Kadaba

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ ಇಂದು ನಡೆಯಲಿದೆ.  ಬೆಂಗಳೂರಿನಲ್ಲಿ ಆದಿತ್ಯ ರಾವ್ ಮಂಪರು ಪರೀಕ್ಷೆ ನಡೆಯಲಿರುವುದರಿಂದ ಬುಧವಾರ ಆತನನ್ನು ಮಂಗಳೂರಿನಿಂದ ಕರೆದುಕೊಂಡು ಹೋಗಲಾಗಿದೆ. ಬೆಂಗಳೂರಿನ ಮಡಿವಾಳದ ಫೋರೆನ್ಸಿಕ್​​ ಸೈನ್ಸ್ ಪ್ರಯೋಗಾಲಯದಲ್ಲಿ ಆತನ ಮಂಪರು ಪರೀಕ್ಷೆ ನಡೆಯಲಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ. ಬಳಿಕ ಪತ್ತೆಯಾದ ಬಾಂಬ್​​ಅನ್ನು ಬಾಂಬ್ ನಿಷ್ಕ್ರಿಯ ದಳ ಖಾಲಿ […]

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಾರ್ವಜನಿಕ ಬಸ್ ತಂಗುದಾಣ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಪುತ್ತೂರು. ಸೆ.03:   ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಜಾಗರಣಾ ವೇದಿಕೆ ಪುತ್ತೂರು ತಾಲೂಕು ಕಾರ್ಯದರ್ಶಿಯಾಗಿದ್ದ ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಂಪ್ಯದಲ್ಲಿ ಸಾರ್ವಜನಿಕ ಬಸ್ ತಂಗುದಾಣ ನಿರ್ಮಾಣವಾಗಿದ್ದು ಇಂದು ( ಸೆ.03) ಕಾರ್ತಿಕ್ ರವರ ತಂದೆ ರಮೇಶ್ ಸುವರ್ಣ ಹಾಗೂ ತಾಯಿ ಹೇಮಾವತಿ ಯವರು ಲೋಕಾರ್ಪಣೆ ಮಾಡಿದರು.   ಈ ಸಂದರ್ಭದಲ್ಲಿ ಹಿಂ.ಜಾ.ವೇ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ , ತಾ. ಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾ ಕೃಷ್ಣ

ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಾರ್ವಜನಿಕ ಬಸ್ ತಂಗುದಾಣ ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ

ಬೆಂಗಳೂರು: ಅಕ್ರಮ ವಜ್ರ ಸಾಗಾಟ ➤ಕಡಬದ ವ್ಯಕ್ತಿಯ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03: ವಜ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಕಡಬ ತಾಲೂಕಿನ ವ್ಯಕ್ತಿಯ ಸಹಿತ ಮೂವರನ್ನು ಬೆಂಗಳೂರು ಸಿಟಿ ಬಳಿ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.   ಆರೋಪಿಗಳನ್ನು ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ರವಿ ಕುಮಾರ್(54ವ), ಕಡಬ ತಾಲೂಕಿನ ಬೆಳಂದೂರು ಗ್ರಾಮದ ಸುಧೀರ್(28ವ) ಹಾಗೂ ಬೆಳ್ತಂಗಡಿ ತಾಲೂಕಿನ ಅರಂಬೋಡಿ ಗ್ರಾಮದ ಪ್ರವೀಣ್‌ ಕುಮಾರ್ (51ವ.) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 9 ವಜ್ರದ ಹರಳುಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ

ಬೆಂಗಳೂರು: ಅಕ್ರಮ ವಜ್ರ ಸಾಗಾಟ ➤ಕಡಬದ ವ್ಯಕ್ತಿಯ ಸಹಿತ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ‘ಪೋಲಿ’ಸ್ ನಿಂದ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ರಕ್ಷಣೆ ಕೊಡಬೇಕಾದ ಪೊಲೀಸಪ್ಪ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ  ಪೊಲೀಸ್ ಹುದ್ದೆಗೆ ಕಳಂಕ ತಂದಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ.

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ‘ಪೋಲಿ’ಸ್ ನಿಂದ ಅತ್ಯಾಚಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋವಿಡ್ ಸೋಂಕಿಗೆ ಮಾಜಿ ಶಾಸಕ ಬಲಿ

(ನ್ಯೂಸ್ ಕಡಬ) newskadaba.com ಶಿವಮೊಗ್ಗ. ಸೆ.03:  ಕೋವಿಡ್ ಸೋಂಕಿಗೆ ಭದ್ರಾವತಿ ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಮೂರುದಿನಗಳ ಹಿಂದಷ್ಟೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದ ಅಪ್ಪಾಜಿ ಗೌಡರಿಗೆ ಇಂದು ಉಸಿರಾಟದ ತೊಂದರೆ ಅತಿಹೆಚ್ಚು ಕಾಣಿಸಿಕೊಂಡಿದೆ.     ಕೋವಿಡ್-19 ನಿಂದಾಗಿ ಉಸಿರಾಟ ತೊಂದರೆ ಹೆಚ್ಚಾದ ಪರಿಣಾಮ ಅಪ್ಪಾಜಿಯವರನ್ನ ಇಂದು ಸಂಜೆ 7 ಕ್ಕೆ ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೆಟ್ರೋದಲ್ಲಿಯೂ ಸಹ ಚಿಕಿತ್ಸೆಗೆ ಸ್ಪಂಧಿಸದ ಅಪ್ಪಾಜಿಯವರನ್ನ ಮೆಗ್ಗಾನ್ ಗೆ ದಾಖಲಿಸಲಾಗಿತ್ತು. ಸುಮಾರು 10-30

ಕೋವಿಡ್ ಸೋಂಕಿಗೆ ಮಾಜಿ ಶಾಸಕ ಬಲಿ Read More »

ಕರ್ನಾಟಕ

ನರೇಂದ್ರ ಮೋದಿ ವೈಯಕ್ತಿಕ ಟ್ಟಿಟ್ಟರ್ ಖಾತೆ ಹ್ಯಾಕ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 03 : ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ವೆಬ್‌ಸೈಟ್‌ಗೆ ಲಿಂಕ್‌ ಆಗಿರುವ ಟ್ವಿಟರ್ ಖಾತೆ ಹ್ಯಾಕ್‌ ಆಗಿರುವುದನ್ನು ಇಂದು (ಗುರುವಾರ) ಟ್ವಿಟರ್‌ ಖಚಿತ ಪಡಿಸಿದೆ. ಪರಿಹಾರ ನಿಧಿಗೆ ಕ್ರಿಪ್ಟೊಕರೆನ್ಸಿಗಳ ಮೂಲಕ ಸಹಾಯ ಮಾಡುವಂತೆ ಸರಣಿ ಟ್ವೀಟ್‌ಗಳ ಮೂಲಕ ಪ್ರಧಾನಿ ಮೋದಿ ವೆಬ್‌ಸೈಟ್‌ ಖಾತೆಯಿಂದ ಮನವಿ ಪ್ರಕಟಗೊಂಡಿದೆ.   ಮೋದಿ ಅವರ ವೆಬ್‌ಸೈಟ್‌ ಖಾತೆಯ ಮೂಲಕ ನಡೆಯುತ್ತಿರುವ ಚಟುವಟಿಕೆಗಳ ಬಗೆಗೆ ಗಮನವಿದ್ದು, ಅದನ್ನು ಸುರಕ್ಷಿತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು

ನರೇಂದ್ರ ಮೋದಿ ವೈಯಕ್ತಿಕ ಟ್ಟಿಟ್ಟರ್ ಖಾತೆ ಹ್ಯಾಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಸದ್ಯದಲ್ಲೇ ಪ್ಲಾಸ್ಮಾ ಥೆರಪಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,  ಸೆ.03:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 270 ಹೊಸ ಕೋವಿಡ್ ಪ್ರಕರಣಗಳು ಸೋಮವಾರ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 12,713ಕ್ಕೇ ಏರಿಕೆಯಾಗಿದೆ.ಜಿಲ್ಲೆಯ ವೆಲ್ ಲಾಕ್ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಪ್ಲಾಸ್ಮಾ ಥೆರಪಿಯನ್ನು ಆರಂಭಿಸಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.     ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,556.ಪ್ಲಾಸ್ಮಾ ಥೆರಪಿ ಆರಂಭಿಸುವ ಕುರಿತು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ. ಮಾಹಿತಿ ನೀಡಿದ್ದಾರೆ. “ಪ್ಲಾಸ್ಮಾ ಥೆರಪಿ ಆರಂಭಿಸಲು ಈಗಾಗಲೇ ಕಟ್ಟಡವನ್ನು ಗುರುತಿಸಲಾಗಿದೆ. ಇದಕ್ಕಾಗಿ ಯಂತ್ರವನ್ನು ಖರೀದಿ

ದಕ್ಷಿಣ ಕನ್ನಡದಲ್ಲಿ ಸದ್ಯದಲ್ಲೇ ಪ್ಲಾಸ್ಮಾ ಥೆರಪಿ ಆರಂಭ Read More »

ಕರಾವಳಿ, ಕರ್ನಾಟಕ

ಸ್ಕೂಟರ್‌- ಲಾರಿ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 03 : ತಲ್ಲೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಮೃತರಾದವರನ್ನು ತಲ್ಲೂರು ಗ್ರಾಮದ ನಿವಾಸಿ ಸೀತಾರಾಮ ಶೆಟ್ಟಿ (57) ಎಂದು ಗುರುತಿಸಲಾಗಿದೆ.   ಬೈಂದೂರು ಕಡೆಯಿಂದ ಬರುತ್ತಿದ್ದ ಪಿಕ್ ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇರುವ ಡಿವೈಡರ್ ಮೇಲಕ್ಕೆ ಹತ್ತಿದ್ದು, ಇದೇ ವೇಳೆ ತಲ್ಲೂರು ಕಡೆಗೆ ಹೋಗುತ್ತಿದ್ದ ಸೀತಾರಾಮ್ ತನ್ನ ಬೈಕ್ ನ

ಸ್ಕೂಟರ್‌- ಲಾರಿ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ

ತೆಂಗು ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿ ಕರ್ನಾಟಕ ರಾಜ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.02:  ಇಂದು ವಿಶ್ವ ತೆಂಗಿನಕಾಯಿ ದಿನ. ದೇಶದಲ್ಲಿ ಕೇರಳ ಮತ್ತು ತಮಿಳುನಾಡು ನಂತರ ಅತಿ ಹೆಚ್ಚು ತೆಂಗಿನ ಕಾಯಿ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ರೈತರ ಅದಾಯ ಮೂಲವಾಗಿದೆ. ಹೈನುಗಾರಿಕೆ ನಂತರ ಅತಿ ಹೆಚ್ಚು ಆದಾಯ ನೀಡುವ ಜತೆಗೆ, ಕೃಷಿ ಕ್ಷೇತ್ರಕ್ಕೆ ಪೂರಕವಾಗಿರುವ ತೆಂಗು ಬೆಳೆ ಇದೀಗ ಹಲವು ಆಯಾಮಗಳನ್ನು ಒಳಗೊಂಡಿದೆ.   ರಾಜ್ಯದ ತುಮಕೂರು ಜಿಲ್ಲೆಯನ್ನು ಕಲ್ಪತರು ನಾಡು ಎಂದು ಕರೆಯುತ್ತಿದ್ದು, ಇಲ್ಲಿ ಅತಿ ಹೆಚ್ಚು ತೆಂಗಿನ ಮರಗಳಿವೆ. ಜತೆಗೆ ತಿಪಟೂರಿನ

ತೆಂಗು ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿ ಕರ್ನಾಟಕ ರಾಜ್ಯ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ : ಕೆಲಸಕ್ಕೆಂದು ತೆರಳಿದ ಕುಂತೂರಿನ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ. ಸೆ.02:  ಯುವತಿಯೋರ್ವಳು ನಾಪತ್ತೆಯಾದ ಘಟನೆ ತಾಲೂಕಿನ ಕುಂತೂರು  ಗ್ರಾಮದ ಅರ್ಬಿ ಎಂಬಲ್ಲಿ ನಡೆದಿದೆ. ನಾಪತ್ತೆಯಾದವಳನ್ನು ಮಮತ (24) ಎಂದು ಗುರುತಿಸಲಾಗಿದೆ. ಈಕೆ ಸುಮಾರು 5 ವರುಷಗಳಿಂದ ಬಲ್ಯ ಗ್ರಾಮದ ಪಟ್ಟೆ ಎಂಬಲ್ಲಿನ ಸರ್ಕಾರಿ ಶಾಲೆಯಲ್ಲಿ ಖಾಸಗಿ ತಾತ್ಕಾಲಿಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು.     ಈಕೆ ಆಗಸ್ಟ್ 31 ರಂದು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿರುತ್ತಾರೆ. ಆದರೆ ಸಂಜೆಯಾದರೂ ಶಾಲೆಯಿಂದ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿರುತ್ತಾರೆ. ಇನ್ನು

ಕಡಬ : ಕೆಲಸಕ್ಕೆಂದು ತೆರಳಿದ ಕುಂತೂರಿನ ಯುವತಿ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top