Kadaba

ಮಹಿಳೆಯೋರ್ವರಿಗೆ ಕೊರೋನಾ ಪಾಸಿಟಿವ್ ➤ ಉಪ್ಪಿನಂಗಡಿಯಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜೂ.6: ಟ್ರಾವೆಲ್ ಹಿಸ್ಟರಿ ಸಿಗದ ಮಹಿಳೆಯೋರ್ವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು ಉಪ್ಪಿನಂಗಡಿ ನೆಕ್ಕಿಲಾಡಿ ಆತಂಕ ಮನೆ ಮಾಡಿದೆ. ಇವರು ನೆಕ್ಕಿಲಾಡಿಯ ಗ್ರಾಮದ ಶಾಂತಿನಗರ- ಅಂಬೇಲ ಮಧ್ಯೆಯ ಬೇರಿಕೆಯ ನಿವಾಸಿಯಾಗಿದ್ದಾರೆ. ಈ ಮಹಿಳೆಯು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅನಾರೋಗ್ಯದ ಕಾರಣದಿಂದ ದಾಖಲಾಗಿದ್ದು, ಜ್ವರದ ಹಿನ್ನೆಲೆಯಲ್ಲಿ ಅಲ್ಲಿ ಅವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಶುಕ್ರವಾರ ಬಂದಿದ್ದು, ಈ ಸಂದರ್ಭ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ.ಈ ಮಹಿಳೆಯ ಪತಿ ಅಡಿಕೆ ವ್ಯಾಪಾರಿಯಾಗಿದ್ದು, ಉಪ್ಪಿನಂಗಡಿಯಲ್ಲಿ […]

ಮಹಿಳೆಯೋರ್ವರಿಗೆ ಕೊರೋನಾ ಪಾಸಿಟಿವ್ ➤ ಉಪ್ಪಿನಂಗಡಿಯಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ, ಕರ್ನಾಟಕ

ಕೋಡಿಂಬಾಳದಲ್ಲಿ ಡೆಂಗ್ಯೂ ಪತ್ತೆ➤ ಜ್ವರ ಪೀಡಿತರ ಮನೆಗೆ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಕೋಡಿಂಬಾಳ ,ಜೂ.6: ಕೋಡಿಂಬಾಳದಲ್ಲಿ ಡೆಂಗ್ಯೂ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಚಂದ್ರ ಬಾಯಾರಿ ಶುಕ್ರವಾರ ಭೇಟಿ ನೀಡಿ ಜ್ವರ ಪೀಡಿತರ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಇದೇ ಪರಿಸರದಲ್ಲಿ ಮಹಿಳೆಯೊಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದರು, ಇದೀಗ ಮತ್ತೆ ಡೆಂಗ್ಯೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ಜ್ವರ ಪೀಡಿತರ ಮನೆಗೆ ಭೇಟಿ ನೀಡಿದ್ದಾರೆ.   ಕೋಡಿಂಬಾಳ ಗ್ರಾಮದ ಮುಳಿಯ ನಿವಾಸಿಗಳಾದ ಲೋಹಿತ್, ತೇಜಸ್ವಿನಿ ಹಾಗೂ ಶೃತಿ ಎಂಬವರಿಗೆ

ಕೋಡಿಂಬಾಳದಲ್ಲಿ ಡೆಂಗ್ಯೂ ಪತ್ತೆ➤ ಜ್ವರ ಪೀಡಿತರ ಮನೆಗೆ ಅಧಿಕಾರಿಗಳ ಭೇಟಿ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ನಿಯಮ ಪಾಲನೆ ಕಡ್ಡಾಯ

(ನ್ಯೂಸ್ ಕಡಬ) newskadaba.com.ಕುಕ್ಕೆ ಸುಬ್ರಹ್ಮಣ್ಯ ,ಜೂ.6: ಸೋಮವಾರದಿಂದ ರಾಜ್ಯದಾದ್ಯಂತ ದೇವಾಲಯಗಳು ಭಕ್ತರಿಗಾಗಿ ತೆರೆಯಲಿದೆ. ಹಾಗೆಯೇ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯಾದ್ಯಾಂತ ಕೋರೋನಾ ಅಟ್ಟಹಾಸಕ್ಕೆ ಬಹುತೇಕ ಎಲ್ಲಾ ದೇವಾಲಗಳು ಸಂಪೂರ್ಣವಾಗಿ ಬಂದ್ ಮಾಡಲು ಸರ್ಕಾರ ಆದೇಶ ಹೊರಡಿಸಿತ್ತು. ಸತತ 2 ತಿಂಗಳ ಲಾಕ್ ಡೌನ್ ಬಳಿಕ ಈಗ ಮತ್ತೇ ಸರ್ಕಾರ ಹಲವು ಮುಂಜಾಗ್ರತ ಕ್ರಮಗಳನ್ನ ಕೈಗೊಂಡು ದೇವಾಲಯಗಳ ಬಾಗಿಲು ತೆರೆಯಲು ಆದೇಶ ಹೊರಡಿಸಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ನಿಯಮ ಪಾಲನೆ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಮಂಜುನಾಥನ ದರ್ಶನಕ್ಕೆ ಸಕಲ ಸಿದ್ಧತೆ ➤ ಸಾಮಾಜಿಕ ಅಂತರ ಕಡ್ಡಾಯ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.6: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಒದಗಿಸಲಾಗಿದೆ. ಇದಕ್ಕೆ ಸಂಬಂದ ಪಟ್ಟಂತೆ ದೇವಸ್ಥಾನದ ಒಳ ಪ್ರವೇಶ ಮಾಡುವವರು ತೆಗೆದುಕೊಳ್ಳಬೇಕಾದ ಮುಂಜಗರೂಕತೆ ಕ್ರಮಗಳು ಇಂತಿವೆ.   ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಇದೇ 8 ರಂದು ಮಾಡಿಕೊಡಲಾಗುವುದೆಂದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿದ್ದಾರೆ.ದೇವರ ದರ್ಶನಕ್ಕೆ ಧರ್ಮಸ್ಥಳದ ದೇವಳದಲ್ಲಿ, ಅನ್ನಪೂರ್ಣ ಭೋಜನ ಮಂದಿರದಲ್ಲಿ, ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ..ಮುಖಕ್ಕೆ

ಮಂಜುನಾಥನ ದರ್ಶನಕ್ಕೆ ಸಕಲ ಸಿದ್ಧತೆ ➤ ಸಾಮಾಜಿಕ ಅಂತರ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ➤ ತಡರಾತ್ರಿ ಘಟನೆ

(ನ್ಯೂಸ್ ಕಡಬ) newskadaba.com ರಾಮನಗರ, ಜೂ6: ರಾಮನಗರದಲ್ಲಿ ಬರೋಬ್ಬರಿ 300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು! ದುಷ್ಕರ್ಮಿಗಳ ಗುಂಪೊಂದು ಸುಮಾರು 300ಕ್ಕೂ ಅಧಿಕ ಬಾಳೆ ಗಿಡಗಳನ್ನು ಕತ್ತರಿಸಿ ನಾಶ ಮಾಡಿರುವ ಘಟನ ತಡರಾತ್ರಿ ರಾಮನಗರದ ಕೂಟಗಲ್ ಹೋಬಳಿಯ ತಿಮ್ಮಸಂದ್ರ ಗ್ರಾಮದ ಪಟೇಲ್ ರಾಜಣ್ಣ ಅವರ ತೋಟದಲ್ಲಿ ನಡೆದಿದೆ. ತಡರಾತ್ರಿ ತೋಟಕ್ಕೆ ಎಂಟ್ರಿಕೊಟ್ಟ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ 300ಕ್ಕೂ ಅಧಿಕ ಬಾಳೆಗಿಡಗಳನ್ನ ನಾಶ ಮಾಡಿ ವಿಕೃತಿ ಮೆರೆದಿದ್ದಾರೆ. ಪಟೇಲ್ ರಾಜಣ್ಣ ಅವರ 6 ಎಕರೆ

ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ➤ ತಡರಾತ್ರಿ ಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಕೊರೊನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಮುಂಬೈ,ಜೂ 6 : ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿಯವರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. 77 ವಯಸ್ಸಿನ ಇವರಿಗೆ ಜೂನ್ 2 ರಂದು ತೀವ್ರ ಜ್ವರ ಕಾಣಿಸಿಕೊಂಡಿದ್ದು ಬಳಿಕ ನಂತರದ ದಿನವೇ ಉಸಿರಾಟದ ಸಮಸ್ಯೆ ಕೂಡಾ ತೀವ್ರವಾಗಿದೆ.     ಜೂನ್ 3 ರಂದು ಮುಂಬೈನ ಖ್ಯಾತ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು ಅವರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಅವರ ಸಹೋದರ ರಾಜೀವ್ ಸೂರಿ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಅವರನ್ನು ಕೊನೆಗೆ ಬುಧವಾರ ರಾತ್ರಿ

ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಕೊರೊನಾ ಸೋಂಕಿಗೆ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂ.6:  ಮೂಡಬಿದ್ರೆಯಲ್ಲಿ ಚಿನ್ನದ ಮಳಿಗೆ ಹೊಂದಿದ್ದ ಕಾಣಿಯೂರು ಸಮೀಪದ ಮುರುಳ್ಯ ಗ್ರಾಮದ ಯುವಕ ಅಬ್ದುಲ್ ಲತೀಫ್ ರವರನ್ನ ದುಷ್ಕರ್ಮಿಗಳ ತಂಡವೊಮದು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜೂ.5 ರಂದು ಮುಲ್ಕಿಯಲ್ಲಿ ನಡೆದಿದೆ.   ಮೂಡ ಬಿದಿರೆಯ ಅಮರಶ್ರೀ ಚಿತ್ರ ಮಂದಿರದ ಬಳಿ ಅಲೈನ್ ಗೋಲ್ಡ್ ಎಂಬ ಹೆಸರಿನ ಚಿನ್ನದ ಮಳಿಗೆ ನಡೆಸುತ್ತಿದ್ದ ಯುವ ಉದ್ಯಮಿ ಅಬ್ದುಲ್ ಲತೀಫ್ ಅವರು, ತನ್ನ ಮಾನ ಮುನೀರ್ ಹಾಗೂ ಅವರ ಪುತ್ರ ಹಯಾತ್ ಎಂಬುವರ

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರಿನಲ್ಲಿ ಬಿದಿರಿಗೆ ಕೊಡಲಿ ಏಟು ➤ ಸಮರ್ಥನೆ ನೀಡಿದ ಕಾರ್ಯಕ್ರಮದ ಆಯೋಜಕರು

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.05: ಇಂದು ಜೂನ್ 5, ವಿಶ್ವ ಪರಿಸರ ದಿನ. ಈ ದಿನದಂದೇ ಮರಗಳಿಗೆ ಕೊಡಲಿ ಏಟು ಹಾಕಿ ಧರೆಗುರುಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಪಂಚಾಯತ್ ನೇತೃತ್ವದಲ್ಲಿ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಪುತ್ತೂರು ಶಾಸಕ ಸಂಜೀವ ಮಠಂದೂರು ಗಿಡ ನೆಡುವ ಮೂಲಕ ಈ‌ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮವೂ ನಿಗದಿಯಾಗಿತ್ತು. ಆದರೆ ಕಾರ್ಯಕ್ರಮ

ಪುತ್ತೂರಿನಲ್ಲಿ ಬಿದಿರಿಗೆ ಕೊಡಲಿ ಏಟು ➤ ಸಮರ್ಥನೆ ನೀಡಿದ ಕಾರ್ಯಕ್ರಮದ ಆಯೋಜಕರು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿಶ್ವ ಪರಿಸರ ದಿನದಂದೇ ಮರಗಳಿಗೆ ಕೊಡಲಿ ಏಟು ➤ ಪರಿಸರ ತಜ್ಞರ ಆಕ್ರೋಶ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ 05: ವಿಶ್ವ ಪರಿಸರ ದಿನದಂದು ಉಡುಪಿಯಲ್ಲಿ ಮರಗಳ ಮಾರಣಹೋಮ ನಡೆದಿದೆ. ಈ ದಿನ ಗಿಡ ನೆಡದಿದ್ರೂ ಪರವಾಗಿಲ್ಲ ಯಾವುದೇ ಮಾನವೀಯತೆ ಇಲ್ಲದೆ 50- 60 ವರ್ಷ ಬೆಳೆದಿದ್ದ ಮರಗಳನ್ನು ಕತ್ತರಿಸಿ ಬಿಸಾಕಿದ್ದಾರೆ. ಉಡುಪಿ ನಗರದ ಮಧ್ಯ ಭಾಗದಲ್ಲಿರುವ ಬನ್ನಂಜೆಯಲ್ಲಿ ನೂತನ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ನಿರ್ಮಾಣ ಆಗ್ತಾಯಿದೆ. ಜೊತೆ ಜೊತೆಗೆ ಕಾಂಪೌಡ್ ಸುತ್ತ ಇರುವ ಹತ್ತಾರು ಮರಗಳ ನಿರ್ನಾಮ ಆಗ್ತಾಯಿದೆ. ಅದೂ ವಿಶ್ವ ಪರಿಸರ ದಿನ ಎಂಬ ಸಾಮಾನ್ಯ

ವಿಶ್ವ ಪರಿಸರ ದಿನದಂದೇ ಮರಗಳಿಗೆ ಕೊಡಲಿ ಏಟು ➤ ಪರಿಸರ ತಜ್ಞರ ಆಕ್ರೋಶ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಲಾರಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ 05:  ಮರದ ದಿಮ್ಮಿಗಳನ್ನು ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಉರುಳಿ ಬಿದ್ದ ಘಟನೆ ಬಂಟ್ವಾಳದ ಮಾರ್ನಬೈಲು ಜಂಕ್ಷನ್ ನಲ್ಲಿ ನಡೆದಿದೆ.ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿಬಿದ್ದಿದೆ. ವಿದ್ಯುತ್ ತಂತಿಗಳು ಕಡಿದುಹೋಗಿ ಅಪಾರ ನಷ್ಟ ಸಂಭವಿಸಿದೆ.ಮೆಲ್ಕಾರ್ ನಿಂದ ಬೃಹತ್ ಗಾತ್ರದ ಮರಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬೆಳಿಗ್ಗೆ ಸುಮಾರು 5.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳಿಗೆ

ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಲಾರಿ ➤ ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ
Scroll to Top