Kadaba

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.13: ಒಂದೆಡೆ ಕೊರೊನ ದಿನ ಕಳೆದಂತೆ ಏರಿಕೆ ಕಾಣುತ್ತಿರುವುದರಿಂದ ಇತ್ತ ಜುಲೈ 16 ರಿಂದ 27ರವರೆಗೆ ನಿಗಧಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದುಮಾಡಲಾಗಿದೆ. ಈ ಹಿಂದೆ ಈ ಪರೀಕ್ಷೆಯನ್ನು ಮುಗಿಸಿ ಜುಲೈ 30 ರಂದು ಫಲಿತಾಂಶವನ್ನು ಪ್ರಕಟಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣದಿಂದ ಈ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುತ್ತದೆ. ಆದರೆ ಹಾಜರಾತಿಯ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು […]

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು Read More »

ಕರ್ನಾಟಕ

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು,ಜು.13: ಪುತ್ತೂರು ಮಹಿಳಾ ಪೋಲೀಸ್ ಠಾಣೆಗೆ ಮತ್ತೆ ಕೊರೋನಾ ವಕ್ಕರಿಸಿದೆ. ಈ ಹಿಂದೆ ವಿಟ್ಲ ಪೋಲೀಸ್ ಕಾನ್ಸ್‌ಟೇಬಲ್ ಸಂಪರ್ಕ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಕೆಲವರನ್ನು ಕ್ವಾರೈಂಟೈನ್ ಗೆ ಒಳಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಠಾಣೆಯ ಯಾವೊಬ್ಬ ಸಿಬ್ಬಂದಿಯಲ್ಲೂ ಕೊರೋನಾ ಪಾಸಿಟಿವ್ ಪತ್ತೆಯಾಗಿರಲಿಲ್ಲ. ಆದರೆ ಈ ಬಾರಿ ಠಾಣೆಯ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಓರ್ವರಿಗೆ ಕೊರೋನಾ ದೃಢಪಟ್ಟಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯ ಕಾನ್ಸ್‌ಟೇಬಲ್‌ನಲ್ಲಿ ಪಾಸಿಟೀವ್ ಪತ್ತೆಯಾದ ಹಿನ್ನಲೆಯಲ್ಲಿ ಮಹಿಳಾ ಪೋಲೀಸ್

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಬಹರೈನ್, ಮಸ್ಕತ್‌ನಿಂದ ವಂದೇ ಭಾರತ್ ಯೋಜನೆಯಡಿ 334 ಮಂದಿ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಕೊರೋನ ಕಾರಣದಿಂದ ಬಹರೈನ್ ಹಾಗೂ ಮಸ್ಕತ್‌ನಲ್ಲಿದ್ದ ಸಿಲುಕಿದ್ದ ಒಟ್ಟು 334 ಅನಿವಾಸಿ ಕನ್ನಡಿಗರು ವಂದೇ ಭಾರತ್ ಯೋಜನೆಯಡಿ ರವಿವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಎಲ್ಲಾ ಪ್ರಯಾಣಿಕರಿಗೆ ಜಿಲ್ಲಾಡಳಿತದ ಸಾಂಸ್ಥಿಕ ಕ್ಬಾರಂಟೈನ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ನೋಡಲ್ ಅಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಸಂಜೆ 4:40ಕ್ಕೆ ಬಹರೈನ್‌ನಿಂದ 107 ಪುರುಷರು ಹಾಗೂ 49 ಮಹಿಳೆಯರು ಸೇರಿದಂತೆ 156 ಪ್ರಯಾಣಿಕರು ಆಗಮಿಸಿದ್ದಾರೆ. ಮಸ್ಕತ್‌ನಿಂದ ಸಂಜೆ 5:30ಕ್ಕೆ ಆಗಮಿಸಿದ ವಿಮಾನದಲ್ಲಿ 140 ಪುರುಷರು,

ಬಹರೈನ್, ಮಸ್ಕತ್‌ನಿಂದ ವಂದೇ ಭಾರತ್ ಯೋಜನೆಯಡಿ 334 ಮಂದಿ ಮಂಗಳೂರಿಗೆ Read More »

ಕರ್ನಾಟಕ

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಜತೆ, ತಾನು, ಸಂಸದರು, ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನಕ್ಕೆ ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಲಾಕ್‌ಡೌನ್

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ ,ಜು.13: ಕಡಬದ ಫೋಟೋಗ್ರಾಫರ್ ಒಬ್ಬರಿಗೆ ಇಂದು ಕೊರೋನಾ ಪಾಸಿಟಿವ್ ಬಂದಿದ್ದು, ಕಡಬದಲ್ಲಿ ಇದೀಗಾ ಆಂತಕ ಮನೆ ಮಾಡಿದೆ.  ದಿನಕಳೆದಂತೆ ಒಂದೊಂದೆ ಕೊರೋನಾ ಪ್ರಕರಣಗಳು ಕಡಬ ವಲಯದಲ್ಲಿ ಸದ್ದು ಮಾಡುತ್ತಿದೆ. ಸಾರ್ವಜನಿಕರು ಮಾತ್ರ ಇನ್ನು ಎಚ್ಚೆತ್ತುಕೊಳ್ಳದೆ, ಸಾಮಾಜಿಕ ಅಂತರ ಮರೆತು, ಮಾಸ್ಕ್ ಹಾಕದೆ ಬೇಕಾಬಿಟ್ಟಿಯಾಗಿ ಕಡಬ ಪೇಟೆಯಲ್ಲಿ ತಿರುಗುತ್ತಿದ್ದಾರೆ. ಇನ್ನಾದರೂ ಎಚೆತ್ತುಕೊಳ್ಳದಿದ್ದರೆ, ಕೊರೋನಾ ನಿಮ್ಮ ಮನೆ ಬಾಗಿಲಿಗೆ ಬಂದರು ಅಚ್ಚರಿ ಪಡಬೇಕಾಗಿಲ್ಲ.

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.13: ಮಾರಕ ಕೊವೀಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚಾಗುತ್ತಿದ್ದಂತೆ ಸರಕಾರ ತಾಳುಕಿನಲ್ಲಿರುವ ಆಸ್ಪತ್ರೆಗಲಲ್ಲೂ ಕೊರೋನಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷಯ ರೋಗ ಆಸ್ಪತ್ರೆಯನ್ನು ಕೊವೀಡ್ ಕೇಂದರವನ್ನಾಗಿ ಪರಿವರ್ತನೆ ಮಾಡಲಾಗಿದೆ.     ಈ ಕೇಂದ್ರದಲ್ಲಿ ಕೊರೋನಾ ದೃಢಪಟ್ಟಿರುವ, ಆದರೆ ಕ್ಷಯ ರೋಗ ಲಕ್ಷನವಿಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ Read More »

ಕರಾವಳಿ, ಕರ್ನಾಟಕ

ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವು ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ನಡುವೆ ದ.ಕ. ಜಿಲ್ಲೆಯಿಂದ ಸೋಮವಾರದಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.   ಈ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ದ.ಕ. ಜಿಲ್ಲೆಯಲ್ಲಿ ಇನ್ನು ಮುಂದೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದಾಗಿ ಸಚಿವರು ತಿಳಿಸಿದ್ದಾರೆ.ಈ

ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್ Read More »

ಕರಾವಳಿ, ಕರ್ನಾಟಕ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ದರೆ ಇತ್ತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿರುವ ರಾಜ್ಯ ಸರಕಾರ ಇಂದಿನಿಂದ ಮೌಲ್ಯಮಾಪನ್ಕೆ ಸಿದ್ದತೆ ಮಾಡಿಕೊಂಡಿದೆ. ಮಂಗಳೂರಿನ 8 ಕೇಂದ್ರದಲ್ಲಿ1300 ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತು ಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಮೌಲ್ಯಮಾಪನ ಆರಂಭವಾಗಲಿದೆ. ಕೊರೊನಾ ಭಯದಿಂದ ತಾಲೂಕು ಕೇಂದ್ರದಲ್ಲೇ ಮೌಲ್ಯಮಾಪನಕ್ಕೆ ಅವಕಾಶ ನೀಡಬೇಕು ಎನ್ನುವ ದ.ಕ ಜಿಲ್ಲೆಯ ಶಿಕ್ಷಕರ ಮನವಿಯನ್ನು ಸರಕಾರ ನಿರಾಕರಿಸಿದೆ. ಹೀಗಾಗಿ ಪ್ರತಿ ತಾಲೂಕಿನಿಂದ ಮೌಲ್ಯಮಾಪನಕ್ಕೆ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ Read More »

ಕರಾವಳಿ

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು !

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.12: ಕೋವಿಡ್ ಸೋಂಕಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಸಾವು ಸಂಭವಿಸಿದೆ. ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60ವರ್ಷ ಪ್ರಾಯದ ವೃದ್ಧ ರವಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣದಿಂದ 2 ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅದರ ವರದಿ ಕೈ ಸೇರಿದ್ದು ಸೋಂಕು ದೃಢ ಪಟ್ಟಿತ್ತು. ಮೃತ ದೇಹ ಮನೆಯಲಿದ್ದು ಸ್ಥಳಕ್ಕೆ ಪೊಲೀಸ್, ತಹಶೀಲ್ದಾರ್, ವೈದ್ಯರು ಭೇಟಿ ನೀಡಿ ಮುಂಜಾಗ್ರತಾ ಕ್ರಮ

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು ! Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‌ಡೌನ್‌ಗೆ ಉಡುಪಿ ಸ್ತಬ್ಧ

(ನ್ಯೂಸ್ ಕಡಬ) newskadaba.com ಉಡುಪಿ,ಜು.12: ಕೊರೊನಾ ವೈರಸ್‌  ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಾರಿ ಮಾಡಲಾಗಿರುವ ಸಂಡೇ ಲಾಕ್‌ಡೌನ್‌ಗೆ ಉಡುಪಿ ಜಿಲ್ಲೆಯಲ್ಲಿ ಕಳೆದ ವಾರದಂತೆ ಈ ವಾರವೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.ಭಾನುವಾರ ಎಲ್ಲಾ ಅಂಗಡಿಗಳು ಮುಚ್ಚಿದ್ದು ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿಲ್ಲ. ಹಾಗೆಯೇ ಪ್ರತಿ ವಾರ ಸಂತೆಕಟ್ಟೆಯಲ್ಲಿ ನಡೆಯುವ ವಾರದ ಸಂತೆಯೂ ಕೂಡಾ ಮುಚ್ಚಲಾಗಿದೆ. ಆರೋಗ್ಯ ಸೇವೆಗಳು ಮತ್ತು ಇತರ ಅಗತ್ಯ ಸೇವೆಗಳನ್ನು ಮಾತ್ರ ಸಾರ್ವಜನಿಕರಿಗೆ ತೆರೆಯಲಾಗಿದ್ದು ಪೊಲೀಸರು ಪ್ರತಿ ವಾಹನವನ್ನು ಪರಿಶೀಲಿಸುತ್ತಿದ್ದಾರೆ. ಅನಾವಶ್ಯಕವಾದ ಓಡಾಟಕ್ಕೆ ಅವಕಾಶವಿಲ್ಲ. ಜಿಲ್ಲೆಯಲ್ಲಿ ಜನರು ಸ್ವಯಂ

ಸಂಡೇ ಲಾಕ್‌ಡೌನ್‌ಗೆ ಉಡುಪಿ ಸ್ತಬ್ಧ Read More »

ಕರಾವಳಿ, ಕರ್ನಾಟಕ
Scroll to Top