Kadaba

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.   ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.26. ದ.ಕ. ಜಿಲ್ಲಾ ಗೃಹರಕ್ಷಕ ದಳದ ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ಆಚರಣೆ ಮತ್ತು ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳನ್ನು ಶುಕ್ರವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಮಾತನಾಡಿ ಈ ಮಾತ್ರೆ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ Read More »

ಕರಾವಳಿ

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.26: ಕೋವಿಡ್​​-19 ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಮತ್ತೆ ಲಾಕ್​ಡೌನ್​​​ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ಧಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೊರೋನಾ ವೈರಸ್​ ತಡೆಗೆ ಸರ್ವಪಕ್ಷಗಳ ಶಾಸಕರ ಸಭೆ ಕರೆದಿದ್ದೇವೆ. ಈ ಕೋವಿಡ್​​​-19 ಸೋಂಕು ನಿಯಂತ್ರಣೆಗೆ ಶಾಸಕರ ಅಭಿಪ್ರಾಯ ಮುಖ್ಯ. ಬೆಂಗಳೂರು ಮತ್ತೆ ಲಾಕ್​ಡೌನ್​ ಮಾಡುವ ಯೋಚನೆಯೇ ಇಲ್ಲ ಎಂದರು.   ಇತ್ತೀಚೆಗಷ್ಟೇ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಯತ್ತ ಸಾಗಿದೆ. ಹೀಗಾಗಿ ಬೆಂಗಳೂರು ಲಾಕ್​ಡೌನ್​

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ನಾಗಾಲೋಟ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.26: ಸತತ 20ನೇ ದಿನವೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗಿದ್ದು ಕಳೆದ 20 ದಿನಗಳಲ್ಲಿ ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 10.80 ರಷ್ಟು ಹಾಗೂ ಪೆಟ್ರೋಲ್‌ ಬೆಲೆ ಪ್ರತಿ ಲೀಟರ್‌ಗೆ 8.42ರಷ್ಟು ಹೆಚ್ಚಳ ಕಂಡಿದೆ. ಶುಕ್ರವಾರ ಪೆಟ್ರೋಲ್‌ಗೆ 21 ಪೈಸೆ ಹಾಗೂ ಡೀಸೆಲ್‌ಗೆ 17 ಪೈಸೆ ಏರಿಕೆಯಾಗಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೀಸೆಲ್‌ ದರ 80.13 ರೂ. ಹಾಗೂ ಪೆಟ್ರೋಲ್‌ ದರ 80.19 ರೂ. ಗೆ ತಲುಪಿದೆ. ರಾಜ್ಯ ರಾಜಧಾನಿ

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ನಾಗಾಲೋಟ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪುಂಜಾಲಕಟ್ಟೆ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರ ಕೈಚಳಕ

(ನ್ಯೂಸ್ ಕಡಬ) newskadaba.com.ಪುಂಜಾಲಕಟ್ಟೆ,ಜೂ.25: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಳಿಮಜಲು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಪುರುಷೋತ್ತಮ ಗೌಡ ಅವರ ಮನೆಯಲ್ಲಿ ಬುಧವಾರ ಕಳ್ಳತನ ನಡೆದಿರುವುದು. ಪುರುಷೋತ್ತಮ ಗೌಡ ಅವರು ಬೆಳಗ್ಗೆ ಮನೆ ಮಂದಿ ಸಹಿತ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ಎಂಬಲ್ಲಿಯ ತಮ್ಮ ಕೃಷಿ ಜಮೀನಿನ ಅಡಿಕೆ ತೋಟಕ್ಕೆ ಮದ್ದು ಬಿಡಲು ತೆರಳಿದ್ದು. ಮಧ್ಯಾಹ್ನ ಮನೆಗೆ ಬಂದು ಬಾಗಿಲ ಬೀಗ ತೆರಯಲು ಹೊದಾಗ ಅಚ್ಚರಿಯಾಗಿತ್ತು. ಮನೆಯಿಂದ ಹೊರಡುವಾಗ

ಪುಂಜಾಲಕಟ್ಟೆ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರ ಕೈಚಳಕ Read More »

ಕರ್ನಾಟಕ

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರು ವೇಳೆ

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜೂ.25: ಎಸ್.ಎಸ್.ಎಲ್. ಸಿ. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಓರ್ವಳು ಪರೀಕ್ಷಾ ಕೇಂದ್ರದಲ್ಲಿ ವಾಂತಿ ಮಾಡಿದ ಘಟನೆ ಬಿ.ಸಿ ರೋಡ್ ನ ಶಾಲೆಯೊಂದರಲ್ಲಿ ನಡೆದಿದೆ. ಪರೀಕ್ಷೆ ಬರೆಯಲು ಆರಂಭವಾದ ಬಳಿಕ ಏಕಾಏಕಿ ವಾಂತಿಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ವಿಶ್ರಾಂತಿ ಕೊಠಡಿಗೆ ಕಳುಹಿಸಲಾಯಿತು. ಕೂಡಲೇ ಸ್ಥಳಕ್ಕೆ ಬಂಟ್ವಾಳ ವೈದ್ಯಾಧಿಕಾರಿ ಭೇಟಿ ನೀಡಿ ಪರೀಕ್ಷೆ ನಡೆಸುತ್ತಿದ್ದಾರೆ. ಪರೀಕ್ಷೆ ನಡೆಸಿದ ಬಳಿಕ ಯಾವುದೇ ತೊಂದರೆಯಿಲ್ಲದಿದ್ದರೆ ಅವರನ್ನು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಅಂತಹ ತೊಂದರೆಗಳು ಏನಾದರೂ ಇದ್ದಲ್ಲಿ ವಿಶ್ರಾಂತಿ ನೀಡಿ ಅವರಿಗೆ

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರು ವೇಳೆ Read More »

ಕರಾವಳಿ

ಪಾಕ ಶಾಲೆಯಾದ ಪಾಠಶಾಲೆ ➤ ಬಾಣಸಿಗರಾದ ಉಪನ್ಯಾಸಕರು

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.25:  ಕೋವಿಡ್ 19 ಆರ್ಥಿಕ ಸಂಕಷ್ಟವನ್ನು ಎದುರಿಸುವ ಸಲುವಾಗಿ ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆಯು ಸದ್ಯದ ಮಟ್ಟಿಗೆ ಪಾಠದ ಬದಲು ಪಾಕಶಾಲೆಯಾಗಿ ಬದಲಾಗಿದೆ. ವಿದ್ಯಾಲಯದ ಬೋದಕ ಹಾಗೂ ಬೋಧಕೇತರ ವರ್ಗದಿಮದ ಆಹಾರೋತ್ಪನ್ನಗಳನ್ನು ತಯಾರಿಸುವ ಪ್ರಯತ್ನ ಆರಂಭಗೊಂಡಿದ್ದು, ಬದುಕಿನ ಪಾಠಕ್ಕೆ ವಿದ್ಯಾಲಯ ಸಾಕ್ಷಿಯಾಗಿದೆ. ಕೋವಿಡ್ -19 ಪರಿಣಾಮ ಈ ವರ್ಷ ವಿದ್ಯಾಲಯದ ಪ್ರವೇಶಾತಿ ಆರಂಭಗೊಂಡಿಲ್ಲ. ಇದರಿಂದ ಎಲ್ಲ ಶಾಳಾ ಕಾಲೇಜುಗಳಳತೆ ಅಂಬಿಕಾ ವಿದ್ಯಾಲಯವೂ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆದರೆ ಪುತ್ತೂರಿನ ಅಂಬಿಕಾ ವಿದ್ಯಾಲಯವು “ಶಿವಂ

ಪಾಕ ಶಾಲೆಯಾದ ಪಾಠಶಾಲೆ ➤ ಬಾಣಸಿಗರಾದ ಉಪನ್ಯಾಸಕರು Read More »

ಕರಾವಳಿ, ಕರ್ನಾಟಕ

ಉಳ್ಳಾಲದ ಖಾಸಗಿ ಆಸ್ಪತ್ರೆ ಸೀಲ್ಡೌನ್

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜೂ.25: ಉಳ್ಳಾಲದ ಆಝಾದ್ ನಗರದ  57 ವರ್ಷದ ಮಹಿಳೆ ಬುಧವಾರ ಸಾವನ್ನಪ್ಪಿದ ಬಳಿಕ ಉಳ್ಳಾಲದ ಖಾಸಗಿ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಸೀಲ್ಡೌನ್ ಮಾಡಲಾಗಿದೆ. ತೊಕ್ಕೊಟಿನ ಖಾಸಗಿ ಆಸ್ಪತ್ರೆಗೆ ಉಳ್ಳಾಲದ ಆಝಾದ್ ನಗರದ 57 ವರ್ಷದ ಮಹಿಳೆ ಭೇದಿ ಕಾರಣದಿಂದ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದರು. ಆದರೆ ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ  ೮ ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದು ವರದಿ ಬಂದಾಗ ಸೋಂಕು

ಉಳ್ಳಾಲದ ಖಾಸಗಿ ಆಸ್ಪತ್ರೆ ಸೀಲ್ಡೌನ್ Read More »

ಕರಾವಳಿ

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜೂ.25:  ಅಕ್ರಮ ಗೋಸಾಗಾಟಕ್ಕೆ ಬೆಳಂಬೆಳಗ್ಗೆ ಧರ್ಮಸ್ಥಳ ಪೊಲೀಸರು ಬ್ರೇಕ್ ಹಾಕಿದ್ದಾರೆ. ಚಿತ್ರದುರ್ಗದಿಂದ ನೆಚ್ಚೆಪದವು, ವರ್ಕಾತಿ ಕೇರಳಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ, ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಾಸ್ಥಳ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದಲ್ಲಿ ಲಾರಿ ಮತ್ತು ದನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಲಾದ ಮಹಮ್ಮದ್ ಹಫೀಜ್, ಮಹಮ್ಮದ್ ಅಝರಿದ್ದೀನ್ ಹಾಗೂ ಡ್ರೈವರ್ ನರೇಶ್ ರವರನ್ನ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.  

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.25: ಸ್ವಿಪ್ಟ್ ಕಾರೊಂದು ಅತಿವೇಗ ಮತ್ತು ಅಜಾರೂಗತೆಯಿಂದ ಚಲಿಸಿ ಆಕ್ಟಿವಾ ಸ್ಕೂಟರ್ ಮತ್ತು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ ಗಾಯಗೊಂಡು ಮೃತ ಪಟ್ಟ ಗಟನೆ ನಗರದ ಹೊರ ವಲಯದ ಬೆಂಜನಪದವು ದಿವ್ಯ ಜ್ಯೋತಿ ಅಂಗಡಿ ಎದುರು ಬುಧವಾರ ನಡೆದಿದೆ.     ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ 23 ವರ್ಷದ ಶ್ಯಾಮಲಾ ಎಂಬ ಯುವತಿ ಗಂಭೀರಾ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತ ಪಟ್ಟ ಶ್ಯಾಮಲಾ ಎಂಬುವವರು ಬಂಟ್ವಾಳದ ಕ್ಷೇತ್ರ ಶಿಕ್ಷಣ

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top