Kadaba

ಮಂಗಳೂರು |ಮಳೆಗೆ ನಲುಗಿದ ಕರಾವಳಿ ಭಾಗ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.08:  ದ.ಕ. ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕು ಸಹಿತ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಭಾರಿ ಗಾಳಿ ಮಳೆ ಮುಂದುವರಿದಿದ್ದು, ನೆರೆ-ಪ್ರವಾಹ, ಗುಡ್ಡ ಕುಸಿತ, ಮನೆಗಳಿಗೆ ಹಾನಿ ಮೊದಲಾದವುಗಳಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.   ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸ್ನಾನಘಟ್ಟ ಐದನೇ ದಿನವೂ ಮುಳುಗಡೆಯಾಗಿದೆ. ಇಲ್ಲಿನ ಶೌಚಗೃಹ, ದೇವರ ಅವಭೃತ ಕಟ್ಟೆ ಭಾಗಶಃ ಮುಳುಗಡೆಗೊಂಡಿದೆ. ಡ್ರೆಸ್ಸಿಂಗ್ ರೂಂ, ಲಗೇಜ್ ಕೊಠಡಿ, ರಕ್ಷಕರ ಕೊಠಡಿ ಒಳಗೊಂಡ ಕಟ್ಟಡ ಜಲಾವೃತಗೊಂಡಿದೆ. […]

ಮಂಗಳೂರು |ಮಳೆಗೆ ನಲುಗಿದ ಕರಾವಳಿ ಭಾಗ Read More »

ಕರಾವಳಿ, ಕರ್ನಾಟಕ

ಬಂಟ್ವಾಳ : ಟ್ರಾಫಿಕ್ ಕಂಟ್ರೋಲ್ ಪೋಲೀಸ ರಿಂದ ಹೆದ್ದಾರಿ ರಸ್ತೆ ದುರಸ್ತಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.08: ಲಾಠಿ ಹಿಡಿದು ಟ್ರಾಫಿಕ್ ಕಂಟ್ರೋಲ್ ಮಾಡುವ ಪೋಲೀಸರು ಹಾರೆ, ಬುಟ್ಟಿ ಹಿಡಿದು ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿದ್ದು ವ್ಯಾಪಕ ಪ್ರಶಂಸೆಗೆ ಕಾರಣವಾಯಿತು. ಇದು ಸಾಧ್ಯವಾಗಿದ್ದು ಬಿ.ಸಿ.ರೋಡಿನ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಮಾಡಿದ ಮಾದರಿ ಕಾರ್ಯದಿಂದಾಗಿ. ಭಾರೀ ಮಳೆಗೆ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡಗಳೆದ್ದು ವಾಹನ ಸವಾರರಿಗೆ ಭಾರೀ ಸಂಕಷ್ಟ ಎದುರಾಗಿತ್ತು. ಇದನ್ನೆಲ್ಲಾ ಕಂಡು ಸಂಚಾರ ನಿಯಂತ್ರಣ ಕರ್ತವ್ಯವನ್ನು ಮಾಡುವ ಪೊಲೀಸರೇ ಸ್ವತಃ ಹಾರೆ, ಬುಟ್ಟಿ ಹಿಡಿದು ಹೊಂಡಗಳನ್ನು ಮುಚ್ಚವ

ಬಂಟ್ವಾಳ : ಟ್ರಾಫಿಕ್ ಕಂಟ್ರೋಲ್ ಪೋಲೀಸ ರಿಂದ ಹೆದ್ದಾರಿ ರಸ್ತೆ ದುರಸ್ತಿ Read More »

ಕರಾವಳಿ, ಕರ್ನಾಟಕ

ಕಡಬ: ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.08:  ಕಳೆದ ದಿನ ಕಡಬ ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ದೃಡಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು 48 ಗಂಟೆ ಸೀಲ್ ಡೌನ್ ಮಾಡಲಾಗಿದೆ. ಕಚೇರಿಯ 59 ವರ್ಷ ಸಿಬ್ಬಂದಿಯ ಕೊವೀಡ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿತ್ತು.   ಈ ಹಿನ್ನಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕ ಮಾಹಿತಿ ಪಡೆಯಲಾಗುತ್ತಿದೆ. ಜೊತೆಗೆ ಕಚೇರಿಯನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.  

ಕಡಬ: ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆ.8., ಭಾರೀ ಗಾಳಿ, ಮಳೆಗೆ ಹಲಸಿನ ಮರವೊಂದು ಉರುಳಿಬಿದ್ದು, ಮನೆ ಹಾಗೂ ವಿದ್ಯುತ್ ಲೈನ್‍ಗೆ ಹಾನಿಯುಂಟಾದ ಘಟನೆ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ. ಕಲ್ಲುಗುಡ್ಡೆ ಕಾಂತಪ್ಪ ಅಜಿಲ ಎಂಬವರ ಮನೆ ಬಳಿಯ ಹಲಸಿನ ಮರ ಬುಡ ಸಮೇತ ಉರುಳಿ ಬಿದ್ದಿದ್ದು, ಮನೆಯ ಒಂದು ಭಾಗಕ್ಕೆ ಹಾನಿಯಾಗಿ, ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ ಇದರಿಂದ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯಗೊಂಡಿತ್ತು. ಸ್ಥಳಕ್ಕೆ ಕಂದಾಯ ಇಲಾಖೆಯವರು ಬಂದು ಪರಿಶೀಲನೆ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ Read More »

ಕರಾವಳಿ

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಆ.07:  ದ. ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ವರದಿಯಾಗಿದೆ.   ಆದರೆ ಆತ ಓಡಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಂಪಾಡಿ ಶಾರದಾ ನಗರದ ನಿವಾಸಿಯಾದ

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ➤ ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ.07: ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ.   ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ➤ ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಆರ್.ಅಶೋಕ್ ಭೇಟಿ ➤ 5 ಕೋಟಿ ರೂ. ಘೋಷಣೆ

(ನ್ಯೂಸ್ ಕಡಬ) newskadaba.com ಉಡುಪಿ , ಆ.07:  ಉಡುಪಿ ಜಿಲ್ಲೆ ಪಡುಬಿದ್ರೆಯ ಕಡಲ್ಕೊರೆತ ಪ್ರದೇಶಕ್ಕೆ ಇಂದು ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವ ಆರ್.ಅಶೋಕ್, ಉಡುಪಿ ಜಿಲ್ಲೆಯೂ ಸೇರಿದಂತೆ ರಾಜ್ಯದ ಹನ್ನೊಂದು ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ನಿಧಿಯಿಂದ ತಲಾ ಐದು ಕೋಟಿ ರುಪಾಯಿ ಬಿಡುಗಡೆ ಮಾಡುವುದಾಗಿ ಘೋಷಿಸಿದರು.     ಸದ್ಯ ಉಡುಪಿ-ಮಂಗಳೂರು, ಕಾರವಾರ ಪ್ರವಾಸದಲ್ಲಿದ್ದೇನೆ. ಅಧಿಕಾರಿಗಳನ್ನು ಅಲರ್ಟ್ ಮಾಡಲು ಈ ಪ್ರವಾಸ ಕೈಗೊಂಡಿದ್ದು, ಯಾವುದೇ ಅಧಿಕಾರಿಗಳು ರಜೆ

ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಆರ್.ಅಶೋಕ್ ಭೇಟಿ ➤ 5 ಕೋಟಿ ರೂ. ಘೋಷಣೆ Read More »

ಕರಾವಳಿ, ಕರ್ನಾಟಕ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರಗೂ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07:  ಕಳೆದ ಮೂರು ದಿನಗಳ ಹಿಂದಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಅವರ ಮಗ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಗ ಡಾ.ಯತೀಂದ್ರ ಅವರಿಬ್ಬರಿಗೂ ಕೊರೋನಾ ಸೋಂಕು ತಗುಲಿದೆ.     ಈ ಕುರಿತಂತು ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರಗೂ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

2020-21ರ ಸಾಲಿನ ಅಧ್ಯಕ್ಷೆಯಾಗಿ ಲಯನ್ ಅರುಂಧತಿ ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.07: ಲಯನ್ಸ ಕ್ಲಬ್ ಕಂಕನಾಡಿ ಪಡೀಲಿನ 2020-21ರ ಸಾಲಿನ ಅಧ್ಯಕ್ಷೆಯಾಗಿ ಲಯನ್ ಅರುಂಧತಿ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.   ಕಾರ್ಯದರ್ಶಿಯಾಗಿ ಲಯನ್ ಎಸ್. ಎಂ. ಐರನ್ ರವರು ಮತ್ತು ಖಜಾಂಚಿಯಾಗಿ ಲಯನ್ ಮಾಧವ ಉಳ್ಳಾಲ್ ಅವರು ಆಯ್ಕೆಯಾಗಿದ್ದಾರೆ.  

2020-21ರ ಸಾಲಿನ ಅಧ್ಯಕ್ಷೆಯಾಗಿ ಲಯನ್ ಅರುಂಧತಿ ಶೆಟ್ಟಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!!

(ನ್ಯೂಸ್ ಕಡಬ) newskadaba.com ಕೇರಳ: ಆ.07,.  ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಸ ಪ್ರಿಯರ ನೆಚ್ಚಿನ ತಾಣ, ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ 7 ಮಂದಿ ಮೃತ ಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಇದುವರೆಗೆ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!! Read More »

ರಾಷ್ಟ್ರೀಯ ನ್ಯೂಸ್
Scroll to Top