Kadaba

ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ➤ ಅಭಿಷೇಕ್ ಬಚ್ಚನ್ ಟ್ವೀಟ್‌..!!!

(ನ್ಯೂಸ್ ಕಡಬ) newskadaba.com ಮುಂಬೈ. ಜು.12,. ಮಹಾಮಾರಿ ಕೊರೋನಾ ದೇಶವ್ಯಾಪ್ತಿ ಹಬ್ಬುತ್ತಿದೆ, ಮಹಾಮಾರಿ ಕೊರೋನಾ ದೇಶವ್ಯಾಪ್ತಿ ಹಬ್ಬುತ್ತಿದೆ, ಚಿತ್ರಕಲಾವಿದರು, ರಾಜಕರಣಿಗಳು, ಕೊರೋನಾ ವಾರಿಯರ್ಸ್ ಗಳನ್ನು ಬಿಟ್ಟಿಲ್ಲ ಈ ಕೊರೋನಾ. ಇದೀಗ ಅಭಿಷೇಕ್ ಬಚ್ಚನ್ ಅವರಿಗೂ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ರಾತ್ರಿ 11.57ಕ್ಕೆ ಈ ಬಗ್ಗೆ ಸ್ವತಃ ಟ್ವೀಟ್‌ ಮಾಡಿರುವ ಅವರು ಇವತ್ತು ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಬ್ಬರಲ್ಲೂ ಸಣ್ಣ ಮಟ್ಟದಲ್ಲಿ ಸೋಂಕಿನ ಲಕ್ಷಣ ಕಾಣಿಸಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದೇವೆ. […]

ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ➤ ಅಭಿಷೇಕ್ ಬಚ್ಚನ್ ಟ್ವೀಟ್‌..!!! Read More »

ರಾಷ್ಟ್ರೀಯ ನ್ಯೂಸ್

ಸಂಡೆ ಸ್ಪೇಶಲ್ ಲಾಕ್ ಡೌನ್ ಈ ಸಂಡೆಯೂ ಸ್ತಬ್ದವಾದ ದ.ಕ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.12: ಕೊರೊನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಂಡೇ ಕರ್ಫ್ಯೂಗೆ ಈ ರವಿವಾರವೂ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ಹೆದ್ದಾರಿ, ರಸ್ತೆಗಳಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಮಾತ್ರ ಸಂಚರಿಸುತ್ತಿವೆ. ನಗರದ ಪ್ರಮುಖ ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ನಗರದ ಒಳಭಾಗದಲ್ಲಿ ಮಾಂಸ, ತರಕಾರಿ, ಕೆಲ ದಿನಸಿ ಅಂಗಡಿಗಳು ತೆರೆದಿವೆ. ಬೆರಳೆಣಿಕೆಯ ಮಂದಿ ರಸ್ತೆ ಗಳಲ್ಲಿ ನಡೆದಾಟ ಹಾಗೂ ಖರೀದಿ ನಡೆಸುತ್ತಿದ್ದಾರೆ. ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬ್ಯಾರಿಕೇಡ್ ಗಳನ್ನು ಆಳವಡಿಸಿ ಪಹರೆ ನೀಡುತ್ತಿದ್ದಾರೆ.

ಸಂಡೆ ಸ್ಪೇಶಲ್ ಲಾಕ್ ಡೌನ್ ಈ ಸಂಡೆಯೂ ಸ್ತಬ್ದವಾದ ದ.ಕ Read More »

ಕರಾವಳಿ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ನೇತ್ರಾವತಿ ಸೇತುವೆಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಮದುಮಗ ಸಾವನ್ನಪ್ಪಿದ್ದು ಕಾರು ಚಲಾಯಿಸುತ್ತಿದ್ದ ಸೋಮೇಶ್ವರ ಪುರಸಭೆ ವ್ಯವಸ್ಥಾಪಕ ಕೃಷ್ಣ ಪರಾರಿಗೆ ಯತ್ನಿಸಿದ್ದಾರೆ. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಸುಬೇದ್ ಹಾಗೂ ಮಹಮ್ಮದ್ ಶಾಕೀರ್ ಆಕ್ಟಿವಾ ಸ್ಕೂಟರಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ,ಜು.11:  ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ  ಪ್ರಸಿದ್ಧ ದೇವಾಲಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ  ಕ್ಷೇತ್ರಕ್ಕೆ   ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹಾಗೂ ಅವರ ಪತ್ನಿ ಸಮೇತರಾಗಿ  ಭೇಟಿ ನೀಡಿ, ದೇವರ ದರ್ಶನ ಪಡೆದರು. ಕೊರೋನಾ ಆರ್ಭಟದ ನಡುವೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ.  ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!!

(ನ್ಯೂಸ್ ಕಡಬ) newskadaba.com ಸೂರತ್‍. ಜು.11. ಕೊರೊನಾ ನಂತರ ದೇಶಾದ್ಯಂತ ಫೇಸ್ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಅನೇಕರು ವಿವಿಧ ರೀತಿಯ ಮಾಸ್ಕ್ ತಯಾರಿಸಿಕೊಂಡು ಧರಿಸುತ್ತಿದ್ದಾರೆ. ಇದೀಗ ಗುಜರಾತ್‍ನ ಸೂರತ್‍ನಲ್ಲಿ ಆಭರಣ ಅಂಗಡಿಯೊಂದು 1.5 ಲಕ್ಷದಿಂದ 4 ಲಕ್ಷದವರೆಗಿನ ವಜ್ರದ ಮಾಸ್ಕ್ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಆಭರಣ ಅಂಗಡಿಯ ಮಾಲೀಕ ದೀಪಕ್ ಚೋಕ್ಸಿ, “ಲಾಕ್‍ಡೌನ್ ಸಡಿಲಗೊಳಿಸಿದ ನಂತರ ಗ್ರಾಹಕರೊಬ್ಬರು ನಮ್ಮ ಅಂಗಡಿಗೆ ಬಂದು, ನಮ್ಮ ಮನೆಯಲ್ಲಿ ವಿವಾಹ ನಡೆಯುತ್ತಿದೆ. ವಧು-ವರರಿಗೆ ವಿಶಿಷ್ಟವಾದ ಮಾಸ್ಕ್‌ಗಳನ್ನು ಮಾಡಿಕೊಂಡಿ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!! Read More »

ರಾಷ್ಟ್ರೀಯ ನ್ಯೂಸ್

ಮೂಡಿಗೆರೆ: ಚಾಲಕನಿಲ್ಲದೇ ತಾನಾಗೆ ಚಲಿಸಿದ ಕಾರು ➤ ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು.11.ಮಾರ್ಗ ಬದಿಯಲ್ಲಿ ನಿಲ್ಲಿಸಿದ್ದ ಕಾರು ಚಾಲಕನಿಲ್ಲದೇ ತಾನಾಗೆ ಚಲಿಸಿದ ಘಟನೆ ಜಿಲ್ಲೆಯ ಮೂಡಿಗೆರೆ ನಗರದಲ್ಲಿ ನಡೆದಿದೆ. ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಯುವತಿ ಕೂತಿದ್ದಳು. ಆದರೆ ಯುವತಿ ಕೂಡ ಕಾರಿನಿಂದ ಕೆಳಗಿಳಿದಿದ್ದಾಳೆ. ಯುವತಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ನಿಂತಿದ್ದ ಕಾರು ಚಾಲಕನಿಲ್ಲದೇ ತಾನಾಗೇ ಚಲಿಸಲು ಆರಂಭಿಸಿದೆ. ಎಲ್ಲರೂ ಕಾರು ತಾನಾಗೇ ಹೋಗುತ್ತಿದೆ ಎಂದು ಗಾಬರಿಗೊಳಗಾಗಿ ಅಕ್ಕಪಕ್ಕ

ಮೂಡಿಗೆರೆ: ಚಾಲಕನಿಲ್ಲದೇ ತಾನಾಗೆ ಚಲಿಸಿದ ಕಾರು ➤ ತಪ್ಪಿದ ಭಾರೀ ಅನಾಹುತ Read More »

ಕರ್ನಾಟಕ

ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ. ಶುಕ್ರವಾರ  CISF  ನ,  ASI ಮಂಗಳೂರಿನ ಸುರತ್ಕಲ್ ನ MRPL ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಬಲಿಯಾಗಿದ್ದಾರೆ. ಮಧುಮೇಹದಿಂದ ಸಮಸ್ಯೆಯಿಂದ ಬಳಲುತ್ತಿದ್ದರು.   ಇವರಿಗೆ ಕೊರೋನಾ ದೃಢಪಟ್ಟಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಆದರೆ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೋವಿಡ್ ವಾರಿಯರ್ ಆಗಿರುವ ಇವರು ಕಾರ್ಯನಿರ್ವಹಿಸುತ್ತಿದ್ದರು, ಇವರ ಸಾವಿಗೆ ಸಿಐಎಸೆಫ್ ಸಿಬ್ಬಂದಿ ತೀವ್ರ ಸಂತಾಪ ಸೂಚಿಸಿದ್ದಾರೆ .  

ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು Read More »

ಕರಾವಳಿ, ಕರ್ನಾಟಕ

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.11. ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿ ಬಸ್‍ಗಳು, ಬಾರ್, ಸೆಲೂನ್, ಮದ್ಯದಂಗಡಿ ಸಂಪೂರ್ಣ ಬಂದ್ ಆಗಲಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ಓಪನ್,

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!! Read More »

ಕರಾವಳಿ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಲಕ್ಷ್ಮೀನಗರ ನಿವಾಸಿ ಯೋಗೀಶ್ ಮನೆಗೆ ಶಾಸಕ ಕೆ. ರಘುಪತಿ ಭಟ್ ಶುಕ್ರವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜುಲೈ 6 ರ ಭಾನುವಾರ ರಾತ್ರಿ 11.30 ರ ಸುಮಾರಿಗೆ ಕಾರಿನಲ್ಲಿ ಆಗಮಿಸಿದ ಗ್ಯಾಂಗ್‌ನಿಂದ ಯೋಗೀಶ್ ಮೇಲೆ ಮಾರಣಾಂತಿಕ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.ಕೊಲೆ ಬಗ್ಗೆ ಮಾಹಿತಿ ದೊರೆತ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್

(ನ್ಯೂಸ್ ಕಡಬ) newskadaba.com.ಕಾರ್ಕಳ,ಜು.10: ಚಿನ್ನಾಭರಣಗಳ ಬಾಕ್ಸ್ ತಯಾರಿಕ ಫ್ಯಾಕ್ಟರಿಯಲ್ಲಿ ಆಕಸ್ಮಕಿ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮವಾದ ಘಟನೆ ಇಂದು ಬೆಳಗ್ಗೆ ಮುಂಡ್ಕೂರಿನಲ್ಲಿ ನಡೆದಿದೆ. ಕಾರ್ಕಳದ ತಾಲೂಕಿನ ಮುಂಡ್ಕೂರು ಗ್ರಾಮದ ಸುಧೀರ್ ಶೆಣೈ ಎಂಬವರಿಗೆ ಸೇರಿದ ಫ್ಯಾಕ್ಟರಿಯಾಯಲ್ಲಿ ಮುಂಜಾನೆ ಆಕಸ್ಮಿಕವಾಗಿ ಕಾಣಿಸಿ ಕೊಂಡ ಬೆಂಕಿ  ನೋಡನೋಡುತ್ತಲೆ ಹಬ್ಬಿ ಅಪಾರ ಸೊತ್ತುಗಳು ನಾಶವಾಗಿವೆ. ತಕ್ಷಣ ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್ Read More »

ಕರಾವಳಿ
Scroll to Top