ್ ಅಪ್ ವಾಹನದ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.11. ಲಾರಿ ಮತ್ತು ಪಿಕ್ ಅಪ್ ವಾಹನದ ಮಧ್ಯೆ ಭಾರಿ ಅಪಘಾತವೊಂದು ಧರ್ಮಸ್ಥಳ ಸಮೀಪ ಬೊಳಿಯಾರು ಎಂಬಲ್ಲಿ ನಡೆದಿದೆ. ಪಿಕ್ ಅಪ್ ಚಾಲಕನ ತಲೆಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಬೆಳ್ತಂಗಡಿ : ಲಾರಿ ಮತ್ತು ಪಿಕ್ ಅಪ್ ವಾಹನದ ನಡುವೆ ಅಪಘಾತ Read More »

ಕರಾವಳಿ, ಕರ್ನಾಟಕ

ಭಟ್ಕಳ: ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರ ಜೀವ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11: ಭಟ್ಕಳ ಸಮುದ್ರ‌ತೀರದಿಂದ 17 ನಾಟಿಕಲ್ ಮೈಲಿ ದೂರದಲ್ಲಿ ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರನ್ನು ಶುಕ್ರವಾರ ರಕ್ಷಣೆ ಮಾಡಲಾಗಿದೆ. ಕರಾವಳಿ ಕಾವಲು ಪಡೆಯ ಕಸ್ತೂರಬಾ ಗಾಂಧಿ ಹಡಗಿನ ಮೂಲಕ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಎಲ್ಲರನ್ನು ಸುರಕ್ಷಿತವಾಗಿ ಭಟ್ಕಳ ಸಮುದ್ರ ತೀರಕ್ಕೆ ಕರೆತಂದಿದ್ದಾರೆ.     ಮೀನುಗಾರಿಕೆಗೆ ತೆರಳಿದ್ದ ಖಮರುಲ್ ಬಹಾರ್ ಹೆಸರಿನ ಬೋಟ್, ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿತ್ತು. ಬೋಟ್ ಮಾಲೀಕರು ಮೀನುಗಾರಿಕೆ ಇಲಾಖೆಗೆ ಮಾಹಿತಿ ನೀಡಿ,

ಭಟ್ಕಳ: ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರ ಜೀವ ರಕ್ಷಣೆ Read More »

ಕರಾವಳಿ, ಕರ್ನಾಟಕ

ಕಡಬ ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಕಡಬ ಹಾಗೂ ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು (ಸೆ.11) 19 ಮಂದಿಗೆ ಕೊರೊನಾ ದೃಢಪಟ್ಟಿದೆ. ಸಾಮೆತ್ತಡ್ಕದ 35 ವರ್ಷ ಪ್ರಾಯದ ವ್ಯಕ್ತಿ , ಸೂತ್ರಬೆಟ್ಟುವಿನ 67 ವರ್ಷ ಪ್ರಾಯದ ವ್ಯಕ್ತಿ , ಉಪ್ಪಿನಂಗಡಿ ನಟ್ಟಿಬೈಲಿನ 68 ವರ್ಷ ಪ್ರಾಯದ ಮಹಿಳೆ,80 ವರ್ಷದ ವೃದ್ಧೆ, 34 ವರ್ಷದ ಮಹಿಳೆ, 81 ವರ್ಷದ ವೃದ್ದ, 57 ವರ್ಷದ ಪುರುಷ, 11 ವರ್ಷದ ಬಾಲಕಿ, 34ನೇ ನೆಕ್ಕಿಲಾಡಿಯ 38 ವರ್ಷದ ವ್ಯಕ್ತಿ,ಪಾಣಾಜೆಯ

ಕಡಬ ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್‍ಡೇಟ್ Read More »

ಕರಾವಳಿ, ಕರ್ನಾಟಕ

ಜಂಬೂಸವಾರಿ: ಸರಳ ದಸರಾಗೆ ಅರಣ್ಯ ಇಲಾಖೆಯಿಂದ ಐದು ಆನೆಗಳ ಪಟ್ಟಿ ಸಿದ್ದ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.11: ನಾಡ ಹಬ್ಬ ದಸರಾವನ್ನು ಈ ಬಾರಿ ಅತ್ಯಂತವಾಗಿ ಅರಮನೆಗೆ ಸೀಮಿತವಾಗಿ ಆಚರಿಸಲು ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತೀರ್ಮಾನಿಸಿದೆ. ಅಲ್ಲದೆ ದಸರಾದಲ್ಲಿ ಭಾಗವಹಿಸುವ ಆನೆಗಳ ಸಂಖ್ಯೆಯನ್ನೂ 5 ಕ್ಕೆ ಮಿತಿ ಗೊಳಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಐದು ಆನೆಗಳ ಪಟ್ಟಿಯನ್ನು ಸಿದ್ದಪಡಿಸಿದ್ದಾರೆ. ಅರ್ಜುನನಿಗೆ 60 ವರ್ಷ ಮೀರಿರುವ ಹಿನ್ನೆಲೆಯಲ್ಲಿ ಈ ಬಾರಿ ಅಭಿಮನ್ಯು ಆನೆ ಅಂಬಾರಿ ಹೊರುವುದು ಬಹುತೇಕ ಖಚಿತವಾಗಿದೆ.  

ಜಂಬೂಸವಾರಿ: ಸರಳ ದಸರಾಗೆ ಅರಣ್ಯ ಇಲಾಖೆಯಿಂದ ಐದು ಆನೆಗಳ ಪಟ್ಟಿ ಸಿದ್ದ Read More »

ಕರಾವಳಿ, ಕರ್ನಾಟಕ

ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು

(ನ್ಯೂಸ್ ಕಡಬ) newskadaba.com ಕಡಬ, ಸೆ.11: ಅನಾರೋಗ್ಯ ಪೀಡಿತರಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಡಬದ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕಡಬ ಪೊಲೀಸರು ಮತ್ತು ಪತ್ರಕರ್ತರೊಬ್ಬರು ತುರ್ತು ಸ್ಪಂದಿಸಿ ಮಾನವೀಯ ನೆರವು ನೀಡಿದ್ದಾರೆ.     ಕಡಬ ಸಮೀಪದ ಮಜ್ಜಗುಡ್ಡೆ ನಿವಾಸಿ ತೀರಾ ಬಡತನದಲ್ಲಿರುವ ಮಹಿಳೆಯೊಬ್ಬರು ಕಳೆದ ದಿನದಂದು ತೀರಾ ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ವಿಚಾರವನ್ನು ಸ್ಥಳೀಯರು ಪತ್ರಕರ್ತ ನಾಗರಾಗ್‌ ಎನ್.ಕೆ ಅವರ ಗಮನಕ್ಕೆ ತಂದಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪತ್ರಕರ್ತರು ತಮ್ಮ ಆಪ್ತ ವಲಯದವರಿಗೆ ಮಾಹಿತಿ ನೀಡಿ, ಠಾಣೆಗೂ ಕರೆ

ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ದಲಿತ ಮಹಿಳೆಗೆ ಆಸಿಡ್ ಕುಡಿಸಿ ಹತ್ಯೆ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.11. ಬೆಳ್ತಂಗಡಿಯ ಕಳಂಜ ಗ್ರಾಮದ ಬಳ್ಕಾಜೆ ಎಂಬಲ್ಲಿ ತೋಟದ ಕೆಲಸಕ್ಕೆಮದು ಬರುತ್ತಿದ್ದ ದಲಿತ ಮಹಿಳೆಗೆ ಬಲವಂತವಾಗಿ ಆಸಿಡ್ ಕುಡಿಸಿ ಕೊಲೆ ಮಾಡಿ ನಂತರ ಮಹಿಳೆಯ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಚಾರ್ಮಾಡಿ ಮೂಲದ ಪರಿಶಿಷ್ಟ ಪಂಗಡಕ್ಕೆ ಜಾತಿಗೆ ಸೇರಿದ ಮಹಿಳೆ ಕಳೆಂಜ ಗ್ರಾಮದ ಬಳ್ಕಾಜೆ ನಿವಾಸಿ ರೆಜಿಮೊನು ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದು.   ಕೆಲವೊಮ್ಮೆ ಮಹಿಳೆಯ ಅಪ್ರಾಪ್ತ ಮಗಳು ಸಹ ತಾಯಿ ಜೊತೆ

ಬೆಳ್ತಂಗಡಿ : ದಲಿತ ಮಹಿಳೆಗೆ ಆಸಿಡ್ ಕುಡಿಸಿ ಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶವಾಗಿ ಕಡಬ ಸೇರಿದಂತೆ ಜಿಲ್ಲೆಯ 6 ತಾಲೂಕುಗಳ ಘೋಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು ,ಸೆ.11: 2020 ನೇ ಸಾಲಿನ ಮುಂಗಾರು ಋತುವಿನ ಆಗಸ್ಟ್‌ ಮಾಹೆಯಲ್ಲಿ ರಾಜ್ಯದ 23 ಜಿಲ್ಲೆಯಲ್ಲಿ 120 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಸೇರಿದಂತೆ 6 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ರಾಜ್ಯಪಾಲರ ಆದೇಶಾನುಸಾರ ವಿಪತ್ತು ನಿರ್ವಹಣೆ ವಿಭಾಗದ ಕಂದಾಯ ಇಲಾಖೆ ಸರಕಾರದ ಜಂಟಿಕಾರ್ಯದರ್ಶಿ ಅವರು ಘೋಷಣಾ ಆದೇಶವನ್ನು ಹೊರಡಿಸಿದ್ದಾರೆ.     2020 ರ ಮುಂಗಾರು

ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶವಾಗಿ ಕಡಬ ಸೇರಿದಂತೆ ಜಿಲ್ಲೆಯ 6 ತಾಲೂಕುಗಳ ಘೋಷಣೆ Read More »

ಕರಾವಳಿ, ಕರ್ನಾಟಕ

ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ವಿ. ಮುಹಮ್ಮದ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.11. ಬಂದರು ಟ್ರಾಫಿಕ್ ಪೊಲೀಸ್ ಠಾಣೆಯ ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹಾಜಿ ವಿ. ಮಹಮ್ಮದ್ ವಿಟ್ಲ (79) ಅವರು ಕಳೆದ ರಾತ್ರಿ 10.35ಕ್ಕೆ ಆಸ್ಪತ್ರೆಯಿಂದ ಮನೆಗೆ ಬರುವ ಹಾದಿಯಲ್ಲಿ ಆಂಬುಲೆನ್ಸ್ ನಲ್ಲಿ ನಿಧನರಾದರು. ಶುಕ್ರವಾರ ಜುಮಾ ಮೊದಲು ಬಜ್ಪೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೂಲತಃ ವಿಟ್ಲ ಸಮೀಪದ ಮಾರ್ನೆಮಿಗುಡ್ಡೆ ನಿವಾಸಿಯಾಗಿದ್ದ ವಿ. ಮಹಮ್ಮದ್ ಹಾಜಿ ಕಳೆದ 27 ವರ್ಷಗಳಿಂದ ಬಜ್ಪೆಯಲ್ಲಿ ನೆಲೆಸಿದ್ದರು. ವಿಟ್ಲದ ಜನತೆಗೆ ‘ಪೊಲೀಸ್

ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ವಿ. ಮುಹಮ್ಮದ್ ವಿಧಿವಶ Read More »

ಕರಾವಳಿ, ಕರ್ನಾಟಕ

ಶ್ರೀಕೃಷ್ಣ ಮಠದಲ್ಲಿ ಸರಳ ಕೃಷ್ಣಾಷ್ಟಮಿ ➤ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ಮಧ್ಯರಾತ್ರಿ 12:16ಕ್ಕೆ ಕೃಷ್ಣನಿಗೆ ಅರ್ಘ್ಯ ಸಮರ್ಪಿಸಲಾಯಿತು. ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ರಾತ್ರಿ ತುಳಸಿ ಅರ್ಚನೆ ಹಾಗೂ ಮಹಾಪೂಜೆ ನೆರವೇರಿಸಿ ಗರ್ಭಗುಡಿಯಲ್ಲಿ ಕೃಷ್ಣದೇವರಿಗೆ ಅರ್ಘ್ಯ ಅರ್ಪಿಸಿದರು. ಬಳಿಕ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥರು, ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥರು, ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭತೀರ್ಥರು ಕೃಷ್ಣನಿಗೆ ಹಾಗೂ ಚಂದ್ರೋದಯ ಸಮಯದಲ್ಲಿ ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ಸಮರ್ಪಿಸಿದರು. ಕೃಷ್ಣ ಜನ್ಮಾಷ್ಟಮಿಯ ಪ್ರಮುಖ ಧಾರ್ಮಿಕ ವಿಧಿವಿಧಾನಗಳಲ್ಲಿ

ಶ್ರೀಕೃಷ್ಣ ಮಠದಲ್ಲಿ ಸರಳ ಕೃಷ್ಣಾಷ್ಟಮಿ ➤ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ Read More »

ಕರಾವಳಿ, ಕರ್ನಾಟಕ
Scroll to Top