Kadaba

ಸ್ವರ್ಣಾ ನದಿಯಲ್ಲಿ ಪಂಚಲೋಹದ ಕೃಷ್ಣನ ವಿಗ್ರಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ. ಸೆ.02:  ಬೆಳ್ಳಂಪಳ್ಳಿ ಸ್ವರ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಕೆಳಗೆ ಆ.31ರಂದು ರಾತ್ರಿ ಕೃಷ್ಣನ ಪಂಚಲೋಹದ ವಿಗ್ರಹ ಪತ್ತೆಯಾಗಿದೆ. ರಾತ್ರಿ 8 ಗಂಟೆ ಹೊತ್ತಿಗೆ ಮೀನಿಗಾಗಿ ಗಾಳ ಹಾಕುತ್ತಿದ್ದ ಸ್ಥಳೀಯ ಮೀನುಗಾರರಾದ ಪುರಂದರ ಕೋಟ್ಯಾನ್, ರಾಕೇಶ್, ನಿಶಾನ್, ರಿತಿಕ್, ನವೀನ್, ಆತ್ರಾಡಿ ದಿನೇಶ್ ಪೂಜಾರಿ ಅವರಿಗೆ ಹೊಳೆಯುತ್ತಿರುವ ವಸ್ತು ಕಂಡುಬಂತು.ವಿಗ್ರಹವನ್ನು ಮೇಲೆತ್ತಿ ಗಮನಿಸಿದಾಗ ಕೊಳಲೂದುವ ಗೋಪಾಲಕೃಷ್ಣನ ಆಕೃತಿಯ ಪಂಚಲೋಹ ವಿಗ್ರಹವಾಗಿತ್ತು. ವಿಗ್ರಹ 8 ಕೆ.ಜಿ.ತೂಕವಿದೆ. ಮೀನುಗಾರರು ಸ್ಥಳೀಯರಾದ ಬೆಳ್ಳಂಪಳ್ಳಿ ಭೂತರಾಜ ಸನ್ನಿಧಿಯ […]

ಸ್ವರ್ಣಾ ನದಿಯಲ್ಲಿ ಪಂಚಲೋಹದ ಕೃಷ್ಣನ ವಿಗ್ರಹ ಪತ್ತೆ Read More »

ಕರಾವಳಿ, ಕರ್ನಾಟಕ

ಪೊಲೀಸ್ ನಿರೀಕ್ಷಕರಿಗೆ ಜೀವ ಬೆದರಿಕೆ ➤ ಅಪ್ರಾಪ್ತ ಬಾಲಕ ಸೇರಿ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.02:  ಸಿಎಎ ಮತ್ತು ಎನ್ ಆರ್ ಸಿ ಪ್ರತಿಭಟನೆ ಸಂದರ್ಭದಲ್ಲಿ ಕದ್ರಿ ಪೊಲೀಸ್ ಇನ್ಸ್ ಪೆಕ್ಟರ್ ಶಾಂತಕುಮಾರ್ ಅವರಿಗೆ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.     ಮಹಮ್ಮದ್ ಶಾಫಿಕ್ ಹಾಗೂ ಮತ್ತೊಬ್ಬ 17ರ ಹರೆಯದ ಬಾಲಾರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಅಲ್ಲದೆ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿದ್ದರು. ತನಿಖೆ

ಪೊಲೀಸ್ ನಿರೀಕ್ಷಕರಿಗೆ ಜೀವ ಬೆದರಿಕೆ ➤ ಅಪ್ರಾಪ್ತ ಬಾಲಕ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ➤ ಖದೀಮ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕುಂದಾಪುರ ಸೆ.02: ಬೊಲೆರೊ ವಾಹನದಲ್ಲಿ 3 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದನ್ನು ಕಾವ್ರಾಡಿಯ ಗ್ರಾಮದ ಜನತಾ ಕಾಲೋನಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ದಿನ ಬೆಳಿಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯ ಸಹಾಯಕ ಉಪ ಪೊಲೀಸ್ ನಿರೀಕ್ಷಕ ರವೀಶ್ ಹೊಳ್ಳ ಕರ್ತವ್ಯದಲ್ಲಿರುವಾಗ ಕಾವ್ರಾಡಿ ಧೂಪದಕಟ್ಟೆ ಕಡೆಯಿಂದ ಒಳರಸ್ತೆಯಲ್ಲಿ ಒಂದು ದ್ವಿಚಕ್ರ ವಾಹನ ಹಾಗೂ ಅದರ ಹಿಂಬದಿ ಒಂದು ಕಪ್ಪು ಬೊಲೆರೊ ವಾಹನವನ್ನು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದಿದ್ದಾರೆ. ಈ ವಾಹನಗಳನ್ನು ನಿಲ್ಲಿಸಲು ಸೂಚನೆ ನೀಡಿದ್ದರೂ ಕೂಡಾ

ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ➤ ಖದೀಮ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ

ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.01:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮೀನುಗಾರಿಕೆ ಅವಧಿ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದೆ. ಮೀನುಗಾರಿಕೆ ದೋಣಿಗಳನ್ನು ಸಮುದ್ರಕ್ಕೆ ಇಳಿಯಲು ಸಿದ್ಧವಾಗಿರಿಸಲಾಗಿದೆ. ಲಾಕ್‌ಡೌನ್‌ ಕಾರಣದಿಂದ ಇತರ ರಾಜ್ಯಗಳಿಗೆ ತೆರಳಿದ್ದ ವಲಸೆ ಮೀನುಗಾರರು ಹಲವು ದಿನಗಳ ಬಳಿಕ ಈಗ ವಾಪಾಸ್‌ ಆಗುತ್ತಿದ್ದಾರೆ. ಆಳ ಸಮುದ್ರದ ಮೀನುಗಾರಿಕೆ ಇಂದು ಪುನರಾರಂಭಗೊಂಡಿದೆ.   ಮೀನುಗಾರರು ಆಳ ಸಮುದ್ರದ ಮೀನುಗಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ಲಭ್ಯವಿರುವ ಕಾರ್ಮಿಕರು ಸೇರಿ ಮೀನುಗಾರಿಕೆ ನಡೆಸಲು ಸಿದ್ದರಾಗಿದ್ದಾರೆ. ತಮ್ಮ ದೋಣಿಗಳನ್ನು ಸೋಮವಾರವೇ ಸಿದ್ದ

ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ನಳಿನ್ ಕುಮಾರ್ ಕಟೀಲ್ ರವರು ಶೀಘ್ರ ಗುಣಮುಖರಾಗುವಂತೆ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01 : ಕೊರೊನಾ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರ ಗುಣಮುಖರಾಗಲು ಬಿಜೆಪಿ ದ. ಕ ಜಿಲ್ಲಾ ಸಮಿತಿಯಿಂದ ಮಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಶಾಸಕ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರ ನೇತೃತ್ವದಲ್ಲಿ ನಗರದ ಶರವು ಶ್ರೀ ಮಹಾಗಂಪತಿ ದೇವಸ್ಥಾನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಶ್ರೀ ಮಂಗಳಾದೇವಿ ದೇವಾಲಯ, ಕುದ್ರೋಳಿ ಶ್ರೀ

ಮಂಗಳೂರು: ನಳಿನ್ ಕುಮಾರ್ ಕಟೀಲ್ ರವರು ಶೀಘ್ರ ಗುಣಮುಖರಾಗುವಂತೆ ವಿಶೇಷ ಪೂಜೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01 : ಬಿ.ಸಿ.ರೋಡು ಸರ್ಕಲ್ ಬಳಿ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಕಳೆದ ದಿನ ರಾತ್ರಿ ಮೃತಪಟ್ಟಿದ್ದಾರೆ. ಪಲ್ಲಮಜಲು ನಿವಾಸಿ ಪ್ರಕಾಶ್ ಆರ್.ಚೌಟ ಮೃತ ದುರ್ದೈವಿ. ಅವರು ದ್ವಿಚಕ್ರ ವಾಹನದಲ್ಲಿ ಪಾಣೆಮಂಗಳೂರು ಭಾಗದಿಂದ ಬಿ.ಸಿ.ರೋಡು ಕಡೆಗೆ ಆಗಮಿಸುತ್ತಿದ್ದು, ಆ ವೇಳೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಬಳಿಕ ಪೊಲೀಸರು ಕಾರನ್ನು ಮಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ

ಇಂದಿನಿಂದ ದೇವಾಲಯಗಳಲ್ಲಿ ಸೇವೆ ಪ್ರಾರಂಭ, ಅನ್ನದಾನವಿಲ್ಲ – ಕೋಟ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು . ಸೆ.01:  ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಇಂದಿನಿಂದ ಸೇವೆ ಆರಂಭಿಸಬಹುದು. ಅನ್ನದಾನ ಮತ್ತು ಯಾವುದೇ ರೀತಿಯ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.   ಮಾಧ್ಯಮಗಳ ಮುಂದೆ ಮಾತಾಡಿದ ಅವರು, ಆರೋಗ್ಯ ಇಲಾಖೆಗೆ ಅನುಮತಿ ಕೋರಿದ್ದೇವೆ. ಇಂದಿನಿಂದ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಸೇವೆ ಪ್ರಾರಂಭಿಸಬೇಕು ಎಂದರು. ಕೊರೊನಾ ಮಾರ್ಗಸೂಚಿಯಂತೆ ನೂರಾರು ಜನರು ಸೇರುವ ಕಾರ್ಯಕ್ರಮಗಳಿಗೆ ಅವಕಾಶ

ಇಂದಿನಿಂದ ದೇವಾಲಯಗಳಲ್ಲಿ ಸೇವೆ ಪ್ರಾರಂಭ, ಅನ್ನದಾನವಿಲ್ಲ – ಕೋಟ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಬೆಂಗಳುರು ಸೆ.01:   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇದ್ರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರು ಬರೆದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ.   ತೀರ್ಥಹಳ್ಳಿ ಶಾಸಕ ಆರಗ ಜ್ನಾನೇದ್ರ ಅವರ ಕಾರು ಚಾಲಕನಿಗೆ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ Read More »

ಕರಾವಳಿ

ಮಾಜಿ ರಾಷ್ಟ್ರಪತಿ ಪ್ರಣಬ್ ಪುತ್ರಿಯಿಂದ ಭಾವೋದ್ವೇಗದ ಟ್ವೀಟ್

(ನ್ಯೂಸ್ ಕಡಬ) newskadaba.com  ನವದೆಹಲಿ. ಸೆ.01: ಕಳೆದ ದಿನ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ. ಪ್ರಣಬ್ ಮುಖರ್ಜಿ ನಿಧನಕ್ಕೆ ನಾನಾ ವಲಯಗಳ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ತಂದೆಯ ಮರಣದಿಂದ ಶೋಕಸಾಗರದಲ್ಲಿ ಮುಳುಗಿರುವ ಅವರ ಪುತ್ರಿ ಶರ್ಮಿಷ್ಟ ಮುಖರ್ಜಿ ಭಾವೋದ್ವೇಗದಿಂದ ಟ್ವೀಟ್ ಮಾಡಿದ್ದಾರೆ.ಎಲ್ಲರಿಗೂ ಧನ್ಯವಾದ ಎಂದು ಟ್ವೀಟ್ ಆರಂಭಿಸಿರುವ ಶರ್ಮಿಷ್ಟ ಅಪ್ಪ ಎಲ್ಲರೂ ನಿಮಗೆ ಅಂತಿಮ ವಿದಾಯ ಸಲ್ಲಿಸಲು ನಿಮ್ಮ ಅಚ್ಚುಮೆಚ್ಚಿನ ಕವಿಯ ಸಾಲುಗಳನ್ನು ಉಲ್ಲೇಖಿಸುವ

ಮಾಜಿ ರಾಷ್ಟ್ರಪತಿ ಪ್ರಣಬ್ ಪುತ್ರಿಯಿಂದ ಭಾವೋದ್ವೇಗದ ಟ್ವೀಟ್ Read More »

ರಾಷ್ಟ್ರೀಯ ನ್ಯೂಸ್

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಸೂಪರ್ ಮಾರ್ಕೆಟ್ ನಲ್ಲಿ ಆಗಸ್ಟ್ 25 ರಂದು ರಾತ್ರಿ ಸುಮಾರು ೨೫ ಸಾವಿರ ಮೌಲ್ಯದ ದಿನಸಿ ಸಾಮಾಗ್ರಿ ಹಾಗೂ ನಗದು ಕಳವು‌ ಮಾಡಿರುವ ಆರೋಪಿಯನ್ನು ಕೆಲವೇ ದಿನಗಳಲ್ಲಿ‌ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಯಿತು. ಬಂಧಿತ ಆರೋಪಿಯು ಮಂಗಳೂರು ತಾಲೂಕಿನ ಬೆಂಗ್ರೆ ಕಸಬ ನಿವಾಸಿಯಾದ ಮಹಮ್ಮದ್ ಅನ್ಸರ್ ಎಂದು ಗುರುತಿಸಲಾಗಿದ್ದು, ಈತನು ಈ ಹಿಂದೆ ಮಂಗಳೂರು ನಗರ ವ್ಯಾಪ್ತಿಯ ಪಾಂಡೇಶ್ವರ, ಬಂದರು,ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top