Kadaba

ಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು ➤ ಸಭೆಯಲ್ಲಿ ಉಡುಪಿ DC ಎಚ್ಚರಿಕೆ

(ನ್ಯೂಸ್ ಕಡಬ) newskadaba.com  ಉಡುಪಿ,ಜೂ.12:  ಜಿಲ್ಲೆಯಲ್ಲಿ ಸಂಚರಿಸುವ ಎಲ್ಲ ಬಸ್ಗಳಲ್ಲಿ ನಿಗದಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಬಸ್ಗಳ ವಿರುದ್ಧ ಎಪಿಡಮಿಕ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ. ಕೋವಿಡ್ -19 ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಆವಶ್ಯಕವಾಗಿದೆ. ಬಸ್ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಕರೆದೊಯ್ಯುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಂತಹ ಬಸ್ಗಳ […]

ಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು ➤ ಸಭೆಯಲ್ಲಿ ಉಡುಪಿ DC ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಬಾರ್ಯ ಗ್ರಾಪಂ ಪಿಡಿಒ ಸಹಿತ ಒಂಬತ್ತು ಮಂದಿಗೆ ದಂಡ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.12:ಕುಡಿವ ನೀರಿನ ಬಿಲ್‍ನ್ನು ದುರುಪಯೋಗಪಡಿಸಿಕೊಂಡು ಅವ್ಯವಹಾರ ನಡೆಸಿರುವ ಪ್ರಕರಣಕ್ಕೆ ಸಂಬಂದಪಟ್ಟಂತೆ ಗ್ರಾಪಂ ಪಿಡಿಒ ಸಹಿತ ಒಂಬತ್ತುಮಂದಿಗೆ ದಂಡ ವಿಧಿಸಿರುವ ಪ್ರಕರಣ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಪಂನಲ್ಲಿ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಪಂನಲ್ಲಿ 2017-2018ನೇ ಸಾಲಿನಲ್ಲಿ ಲೆಕ್ಕಪರಿಶೋಧನೆಯಲ್ಲಿ ಗ್ರಾಪಂನಲ್ಲಿ ರಶೀದಿ ಪುಸ್ತಕಗಳ ದುರುಪಯೋಗಪಡಿಸಿಕೊಂಡು ನೀರಿನ ವಸೂಲಿಯಲ್ಲಿ6,92,377 ರೂ ಮತ್ತು 3,99,731 ರೂ. ಸೇರಿದಂತೆ ಒಟ್ಟು 10,92,108 ರೂ ಮೊತ್ತವನ್ನು ಬ್ಯಾಂಕ್‍ನಲ್ಲಿರುವ ಖಾತೆಗೆ ಜಮೆ ಮಾಡದೆ. ನಂತರ ಸಾರ್ವಜನಿಕರ ದೂರು ಬಂದ ಬಳಿಕ

ಬಾರ್ಯ ಗ್ರಾಪಂ ಪಿಡಿಒ ಸಹಿತ ಒಂಬತ್ತು ಮಂದಿಗೆ ದಂಡ Read More »

ಕರಾವಳಿ

ಕೊರೊನಾ ವೈರಸ್ ➤ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ

(ನ್ಯೂಸ್ ಕಡಬ) newskadaba.com ,ಜೂ.12: ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪೈಕಿ ಭಾರತ ಇದೀಗ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದೆ. ಗುರುವಾರ ಒಂದೇ ದಿನ 10,956 ಜನರಿಗೆ ಕೊರೊನಾ ವೈರಸ್ ತಗುಲಿದ್ದು ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,535ಕ್ಕೆ ಏರಿಕೆಯಾಗಿದೆ.ಮೊದಲ ಬಾರಿಗೆ ಭಾರತದಲ್ಲಿ ದಿನವೊಂದರಲ್ಲಿಯೇ ಹತ್ತು ಸಾವಿರ ಸೋಂಕು ವರದಿಯಾಗಿದೆ.ಈ ಮೂಲಕ ಬ್ರಿಟನ್ ದೇಶವನ್ನು ಭಾರತ ಹಿಂದಿಕ್ಕಿಂತಾಗಿದ್ದು, ರಷ್ಯಾ, ಬ್ರೆಝಿಲ್ ಮತ್ತು ಅಮೆರಿಕ ದೇಶಗಳು ಮಾತ್ರ ಇದೀಗ ಭಾರತಕ್ಕಿಂತ ಹೆಚ್ಚಿನ ಸೋಂಕಿತರನ್ನು ಹೊಂದಿದೆ.   ರಷ್ಯಾದಲ್ಲಿ

ಕೊರೊನಾ ವೈರಸ್ ➤ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ Read More »

ರಾಷ್ಟ್ರೀಯ ನ್ಯೂಸ್

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಗುಳಿಕ್ಕಾನ ಸಂತ್ರಸ್ತರ ಪ್ರದೇಶಕ್ಕೆ ಭೇಟಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಜೂ.12: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಮಾಸಿಕ ಮಹಾಸಭೆ ಗುರುವಾರ ಸುಬ್ರಹ್ಮಣ್ಯ – ಐನೆಕಿದು ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಭಾಂಗಣದಲ್ಲಿ ಜರಗಿತು. ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ಕಲ್ಮಕ್ಕಾರು ಗ್ರಾಮ ಗುಳಿಕ್ಕಾನದ 9 ಕುಟುಂಬಗಳಿಗೆ ಸರಕಾರ ಬಿಡುಗಡೆಗೊಳಿಸಿದ ಪರಿಹಾರ ಮೊತ್ತ ವಿನಿಯೋಗ ಮತ್ತು ನಿವೇಶನ ಮಂಜೂರಾತಿ ಸಮಸ್ಯೆ ಪರಿಹಾರಕ್ಕಾಗಿ ವೇದಿಕೆ ನಿಯೋಗ ಶೀಘ್ರ ಸ್ಥಳ ಪರಿಶೀಲನೆಗೆ ತೆರಳಲು ಸಭೆಯಲ್ಲಿ ನಿರ್ಧರಿಸಲಾಯಿತು.   ವೇದಿಕೆಯ

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಗುಳಿಕ್ಕಾನ ಸಂತ್ರಸ್ತರ ಪ್ರದೇಶಕ್ಕೆ ಭೇಟಿಗೆ ನಿರ್ಧಾರ Read More »

ಕರಾವಳಿ, ಕರ್ನಾಟಕ

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ

(ನ್ಯೂಸ್ ಕಡಬ) newskadaba.com ತಿರುವನಂತಪುರ,ಜೂ.12: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತರು ಇನ್ನೂ ಸ್ವಲ್ಪದಿನ ಕಾಯಬೇಕಾದ ಪರಿಸ್ಥಿತಿ ಬಂದಿದ್ದು, ಕೇರಳ ಸರಕಾರ ಶಬರಿಮಲೆಗೆ ಭಕ್ತರಿಗೆ ಪ್ರವೇಶಕ್ಕೆ ಸದ್ಯಕ್ಕೆ ಅನುಮತಿ ನಿರಾಕರಿಸಿದೆ.   ಕೇಂದ್ರ ಸರಕಾರದ ಅನ್ ಲಾಕ್ 1.0ದಲ್ಲಿ ಧಾರ್ಮಿಕ ಕೇಂದ್ರಗಳನ್ನು ಮಾರ್ಗಸೂಚಿ ಗಳೊಂದಿಗೆ ತೆರೆಯಲು ಅನುಮತಿ ನೀಡಿದ ಬೆನ್ನಲ್ಲೆ ದೇಶದಾದ್ಯಂತ ಹಲವು ದೇವಸ್ಥಾನಗಳು ಭಕ್ತರಿಗೆ ದೇವರ ದರ್ಶನಕ್ಕ ಅವಕಾಶ ನೀಡಿವೆ. ಈ ಹಿನ್ನಲೆ ಕೇರಳ ಸರಕಾರವೂ ಕೂಡ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಿತ್ತು. ಆದರೆ ದೇಶದಾದ್ಯಂತ

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಕುಕ್ಕೆಯಲ್ಲಿ ಜಿಂಕೆಗಳ ಸವಾರಿ

ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜೂ.12:ಕುಕ್ಕೆ ಸುಬ್ರಹ್ಮಣ್ಯ ಪೇಟೆಯ ರಸ್ತೆಯಲ್ಲಿ ರಾತ್ರಿ ಜಿಂಕೆಗಳ ಓಡಾಟ ಕಂಡುಬಂದಿದೆ.ಇದನ್ನು ನೋಡಿದ ಸ್ಥಳೀಯರು ಛಾಯಚಿತ್ರ ಸೆರೆಹಿಡಿದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಎಸ್‍ಎಸ್‍ಪಿಯು ಕಾಲೇಜಿನ ಬಳಿಯ ವಲ್ಲೀಶಾ ಸಭಾಭವನದ ರಸ್ತೆಯಲ್ಲಿ ರಾತ್ರಿ 2 ಜಿಂಕೆಗಳು ರಸ್ತೆ ದಾಟುತ್ತಿದ್ದವು ಅದೇ ವೇಳೆ ವಾಹನಗಳು ಹೋದುದರಿಂದ ಅಲ್ಲೇ ಸ್ವಪ್ಪ ಹೊತ್ತು ನಿಂತು ಅಲ್ಲಿಂದ ಓಡಿವೆ. ಈ ಹಿಂದೆ ರಾತ್ರಿ ಹೊತ್ತಲ್ಲೆ ಆನೆಗಳು ಕಂಡುಬಂದಿದ್ದವೂ ಹೀಗೆ ಕಾಡು ಪ್ರಾಣಿಗಳು ಪದೇ ಪದೇ ಸುಬ್ರಹ್ಮಣ್ಯ ಪ್ರದೇಶದಲ್ಲಿ ಓಡಾಟ ನಡೆಸುವುದು ಸರ್ವೆಸಾಮಾನ್ಯ ವಾಗಿದೆ.  

ಕುಕ್ಕೆಯಲ್ಲಿ ಜಿಂಕೆಗಳ ಸವಾರಿ Read More »

ಕರಾವಳಿ

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಪುತ್ತೂರು,ಜೂ.12:  ಮಕ್ಕಳ ಮೇಲೆ ದೂರು ನೀಡಿದ ತಂದೆ ಕೊನೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 11ರ ಗುರುವಾರ ಶಾಂತಿಗೋಡು ಗ್ರಾಮದ ನೆಕ್ಕರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಾಂತಿಗೋಡು ಗ್ರಾಮದ ನೆಕ್ಕರೆ ಸೇಸಪ್ಪ ಕುಲಾಲ್ (74) ಎನ್ನಲಾಗಿದೆ. 20 ದಿನಗಳ ಹಿಂದೆ ಸೇಸಪ್ಪ ಕುಲಾಲ್ ಅವರು ತನ್ನ ಇಬ್ಬರು ಮಕ್ಕಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದರು. ಈ ವಿಚಾರದ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಮನೆಯಲ್ಲಿ ಯಾರೊಂದಿಗೆ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಕೆಲಸಕ್ಕೂ

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ, ಇಂದು ಇಬ್ಬರು ಭಯೋತ್ಪಾದಕರು ಫಿನಿಶ್

(ನ್ಯೂಸ್ ಕಡಬ) newskadaba.com.ಶ್ರೀನಗರ, ಜೂ.11– ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಸದೆಬಡೆಯುವ ಕಾರ್ಯಾಚರಣೆಯನ್ನು ಭಾರತೀಯ ಭದ್ರತಾ ಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಂ ಜಿಲ್ಲೆಯ ಪಠಾಣ್ಪುರ್ನಲ್ಲಿ ಇಂದು ಬೆಳಗ್ಗೆ ಭದ್ರತಾಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳು ಹತರಾಗಿದ್ದು, ವಿಧ್ವಂಸಕ ಕೃತ್ಯ ಯತ್ನ ವಿಫಲಗೊಂಡಂತಾಗಿದೆ. ಹತರಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ನಸುಕಿನಲ್ಲಿ ಭದ್ರತಾಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಕಮಾಂಡರ್ ಸೇರಿದಂತೆ ಐವರು ಉಗ್ರಗಾಮಿಗಳು ಹತರಾಗಿದ್ದರು.

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ, ಇಂದು ಇಬ್ಬರು ಭಯೋತ್ಪಾದಕರು ಫಿನಿಶ್ Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ವಾರಿಯರ್ಸ್‍ಗೆ ಪುಷ್ಪ ಪ್ರದರ್ಶನದ ಮೂಲಕ ಗೌರವ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.11:ಕಳೆದ ಮೂರು ತಿಂಗಳಿಂದ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ದ ಹೋರಾಟ ನಡೆಸಿದ ವೈದ್ಯರು, ಪೋಲಿಸರು, ಆರೋಗ್ಯ ಕಾರ್ಯಕರ್ತರು,ಪೌರಕಾರ್ಮಿಕರಿಗೆ ಗೌರವ ಸೂಚಿಸುವ ಸಲುವಾಗಿ ಬೆಂಗಳೂರಿನ ವಿಧಾನಸೌಧದ ಮುಂದೆ ಪುಷ್ಪ ಪ್ರದರ್ಶನ ಆಯೋಜಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಮಹಾಮಾರಿ ಭಾರೀ ಅನಾಹುತವನ್ನೇ ಉಂಟು ಮಾಡುತ್ತಿದೆ. ಇದರ ವಿರುದ್ದ ಹಗಳು ರಾತ್ರಿ ಎನ್ನದೆ ಹೋರಾಟ ನಡೆಸಿದವರು ಕೊರೊನಾ ವಾರಿಯರ್ಸ್, ವೈದ್ಯರು ತಮ್ಮ ಜೀವವನ್ನು ಪಣಕಿಟ್ಟು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಇವರೊಂದಿಗೆ ಮಹಾಮಾರಿ ನಿಯಂತ್ರಣ ಮಾಡಲು ಲಾಕ್ ಡೌನ್

ಕೊರೊನಾ ವಾರಿಯರ್ಸ್‍ಗೆ ಪುಷ್ಪ ಪ್ರದರ್ಶನದ ಮೂಲಕ ಗೌರವ Read More »

ಕರಾವಳಿ

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್ 11: ಕೊರೊನಾವೈರಸ್ ಲಾಕ್ಡೌನ್ ಸಲುವಾಗಿ ಕಳೆದ ಮೂರು ತಿಂಗಳು ಆದಾಯವಿಲ್ಲದೇ ತೀವ್ರ ತೊಂದರೆ ಅನುಭವಿಸಿದ್ದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಕರ್ನಾಟಕ ಸರ್ಕಾರ ತಲಾ 5 ಸಾವಿರ ರುಪಾಯಿಯ ಭರವಸೆ ನೀಡಿತ್ತು.   ಇದರ ಅಂಗವಾಗಿ ಕರ್ನಾಟಕ ಸರ್ಕಾರ ಬುಧವಾರ 40 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಂದು ಬಾರಿ ಪರಿಹಾರವಾಗಿ ತಲಾ 5 ಸಾವಿರ ರುಪಾಯಿ ಘೋಷಣೆ ಮಾಡಿದ್ದರು. ಸದ್ಯ

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top