Kadaba

ಕೋವಿಡ್ -19 ಸಂಕಷ್ಟ➤ ನಷ್ಟದ ಭೀತಿಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.21:   ಕೋವಿಡ್ 19 ಸಂಕಷ್ಟದಿಂದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಹಿವಾಟಿಗೂ ತೊಮದರೆ ಉಂಟಾಗಿದೆ. ಒಕ್ಕೂಟದಲ್ಲಿ ಹಾಲು ಶೇಖರಣೆ ಏರಿಕೆಯಾಗಿದ್ದು, ನಿತ್ಯ 5 ಲಕ್ಷ ಕೆ.ಜಿ. ಗೂ ಸಧೀಕ ಹಾಲು ಸಂಗ್ರಹಣೆಯಾಗುತ್ತಿದೆ. ಕೋವಿಡ್ -19 ರ ಸಮಸ್ಯೆಯಿಮದ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಕರ್ನಾಟಕ ಹಾಲು ಮಹಾಮಂಡಳಿಗೆ ನಿತ್ಯ ಮಹಾಮಂಡಳಿಗೆ ನಿತ್ಯ 86.73 ಲಕ್ಷ ಲೀಟರ್ ಹಾಲು ಸಂಗ್ರಹನೆಯಾಗುತ್ತಿದ್ದು, ರಾಜ್ಯದಲ್ಲಿ ಹಾಲು ಮತ್ತು […]

ಕೋವಿಡ್ -19 ಸಂಕಷ್ಟ➤ ನಷ್ಟದ ಭೀತಿಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ Read More »

ಕರಾವಳಿ, ಕರ್ನಾಟಕ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿದ್ದ ಬಾಲಕನಿಗೆ ಕೊರೊನಾ

(ನ್ಯೂಸ್ ಕಡಬ) newskadaba.com.ಬೆಳಗಾವಿ,ಜೂ.21:ಜೂನ್ 25 ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿದ್ದ 16 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಬೆಳಗಾವಿ ಜಿಲ್ಲೆಯ ಚ.ಕಿತ್ತೂರು ತಾಲೂಕಿನ ಕಲಬಾಂವಿಯಲ್ಲಿ ನಡೆದಿದೆ. ಈ ಬಾಲಕ ಹೊರರಾಜ್ಯದ ಹಿನ್ನೆಲೆ ಹೊಂದಿದ್ದರಿಂದ ಸೋಂಕು ತಗುಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈತ ಕಲಬಾಂವಿಯಲ್ಲಿ ಮುಂಬರಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿತ್ತು ಆದರೆ ಈಗ ಆತನಿಗೆ ಸೋಂಕು ತಗುಲಿರುವುದರಿಂದ ಪರೀಕ್ಷೆ ಎದುರಿಸುವುದು ಅನುಮಾನ ಎಂದೇ ಹೇಳಲಾಗುತ್ತಿದೆ. ಬಾಲಕ ಈ ಹಿಂದೆ ಚೆನ್ನೈನಲ್ಲಿರುವ ಆತನ ಅಕ್ಕನ ಮನೆಗೆ ಹೋಗಿ ಬಂದಿದ್ದ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿದ್ದ ಬಾಲಕನಿಗೆ ಕೊರೊನಾ Read More »

ಕರಾವಳಿ, ಕರ್ನಾಟಕ

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21: ಕುದ್ರೋಳಿಯ ವಧಾಗೃಹದಿಂದ ಕಂಕನಾಡಿಯ ಮಾರುಕಟ್ಟೆಗೆ ಮಾಂಸ ಸಾಗಾಟಕ್ಕೆ ಅಡ್ಡಿಪಡಿಸಿ , ಚಾಲಕನಿಗೆ ಹಲ್ಲೆಗೈದ ಕೃತ್ಯ ರವಿವಾರ ಬೆಳಗ್ಗೆ ಕಂಕನಾಡಿ ಬಳಿ ನಡೆದಿದೆ. ಕುದ್ರೋಳಿಯ ರಶೀದ್ ಎಂಬವರು ತನ್ನ ರಿಕ್ಷಾ ಟೆಂಪೋದಲ್ಲಿ ಕಂಕನಾಡಿ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಹೊಂದಿರುವ ಝಾಕಿರ್ ಎಂಬವರ ಅಂಗಡಿಗೆ ಸುಮಾರು 200 ಕೆಜಿಯಷ್ಟು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದರು. ಸುಮಾರು ಐದಾರು ಮಂದಿಯನ್ನೊಳಗೊಂಡ ದುಷ್ಕರ್ಮಿಗಳ ತಂಡವು ಕಾರು ಮತ್ತು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಹೈಲ್ಯಾಂಡ್ ಆಸ್ಪತ್ರೆ-ಕಂಕನಾಡಿ

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡೇಶ್ವಾಲ್ಯ ಬೆಂಕಿ ಅವಘಡಕ್ಕೆ ತುತ್ತಾಗಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com.ಬಂಟ್ಚಾಳ,ಜೂ.21:ಬೆಂಕಿ ತಗುಲಿ ಸುಟ್ಟ ಗಾಯಗೊಂಡಿದ್ದ ಕಡೇಶ್ವಾಲ್ಯ ಗ್ರಾಮದ ನೆತ್ತರಮನೆ ನಿವಾಸಿ ಮಹಿಳೆ ಹರಿಣಾಕ್ಷಿ(35) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ  ನಡೆದಿದೆ. ಜೂ. 2 ರಂದು ಮನೆಯಲ್ಲಿ ಗ್ಯಾಸ್ ಖಾಲಿಯಾದ ಹಿನ್ನೆಯಲ್ಲಿ ಕಟ್ಟಿಗೆಯ ಒಲೆಯಲ್ಲಿ ತಿಂಡಿ ಮಾಡುತ್ತಿದ್ದ ವೇಳೆ ಬೆಂಕಿ ಆಕಸ್ಮಿಕವಾಗಿ ಅವರು ಧರಿಸದ್ದ ಬಟ್ಟೆಗೆ ತಗುಲಿತ್ತು ಇದರಿಂದ ದೇಹಕ್ಕೆ ತೀವ್ರ ಸುಟ್ಟಗಾಯಗಳಾಗಿತ್ತು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು ಆದರೆ ಮತ್ತೆಗಾಯ ಉಲ್ಬಣಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಡೇಶ್ವಾಲ್ಯ ಬೆಂಕಿ ಅವಘಡಕ್ಕೆ ತುತ್ತಾಗಿದ್ದ ಮಹಿಳೆ ಮೃತ್ಯು Read More »

ಕರಾವಳಿ

ಬೆಳ್ಳಾರೆ : ಹಸಿಕಸ-ಒಣಕಸ ಪ್ರತ್ಯೇಕಿಸಲು ಗೋಣಿಚೀಲ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜೂ.20:  ಸ್ವಚ್ಚತೆಗೆ ಮೊದಲ ಆದ್ಯತೆಯನ್ನ ನೀಡುವ ನಿಟ್ಟಿನಲ್ಲಿ ಹಾಗೂ ಕಸ ವಿಲೇವಾರಿಯಾಗುವ ವೇಲೆ ಸಮಸ್ಯೆಯಾಗದಂತೆ, ತ್ಯಾಜ್ಯಗಳ ನಿರ್ವಹಣೆಗೆ ಬೆಳ್ಳಾರೆಯಲ್ಲಿ ವಿನೂತನ ಕಾರ್ಯವನ್ನ ಮಾಡಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜದ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಹಸಿಕಸ ಮತ್ತು ಒಣಕಸವಾಗಿ ಪ್ರತ್ಯೇಕವಾಗಿ ವಿಂಗಡಿಸಿ ತ್ಯಾಜ್ಯ ವಾಹನಕ್ಕೆ ಹಾಕುವ ಉದ್ದೇಶದಿಂದ, ಪ್ರತಿ ಅಂಗಡಿಗೆ ಮತ್ತು ಮನೆಗಳಿಗೆ ಗೋಣಿಚೀಲವನ್ನು ಕಛೇರಿ ಆವರಣದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿಬೃದ್ದಿ8

ಬೆಳ್ಳಾರೆ : ಹಸಿಕಸ-ಒಣಕಸ ಪ್ರತ್ಯೇಕಿಸಲು ಗೋಣಿಚೀಲ ವಿತರಣೆ Read More »

ಕರಾವಳಿ, ಕರ್ನಾಟಕ

ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಉಡುಪಿ,ಜೂ.20: ಕೊರೋನಾ ತನ್ನ ಕಬಂಧ ಬಾಹುವನ್ನ ಕರಾವಳಿಯಲ್ಲಿ ವಿಸ್ತರಿಸುತ್ತಲೇ ಇದೆ,  ಅನಾರೋಗ್ಯದಿಂದ ಬಳಲುತ್ತಿದ್ದ ಮುಂಬೈನಿಂದ ವಾಪಸಾದ ತೆಕ್ಕಟ್ಟೆ ವ್ಯಕ್ತಿ ನಿನ್ನೆ ಮೃತಪಟ್ಟಿದ್ದು, ಇದೀಗ ಮೃತ ವ್ಯಕ್ತಿಯ ಪತ್ನಿ ಹಾಗೂ ಮಗನಿಗೆ ಕೂಡ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಇಬ್ಬರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವ ಆರೋಗ್ಯ ಇಲಾಖೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಮೃತ ವ್ಯಕ್ತಿ ಮುಂಬೈಯಿಂದ ಬರುವಾಗ ಪತ್ನಿ, ಪುತ್ರ ಮತ್ತು ಡ್ರೈವರ್ ಜೊತೆಗೆ ಬಂದಿದ್ದರು. ಆದರೆ ಡ್ರೈವರ್ ಪರೀಕ್ಷಾ ವರದಿ ಮಾತ್ರ ನೆಗೆಟಿವ್

ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಪ್ಯಾಕೇಜ್ ಬದಲಾವಣೆಗೆ ಹೆದ್ದಾರಿ ಪ್ರಾಧಿಕಾರ ನಿರ್ಧಾರ ➤ವೇಗ ಪಡೆಯಲಿದೆ ಅಡ್ಡಹೊಳೆ-ಬಿ.ಸಿ.ರೋಡ್ ಚತುಷ್ಪಥ ಕಾಮಗಾರಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.20:ಕುಂಟತ್ತ ಸಾಗುತ್ತಿರುವ ಬಿ.ಸಿರೋಡ್-ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಂಕ್ರೀಟ್ ಕಾಮಗಾರಿಯ ಗುತ್ತಿಗೆಯನ್ನು ಒಬ್ಬರಿಗೆ ವಹಿಸುವ ಬದಲು ಮೂರು ಹಂತಗಳಾಗಿ ವಿಭಜಿಸಿ ಪ್ರತ್ಯೇಕ ಮೂರು ಟೆಂಡರ್ ಮೂಲಕ ಪೂರ್ಣಗೊಳಿಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಬಿ.ಸಿ ರೋಡ್‍ನಿಂದ ಅಡ್ಡಹೊಳೆಯವರೆಗಿನ ರಸ್ತೆ ಕಾಮಗಾರಿಯನ್ನು ಎಲ್ ಆ್ಯಂಡ್ ಟಿ ಕಂಪೆನಿ ಮಾತ್ರ ವಹಿಸಿತ್ತು. ಆದರೆ,ಒಂದೇ ಕಂಪೆನಿಗೆ ಈ ಕಾಮಗಾರಿ ನಡೆಸಲು ಕಷ್ಟ ಹಾಗೂ ಅರಣ್ಯ ಇಲಾಖೆ ಸಂಬಂಧಿತ ವಿವಿಧ ಇಲಾಖೆಗಳ ಒಪ್ಪಿಗೆ ಪಡೆಯಲು ಸಮಸ್ಯೆಗಳಿವೆ ಎಂಬ ಏಕ ಪ್ಯಾಕೇಜ್

ಪ್ಯಾಕೇಜ್ ಬದಲಾವಣೆಗೆ ಹೆದ್ದಾರಿ ಪ್ರಾಧಿಕಾರ ನಿರ್ಧಾರ ➤ವೇಗ ಪಡೆಯಲಿದೆ ಅಡ್ಡಹೊಳೆ-ಬಿ.ಸಿ.ರೋಡ್ ಚತುಷ್ಪಥ ಕಾಮಗಾರಿ Read More »

ಕರಾವಳಿ

ನಾಳೆ ಸೂರ್ಯ ಗ್ರಹಣದ ಹಿನ್ನಲೆ ➤ ಕರಾವಳಿಯ ಹಲವು ದೇಗುಲಗಳು ಬಂದ್

(ನ್ಯೂಸ್ ಕಡಬ) newskadaba.com ಕರಾವಳಿ ,ಜೂ.20:  ಜೂ.21ರಂದು ನಭೋ ಮಂಡಲದಲ್ಲಿ ಅಪರೂಪದ ಸೂರ್ಯ ಗ್ರಹಣ ಸಂಭವಿಸಲಿದೆ. ಭಾರತದಲ್ಲಿ ರಾಜಸ್ಥಾನ, ಹರಿಯಾಣ, ಉತ್ತರಾಖಂಡಗಳ ಕೆಲವು ಪ್ರದೇಶಗಳಲ್ಲಿ ಕಂಕಣ ಸೂರ್ಯ ಗ್ರಹಣ ಆದರೆ ಉಳಿದ ಪ್ರದೇಶದಲ್ಲಿ ಪಾರ್ಶ್ವ ಸೂರ್ಯ ಗ್ರಹಣ ಗೋಚರಿಸಲಿದೆ. 21. 6. 2020 ಆದಿತ್ಯವಾರ ಖಂಡ ಗ್ರಾಸ ಸೂರ್ಯಗ್ರಹಣವು ಇರುವುದರಿಂದ ದೇವಸ್ಥಾನಗಳಲ್ಲಿ ಪೂಜಾ ಸಮಯವನ್ನು ಬದಲಾವಣೆ ಗೊಳಿಸಲಾಗಿದೆ. ಬೆಳಿಗ್ಗೆ 10.06 ರಿಂದ ಮಧ್ಯಾಹ್ನ ಗಂಟೆ 1.23 ನಿಮಿಷದ ವರೆಗೆ ಸೂರ್ಯನಿಗೆ ರಾಹು ಗ್ರಹಣ ಸಂಭವಿಸಲಿರುವುದು.   ಪುತ್ತೂರು

ನಾಳೆ ಸೂರ್ಯ ಗ್ರಹಣದ ಹಿನ್ನಲೆ ➤ ಕರಾವಳಿಯ ಹಲವು ದೇಗುಲಗಳು ಬಂದ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ.20:  ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ ಅಕ್ರಮ ವೆಬ್ಸೈಟ್ ಮೂಲಕ ಆನ್ಲೈನ್ ಸೇವೆ ಬುಕ್ಮಾಡುತ್ತಿದ್ದ ಹಾಗೂ ಈಗ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್ಲೈನ್ ಸೇವೆ ನಡೆಸಲು ಅವಕಾಶ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.   ವ್ಯಕ್ತಿಯೊಬ್ಬರು ನಿರ್ವಹಿಸುತಿರುವ ವೆಬ್ಸೈಟ್ ಸುಬ್ರಹ್ಮಣ್ಯದಲ್ಲಿ ನಡೆಸಲಾಗುತ್ತಿರುವ ಸೇವೆಗಳನ್ನು ಅಕ್ರಮವಾಗಿ ಬುಕ್ ಮಾಡಿ ದೇವಸ್ಥಾನಕ್ಕೆ ವಂಚನೆ ನಡೆಸುತ್ತಿದ್ದು, ಇದು ಸೇರಿದಂತೆ ಮೂರು ವೆಬ್ಸೈಟ್ಗಳ ವಿರುದ್ಧ ಈ ಹಿಂದೆ ಪ್ರಕರಣ ದಾಖಲಿಸಲಾಗಿತ್ತು.

ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಏರ್ ಲಿಫ್ಟ್ ಮೂಲಕ ಕತಾರ್ ನಿಂದ ಮಂಗಳೂರಿಗೆ ಬಂದಿಳಿದ 185 ಕನ್ನಡಿಗರು

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.20:ಕತಾರ್ ನ ದೋಹಾದಿಂದ 185 ಪ್ರಯಾಣಿಕರನ್ನು ವಂದೇ ಭಾರತ್ ಮಿಷನ್‍ನಡಿ ಏರ್ಲಿಫ್ಟ್ ಮೂಲಕ ಸುರಕ್ಷಿತವಾಗಿ ಮಂಗಳೂರಿಗೆ ಕರೆತರಲಾಯಿತು. ಹಮಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಯನ್ ಏರ್‍ಲೈನ್ಸ್ ವಿಮಾನದಲ್ಲಿ 185 ಪ್ರಯಾಣಿಕರು ಬಂದಿಳಿದರು. ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರು ಮಾಸ್ಕ್, ಗ್ಲೌಸ್,ಫೇಸ್ ಕವರ್‍ಗಳನ್ನು ಧರಿಸಿದ್ದರು. ಕನ್ನಡಿಗರನ್ನು ಮರಳಿ ತಾಯ್ನಾಡಿಗೆ ಕಳುಹಿಸಲು ಕತಾರ್ ಭಾರತೀಯ ಸಮುದಾಯ ಹಿತೈಷಿ ವೇದಿಕೆ ಮತ್ತು ಕತಾರ್‍ನ ಭಾರತೀಯ ರಾಯಭಾರಿ ಕಛೇರಿಯು ಪ್ರಮುಖ ಪಾತ್ರ ವಹಿಸಿದೆ.ವಿಶೇಷ ವಿಮಾನದ ಮೂಲಕ ತಾಯ್ನಾಡಿಗೆ ಬರಲು ಸಹಕರಿಸಿದ ಎಲ್ಲಾರಿಗೂ

ಏರ್ ಲಿಫ್ಟ್ ಮೂಲಕ ಕತಾರ್ ನಿಂದ ಮಂಗಳೂರಿಗೆ ಬಂದಿಳಿದ 185 ಕನ್ನಡಿಗರು Read More »

ಕರಾವಳಿ, ಕರ್ನಾಟಕ
Scroll to Top